ಚಿತ್ರ ಮಂಜರಿ

ಆರ್ಟಿಕಲ್ 370 ಸಿನಿಮಾ ಟ್ರೈಲರ್‌ನಲ್ಲಿ ಮೋದಿ, ಅಮಿತ್ ಶಾ

ಪಂಚಭಾಷಾ ನಟಿ ಪ್ರಿಯಾಮಣಿ ಹಾಗೂ ಬಾಲಿವುಡ್‌ನ ಖ್ಯಾತ ನಟಿ ಯಾಮಿ ಗೌತಮ್ ಜೊತೆಯಾಗಿ ನಟಿಸಿರುವ ಆರ್ಟಿಕಲ್ 370 ಚಿತ್ರದ ಟ್ರೈಲರ್ ರಿಲೀಸ್ ಆಗಿದ್ದು, ವೀಕ್ಷಕರಿಂದ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಬಾಲಿವುಡ್ ಅಂಗಳದಲ್ಲಿ ಭರವಸೆ ಹುಟ್ಟುಹಾಕಿದೆ.

ಈ ಸಿನಿಮಾದ ಟ್ರೈಲರ್ 2 ನಿಮಿಷ 40 ಸೆಂಕೆಡ್‌ಗಳಿದ್ದು, ಟ್ರೈಲರ್‌ನಲ್ಲಿ ಭಾರತದ ಪ್ರಸ್ತುತ ಪ್ರಧಾನ ಮಂತ್ರಿ ಮೋದಿಯವರ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಪಾತ್ರಗಳಿರುವುದು ವಿಶೇಷವಾಗಿದೆ. ಜಮ್ಮುಕಾಶ್ಮೀರದ ವಿಶೇಷಾಧಿಕಾರವಾಗಿದ್ದ ಆರ್ಟಿಕಲ್ 370 ಅನ್ನು ತೆಗೆದು ಹಾಕಲಾದ ಹಂತವನ್ನು ಈ ಸಿನಿಮಾ ಹೊಂದಿದೆ.

ಟ್ರೈಲರ್‌ನಲ್ಲಿ ʼಪೂರಾ ಕಾ ಪೂರಾ ಕಾಶ್ಮೀರ್, ಭಾರತ್ ದೇಶ್ ಕಾ ಹಿಸ್ಸಾ ಥಾ ಹೇ ಔರ್ ರೆಹೇಗಾʼ ಎಂಬ ಮಾತು ಹಾಗೂ ಕಾಶ್ಮೀರ ಭಯೋತ್ಪಾದನೆ, ಭಯೋತ್ಪಾದನೆ ಕುತಂತ್ರ, ಸೇನಾಧಿಕಾರಿಗಳ ಹೋರಾಟ, ಮತ್ತು ಆರ್ಟಿಕಲ್ 370ಯನ್ನು ತೆಗೆದರೆ ಏನೆಲ್ಲ ಆಗಲಿದೆ ಎಂಬ ಅಂಶಗಳನ್ನು ತೋರಿಸಲಾಗಿದೆ. ಶಾಶ್ವತ್ ಸಚ್ ದೇವ್ ಅವರ ಹಿನ್ನೆಲೆ ಸಂಗೀತ ನೋಡುಗರ ಗಮನ ಸೆಳೆದಿದೆ. ಯಾಮಿ ಗೌತಮ್ ಎನ್.ಐ.ಎ ಖಡಕ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದು, ಚಿತ್ರವು ಫೆಬ್ರವರಿ 23ಕ್ಕೆ ತೆರೆ ಕಾಣಲಿದೆ. ಇದುವರೆಗೂ ಕಾಶ್ಮೀರ ಕುರಿತಂತೆ ತೆರೆಗೆ ಬಂದಿರುವ ಯಾವ ಚಿತ್ರವೂ ಸೋತಿಲ್ಲದೆ ಬಾಕ್ಸ್ ಆಫೀನ್‌ನಲ್ಲಿ ಕೋಟಿ ಕೋಟಿ ಹಣಗಳಿಕೆ ಮಾಡಿರುವುದರಿಂದ ಈ ಚಿತ್ರದ ಟ್ರೈಲರ್‌ ರಿಲೀಸ್‌ ಆದ ಬಳಿಕ ಸಿನಿಮಾದ ಬಗ್ಗೆ ನಿರೀಕ್ಷೆ ಹೆಚ್ಚಾಗಿವೆ.

andolana

Recent Posts

ಎಸ್‌ಐಆರ್‌ | ಬಿಜೆಪಿಯಿಂದ ಅನಗತ್ಯ ಆರೋಪ ; ಎಂ.ಲಕ್ಷ್ಮಣ್‌ ಕಿಡಿ

ಮೈಸೂರು : ಎಸ್‌ಐಆರ್ ಪ್ರಕ್ರಿಯೆ ಹೆಸರಿನಲ್ಲಿ ಮತದಾರರ ಪಟ್ಟಿಯಿಂದ ಅರ್ಹ ಮತದಾರರ ಹೆಸರುಗಳನ್ನು ಕದಿಯುತ್ತಿರುವ ಬಿಜೆಪಿ, ಕೆಲವು ದಿನಗಳಿಂದ ಅನಗತ್ಯ…

8 hours ago

ಆರು ತಿಂಗಳ ಬಳಿಕ ಕೆಆರ್‌ಎಸ್‌ ಡ್ಯಾಂಗೆ 1000 ಕ್ಯೂಸೆಕ್ಸ್‌ ನೀರು ಒಳಹರಿವು

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮುಂಗಾರು ಮಳೆ ಚುರುಕು ಪಡೆದುಕೊಂಡ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ…

11 hours ago

ಓದುಗರ ಪತ್ರ: ಕಾಯ್ದಿರಿಸಿದ ಬೋಗಿಗಳು ರೈಲಿನ ಕೊನೆಗೆ ಇರಲಿ

ಕಾಯ್ದಿರಿಸಿದ ಬೋಗಿಗಳು ರೈಲಿನ ಕೊನೆಗೆ ಇರಲಿ ಮೈಸೂರಿನ ಮುಖ್ಯ ರೈಲು ನಿಲ್ದಾಣದಿಂದ ಬೆಳಿಗ್ಗೆ ೮.೩೫ ಕ್ಕೆ ಹೊರಡುವ ಮಾಲ್ಗುಡಿ ಎಕ್ಸ್‌ಪ್ರೆಸ್…

14 hours ago

ಶಂಕರ್ ಎಂಬ ನೆಲದ ಹೂ

ತಾನೊಬ್ಬ ಪ್ರಗತಿಪರ, ಜಾತ್ಯತೀತ, ಬಂಡಾಯಗಾರ ಅಂತ ತನ್ನ ನಗಾರಿಯನ್ನು ತಾನೇ ಬಾರಿಸುವಷ್ಟು ಅಸೂಕ್ಷ್ಮತೆ ಅವರಿಗಿರಲಿಲ್ಲ. ಅದನ್ನೆಲ್ಲಾ ಬದುಕಿ ತೋರಿಸಿದ್ದರು ಎಸ್.ಗಂಗಾಧರಯ್ಯ…

14 hours ago

ಊರೊಳಗೆ ಬೆರೆತು ಜನರ ಬಣ್ಣವೇ ಆದ ಕೆ.ಟಿ.ಶಿವಪ್ರಸಾದ್

ಬರಹ ಮತ್ತು ರೇಖಾಚಿತ್ರ: ಎಂ ಎಸ್ ಪ್ರಕಾಶ್ ಬಾಬು ಮೇಲ್ವರ್ಗದಿಂದಲೇ ಬಂದ ಶಿವಪ್ರಸಾದರು ವಿಶೇಷವಾಗಿ ಉಳಿಯುವುದು ಅವರ ರಾಜಕೀಯ ಸಾಮಾಜಿಕ…

14 hours ago

ಅಮೆರಿಕ ಎಂಬ ಪ್ರಯೋಗಕ್ಕೆ ಇನ್ನೂರೈವತ್ತು ವಸಂತಗಳು

ಶೇಷಾದ್ರಿ ಗಂಜೂರು ಸರಿಯಾಗಿ ಇನ್ನೂರೈವತ್ತು ವರ್ಷಗಳ ಹಿಂದೆ, ೧೭೭೬ರ ಜುಲೈ ೪ರಂದು, ಅಮೆರಿಕದ ಫಿಲಡೆಲ್ಛಿಯಾ ನಗರದಲ್ಲಿ ಒಗ್ಗೂಡಿದ್ದ ೫೬ ಜನ…

14 hours ago