ಚಿತ್ರ ಮಂಜರಿ

‘ಮೆಗಾ’ ಫ್ಯಾಮಿಲಿಯಲ್ಲಿ ಮತ್ತೊಂದು ವಿಚ್ಛೇದನ: ಅಧಿಕೃತವಾಗಿ ಘೋಷಿಸಿದ ನಿಹಾರಿಕಾ ಕೊಡಿನೇಲಾ!

ಚಿರಂಜೀವಿ ಕುಟುಂಬದ ಮಗಳು ನಿಹಾರಿಕಾ ಕೊನಿಡೆಲಾ ಹಾಗೂ ವೆಂಕಟ್ ಚೈತನ್ಯ ಜೊನ್ನಲಗಡ್ಡ ಅಧಿಕೃತವಾಗಿ ವಿಚ್ಛೇದನ ಪಡೆದಿದ್ದಾರೆ. ಕಳೆದ ತಿಂಗಳು ಇಬ್ಬರೂ ವಿಚ್ಛೇದನಕ್ಕೆ ಅರ್ಜಿ ಸಲ್ಲಿಕೆ ಮಾಡಿದ್ದರು. ಈ ಪ್ರಕ್ರಿಯೆ ಮುಗಿದಿದ್ದು, ಇವರಿಗೆ ಡಿವೋರ್ಸ್ ಸಿಕ್ಕಿದೆ. ಇದು ಚಿರಂಜೀವಿ  ಕುಟುಂಬದ ಅಭಿಮಾನಿಗಳಿಗೆ ಬೇಸರ ಮೂಡಿಸಿದೆ.

ನಿಹಾರಿಕಾ ಕೊನಿಡೆಲಾ ಹಾಗೂ ಚೈತನ್ಯ ಜೆವಿ ಪರಸ್ಪರ ಪ್ರೀತಿಸಿ ಮದುವೆ ಆದವರು. ಹಲವು ವರ್ಷಗಳ ಕಾಲ ಪ್ರೀತಿಸುತ್ತಿದ್ದ ಇವರು 2020ರ ಡಿಸೆಂಬರ್​ನಲ್ಲಿ ಉದಯಪುರದಲ್ಲಿ ಅದ್ದೂರಿಯಾಗಿ ಮದುವೆಯಾಗಿದ್ದರು , ಆದರೆ ಮೂರು ವರ್ಷ ತುಂಬುವುದರೊಳಗೆ ನಿಹಾರಿಕಾ- ಚೈತನ್ಯ ಜೊನ್ನಲಗಡ್ಡ ದಾಂಪತ್ಯ ಬದುಕು ಅಂತ್ಯಗೊಂಡಿದ್ದು, ಈಗಾಗಲೇ ಇಬ್ಬರಿಗೂ ಕೌಟುಂಬಿಕ ನ್ಯಾಯಾಲಯವು ಡಿವೋರ್ಸ್‌ಗೆ ಮಂಜೂರು ನೀಡಿದೆ ಎನ್ನಲಾಗಿದೆ. ಆದರೆ ಈ ಡಿವೋರ್ಸ್‌ಗೆ ಕಾರಣವೇನು ಎಂಬುದು ಮಾತ್ರ ತಿಳಿದು ಬಂದಿಲ್ಲ.

ನಿಹಾರಿಕಾ ಮತ್ತು ಚೈತನ್ಯ ಪರಸ್ಪರ ಒಪ್ಪಿಗೆಯೊಂದಿಗೆ ನ್ಯಾಯಾಲಯದಲ್ಲಿ ಡಿವೋರ್ಸ್ಗೆ ಅರ್ಜಿ ಸಲ್ಲಿಸಿದ್ದರು. ನಿಹಾರಿಕಾ ಡಿವೋರ್ಸ್ ವಿಷಯವು ಸಾಕಷ್ಟು ಚರ್ಚೆ ಆಗಿತ್ತು. ನಿಹಾರಿಕಾ- ಚೈತನ್ಯ ಇನ್ಸ್ಟಾಗ್ರಾಂನಲ್ಲಿ ಒಬ್ಬರನ್ನೊಬ್ಬರು ಅನ್‌ಫಾಲೋ ಮಾಡಿದ್ದಾರೆ. ನಿಹಾರಿಕಾ ಅವರು ಮದುವೆಯ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಡಿಲೀಟ್ ಮಾಡಿದ್ರು. ಅತ್ತ ಚೈತನ್ಯ ಅವರ ಕೂಡ ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ನಿಹಾರಿಕಾ ಜೊತೆಗಿದ್ದ ಎಲ್ಲ ಫೋಟೋಗಳನ್ನು ಡಿಲೀಟ್ ಮಾಡಿದ್ದರು. ಇದು ವಿಚ್ಛೇದನದ ಬಗ್ಗೆ ಮೊದಲ ಬಾರಿಗೆ ಅನುಮಾನವನ್ನು ಹುಟ್ಟುಹಾಕಿತ್ತು. ಇಬ್ಬರು ವಿಚ್ಛೇದನ ಪಡೆಯುತ್ತಿದ್ದಾರೆ ಎಂಬ ವದಂತಿಯು ಎಲ್ಲ ಕಡೆ ಹಬ್ಬಿಕೊಂಡಿತ್ತು. ಇದೀಗ ವದಂತಿ ನಿಜವಾಗಿದೆ.

ನಿಹಾರಿಕಾ ಅವರು ನಟನೆಯ ಜೊತೆಗೆ ತಮ್ಮದೇ ನಿರ್ಮಾಣ ಸಂಸ್ಥೆ ಆರಂಭಿಸಿದರು. ವೆಬ್ ಸೀರಿಸ್ ಹಾಗೂ ಸಿನಿಮಾಗಳನ್ನು ಅವರು ನಿರ್ಮಾಣ ಮಾಡಿದರು. ಪಿಂಕ್ ಎಲಿಫೆಂಟ್ ಪಿಕ್ಚರ್ಸ್ ಎಂದು ಈ ಬ್ಯಾನರ್​ಗೆ ಅವರು ಹೆಸರಿಟ್ಟಿದ್ದಾರೆ. ಹೈದರಾಬಾದ್​ನಲ್ಲಿ ಅವರು ಅದ್ದೂರಿ ಕಚೇರಿ ಕೂಡ ಆರಂಭಿಸಿದ್ದಾರೆ.

andolanait

Recent Posts

‘ನಮಗೆ ರಕ್ಷಣೆ ಕೊಡಿ’.. ಮೈಸೂರು ಎಸ್‌ಪಿ ಕಚೇರಿಗೆ ಬಂದ ತುಮಕೂರಿನ ಪ್ರೇಮಿಗಳು

ಮೈಸೂರು : ನಾವು ಪರಸ್ಪರ ಪ್ರೀತಿಸಿ ಮದುವೆಯಾಗಿದ್ದೇವೆ. ನಮಗೆ ಜೀವ ಬೆದರಿಕೆ ಇದ್ದು, ರಕ್ಷಣೆ ಕೊಡಿ ಎಂದು ತುಮಕೂರು ಮೂಲದ…

31 mins ago

ರಸ್ತೆಗಳು ಗುಂಡಿಮಯ….ಜನರಿಗೆ ಜೀವ ಭಯ!

ಪ್ರಶಾಂತ್‌ ಎಸ್. ಮೈಸೂರು : ನಗರ ಹೊರವಲಯದ ಶ್ರೀರಾಂಪುರ ಪಟ್ಟಣ ಪಂಚಾಯಿತಿ ಹಾಗೂ ನಗರಪಾಲಿಕೆ ವ್ಯಾಪ್ತಿಯ ಕಂದಾಯ ಇಲಾಖೆ ನೌಕರರ…

41 mins ago

ವಿದ್ಯುತ್‌ ಬಿಲ್‌ ಬಾಕಿ ; 3 ಗ್ರಾಪಂಗಳಿಗೆ ಸೆಸ್ಕ್‌ ಶಾಕ್‌

ಚಾಮರಾಜನಗರ : ನೀರಿನ ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿರುವ ಕಾರಣಕ್ಕೆ ತಾಲ್ಲೂಕಿನ ಮೂರು ಗ್ರಾಮ ಪಂಚಾಯಿತಿ ಕಾರ್ಯಾಲಯಗಳ ವಿದ್ಯುತ್ ಸಂಪರ್ಕವನ್ನು…

54 mins ago

ಮಹಾಪಂಚ್‌ ಕಾರ್ಟೂನ್‌

ಮಹಪಂಚ್‌ ಕಾರ್ಟೂನ್‌ | ಏ.17 ಶುಕ್ರವಾರ

3 hours ago

ಇಸ್ರೇಲ್-ಲೆಬನಾನ್‌ ನಡುವೆ 10 ದಿನಗಳ ಕದನ ವಿರಾಮ ಘೋಷಿಸಿದ ಟ್ರಂಪ್‌

ಇಸ್ರೇಲ್‌ : ಇಸ್ರೇಲ್-ಲೆಬನಾನ್ ಉದ್ವಿಗ್ನತೆಗೆ 10 ದಿನಗಳ ಕದನ ವಿರಾಮ ಘೋಷಿಸಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.…

14 hours ago

ರಾಜ್ಯಗಳ ನಡುವೆ ಯಾವುದೇ ತಾರತಮ್ಯ ಇಲ್ಲ : ಪ್ರಧಾನಿ ಮೋದಿ ಅಭಯ

ನವದೆಹಲಿ : ಉತ್ತರ, ದಕ್ಷಿಣ, ದೊಡ್ಡ ಅಥವಾ ಸಣ್ಣ ರಾಜ್ಯಗಳಾವುದೇ ಇರಲಿ ಕ್ಷೇತ್ರ ಪುನರ್ ವಿಂಗಡಣೆಯ ವಿಷಯಕ್ಕೆ ಬಂದಾಗ ರಾಜ್ಯಗಳ…

14 hours ago