ಚಿತ್ರ ಮಂಜರಿ

ಅಪ್ಪು ಕೊನೆಯ ಚಿತ್ರ ʼಗಂಧದಗುಡಿʼ ಟ್ರೈಲರ್ ಬಿಡುಗಡೆ

ಬೆಂಗಳೂರು : ಕನ್ನಡ ಚಿತ್ರರಂಗದ ಖ್ಯಾತ ನಟ ಪವರ್‌ ಸ್ಟಾರ್‌ ಪುನೀತ್‌ ರಾಜ್‌ ಕುಮಾರ್‌ ಅಭಿನಯದ ಕೊನೆಯ ಚಿತ್ರ ಗಂಧದ ಗುಡಿ ಸಿನಿಮಾದ ಟ್ರೈಲರ್ ಇಂದು ಬಿಡುಗಡೆಗೊಂಡಿದೆ.

ಅಕ್ಟೋಬರ್ 28, 2022 ರಂದು ದೊಡ್ಡತೆರೆಯ ಮೇಲೆ ಕಾಣಿಸಿಕೊಳ್ಳಲಿರುವ ಈ ಸಿನಿಮಾದ ಟ್ರೈಲರ್ ನೋಡಿದ ಅಭಿಮಾನಿಗಳು ಬಹಳ ಸಂತಸ ಪಟ್ಟಿದ್ದಾರೆ.


. ‘ಕರ್ನಾಟಕದ ಕಾಡು ಉಳಿಸಿ’ ಎಂಬ ಡಾ. ರಾಜ್ ಸಂದೇಶದ ಮರುಜನ್ಮವೇ ಹೊಸ ಗಂಧದ ಗುಡಿ ಸಾರಾಂಶ. ನದಿ, ಬೆಟ್ಟ, ಮರ, ಗಿಡ, ಪ್ರಾಣಿ-ಪಕ್ಷಿಗಳ ನೋಟವನ್ನು ಅತ್ಯದ್ಭುತವಾಗಿ ನೈಜವಾಗಿ ಸೆರೆ ಹಿಡಿಯಲಾಗಿದೆ.

ಗಂಧದ ಗುಡಿ ಸಿನಿಮಾ ಪ್ರಕೃತಿಯತ್ತ ಒಂದು ಪಯಣ. ನಿಜವಾದ ನಾಯಕನ ಮತ್ತು ಪ್ರಕೃತಿ ಕಾಳಜಿಯ ಕಥೆ. ಬಯಲು ಸೀಮೆಯಿಂದ ಹಿಡಿದು ಸಮುದ್ರ ತೀರದವರೆಗೂ, ಪತನವಾಗಿರುವ ಕಾಡುಗಳಿಂದ, ಪಶ್ಚಿಮ ಘಟ್ಟ, ದಟ್ಟ ಅರಣ್ಯದವರೆಗೂ ಈ ಮಣ್ಣಿನ ಸಿರಿ ಸೆರೆ ಹಿಡಿದಿರುವ ಸಿನಿಮಾ ಇದು. ಪ್ರಕೃತಿಯ ಸಿರಿವಂತಿಕೆಯನ್ನು ಹಾಡುಗಳೊಂದಿಗೆ, ದೃಶ್ಯ ವೈಭವದೊಂದಿಗೆ ಜನರಿಗೆ ಪರಿಚಯಿಸುವ ಉತ್ಸಾಹವನ್ನು ಪುನೀತ್ ರಾಜ್​ಕುಮಾರ್ ಮಾಡಿದ್ದಾರೆ. ವನ್ಯಜೀವಿಗಳ ಬದುಕು, ಕಾಡಿನ ಸಂರಕ್ಷಣೆ, ಜನ ಸಾಮಾನ್ಯರಿಗೆ ಕಾಡಿನ ಬಗ್ಗೆ ಉತ್ಸಾಹ ಹಾಗೂ ಕಾಳಜಿಯನ್ನು ಹೆಚ್ಚಿಸಲು ಪ್ರಯತ್ನಿಸಿ, ನಮ್ಮ ವ್ಯಕ್ತಿತ್ವದ ಮೇಲೆ ಮಹತ್ತರವಾದ ಬದಲಾವಣೆಯನ್ನು ತರಲು ಅಪ್ಪು ಹೊರಟಿದ್ದರು.ಆದರೆ ಅವರ ಅಕಾಲಿಕ ನಿಧನದಿಂದ ಆ ಕನಸು ಹಾಗೇ ಉಳಿದಿದೆ. ಇಂದು ಅವರ ನೆನಪಿನಲ್ಲಿ ಟ್ರೈಲರ್ ಬಿಡುಗಡೆ ಮಾಡಲಾಗಿದ್ದು, ತಿಂಗಳಾಂತ್ಯದಲ್ಲಿ ಸಿನಿಮಾ ಬಿಡುಗಡೆ ಆಗಲಿದೆ.


ಹೌದು, ಈ ವರ್ಷದ ನಾಡಹಬ್ಬ ರಾಜ್ಯೋತ್ಸವವನ್ನು ಅಪ್ಪುವಿನ ಗಂಧದ ಗುಡಿಯೊಂದಿಗೆ ಆಚರಿಸಲು ಮುಹೂರ್ತ ಫಿಕ್ಸ್ ಆಗಿದೆ.

ರಾಷ್ಟ್ರ ಪ್ರಶಸ್ತಿ ಪಡೆದ ವನ್ಯಜೀವಿ ಚಿತ್ರ ನಿರ್ದೇಶಕ ಅಮೋಘವರ್ಷ ನಿರ್ದೇಶನದ ಚಲನಚಿತ್ರ ಇದಾಗಿದೆ. ಚಿತ್ರಕ್ಕೆ ಬಿ.ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ 2021ರ ಅಕ್ಟೋಬರ್ 29ರಂದು ಅಪ್ಪು ನಿಧನ ಹೊಂದಿದರು. ಈ ಕಾರಣಕ್ಕೆ ಈ ವರ್ಷ ಅಕ್ಟೋಬರ್ 28ರಂದು ‘ಗಂಧದ ಗುಡಿ’ಯನ್ನು ರಿಲೀಸ್ ಮಾಡಲಾಗುತ್ತಿದೆ. ಸಾಮಾನ್ಯವಾಗಿ ಡಾಕ್ಯುಮೆಂಟರಿಗಳು ಒಟಿಟಿ ಹಾಗೂ ಯೂಟ್ಯೂಬ್​ಗೆ ಮಾತ್ರ ಸೀಮಿತವಾಗಿರುತ್ತದೆ. ಆದರೆ, ‘ಗಂಧದ ಗುಡಿ’ಯನ್ನು ಪುನೀತ್ ಅವರ ಆಸೆಯಂತೆ ಚಿತ್ರಮಂದಿರದಲ್ಲೇ ಬಿಡುಗಡೆ ಮಾಡಲಾಗುತ್ತಿದೆ. ಇದಕ್ಕೆ ಸ್ಯಾಂಡಲ್​ವುಡ್ ಸೆಲೆಬ್ರಿಟಿಗಳಿಂದ ಉತ್ತಮ ಬೆಂಬಲ ಸಿಗುವ ನಿರೀಕ್ಷೆ ಇದೆ.

andolanait

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

7 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

7 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

8 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

8 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

10 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

10 hours ago