ಚಿತ್ರ ಮಂಜರಿ

ಅಪ್ಪು ಕೊನೆಯ ಚಿತ್ರ ʼಗಂಧದಗುಡಿʼ ಟ್ರೈಲರ್ ಬಿಡುಗಡೆ

ಬೆಂಗಳೂರು : ಕನ್ನಡ ಚಿತ್ರರಂಗದ ಖ್ಯಾತ ನಟ ಪವರ್‌ ಸ್ಟಾರ್‌ ಪುನೀತ್‌ ರಾಜ್‌ ಕುಮಾರ್‌ ಅಭಿನಯದ ಕೊನೆಯ ಚಿತ್ರ ಗಂಧದ ಗುಡಿ ಸಿನಿಮಾದ ಟ್ರೈಲರ್ ಇಂದು ಬಿಡುಗಡೆಗೊಂಡಿದೆ.

ಅಕ್ಟೋಬರ್ 28, 2022 ರಂದು ದೊಡ್ಡತೆರೆಯ ಮೇಲೆ ಕಾಣಿಸಿಕೊಳ್ಳಲಿರುವ ಈ ಸಿನಿಮಾದ ಟ್ರೈಲರ್ ನೋಡಿದ ಅಭಿಮಾನಿಗಳು ಬಹಳ ಸಂತಸ ಪಟ್ಟಿದ್ದಾರೆ.


. ‘ಕರ್ನಾಟಕದ ಕಾಡು ಉಳಿಸಿ’ ಎಂಬ ಡಾ. ರಾಜ್ ಸಂದೇಶದ ಮರುಜನ್ಮವೇ ಹೊಸ ಗಂಧದ ಗುಡಿ ಸಾರಾಂಶ. ನದಿ, ಬೆಟ್ಟ, ಮರ, ಗಿಡ, ಪ್ರಾಣಿ-ಪಕ್ಷಿಗಳ ನೋಟವನ್ನು ಅತ್ಯದ್ಭುತವಾಗಿ ನೈಜವಾಗಿ ಸೆರೆ ಹಿಡಿಯಲಾಗಿದೆ.

ಗಂಧದ ಗುಡಿ ಸಿನಿಮಾ ಪ್ರಕೃತಿಯತ್ತ ಒಂದು ಪಯಣ. ನಿಜವಾದ ನಾಯಕನ ಮತ್ತು ಪ್ರಕೃತಿ ಕಾಳಜಿಯ ಕಥೆ. ಬಯಲು ಸೀಮೆಯಿಂದ ಹಿಡಿದು ಸಮುದ್ರ ತೀರದವರೆಗೂ, ಪತನವಾಗಿರುವ ಕಾಡುಗಳಿಂದ, ಪಶ್ಚಿಮ ಘಟ್ಟ, ದಟ್ಟ ಅರಣ್ಯದವರೆಗೂ ಈ ಮಣ್ಣಿನ ಸಿರಿ ಸೆರೆ ಹಿಡಿದಿರುವ ಸಿನಿಮಾ ಇದು. ಪ್ರಕೃತಿಯ ಸಿರಿವಂತಿಕೆಯನ್ನು ಹಾಡುಗಳೊಂದಿಗೆ, ದೃಶ್ಯ ವೈಭವದೊಂದಿಗೆ ಜನರಿಗೆ ಪರಿಚಯಿಸುವ ಉತ್ಸಾಹವನ್ನು ಪುನೀತ್ ರಾಜ್​ಕುಮಾರ್ ಮಾಡಿದ್ದಾರೆ. ವನ್ಯಜೀವಿಗಳ ಬದುಕು, ಕಾಡಿನ ಸಂರಕ್ಷಣೆ, ಜನ ಸಾಮಾನ್ಯರಿಗೆ ಕಾಡಿನ ಬಗ್ಗೆ ಉತ್ಸಾಹ ಹಾಗೂ ಕಾಳಜಿಯನ್ನು ಹೆಚ್ಚಿಸಲು ಪ್ರಯತ್ನಿಸಿ, ನಮ್ಮ ವ್ಯಕ್ತಿತ್ವದ ಮೇಲೆ ಮಹತ್ತರವಾದ ಬದಲಾವಣೆಯನ್ನು ತರಲು ಅಪ್ಪು ಹೊರಟಿದ್ದರು.ಆದರೆ ಅವರ ಅಕಾಲಿಕ ನಿಧನದಿಂದ ಆ ಕನಸು ಹಾಗೇ ಉಳಿದಿದೆ. ಇಂದು ಅವರ ನೆನಪಿನಲ್ಲಿ ಟ್ರೈಲರ್ ಬಿಡುಗಡೆ ಮಾಡಲಾಗಿದ್ದು, ತಿಂಗಳಾಂತ್ಯದಲ್ಲಿ ಸಿನಿಮಾ ಬಿಡುಗಡೆ ಆಗಲಿದೆ.


ಹೌದು, ಈ ವರ್ಷದ ನಾಡಹಬ್ಬ ರಾಜ್ಯೋತ್ಸವವನ್ನು ಅಪ್ಪುವಿನ ಗಂಧದ ಗುಡಿಯೊಂದಿಗೆ ಆಚರಿಸಲು ಮುಹೂರ್ತ ಫಿಕ್ಸ್ ಆಗಿದೆ.

ರಾಷ್ಟ್ರ ಪ್ರಶಸ್ತಿ ಪಡೆದ ವನ್ಯಜೀವಿ ಚಿತ್ರ ನಿರ್ದೇಶಕ ಅಮೋಘವರ್ಷ ನಿರ್ದೇಶನದ ಚಲನಚಿತ್ರ ಇದಾಗಿದೆ. ಚಿತ್ರಕ್ಕೆ ಬಿ.ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ 2021ರ ಅಕ್ಟೋಬರ್ 29ರಂದು ಅಪ್ಪು ನಿಧನ ಹೊಂದಿದರು. ಈ ಕಾರಣಕ್ಕೆ ಈ ವರ್ಷ ಅಕ್ಟೋಬರ್ 28ರಂದು ‘ಗಂಧದ ಗುಡಿ’ಯನ್ನು ರಿಲೀಸ್ ಮಾಡಲಾಗುತ್ತಿದೆ. ಸಾಮಾನ್ಯವಾಗಿ ಡಾಕ್ಯುಮೆಂಟರಿಗಳು ಒಟಿಟಿ ಹಾಗೂ ಯೂಟ್ಯೂಬ್​ಗೆ ಮಾತ್ರ ಸೀಮಿತವಾಗಿರುತ್ತದೆ. ಆದರೆ, ‘ಗಂಧದ ಗುಡಿ’ಯನ್ನು ಪುನೀತ್ ಅವರ ಆಸೆಯಂತೆ ಚಿತ್ರಮಂದಿರದಲ್ಲೇ ಬಿಡುಗಡೆ ಮಾಡಲಾಗುತ್ತಿದೆ. ಇದಕ್ಕೆ ಸ್ಯಾಂಡಲ್​ವುಡ್ ಸೆಲೆಬ್ರಿಟಿಗಳಿಂದ ಉತ್ತಮ ಬೆಂಬಲ ಸಿಗುವ ನಿರೀಕ್ಷೆ ಇದೆ.

andolanait

Recent Posts

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ ಏಳು ದಿನ ಭಾರೀ ಮಳೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಪರಿಣಾಮ ರಾಜ್ಯದಲ್ಲಿ ಏಳು ದಿನ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

2 hours ago

ಜೈಲಿನಲ್ಲಿ ಪವಿತ್ರಾಗೌಡಗೆ ರಾಜಾತಿಥ್ಯ ಆರೋಪ: ಸಂಧ್ಯಾ ನಾಗರಾಜ್‌ ವಿರುದ್ಧ ದೂರು

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಎ1 ಆರೋಪಿ ಪವಿತ್ರಾಗೌಡಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.…

3 hours ago

ಓದುಗರ ಪತ್ರ: ಕಿಡಿಗೇಡಿಗಳಿಗೆ ಕಠಿಣ ಶಿಕ್ಷೆ ಆಗಲಿ

ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲ್ಲೂಕಿನ ಮಸಣಾಪುರ ಚಾಟಿಪುರ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರದ ಫಲಕಕ್ಕೆ ಕಿಡಿಗೇಡಿಗಳು ಅಪಮಾನ…

7 hours ago

ಓದುಗರ ಪತ್ರ: ಒಡೆಯರ್ ಪೋಸ್ಟ್ ಕಾರ್ಡ್ ಬಿಡುಗಡೆ ಶ್ಲಾಘನೀಯ

ಭಾರತೀಯ ಅಂಚೆ ಹಾಗೂ ಕರ್ನಾಟಕ ಅಂಚೆ ಚೀಟಿ ಸಂಗ್ರಹಣಾ ಸಂಘವು ಆಧುನಿಕ ಮೈಸೂರು ನಿರ್ಮಾಣಕ್ಕೆ ಮಹತ್ವದ ಕೊಡುಗೆ ನೀಡಿರುವ ಮೈಸೂರು…

7 hours ago

ಓದುಗರ ಪತ್ರ: ಮೈಸೂರು ದಟ್ಟಗಳ್ಳಿಯ ಪಿನ್ ಕೋಡ್ ಸಮಸ್ಯೆ ನಿವಾರಿಸಿ

ಮೈಸೂರಿನ ದಟ್ಟಗಳ್ಳಿ ೩ ನೇ ಹಂತದ ಕನಕದಾಸನಗರವು, ಬಡಾವಣೆ ನಿರ್ಮಾಣವಾದ ಆರಂಭದಲ್ಲಿ ರಾಮಕೃಷ್ಣ ನಗರ ಉಪ ಅಂಚೆ ಕಚೇರಿಗೆ ಸೇರಿತ್ತು.…

7 hours ago

ಮಳೆಗಾಲದ ಸವಾಲು ಎದುರಿಸಲು ಸೆಸ್ಕ್ ಸಜ್ಜು

ಪುನೀತ್ ಮಡಿಕೇರಿ ಹೆಚ್ಚುವರಿ ಸಿಬ್ಬಂದಿಗಳ ನಿಯೋಜನೆ; ಅಗತ್ಯವಿರುವಷ್ಟು ವಿದ್ಯುತ್ ಕಂಬಗಳು, ಪರಿವರ್ತಕಗಳು, ವಾಹಕಗಳ ದಾಸ್ತಾನು ಮಡಿಕೇರಿ: ಗುಡ್ಡಗಾಡು ಪ್ರದೇಶವಾಗಿರುವ ಕೊಡಗು…

7 hours ago