ಚಿತ್ರ ಮಂಜರಿ

ಅವತಾರ ಪುರುಷನ ತ್ರಿಷಂಕು ಪಯಣ ಆರಂಭ ಯಾವಾಗ ಗೊತ್ತಾ?

ಕನ್ನಡದ ಪ್ರಾಮಿಸಿಂಗ್‌ ಡೈರೆಕ್ಟರ್‌ ಸಿಂಪಲ್‌ ಸುನಿ ಅವರ ನಿರ್ದೇಶನದ ಅವತಾರ ಪುರುಷ ಚಿತ್ರದ 2ನೇ ಭಾಗ ರಿಲೀಸ್‌ ಆಗಲಿದ್ದು, ಈ ಬಗ್ಗೆ ಸ್ವತಃ ನಿರ್ದೇಶಕರೇ ಅಪ್‌ಡೇಟ್‌ ನೀಡಿದ್ದಾರೆ.

2022 ರ ಮೇ ನಲ್ಲಿ ತೆರೆಕಂಡ ನಟ ಶರಣ್‌ ಅಭಿನಯದ ಅವತಾರ ಪುರುಷ ಚಿತ್ರ ಭಾರೀ ಮೆಚ್ಚುಗೆ ಪಡೆದಿತ್ತು. ಇದೀಗ ಎರಡು ವರ್ಷಗಳ ಕಾಯುವಿಕೆಯ ನಂತರ ಈ ಚಿತ್ರದ ಎರಡನೇ ಭಾಗ ರಿಲೀಸ್‌ ಆಗುತ್ತಿದೆ. ಇದರ ಬಗ್ಗೆ ಚಿತ್ರತಂಡ ಅಧಿಕೃತ ಮಾಹಿತಿಯನ್ನು ಹೊರ ಹಾಕಿದೆ.

ಬರೀ ಲವ್‌ ಸ್ಟೋರಿಗಳ ಮೂಲಕವೇ ಹೆಚ್ಚು ಜನಮನ ಗೆದ್ದ ಸುನಿ ಅವರು, ಒಂದು ವಿಭಿನ್ನ ಕಥೆಯ ಮೂಲಕ ಹಾಸ್ಯದಲ್ಲಿಯೇ ಮಾಟ-ಮಂತ್ರವನ್ನು ತೋರಿಸಿ ಎಲ್ಲರ ಹುಬ್ಬೇರುವಂತೆ ಮಾಡಿದ್ದರು. ಹಲವಾರು ಟ್ವಿಸ್ಟ್‌ಗಳೊಂದಿಗೆ ಮೊದಲನೇ ಭಾಗವನ್ನು ಮುಗಿಸಿದ್ದ ಇವರು, ಎಲ್ಲದಕ್ಕೂ ಈ ಉತ್ತರ ನೀಡಲು ಬಂದಿದ್ದಾರೆ.

ಅಂದಹಾಗೆ ಸುನೀ ಅವರು ಇದೇ ಮಾರ್ಚ್‌ 22 ರಂದು ಅವತಾರ ಪುರುಷ-2 ಚಿತ್ರವನ್ನು ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ. ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಅವರು ʼಕಾಯುವಿಕೆಯ ಅಂತ್ಯ, ಹೊಸಯುಗದ ಅನಾವರಣʼ ಎಂದು ಬರೆದುಕೊಂಡಿದ್ದಾರೆ.

ಪುಷ್ಕರ್‌ ಬ್ಯಾನರ್‌ ಅಡಿಯಲ್ಲಿ ನಿರ್ಮಾಣವಾಗಿರುವ ಈ ಚಿತ್ರದಲ್ಲಿ ನಟನಾಗಿ ಶರಣ್‌, ನಾಯಕಿಯಾಗಿ ಆಶಿಕಾ ರಂಗನಾಥ್‌, ಶ್ರೀನಗರ ಕಿಟ್ಟಿ, ಸಾಯ್‌ ಕುಮಾರ್‌ ಸೇರಿದಂತೆ ಹಲವು ನಟರು ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದಾರೆ.

ಈ ಚಿತ್ರಕ್ಕೆ ಪುಷ್ಕರ್‌ ಮಲ್ಲಿಕಾರ್ಜುನಯ್ಯ ಹಣ ಹೂಡಿದರೆ, ಸುನಿ ಆಕ್ಷನ್‌ ಕಟ್‌ ಹೇಳಿದ್ದಾರೆ.

andolana

Recent Posts

ಬಂಡೀಪುರ ಅರಣ್ಯದಲ್ಲಿ ನೀರಿನ ಸಮಸ್ಯೆಗೆ ಬ್ರೇಕ್: ಸೋಲಾರ್‌ ಬೋರ್‌ವೆಲ್‌ ಮೂಲಕ ನೀರು ತುಂಬಿಸಲು ಪ್ಲಾನ್‌

ಗುಂಡ್ಲುಪೇಟೆ: ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ರಾಣಿಗಳಿಗೆ ಕುಡಿಯುವ ನೀರಿನ ಸಮಸ್ಯೆಗೆ ಈಗ ಬ್ರೇಕ್‌ ಹಾಕಲಾಗಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಅರಣ್ಯಾಧಿಕಾರಿಗಳು…

21 mins ago

ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿದೆ: ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿರುವುದು ನಿಜ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.…

46 mins ago

ನಟಿ ರನ್ಯಾ ರಾವ್‌ ಪ್ರಕರಣಕ್ಕೆ ರೋಚಕ ಟ್ವಿಸ್ಟ್‌

ಬೆಂಗಳೂರು: ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾರಾವ್‌ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು, ಡಿಐಆರ್‌ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದೇಗೆ ಎಂಬ…

1 hour ago

ಕೌಟುಂಬಿಕ ಕಲಹ: ಕೆರೆಗೆ ಹಾರಿ ತಾಯಿ-ಮಗ ಆತ್ಮಹತ್ಯೆ

ಹಾಸನ: ಕೌಟುಂಬಿಕ ಕಲಹದಿಂದ ಬೇಸತ್ತು ತಾಯಿ-ಮಗ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಕಬ್ಬಳ್ಳಿ…

1 hour ago

ಗ್ರೇಟರ್‌ ಬೆಂಗಳೂರು ವಿಧೇಯಕಕ್ಕೆ ಎಚ್.ಡಿ.ಕುಮಾರಸ್ವಾಮಿ ವಿರೋಧ

ಬೆಂಗಳೂರು: ಗ್ರೇಟರ್‌ ಬೆಂಗಳೂರು ವಿಧೇಯಕಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಂಪೂರ್ಣ ವಿರೋಧ ವ್ಯಕ್ತಪಡಿಸಿದ್ದು, ಕಾಂಗ್ರೆಸ್‌ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಈ…

2 hours ago

ಓದುಗರ ಪತ್ರ: ಸಮತೋಲನದ ಬಜೆಟ್!…

ಸಮತೋಲನದ ಬಜೆಟ್!... ಮೂಡಿ ಬಂದಿದೆ ಸರ್ವರ ಹಿತ ಏಳ್ಗೆಯ ಕರ್ನಾಟಕದ ಮಾದರಿ ಜನಪರ ಬಜೆಟ್! ಮುಖ್ಯಮಂತ್ರಿಗಳ ಅನುಭವದ ಮೂಸೆಯಲಿ ಸುಸ್ಥಿರ…

5 hours ago