ಚಿತ್ರ ಮಂಜರಿ

ಅವತಾರ ಪುರುಷನ ತ್ರಿಷಂಕು ಪಯಣ ಆರಂಭ ಯಾವಾಗ ಗೊತ್ತಾ?

ಕನ್ನಡದ ಪ್ರಾಮಿಸಿಂಗ್‌ ಡೈರೆಕ್ಟರ್‌ ಸಿಂಪಲ್‌ ಸುನಿ ಅವರ ನಿರ್ದೇಶನದ ಅವತಾರ ಪುರುಷ ಚಿತ್ರದ 2ನೇ ಭಾಗ ರಿಲೀಸ್‌ ಆಗಲಿದ್ದು, ಈ ಬಗ್ಗೆ ಸ್ವತಃ ನಿರ್ದೇಶಕರೇ ಅಪ್‌ಡೇಟ್‌ ನೀಡಿದ್ದಾರೆ.

2022 ರ ಮೇ ನಲ್ಲಿ ತೆರೆಕಂಡ ನಟ ಶರಣ್‌ ಅಭಿನಯದ ಅವತಾರ ಪುರುಷ ಚಿತ್ರ ಭಾರೀ ಮೆಚ್ಚುಗೆ ಪಡೆದಿತ್ತು. ಇದೀಗ ಎರಡು ವರ್ಷಗಳ ಕಾಯುವಿಕೆಯ ನಂತರ ಈ ಚಿತ್ರದ ಎರಡನೇ ಭಾಗ ರಿಲೀಸ್‌ ಆಗುತ್ತಿದೆ. ಇದರ ಬಗ್ಗೆ ಚಿತ್ರತಂಡ ಅಧಿಕೃತ ಮಾಹಿತಿಯನ್ನು ಹೊರ ಹಾಕಿದೆ.

ಬರೀ ಲವ್‌ ಸ್ಟೋರಿಗಳ ಮೂಲಕವೇ ಹೆಚ್ಚು ಜನಮನ ಗೆದ್ದ ಸುನಿ ಅವರು, ಒಂದು ವಿಭಿನ್ನ ಕಥೆಯ ಮೂಲಕ ಹಾಸ್ಯದಲ್ಲಿಯೇ ಮಾಟ-ಮಂತ್ರವನ್ನು ತೋರಿಸಿ ಎಲ್ಲರ ಹುಬ್ಬೇರುವಂತೆ ಮಾಡಿದ್ದರು. ಹಲವಾರು ಟ್ವಿಸ್ಟ್‌ಗಳೊಂದಿಗೆ ಮೊದಲನೇ ಭಾಗವನ್ನು ಮುಗಿಸಿದ್ದ ಇವರು, ಎಲ್ಲದಕ್ಕೂ ಈ ಉತ್ತರ ನೀಡಲು ಬಂದಿದ್ದಾರೆ.

ಅಂದಹಾಗೆ ಸುನೀ ಅವರು ಇದೇ ಮಾರ್ಚ್‌ 22 ರಂದು ಅವತಾರ ಪುರುಷ-2 ಚಿತ್ರವನ್ನು ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ. ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಅವರು ʼಕಾಯುವಿಕೆಯ ಅಂತ್ಯ, ಹೊಸಯುಗದ ಅನಾವರಣʼ ಎಂದು ಬರೆದುಕೊಂಡಿದ್ದಾರೆ.

ಪುಷ್ಕರ್‌ ಬ್ಯಾನರ್‌ ಅಡಿಯಲ್ಲಿ ನಿರ್ಮಾಣವಾಗಿರುವ ಈ ಚಿತ್ರದಲ್ಲಿ ನಟನಾಗಿ ಶರಣ್‌, ನಾಯಕಿಯಾಗಿ ಆಶಿಕಾ ರಂಗನಾಥ್‌, ಶ್ರೀನಗರ ಕಿಟ್ಟಿ, ಸಾಯ್‌ ಕುಮಾರ್‌ ಸೇರಿದಂತೆ ಹಲವು ನಟರು ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದಾರೆ.

ಈ ಚಿತ್ರಕ್ಕೆ ಪುಷ್ಕರ್‌ ಮಲ್ಲಿಕಾರ್ಜುನಯ್ಯ ಹಣ ಹೂಡಿದರೆ, ಸುನಿ ಆಕ್ಷನ್‌ ಕಟ್‌ ಹೇಳಿದ್ದಾರೆ.

andolana

Recent Posts

ಶುಶ್ರೂಷೆ ವೃತ್ತಿಗೆ ಮೆರುಗು ನೀಡಿದ ಫ್ಲಾರೆನ್ಸ್ ನೈಟಿಂಗೇಲ್

ಎನ್.ಹರೀಶ್ ಕುಮಾರ್ ಆರೋಗ್ಯ ಕ್ಷೇತ್ರದಲ್ಲಿ ಪ್ರಮುಖವಾಗಿ ಮುಂಚೂಣಿಯಲ್ಲಿ ಬರುವ ಹೆಸರೆಂದರೆ ಅದು ವೈದ್ಯ ವೃತ್ತಿ. ಆದರೆ ಒಬ್ಬ ರೋಗಿಯು ಗುಣಮುಖ…

2 hours ago

ಜನಮೆಚ್ಚುಗೆ ಗಳಿಸಿದ ರಾಜ್ಯಮಟ್ಟದ ಯಿಫಾ ಹಾಕಿ

ಲಕ್ಷ್ಮೀಕಾಂತ್ ಕೊಮಾರಪ್ಪ ಉತ್ತಮ ಪ್ರದರ್ಶನ ನೀಡಿದ ಎಜಿಒಆರ್‌ಸಿ ತಂಡ ಚಾಂಪಿಯನ್; ಸದರ್ನ್ ಕಮಾಂಡ್ ತಂಡಕ್ಕೆ ದ್ವಿತೀಯ ಬಹುಮಾನ ಸೋಮವಾರಪೇಟೆ: ಸುಮಾರು…

2 hours ago

ಮಾರುಕಟ್ಟೆ ಬಂದ್ ಭೀತಿ; ಹೊಗೆಸೊಪ್ಪು ತಂದ ರೈತರ ಪರದಾಟ

ಮಂಜು ಕೋಟೆ ಕೋಟೆ: ಹೆಬ್ಬಾಳ ತಂಬಾಕು ಹರಾಜು ಮಾರುಕಟ್ಟೆಯಲ್ಲಿ ಬೇಲ್‌ಗಳ ರಾಶಿ; ಮಳೆ ಬಂದರೆ ನಷ್ಟದ ಆತಂಕ ಎಚ್.ಡಿ.ಕೋಟೆ: ಮಾರುಕಟ್ಟೆ…

2 hours ago

ಬಂಡೀಪಾಳ್ಯದಲ್ಲಿ ರೇಷ್ಮೆಗೂಡು ಮಾರುಕಟ್ಟೆ ನಿರ್ಮಾಣ ಶೀಘ್ರ ಆರಂಭ

ಕೆ.ಬಿ.ರಮೇಶನಾಯಕ ಮೈಸೂರು, ಮಂಡ್ಯ, ಚಾಮರಾಜನಗರ ಜಿಲ್ಲೆಗಳ ರೈತರಿಗೆ ಅನುಕೂಲ ರೈತರು ರೇಷ್ಮೆ ಬೆಳೆಯತ್ತ ಮುಖ ಮಾಡಿರುವ ಪರಿಣಾಮ ಉತ್ಪಾದನೆಯಲ್ಲಿ ಹೆಚ್ಚಳ…

2 hours ago

ನೂರು ಸಾವಿರದ ಗಡಿ ದಾಟಿದ ಆಂದೋಲನ ಇನ್ ಸ್ಟಾ ಪೇಜ್ ಹಿಂಬಾಲಕರು

‘ಆಂದೋಲನ’ ಪತ್ರಿಕೆಯ ಹೊಸ ಡಿಜಿಟಲ್ ಮೈಲಿಗಲ್ಲಿಗೆ ಹರಿದು ಬಂದ ಹಾರೈಕೆಗಳು " ಒಂದು ಲಕ್ಷ ಹಿಂಬಾಲಕರು ತಲುಪಿರುವುದು ಕೂಡ ಹೊಸ…

2 hours ago

ದುಸ್ಥಿತಿಯಲ್ಲಿ ಸರ್ಕಾರಿ ಮಹಾರಾಜ ಸಂಸ್ಕೃತ ಪಾಠಶಾಲೆ ಕಟ್ಟಡ

ಪ್ರಶಾಂತ್ ಎಸ್. ಮೈಸೂರು: ಸಂಸ್ಕೃತ, ವೇದ, ಆಗಮ ಮತ್ತು ಶಾಸ್ತ್ರಗಳನ್ನು ಬೋಽಸುವ ಪ್ರಮುಖ ಸಾಂಪ್ರದಾಯಿಕ ಶಿಕ್ಷಣ ನೀಡುತ್ತಿರುವ ನಗರದ ಸರ್ಕಾರಿ…

3 hours ago