ತಮಿಳುನಾಡು : ತೆಲುಗು ಚಲನಚಿತ್ರ ವಾಣಿಜ್ಯ ಮಂಡಳಿಯ ಆವರಣದಲ್ಲಿ ಫೆ.20ರ ಬೆಳಗ್ಗೆ ನಂದಮೂರಿ ತಾರಕ ರತ್ನ ಅವರ ಪಾರ್ಥೀವ ಶರೀರ ಇರಿಸಲಾಗುವುದು. ಸಂಜೆ 5 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ.
ತೆಲುಗು ನಟ ಹಾಗೂ ರಾಜಕಾರಣಿ ನಂದಮೂರಿ ತಾರಕ ರತ್ನ ಅವರು ಬೆಂಗಳೂರಿನಲ್ಲಿ ಶನಿವಾರ (ಫೆ.18) ಕೊನೆಯುಸಿರು ಎಳೆದಿದ್ದು ತೀವ್ರ ನೋವಿನ ಸಂಗತಿ. ಹಲವು ದಿನಗಳ ಹಿಂದೆ ಹೃದಯಾಘಾತಕ್ಕೆ ಒಳಗಾಗಿದ್ದ ಅವರನ್ನು ಬೆಂಗಳೂರಿನ ನಾರಾಯಣ ಹೃದಯಾಲಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ನಿಧನರಾಗಿದ್ದಾರೆ. ಭಾನುವಾರ (ಫೆ.19) ನಂದಮೂರಿ ತಾರಕ ರತ್ನ ಅವರ ಪಾರ್ಥೀವ ಶರೀರವನ್ನು ರಂಗಾ ರೆಡ್ಡಿ ಜಿಲ್ಲೆಯ ಮೋಕಿಲಾಗೆ ರವಾನೆ ಮಾಡಲಾಗಿದೆ. ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ. ಸೋಮವಾರ (ಫೆ.20) ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು. ಬಳಿಕ ನಂದಮೂರಿ ತಾರಕ ರತ್ನ ಅಂತ್ಯಕ್ರಿಯೆ ನಡೆಯಲಿದೆ.
ಫೆ.20ರ ಬೆಳಗ್ಗೆ ತೆಲುಗು ಚಲನಚಿತ್ರ ವಾಣಿಜ್ಯ ಮಂಡಳಿಯ ಆವರಣದಲ್ಲಿ ನಂದಮೂರಿ ತಾರಕ ರತ್ನ ಅವರ ಪಾರ್ಥೀವ ಶರೀರ ಇರಿಸಲಾಗುವುದು. ಅಲ್ಲಿ ಸಾರ್ವಜನಿಕರು ಅಂತಿಮ ದರ್ಶನ ಪಡೆಯಬಹುದು. ಬೆಳಗ್ಗೆ 7 ಗಂಟೆಯಿಂದಲೇ ಅಂತಿಮ ದರ್ಶನಕ್ಕೆ ಅವಕಾಶ ಇರಲಿದೆ. ಅಂದು ಸಂಜೆ 5 ಗಂಟೆ ಸುಮಾರಿಗೆ ಹೈದರಾಬಾದ್ನ ಮಹಾಪ್ರಸ್ತಾನಂನಲ್ಲಿ ಅಂತ್ಯಕ್ರಿಯೆ ಮಾಡಲಾಗುವುದು.
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…
ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…