ಚಿತ್ರ ಮಂಜರಿ

ಅವತಾರ ಪುರುಷನ ತ್ರಿಷಂಕು ಪಯಣ ಆರಂಭ ಯಾವಾಗ ಗೊತ್ತಾ?

ಕನ್ನಡದ ಪ್ರಾಮಿಸಿಂಗ್‌ ಡೈರೆಕ್ಟರ್‌ ಸಿಂಪಲ್‌ ಸುನಿ ಅವರ ನಿರ್ದೇಶನದ ಅವತಾರ ಪುರುಷ ಚಿತ್ರದ 2ನೇ ಭಾಗ ರಿಲೀಸ್‌ ಆಗಲಿದ್ದು, ಈ ಬಗ್ಗೆ ಸ್ವತಃ ನಿರ್ದೇಶಕರೇ ಅಪ್‌ಡೇಟ್‌ ನೀಡಿದ್ದಾರೆ.

2022 ರ ಮೇ ನಲ್ಲಿ ತೆರೆಕಂಡ ನಟ ಶರಣ್‌ ಅಭಿನಯದ ಅವತಾರ ಪುರುಷ ಚಿತ್ರ ಭಾರೀ ಮೆಚ್ಚುಗೆ ಪಡೆದಿತ್ತು. ಇದೀಗ ಎರಡು ವರ್ಷಗಳ ಕಾಯುವಿಕೆಯ ನಂತರ ಈ ಚಿತ್ರದ ಎರಡನೇ ಭಾಗ ರಿಲೀಸ್‌ ಆಗುತ್ತಿದೆ. ಇದರ ಬಗ್ಗೆ ಚಿತ್ರತಂಡ ಅಧಿಕೃತ ಮಾಹಿತಿಯನ್ನು ಹೊರ ಹಾಕಿದೆ.

ಬರೀ ಲವ್‌ ಸ್ಟೋರಿಗಳ ಮೂಲಕವೇ ಹೆಚ್ಚು ಜನಮನ ಗೆದ್ದ ಸುನಿ ಅವರು, ಒಂದು ವಿಭಿನ್ನ ಕಥೆಯ ಮೂಲಕ ಹಾಸ್ಯದಲ್ಲಿಯೇ ಮಾಟ-ಮಂತ್ರವನ್ನು ತೋರಿಸಿ ಎಲ್ಲರ ಹುಬ್ಬೇರುವಂತೆ ಮಾಡಿದ್ದರು. ಹಲವಾರು ಟ್ವಿಸ್ಟ್‌ಗಳೊಂದಿಗೆ ಮೊದಲನೇ ಭಾಗವನ್ನು ಮುಗಿಸಿದ್ದ ಇವರು, ಎಲ್ಲದಕ್ಕೂ ಈ ಉತ್ತರ ನೀಡಲು ಬಂದಿದ್ದಾರೆ.

ಅಂದಹಾಗೆ ಸುನೀ ಅವರು ಇದೇ ಮಾರ್ಚ್‌ 22 ರಂದು ಅವತಾರ ಪುರುಷ-2 ಚಿತ್ರವನ್ನು ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ. ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಅವರು ʼಕಾಯುವಿಕೆಯ ಅಂತ್ಯ, ಹೊಸಯುಗದ ಅನಾವರಣʼ ಎಂದು ಬರೆದುಕೊಂಡಿದ್ದಾರೆ.

ಪುಷ್ಕರ್‌ ಬ್ಯಾನರ್‌ ಅಡಿಯಲ್ಲಿ ನಿರ್ಮಾಣವಾಗಿರುವ ಈ ಚಿತ್ರದಲ್ಲಿ ನಟನಾಗಿ ಶರಣ್‌, ನಾಯಕಿಯಾಗಿ ಆಶಿಕಾ ರಂಗನಾಥ್‌, ಶ್ರೀನಗರ ಕಿಟ್ಟಿ, ಸಾಯ್‌ ಕುಮಾರ್‌ ಸೇರಿದಂತೆ ಹಲವು ನಟರು ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದಾರೆ.

ಈ ಚಿತ್ರಕ್ಕೆ ಪುಷ್ಕರ್‌ ಮಲ್ಲಿಕಾರ್ಜುನಯ್ಯ ಹಣ ಹೂಡಿದರೆ, ಸುನಿ ಆಕ್ಷನ್‌ ಕಟ್‌ ಹೇಳಿದ್ದಾರೆ.

andolana

Recent Posts

59 ಸಾವಿರ ಶಿಕ್ಷಕರ ಹುದ್ದೆ ಖಾಲಿ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹಿತಿ

ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…

2 hours ago

ಮೈಸೂರಿಗೆ ತೆರಳಲು ಅನುಮತಿ ಕೋರಿ ಕೋರ್ಟ್‌ ಮೋರಿ ಹೋದ ದರ್ಶನ್‌

ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್‌ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…

2 hours ago

ನಾನು ಅಶ್ಲೀಲ ಪದ ಬಳಸಿಲ್ಲ : ಪೊಲೀಸರ ಬಳಿ ಸಿ.ಟಿ ರವಿ ಹೇಳಿಕೆ

ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…

2 hours ago

ವೈದ್ಯ ಮೇಲೆ ಹಲ್ಲೆ: ದೂರು ದಾಖಲು

ಮೈಸೂರು: ನಗರದ ಅಲ್‌ ಅನ್ಸಾರ್‌ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ  ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…

3 hours ago

ವಿಶೇಷ ಚೇತನ ಮಕ್ಕಳು ಸಮಾಜಕ್ಕೆ ಶಾಪವಲ್ಲ, ವರ; ದೀಪಕ್‌ ಅಭಿಮತ

' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…

4 hours ago

ಸಕ್ಕರೆ ನಗರಿ ಅಂದ ಹೆಚ್ಚಿಸಿದ ದೀಪಾಲಂಕಾರ

ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್‌ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…

4 hours ago