ಚಿತ್ರ ಮಂಜರಿ

ಅವತಾರ ಪುರುಷನ ತ್ರಿಷಂಕು ಪಯಣ ಆರಂಭ ಯಾವಾಗ ಗೊತ್ತಾ?

ಕನ್ನಡದ ಪ್ರಾಮಿಸಿಂಗ್‌ ಡೈರೆಕ್ಟರ್‌ ಸಿಂಪಲ್‌ ಸುನಿ ಅವರ ನಿರ್ದೇಶನದ ಅವತಾರ ಪುರುಷ ಚಿತ್ರದ 2ನೇ ಭಾಗ ರಿಲೀಸ್‌ ಆಗಲಿದ್ದು, ಈ ಬಗ್ಗೆ ಸ್ವತಃ ನಿರ್ದೇಶಕರೇ ಅಪ್‌ಡೇಟ್‌ ನೀಡಿದ್ದಾರೆ.

2022 ರ ಮೇ ನಲ್ಲಿ ತೆರೆಕಂಡ ನಟ ಶರಣ್‌ ಅಭಿನಯದ ಅವತಾರ ಪುರುಷ ಚಿತ್ರ ಭಾರೀ ಮೆಚ್ಚುಗೆ ಪಡೆದಿತ್ತು. ಇದೀಗ ಎರಡು ವರ್ಷಗಳ ಕಾಯುವಿಕೆಯ ನಂತರ ಈ ಚಿತ್ರದ ಎರಡನೇ ಭಾಗ ರಿಲೀಸ್‌ ಆಗುತ್ತಿದೆ. ಇದರ ಬಗ್ಗೆ ಚಿತ್ರತಂಡ ಅಧಿಕೃತ ಮಾಹಿತಿಯನ್ನು ಹೊರ ಹಾಕಿದೆ.

ಬರೀ ಲವ್‌ ಸ್ಟೋರಿಗಳ ಮೂಲಕವೇ ಹೆಚ್ಚು ಜನಮನ ಗೆದ್ದ ಸುನಿ ಅವರು, ಒಂದು ವಿಭಿನ್ನ ಕಥೆಯ ಮೂಲಕ ಹಾಸ್ಯದಲ್ಲಿಯೇ ಮಾಟ-ಮಂತ್ರವನ್ನು ತೋರಿಸಿ ಎಲ್ಲರ ಹುಬ್ಬೇರುವಂತೆ ಮಾಡಿದ್ದರು. ಹಲವಾರು ಟ್ವಿಸ್ಟ್‌ಗಳೊಂದಿಗೆ ಮೊದಲನೇ ಭಾಗವನ್ನು ಮುಗಿಸಿದ್ದ ಇವರು, ಎಲ್ಲದಕ್ಕೂ ಈ ಉತ್ತರ ನೀಡಲು ಬಂದಿದ್ದಾರೆ.

ಅಂದಹಾಗೆ ಸುನೀ ಅವರು ಇದೇ ಮಾರ್ಚ್‌ 22 ರಂದು ಅವತಾರ ಪುರುಷ-2 ಚಿತ್ರವನ್ನು ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ. ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಅವರು ʼಕಾಯುವಿಕೆಯ ಅಂತ್ಯ, ಹೊಸಯುಗದ ಅನಾವರಣʼ ಎಂದು ಬರೆದುಕೊಂಡಿದ್ದಾರೆ.

ಪುಷ್ಕರ್‌ ಬ್ಯಾನರ್‌ ಅಡಿಯಲ್ಲಿ ನಿರ್ಮಾಣವಾಗಿರುವ ಈ ಚಿತ್ರದಲ್ಲಿ ನಟನಾಗಿ ಶರಣ್‌, ನಾಯಕಿಯಾಗಿ ಆಶಿಕಾ ರಂಗನಾಥ್‌, ಶ್ರೀನಗರ ಕಿಟ್ಟಿ, ಸಾಯ್‌ ಕುಮಾರ್‌ ಸೇರಿದಂತೆ ಹಲವು ನಟರು ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದಾರೆ.

ಈ ಚಿತ್ರಕ್ಕೆ ಪುಷ್ಕರ್‌ ಮಲ್ಲಿಕಾರ್ಜುನಯ್ಯ ಹಣ ಹೂಡಿದರೆ, ಸುನಿ ಆಕ್ಷನ್‌ ಕಟ್‌ ಹೇಳಿದ್ದಾರೆ.

andolana

Recent Posts

ಮುಂದಿನ ಆಗಸ್ಟ್‌ ಒಳಗೆ ಮೇಕೆದಾಟುಗೆ ಶಂಕುಸ್ಥಾಪನೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…

2 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ

ಮೈಸೂರು: ಮೂವರು ಬೇಟೆಗಾರರ ಎನ್‌ಕೌಂಟರ್‌ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…

3 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಚಿವ ಪುಟ್ಟರಂಗಶೆಟ್ಟಿ ಪ್ರತಿಕ್ರಿಯೆ

ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…

4 hours ago

ಕಾಡಿನಲ್ಲಿ ಗುಂಡಿನ ಮೊರೆತ: ಮೂವರು ಸ್ಥಳದಲ್ಲೇ ಸಾವು- ಉದ್ರಿಕ್ತರಿಂದ ಕಚೇರಿ ಪೀಠೋಪಕರಣ ಧ್ವಂಸ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…

4 hours ago

ಕಾವೇರಿ ಅಭಯಾರಣ್ಯದಲ್ಲಿ ಎನ್‌ಕೌಂಟರ್: ಅಕ್ರಮ ಬೇಟೆ ವೇಳೆ ಗುಂಡಿನ ದಾಳಿ, 3 ಮಂದಿ ಮೃತ್ಯು

ಮಹಾದೇಶ್‌ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…

4 hours ago

ವಿಕಸಿತ ಭಾರತಕ್ಕೆ ಕೈಜೋಡಿಸಿ : ದೇಶವಾಸಿಗಳಿಗೆ ಪ್ರಧಾನಿ ಮೋದಿ ಕರೆ

ಹೊಸದಿಲ್ಲಿ : ಭಾರತವು ತನ್ನ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದು, ದೆಹಲಿಯ ಕೆಂಪುಕೋಟೆಯಲ್ಲಿ ದೇಶದ ತ್ರಿವರ್ಣ ಧ್ವಜವನ್ನು ಹಾರಿಸಿದ ಪ್ರಧಾನಿ…

7 hours ago