ಚಿತ್ರ ಮಂಜರಿ

ಅಪ್ಪು ಕೊನೆಯ ಚಿತ್ರ ʼಗಂಧದಗುಡಿʼ ಟ್ರೈಲರ್ ಬಿಡುಗಡೆ

ಬೆಂಗಳೂರು : ಕನ್ನಡ ಚಿತ್ರರಂಗದ ಖ್ಯಾತ ನಟ ಪವರ್‌ ಸ್ಟಾರ್‌ ಪುನೀತ್‌ ರಾಜ್‌ ಕುಮಾರ್‌ ಅಭಿನಯದ ಕೊನೆಯ ಚಿತ್ರ ಗಂಧದ ಗುಡಿ ಸಿನಿಮಾದ ಟ್ರೈಲರ್ ಇಂದು ಬಿಡುಗಡೆಗೊಂಡಿದೆ.

ಅಕ್ಟೋಬರ್ 28, 2022 ರಂದು ದೊಡ್ಡತೆರೆಯ ಮೇಲೆ ಕಾಣಿಸಿಕೊಳ್ಳಲಿರುವ ಈ ಸಿನಿಮಾದ ಟ್ರೈಲರ್ ನೋಡಿದ ಅಭಿಮಾನಿಗಳು ಬಹಳ ಸಂತಸ ಪಟ್ಟಿದ್ದಾರೆ.


. ‘ಕರ್ನಾಟಕದ ಕಾಡು ಉಳಿಸಿ’ ಎಂಬ ಡಾ. ರಾಜ್ ಸಂದೇಶದ ಮರುಜನ್ಮವೇ ಹೊಸ ಗಂಧದ ಗುಡಿ ಸಾರಾಂಶ. ನದಿ, ಬೆಟ್ಟ, ಮರ, ಗಿಡ, ಪ್ರಾಣಿ-ಪಕ್ಷಿಗಳ ನೋಟವನ್ನು ಅತ್ಯದ್ಭುತವಾಗಿ ನೈಜವಾಗಿ ಸೆರೆ ಹಿಡಿಯಲಾಗಿದೆ.

ಗಂಧದ ಗುಡಿ ಸಿನಿಮಾ ಪ್ರಕೃತಿಯತ್ತ ಒಂದು ಪಯಣ. ನಿಜವಾದ ನಾಯಕನ ಮತ್ತು ಪ್ರಕೃತಿ ಕಾಳಜಿಯ ಕಥೆ. ಬಯಲು ಸೀಮೆಯಿಂದ ಹಿಡಿದು ಸಮುದ್ರ ತೀರದವರೆಗೂ, ಪತನವಾಗಿರುವ ಕಾಡುಗಳಿಂದ, ಪಶ್ಚಿಮ ಘಟ್ಟ, ದಟ್ಟ ಅರಣ್ಯದವರೆಗೂ ಈ ಮಣ್ಣಿನ ಸಿರಿ ಸೆರೆ ಹಿಡಿದಿರುವ ಸಿನಿಮಾ ಇದು. ಪ್ರಕೃತಿಯ ಸಿರಿವಂತಿಕೆಯನ್ನು ಹಾಡುಗಳೊಂದಿಗೆ, ದೃಶ್ಯ ವೈಭವದೊಂದಿಗೆ ಜನರಿಗೆ ಪರಿಚಯಿಸುವ ಉತ್ಸಾಹವನ್ನು ಪುನೀತ್ ರಾಜ್​ಕುಮಾರ್ ಮಾಡಿದ್ದಾರೆ. ವನ್ಯಜೀವಿಗಳ ಬದುಕು, ಕಾಡಿನ ಸಂರಕ್ಷಣೆ, ಜನ ಸಾಮಾನ್ಯರಿಗೆ ಕಾಡಿನ ಬಗ್ಗೆ ಉತ್ಸಾಹ ಹಾಗೂ ಕಾಳಜಿಯನ್ನು ಹೆಚ್ಚಿಸಲು ಪ್ರಯತ್ನಿಸಿ, ನಮ್ಮ ವ್ಯಕ್ತಿತ್ವದ ಮೇಲೆ ಮಹತ್ತರವಾದ ಬದಲಾವಣೆಯನ್ನು ತರಲು ಅಪ್ಪು ಹೊರಟಿದ್ದರು.ಆದರೆ ಅವರ ಅಕಾಲಿಕ ನಿಧನದಿಂದ ಆ ಕನಸು ಹಾಗೇ ಉಳಿದಿದೆ. ಇಂದು ಅವರ ನೆನಪಿನಲ್ಲಿ ಟ್ರೈಲರ್ ಬಿಡುಗಡೆ ಮಾಡಲಾಗಿದ್ದು, ತಿಂಗಳಾಂತ್ಯದಲ್ಲಿ ಸಿನಿಮಾ ಬಿಡುಗಡೆ ಆಗಲಿದೆ.


ಹೌದು, ಈ ವರ್ಷದ ನಾಡಹಬ್ಬ ರಾಜ್ಯೋತ್ಸವವನ್ನು ಅಪ್ಪುವಿನ ಗಂಧದ ಗುಡಿಯೊಂದಿಗೆ ಆಚರಿಸಲು ಮುಹೂರ್ತ ಫಿಕ್ಸ್ ಆಗಿದೆ.

ರಾಷ್ಟ್ರ ಪ್ರಶಸ್ತಿ ಪಡೆದ ವನ್ಯಜೀವಿ ಚಿತ್ರ ನಿರ್ದೇಶಕ ಅಮೋಘವರ್ಷ ನಿರ್ದೇಶನದ ಚಲನಚಿತ್ರ ಇದಾಗಿದೆ. ಚಿತ್ರಕ್ಕೆ ಬಿ.ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ 2021ರ ಅಕ್ಟೋಬರ್ 29ರಂದು ಅಪ್ಪು ನಿಧನ ಹೊಂದಿದರು. ಈ ಕಾರಣಕ್ಕೆ ಈ ವರ್ಷ ಅಕ್ಟೋಬರ್ 28ರಂದು ‘ಗಂಧದ ಗುಡಿ’ಯನ್ನು ರಿಲೀಸ್ ಮಾಡಲಾಗುತ್ತಿದೆ. ಸಾಮಾನ್ಯವಾಗಿ ಡಾಕ್ಯುಮೆಂಟರಿಗಳು ಒಟಿಟಿ ಹಾಗೂ ಯೂಟ್ಯೂಬ್​ಗೆ ಮಾತ್ರ ಸೀಮಿತವಾಗಿರುತ್ತದೆ. ಆದರೆ, ‘ಗಂಧದ ಗುಡಿ’ಯನ್ನು ಪುನೀತ್ ಅವರ ಆಸೆಯಂತೆ ಚಿತ್ರಮಂದಿರದಲ್ಲೇ ಬಿಡುಗಡೆ ಮಾಡಲಾಗುತ್ತಿದೆ. ಇದಕ್ಕೆ ಸ್ಯಾಂಡಲ್​ವುಡ್ ಸೆಲೆಬ್ರಿಟಿಗಳಿಂದ ಉತ್ತಮ ಬೆಂಬಲ ಸಿಗುವ ನಿರೀಕ್ಷೆ ಇದೆ.

andolanait

Recent Posts

ಜಿ-ರಾಮ್‌ಜಿ ವಾಪಸ್‌ ಪಡೆಯಿರಿ : ಪ್ರಧಾನಿಗೆ ಸಿಎಂ ಸಿದ್ದರಾಮಯ್ಯ ಪತ್ರ

ಬೆಂಗಳೂರು : ಉದ್ಯೋಗ ಖಾತರಿಯನ್ನು ಇಲ್ಲವಾಗಿಸುವ ಮತ್ತು ಒಕ್ಕೂಟ ವ್ಯವಸ್ಥೆಯ ಆಶಯಗಳಿಗೆ ವ್ಯತಿರಿಕ್ತವಾಗಿರುವ ವಿಕಸಿತ ಭಾರತ ಉದ್ಯೋಗ ಖಾತರಿ ಮತ್ತು…

19 mins ago

ಹಣ ಅಕ್ರಮ ವರ್ಗಾವಣೆ ಪ್ರಕರಣ : ಕಾಂಗ್ರೆಸ್‌ ಶಾಸಕ ವೀರೇಂದ್ರಗೆ ಜಾಮೀನು

ಬೆಂಗಳೂರು : ಜಾರಿ ನಿರ್ದೇಶನಾಲಯ(ಇ.ಡಿ) ದಾಖಲಿಸಿದ್ದ ಕ್ರಿಮಿನಲ್‌ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಕಾಂಗ್ರೆಸ್‌ ಶಾಸಕ ಕೆ.ಸಿ.ವೀರೇಂದ್ರ ಅವರಿಗೆ ಬಿಗ್‌ ರಿಲೀಫ್‌…

2 hours ago

ಮೈಸೂರಿನಲ್ಲಿ ಪತ್ರಕರ್ತರು ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ : ಜಿಲ್ಲಾಧಿಕಾರಿ ಮೆಚ್ಚುಗೆ

ಮೈಸೂರು : ಬೇರೆ ಜಿಲ್ಲೆಗಳಿಗೆ ಹೋಲಿಸಿಕೊಂಡರೆ ಮೈಸೂರಿನ ಪತ್ರಿಕೋದ್ಯಮ ಗುಣಮಟ್ಟದಿಂದ ಕೂಡಿದ್ದು, ಇಲ್ಲಿನ ಪತ್ರಕರ್ತರು ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು…

2 hours ago

ಕೈಗಾರಿಕೆ ಸ್ಥಾಪನೆಗೆ ಅರ್ಜಿ ಬಂದರೆ ಸಂಪೂರ್ಣ ಬೆಂಬಲ: ಸಚಿವ ಚಲುವರಾಯಸ್ವಾಮಿ ಭರವಸೆ

ಮಂಡ್ಯ : ಕೇಂದ್ರ ಬೃಹತ್ ಉಕ್ಕು ಮತ್ತು ಕೈಗಾರಿಕಾ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಅವರು ಯಾವುದಾದರೂ ಕಂಪನಿಗಳಿಂದ ಕೈಗಾರಿಕೆ ಸ್ಥಾಪನೆಗೆ…

3 hours ago

ಜ.1ರಂದು ಚಾ.ಬೆಟ್ಟಕ್ಕೆ ಹೆಚ್ಚಿನ ಜನ ನಿರೀಕ್ಷೆ : ಅಗತ್ಯ ವ್ಯವಸ್ಥೆಗೆ ಜಿಲ್ಲಾಧಿಕಾರಿ ಸೂಚನೆ

ಮೈಸೂರು : ಹೊಸ ವರ್ಷ ಜನವರಿ 1ರಂದು ಚಾಮುಂಡಿ ಬೆಟ್ಟಕ್ಕೆ ಹೆಚ್ವಿನ ಭಕ್ತಾಧಿಗಳು ಆಗಮಿಸುವ ನಿರೀಕ್ಷೆ ಇದ್ದು, ಅಗತ್ಯ ವ್ಯವಸ್ಥೆಗಳನ್ನು…

4 hours ago

ಬೈಕ್ ಸಮೇತ ಸಜೀವ ದಹನವಾದ ಯುವಕ ; ಕೊಲೆ ಶಂಕೆ

ನಂಜನಗೂಡು : ಬೈಕ್ ಸಮೇತ ಯುವಕ ಸಜೀವ ದಹನವಾಗಿರುವ ಘಟನೆ ತಾಲ್ಲೂಕಿನ ಕೊರೆಹುಂಡಿ ಗ್ರಾಮದ ಹುಲ್ಲಹಳ್ಳಿ ನಾಲೆ ಬಳಿ ನಡೆದಿದೆ.…

4 hours ago