ಚಿತ್ರ ಮಂಜರಿ

ಆರ್ಟಿಕಲ್ 370 ಸಿನಿಮಾ ಟ್ರೈಲರ್‌ನಲ್ಲಿ ಮೋದಿ, ಅಮಿತ್ ಶಾ

ಪಂಚಭಾಷಾ ನಟಿ ಪ್ರಿಯಾಮಣಿ ಹಾಗೂ ಬಾಲಿವುಡ್‌ನ ಖ್ಯಾತ ನಟಿ ಯಾಮಿ ಗೌತಮ್ ಜೊತೆಯಾಗಿ ನಟಿಸಿರುವ ಆರ್ಟಿಕಲ್ 370 ಚಿತ್ರದ ಟ್ರೈಲರ್ ರಿಲೀಸ್ ಆಗಿದ್ದು, ವೀಕ್ಷಕರಿಂದ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಬಾಲಿವುಡ್ ಅಂಗಳದಲ್ಲಿ ಭರವಸೆ ಹುಟ್ಟುಹಾಕಿದೆ.

ಈ ಸಿನಿಮಾದ ಟ್ರೈಲರ್ 2 ನಿಮಿಷ 40 ಸೆಂಕೆಡ್‌ಗಳಿದ್ದು, ಟ್ರೈಲರ್‌ನಲ್ಲಿ ಭಾರತದ ಪ್ರಸ್ತುತ ಪ್ರಧಾನ ಮಂತ್ರಿ ಮೋದಿಯವರ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಪಾತ್ರಗಳಿರುವುದು ವಿಶೇಷವಾಗಿದೆ. ಜಮ್ಮುಕಾಶ್ಮೀರದ ವಿಶೇಷಾಧಿಕಾರವಾಗಿದ್ದ ಆರ್ಟಿಕಲ್ 370 ಅನ್ನು ತೆಗೆದು ಹಾಕಲಾದ ಹಂತವನ್ನು ಈ ಸಿನಿಮಾ ಹೊಂದಿದೆ.

ಟ್ರೈಲರ್‌ನಲ್ಲಿ ʼಪೂರಾ ಕಾ ಪೂರಾ ಕಾಶ್ಮೀರ್, ಭಾರತ್ ದೇಶ್ ಕಾ ಹಿಸ್ಸಾ ಥಾ ಹೇ ಔರ್ ರೆಹೇಗಾʼ ಎಂಬ ಮಾತು ಹಾಗೂ ಕಾಶ್ಮೀರ ಭಯೋತ್ಪಾದನೆ, ಭಯೋತ್ಪಾದನೆ ಕುತಂತ್ರ, ಸೇನಾಧಿಕಾರಿಗಳ ಹೋರಾಟ, ಮತ್ತು ಆರ್ಟಿಕಲ್ 370ಯನ್ನು ತೆಗೆದರೆ ಏನೆಲ್ಲ ಆಗಲಿದೆ ಎಂಬ ಅಂಶಗಳನ್ನು ತೋರಿಸಲಾಗಿದೆ. ಶಾಶ್ವತ್ ಸಚ್ ದೇವ್ ಅವರ ಹಿನ್ನೆಲೆ ಸಂಗೀತ ನೋಡುಗರ ಗಮನ ಸೆಳೆದಿದೆ. ಯಾಮಿ ಗೌತಮ್ ಎನ್.ಐ.ಎ ಖಡಕ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದು, ಚಿತ್ರವು ಫೆಬ್ರವರಿ 23ಕ್ಕೆ ತೆರೆ ಕಾಣಲಿದೆ. ಇದುವರೆಗೂ ಕಾಶ್ಮೀರ ಕುರಿತಂತೆ ತೆರೆಗೆ ಬಂದಿರುವ ಯಾವ ಚಿತ್ರವೂ ಸೋತಿಲ್ಲದೆ ಬಾಕ್ಸ್ ಆಫೀನ್‌ನಲ್ಲಿ ಕೋಟಿ ಕೋಟಿ ಹಣಗಳಿಕೆ ಮಾಡಿರುವುದರಿಂದ ಈ ಚಿತ್ರದ ಟ್ರೈಲರ್‌ ರಿಲೀಸ್‌ ಆದ ಬಳಿಕ ಸಿನಿಮಾದ ಬಗ್ಗೆ ನಿರೀಕ್ಷೆ ಹೆಚ್ಚಾಗಿವೆ.

andolana

Recent Posts

ಓದುಗರ ಪತ್ರ: ಕೇರಳದಲ್ಲಿ ಉಚಿತ ಶಿಕ್ಷಣ ಶ್ಲಾಘನೀಯ

ಇಂದು ಶಿಕ್ಷಣ ಎನ್ನುವುದು ವ್ಯಾಪಾರೀಕರಣವಾಗಿದ್ದು, ಪೋಷಕರು ದುಡಿಮೆಯ ಬಹುತೇಕ ಆದಾಯವನ್ನು ಮಕ್ಕಳ ಶಿಕ್ಷಣಕ್ಕೆ ಖರ್ಚು ಮಾಡುವುದು ಅನಿವಾರ್ಯವಾಗಿದೆ. ಕೇರಳ ಸರ್ಕಾರ…

5 mins ago

ಓದುಗರ ಪತ್ರ: ಬಸ್ ತಂಗುದಾಣ ನಿರ್ಮಿಸಿ

ನಂಜನಗೂಡು ತಾಲ್ಲೂಕು ಬೆಳಗುಂದ ಗ್ರಾಮದಲ್ಲಿ ಬಸ್ ತಂಗುದಾಣವಿಲ್ಲದೆ ಪ್ರತಿದಿನ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಬೇಸಿಗೆಯಲ್ಲಿ ಬಿಸಿಲಿನಲ್ಲಿ ಹಾಗೂ ಮಳೆಗಾಲದಲ್ಲಿ ಮಳೆಯಲ್ಲಿಯೇ…

13 mins ago

ಓದುಗರ ಪತ್ರ: ಬಸ್‌ಗಳ ಮೇಲೆ ಗುಟ್ಕಾ ಜಾಹೀರಾತು ನಿಷೇಧ ಸ್ವಾಗತಾರ್ಹ

ರಾಜ್ಯ ರಸ್ತೆ ಸಾರಿಗೆ ನಿಗಮ ಹಾಗೂ ಬೆಂಗಳೂರು ಮಹಾನಗರ ಸಾರಿಗೆ ನಿಗಮದ ಬಸ್‌ಗಳ ಮೇಲೆ ಅಳವಡಿಸಿರುವ ಗುಟ್ಕಾ ಹಾಗೂ ತಂಬಾಕು…

23 mins ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: 24 ರೂ. ಹಿಡಿದು ಮುಂಬೈಗೆ ಬಂದ ಮುನ್ನಾ ಈಗ ಸೆಲೆಬ್ರೆಟಿ ಫೋಟೋಗ್ರಾಫರ್!

ಪ್ರಸಿದ್ಧ ಬಾಲಿವುಡ್ ತಾರೆಗಳ ಜೊತೆಯಲ್ಲಿ ಕೆಲಸ ಮಾಡಿದ ಅನುಭವ ಮುಂಬೈ ಎಂಬ ಮಾಯಾನಗರಿಗೆ ಪ್ರತಿ ದಿನ ಬದುಕು ಹುಡುಕಿಕೊಂಡು, ಕನಸುಗಳನ್ನು…

3 hours ago

ಟಿ-20 ವಿಶ್ವಕಪ್: ಕೌಂಟ್‌ಡೌನ್ ಶುರು

ಆರ್.ಎಲ್.ಮಂಜುನಾಥ್ ಮೈಸೂರು: ಕ್ರಿಕೆಟ್ ಪ್ರಿಯರಿಗೆ ಈಗ ಹಬ್ಬವೋ ಹಬ್ಬ. ಅದರಲ್ಲೂ ಕ್ರಿಕೆಟ್‌ನ ಭಾಷ್ಯವನ್ನೇ ಬದಲಿಸುತ್ತಿರುವ ಟಿ-೨೦ ಪಂದ್ಯಗಳು ಎಲ್ಲರಿಗೂ ಅಚ್ಚುಮೆಚ್ಚು.…

3 hours ago

ಕೊಡಗು ಜಿಲ್ಲೆಯಲ್ಲಿ ಹೆಚ್ಚುತ್ತಿದೆ ಸೈಬರ್ ವಂಚನೆ..!

ಕೃಷ್ಣ ಸಿದ್ದಾಪುರ ಪೊಲೀಸರು ಜಾಗೃತಿ ಮೂಡಿಸಿದರೂ ಎಚ್ಚೆತ್ತುಕೊಳ್ಳದ ಜನರು ಹೂಡಿಕೆ ಹಣ ದೋಚುತ್ತಿರುವ ಖದೀಮರು  ಸಿದ್ದಾಪುರ: ಸೈಬರ್ ಅಪರಾಧ ಪ್ರಕರಣಗಳ…

3 hours ago