ಚಿತ್ರ ಮಂಜರಿ

‘ಮೆಗಾ’ ಫ್ಯಾಮಿಲಿಯಲ್ಲಿ ಮತ್ತೊಂದು ವಿಚ್ಛೇದನ: ಅಧಿಕೃತವಾಗಿ ಘೋಷಿಸಿದ ನಿಹಾರಿಕಾ ಕೊಡಿನೇಲಾ!

ಚಿರಂಜೀವಿ ಕುಟುಂಬದ ಮಗಳು ನಿಹಾರಿಕಾ ಕೊನಿಡೆಲಾ ಹಾಗೂ ವೆಂಕಟ್ ಚೈತನ್ಯ ಜೊನ್ನಲಗಡ್ಡ ಅಧಿಕೃತವಾಗಿ ವಿಚ್ಛೇದನ ಪಡೆದಿದ್ದಾರೆ. ಕಳೆದ ತಿಂಗಳು ಇಬ್ಬರೂ ವಿಚ್ಛೇದನಕ್ಕೆ ಅರ್ಜಿ ಸಲ್ಲಿಕೆ ಮಾಡಿದ್ದರು. ಈ ಪ್ರಕ್ರಿಯೆ ಮುಗಿದಿದ್ದು, ಇವರಿಗೆ ಡಿವೋರ್ಸ್ ಸಿಕ್ಕಿದೆ. ಇದು ಚಿರಂಜೀವಿ  ಕುಟುಂಬದ ಅಭಿಮಾನಿಗಳಿಗೆ ಬೇಸರ ಮೂಡಿಸಿದೆ.

ನಿಹಾರಿಕಾ ಕೊನಿಡೆಲಾ ಹಾಗೂ ಚೈತನ್ಯ ಜೆವಿ ಪರಸ್ಪರ ಪ್ರೀತಿಸಿ ಮದುವೆ ಆದವರು. ಹಲವು ವರ್ಷಗಳ ಕಾಲ ಪ್ರೀತಿಸುತ್ತಿದ್ದ ಇವರು 2020ರ ಡಿಸೆಂಬರ್​ನಲ್ಲಿ ಉದಯಪುರದಲ್ಲಿ ಅದ್ದೂರಿಯಾಗಿ ಮದುವೆಯಾಗಿದ್ದರು , ಆದರೆ ಮೂರು ವರ್ಷ ತುಂಬುವುದರೊಳಗೆ ನಿಹಾರಿಕಾ- ಚೈತನ್ಯ ಜೊನ್ನಲಗಡ್ಡ ದಾಂಪತ್ಯ ಬದುಕು ಅಂತ್ಯಗೊಂಡಿದ್ದು, ಈಗಾಗಲೇ ಇಬ್ಬರಿಗೂ ಕೌಟುಂಬಿಕ ನ್ಯಾಯಾಲಯವು ಡಿವೋರ್ಸ್‌ಗೆ ಮಂಜೂರು ನೀಡಿದೆ ಎನ್ನಲಾಗಿದೆ. ಆದರೆ ಈ ಡಿವೋರ್ಸ್‌ಗೆ ಕಾರಣವೇನು ಎಂಬುದು ಮಾತ್ರ ತಿಳಿದು ಬಂದಿಲ್ಲ.

ನಿಹಾರಿಕಾ ಮತ್ತು ಚೈತನ್ಯ ಪರಸ್ಪರ ಒಪ್ಪಿಗೆಯೊಂದಿಗೆ ನ್ಯಾಯಾಲಯದಲ್ಲಿ ಡಿವೋರ್ಸ್ಗೆ ಅರ್ಜಿ ಸಲ್ಲಿಸಿದ್ದರು. ನಿಹಾರಿಕಾ ಡಿವೋರ್ಸ್ ವಿಷಯವು ಸಾಕಷ್ಟು ಚರ್ಚೆ ಆಗಿತ್ತು. ನಿಹಾರಿಕಾ- ಚೈತನ್ಯ ಇನ್ಸ್ಟಾಗ್ರಾಂನಲ್ಲಿ ಒಬ್ಬರನ್ನೊಬ್ಬರು ಅನ್‌ಫಾಲೋ ಮಾಡಿದ್ದಾರೆ. ನಿಹಾರಿಕಾ ಅವರು ಮದುವೆಯ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಡಿಲೀಟ್ ಮಾಡಿದ್ರು. ಅತ್ತ ಚೈತನ್ಯ ಅವರ ಕೂಡ ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ನಿಹಾರಿಕಾ ಜೊತೆಗಿದ್ದ ಎಲ್ಲ ಫೋಟೋಗಳನ್ನು ಡಿಲೀಟ್ ಮಾಡಿದ್ದರು. ಇದು ವಿಚ್ಛೇದನದ ಬಗ್ಗೆ ಮೊದಲ ಬಾರಿಗೆ ಅನುಮಾನವನ್ನು ಹುಟ್ಟುಹಾಕಿತ್ತು. ಇಬ್ಬರು ವಿಚ್ಛೇದನ ಪಡೆಯುತ್ತಿದ್ದಾರೆ ಎಂಬ ವದಂತಿಯು ಎಲ್ಲ ಕಡೆ ಹಬ್ಬಿಕೊಂಡಿತ್ತು. ಇದೀಗ ವದಂತಿ ನಿಜವಾಗಿದೆ.

ನಿಹಾರಿಕಾ ಅವರು ನಟನೆಯ ಜೊತೆಗೆ ತಮ್ಮದೇ ನಿರ್ಮಾಣ ಸಂಸ್ಥೆ ಆರಂಭಿಸಿದರು. ವೆಬ್ ಸೀರಿಸ್ ಹಾಗೂ ಸಿನಿಮಾಗಳನ್ನು ಅವರು ನಿರ್ಮಾಣ ಮಾಡಿದರು. ಪಿಂಕ್ ಎಲಿಫೆಂಟ್ ಪಿಕ್ಚರ್ಸ್ ಎಂದು ಈ ಬ್ಯಾನರ್​ಗೆ ಅವರು ಹೆಸರಿಟ್ಟಿದ್ದಾರೆ. ಹೈದರಾಬಾದ್​ನಲ್ಲಿ ಅವರು ಅದ್ದೂರಿ ಕಚೇರಿ ಕೂಡ ಆರಂಭಿಸಿದ್ದಾರೆ.

andolanait

Recent Posts

ಕರ್ನಾಟಕದಲ್ಲಿ ಉದ್ಯೋಗ ಸೃಷ್ಠಿ | ರಾಹುಲ್‌ ಗಾಂಧಿ ಹಾಗೂ ಅಶ್ವಿನ್‌ ವೈಷ್ಣವ್‌ ನಡುವೆ ಟ್ವಿಟ್‌ ವಾರ್…

ಹೊಸದಿಲ್ಲಿ : ಕೇಂದ್ರ ಸಚಿವರಾದ ಅಶ್ವಿನ್ ವೈಷ್ಣವ್ ಮತ್ತು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರ ನಡುವೆ ಕರ್ನಾಟಕದಲ್ಲಿ ಉದ್ಯೋಗ…

3 mins ago

ಚಿತ್ರದುರ್ಗ ಬಸ್‌ ದುರಂತ | ಶಾಲಾ ಮಕ್ಕಳಿದ್ದ ಮತ್ತೊಂದು ಬಸ್ಸಿಗೂ ಬೆಂಕಿ : ಕೂದಲೆಳೆ ಅಂತರದಲ್ಲಿ ಪವಾಡಸದೃಶ ಪಾರು!

ಬೆಂಗಳೂರು : ಚಿತ್ರದುರ್ಗದ ಹಿರಿಯೂರು ಬಳಿ ಇಂದು ಬೆಳಗಿನ ಜಾವ ಸಂಭವಿಸಿದ ರಸ್ತೆ ಅಪಘಾತದ ಮಾರ್ಗದಲ್ಲಿ ಶಾಲಾ ಮಕ್ಕಳು ಪ್ರಯಾಣಿಸುತ್ತಿದ್ದ…

20 mins ago

ಪಕ್ಷದ ಅಧ್ಯಕ್ಷನಾಗಿ ಬಾವುಟ ಕಟ್ಟಿದ್ದೇನೆ, ಕಸ ಗುಡಿಸಿದ್ದೇನೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ನಾನು ಪಕ್ಷದ ಅಧ್ಯಕ್ಷನಾಗಿ ಬಾವುಟ ಕಟ್ಟಿದ್ದೇನೆ, ಕಸ ಗುಡಿಸಿದ್ದೇನೆ. ಪಕ್ಷಕ್ಕಾಗಿ ಎಲ್ಲವನ್ನೂ ಮಾಡಿದ್ದೇನೆ. ನಾನು ಸ್ಟೇಜ್ ಮೇಲೆ ಕೂತು…

1 hour ago

ನಾಳೆ ದೆಹಲಿಗೆ ತೆರಳಲಿದ್ದಾರೆ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಭಾಗಿಯಾಗಲು ಸಿಎಂ ಸಿದ್ದರಾಮಯ್ಯ ಅವರು ನಾಳೆ ದೆಹಲಿಗೆ ತೆರಳಲಿದ್ದಾರೆ. ಡಿಸೆಂಬರ್‌.27ರಂದು ದೆಹಲಿಯ ಇಂದಿರಾ…

2 hours ago

ಚಾಮರಾಜನಗರದಲ್ಲಿ ಬೋನಿಗೆ ಬಿದ್ದ ಹುಲಿ

ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಹುಲಿಗಳ ಉಪಟಳ ಹೆಚ್ಚಾಗಿದ್ದು, ದೇಪಾಪುರ ಗ್ರಾಮದ ಹೊರವಲಯದಲ್ಲಿ ಹುಲಿಯೊಂದು ಬೋನಿಗೆ ಬಿದ್ದಿದೆ. ಹುಲಿಯನ್ನು ನೋಡಲು…

3 hours ago

ರಾಜ್ಯದಲ್ಲಿ ಬೆಳಗಿನ ವೇಳೆ ದಟ್ಟ ಮಂಜು: ಹವಾಮಾನ ತಜ್ಞರು ಹೇಳಿದ್ದಿಷ್ಟು.!

ಬೆಂಗಳೂರು: ರಾಜ್ಯದಲ್ಲಿ ತೀವ್ರ ಚಳಿ, ಶೀತಗಾಳಿಯ ಜೊತೆಗೆ ಬೆಳಗಿನ ವೇಳೆ ಕೆಲವೆಡೆ ದಟ್ಟವಾದ ಮಂಜು ಆವರಿಸುತ್ತಿದೆ. ಬೆಳಗಿನ ವೇಳೆಯಲ್ಲಿ ದಟ್ಟವಾದ…

3 hours ago