ಚಿತ್ರ ಮಂಜರಿ

ಆರ್ಟಿಕಲ್ 370 ಸಿನಿಮಾ ಟ್ರೈಲರ್‌ನಲ್ಲಿ ಮೋದಿ, ಅಮಿತ್ ಶಾ

ಪಂಚಭಾಷಾ ನಟಿ ಪ್ರಿಯಾಮಣಿ ಹಾಗೂ ಬಾಲಿವುಡ್‌ನ ಖ್ಯಾತ ನಟಿ ಯಾಮಿ ಗೌತಮ್ ಜೊತೆಯಾಗಿ ನಟಿಸಿರುವ ಆರ್ಟಿಕಲ್ 370 ಚಿತ್ರದ ಟ್ರೈಲರ್ ರಿಲೀಸ್ ಆಗಿದ್ದು, ವೀಕ್ಷಕರಿಂದ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಬಾಲಿವುಡ್ ಅಂಗಳದಲ್ಲಿ ಭರವಸೆ ಹುಟ್ಟುಹಾಕಿದೆ.

ಈ ಸಿನಿಮಾದ ಟ್ರೈಲರ್ 2 ನಿಮಿಷ 40 ಸೆಂಕೆಡ್‌ಗಳಿದ್ದು, ಟ್ರೈಲರ್‌ನಲ್ಲಿ ಭಾರತದ ಪ್ರಸ್ತುತ ಪ್ರಧಾನ ಮಂತ್ರಿ ಮೋದಿಯವರ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಪಾತ್ರಗಳಿರುವುದು ವಿಶೇಷವಾಗಿದೆ. ಜಮ್ಮುಕಾಶ್ಮೀರದ ವಿಶೇಷಾಧಿಕಾರವಾಗಿದ್ದ ಆರ್ಟಿಕಲ್ 370 ಅನ್ನು ತೆಗೆದು ಹಾಕಲಾದ ಹಂತವನ್ನು ಈ ಸಿನಿಮಾ ಹೊಂದಿದೆ.

ಟ್ರೈಲರ್‌ನಲ್ಲಿ ʼಪೂರಾ ಕಾ ಪೂರಾ ಕಾಶ್ಮೀರ್, ಭಾರತ್ ದೇಶ್ ಕಾ ಹಿಸ್ಸಾ ಥಾ ಹೇ ಔರ್ ರೆಹೇಗಾʼ ಎಂಬ ಮಾತು ಹಾಗೂ ಕಾಶ್ಮೀರ ಭಯೋತ್ಪಾದನೆ, ಭಯೋತ್ಪಾದನೆ ಕುತಂತ್ರ, ಸೇನಾಧಿಕಾರಿಗಳ ಹೋರಾಟ, ಮತ್ತು ಆರ್ಟಿಕಲ್ 370ಯನ್ನು ತೆಗೆದರೆ ಏನೆಲ್ಲ ಆಗಲಿದೆ ಎಂಬ ಅಂಶಗಳನ್ನು ತೋರಿಸಲಾಗಿದೆ. ಶಾಶ್ವತ್ ಸಚ್ ದೇವ್ ಅವರ ಹಿನ್ನೆಲೆ ಸಂಗೀತ ನೋಡುಗರ ಗಮನ ಸೆಳೆದಿದೆ. ಯಾಮಿ ಗೌತಮ್ ಎನ್.ಐ.ಎ ಖಡಕ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದು, ಚಿತ್ರವು ಫೆಬ್ರವರಿ 23ಕ್ಕೆ ತೆರೆ ಕಾಣಲಿದೆ. ಇದುವರೆಗೂ ಕಾಶ್ಮೀರ ಕುರಿತಂತೆ ತೆರೆಗೆ ಬಂದಿರುವ ಯಾವ ಚಿತ್ರವೂ ಸೋತಿಲ್ಲದೆ ಬಾಕ್ಸ್ ಆಫೀನ್‌ನಲ್ಲಿ ಕೋಟಿ ಕೋಟಿ ಹಣಗಳಿಕೆ ಮಾಡಿರುವುದರಿಂದ ಈ ಚಿತ್ರದ ಟ್ರೈಲರ್‌ ರಿಲೀಸ್‌ ಆದ ಬಳಿಕ ಸಿನಿಮಾದ ಬಗ್ಗೆ ನಿರೀಕ್ಷೆ ಹೆಚ್ಚಾಗಿವೆ.

andolana

Recent Posts

ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರು ಬದಲಾವಣೆ : ಸಂಸದ ಯದುವೀರ್‌

ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…

15 mins ago

ತಂತ್ರಜ್ಞಾನ ಅಳವಡಿಸಿಕೊಂಡು ಉತ್ತಮ ಇಳುವರಿ ಜೊತೆಗೆ ಹೆಚ್ಚಿನ ಆದಾಯ ಪಡೆಯರಿ : ರೈತರಿಗೆ ಸಿಎಂ ಕರೆ

ಬೆಳಗಾವಿ : ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ…

34 mins ago

ಟಿ-20 ವಿಶ್ವಕಪ್‌ಗೆ ಭಾರತ ತಂಡ ಪ್ರಕಟ :ಸೂರ್ಯಕುಮಾರ್ ಯಾದವ್ ನಾಯಕ

ಹೊಸದಿಲ್ಲಿ: ಮುಂಬರುವ ಐಸಿಸಿ ಟಿ-೨೦ ವಿಶ್ವಕಪ್‌ಗಾಗಿ ೧೫ ಸದಸ್ಯರ ಭಾರತ ತಂಡವನ್ನು ಪ್ರಕಟಿಸಲಾಗಿದೆ. ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದು, ಶುಭಮನ್…

46 mins ago

ಮೊಟ್ಟೆ ಕ್ಯಾನ್ಸರ್‌ ಕಾರಕವಲ್ಲ : ಕೇಂದ್ರ ವರದಿ

ಹೊಸದಿಲ್ಲಿ : ಮೊಟ್ಟೆ ಸೇವೆನೆಗೆ ಸುರಕ್ಷಿತವಾಗಿದ್ದು ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕವಾಗುವ ಯಾವುದೇ ಅಂಶ ಪತ್ತೆ ಆಗಿಲ್ಲ ಎಂದು ಕೇಂದ್ರ ಆಹಾರ…

49 mins ago

‘ಅಂತರ್ಜಲ ಹೆಚ್ಚಳಕ್ಕೆ ಆದ್ಯತೆ ನೀಡಿ’ : ಶಿವಶಂಕರ್ ಸೂಚನೆ

ಚಾಮರಾಜನಗರ : ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸುವಂತಹ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಕೈಗೊಳ್ಳುವಂತೆ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಜಲಶಕ್ತಿ ಮಂತ್ರಾಲಯದ…

54 mins ago

ಮೈಸೂರು | ನಾಳೆಯಿಂದ ಅರಮನೆ ಅಂಗಳದಲ್ಲಿ ಫಲಪುಷ್ಪ ಪ್ರದರ್ಶನ

ಮೈಸೂರು : ಕ್ರಿಸ್‌ಮಸ್ ಹಾಗೂ ಹೊಸ ವರ್ಷದ ಸಂಭ್ರಮಾಚರಣೆಗಾಗಿ ಪ್ರವಾಸಿಗರು, ಸ್ಥಳೀಯರಿಗೆ ಮನರಂಜನೆ ಒದಗಿಸಲು ಅರಮನೆ ಅಂಗಳದಲ್ಲಿ ಡಿ.೨೧ರಿಂದ ೩೧ರವರೆಗೆ…

1 hour ago