ಚಿತ್ರ ಮಂಜರಿ

ಕಾಟೇರ ಸಕ್ಸಸ್‌ ಪಾರ್ಟಿಯಲ್ಲಿ ಎಡವಟ್ಟು: ನಟ ದರ್ಶನ್‌ ಸೇರಿ 8 ಮಂದಿಗೆ ನೋಟಿಸ್‌

ಬೆಂಗಳೂರು : ಸಿನಿಮಾ ಸಕ್ಸಸ್‌ ಪಾರ್ಟಿಯು ಅವಧಿ ಮೀರಿ ಬೆಳಗಿನ ಜಾವದ ವರೆಗೆ ನಡಸಲಾಗಿದೆ ಎಂಬ ಆರೋಪದ ಮೇಲೆ ನಟ ದರ್ಶನ್‌ ಸಹಿತ ೮ ಮಂದಿಗೆ ಮತ್ತು ಕರ್ತವ್ಯಲೋಪ ಎಸಗಿದ ಸುಬ್ರಹ್ಮಣ್ಯನಗರ ಪೊಲೀಸ್‌ ಠಾಣೆ ಪೊಲೀಸರ ಮೇಲೆ ಬೆಂಗಳೂರು ಪೊಲೀಸ್‌ ಇಲಾಖೆ ತನಿಖೆಗೆ ಆದೇಶ ನೀಡಿದೆ.

ಇಂದು ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಬೆಂಗಳೂರು ಉತ್ತರ ವಿಭಾಗದ ಡಿಸಿಪಿ ಸೈದುಲು ಅದಾವತ್‌, ಸಿನಿಮಾ ಸಕ್ಸಸ್‌ ಪಾರ್ಟಿಯ ತಿನಿಖೆಗೆ ಆದೇಶ ಹೊರಡಿಸಿರುವ ನೋಟಿಸ್‌ ಪ್ರತಿಯನ್ನು ತೋರಿಸಿದರು. ಜೊತೆಗೆ ಚಿತ್ರತಂಡದ ವಿರುದ್ಧ ನೀಡಲಾಗಿರುವ ನೊಟೀಸ್‌ ಬಗ್ಗೆ ತನಿಖೆ ನಡೆಸುವಂತೆ ಮಲ್ಲೇಶ್ವರಂ ಎಸಿಪಿ ಅವರಿಗೆ ಸೂಚಿಸಿರುವುದಾಗಿ ತಿಳಿಸಿದರು.

ಜನವರಿ 3ರಂದು ರಾತ್ರಿಪಾಳಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸುಬ್ರಹ್ಮಣ್ಯನಗರ ಪೊಲೀಸ್‌ ಠಾಣೆಯ ಇನ್ಸ್‌ಪೆಕ್ಟರ್‌, ಸಬ್ ಇನ್ಸ್‌ಪೆಕ್ಟರ್ ಮತ್ತು ನಾಲ್ವರು ಕಾನ್ ಸ್ಟೇಬಲ್‌ಗಳಿಗೂ ನೋಟಿಸ್ ಜಾರಿ ಮಾಡಲಾಗಿದೆ ಎಂದರು.

ಎಫ್‌ಐಆರ್‌ನಲ್ಲೇನಿದೆ?
ಅಬಕಾರಿ ಕಾಯ್ದೆ ಪ್ರಕಾರ ರೆಸ್ಟೋರೆಂಟ್‌ ತೆರೆಯಲು ಬೆಳಿಗ್ಗೆ ೧೦ ರಿಂದ ರಾತ್ರಿ ೧ ವರೆಗೆ ಅವಕಾಶ ಇದೆ. ಆದರೆ ಜಟ್ಲಾಗ್‌ ರೆಸ್ಟೋಬಾರ್‌ ಈ ನಿಯಮ ಉಲ್ಲಂಘಿಸಿ ಬೆಳಗಿನ ಜಾವ ೩.೩೦ ವರೆಗೆ ಸೆಲೆಬ್ರೆಟಿಗಳಿಗೆ ಪಾರ್ಟಿ ಮಾಡಲು ಅವಕಾಶ ನೀಡಲಾಗಿತ್ತು. ಇದನ್ನು ಮನಗಂಡ ಸ್ಥಳೀಯರು ಸುಬ್ರಹ್ಮಣ್ಯ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ದೂರಿನನ್ವಯ ಪೊಲೀಸರು ರೆಸ್ಟೋಬಾರ್‌ ಮೇಲೆ ದಾಳಿ ನಡೆಸಿ, ಸೆಲೆಬ್ರೆಟಿಸ್‌ರನ್ನು ಮನೆಗೆ ಕಳುಹಿಸಿ ಬಾರ್‌ ಮುಚ್ಚಿಸಿದ್ದರು.

ಇನ್ನೂ ಬೆಳಗಿನ ಜಾವದ ವರೆಗೆ ಪಾರ್ಟಿ ಹೇಗೆ ನಡೆಯಿತು. ಈ ಬಗ್ಗೆ ವಿವಿರಗಳನ್ನು ಒದಗಿಸುವಂತೆ ಸ್ಥಳೀಯ ಪೊಲೀಸರಿಗೆ ಕೇಳಲಾಗಿದೆ. ಮತ್ತು ಬಾರ್‌ ಅವಧಿ ಮೀರಿ ಕಾರ್ಯನಿರ್ವಹಿಸಲು ಹೇಗೆ ಅವಕಾಶ ನೀಡಲಾಯಿತು ಎಂಬ ಬಗ್ಗೆ ವಿವರಣೆ ನೀಡುವಂತೆ ಸೂಚಿಸಲಾಗಿದೆ ಎಂದಯ ಡಿಸಿಪಿ ಸೈದುಲ್‌ ಮಾಹಿತಿ ನೀಡಿದ್ದಾರೆ.

೨೦೨೩ರ ವರ್ಷಾಂತ್ಯದಲ್ಲಿ ತೆರೆಕಂಡ ನಟ ದರ್ಶನ್‌ ನಟನೆಯ ‘ಕಾಟೇರ’ ಸಿನಿಮಾ ತೆರೆಕಂಡು ಅಭಿಮಾನಿಗಳನ್ನು ಸೆಳೆಯುವಲ್ಲಿ ಯಶಸ್ವಿಯಾಗಿತ್ತು. ಸಿನಿಮಾ ಸಕ್ಸಸ್‌ ಹಿನ್ನಲೆ ತಂಡ ಈ ಸಕ್ಸಸ್ ಪಾರ್ಟಿ ಆಯೋಜಿಸಿತ್ತು. ಪಾರ್ಟಿಯಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್, ನಿರ್ದೇಶಕ ತರುಣ್ ಸುಧೀರ್, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ನಟರಾದ ಧನಂಜಯ್, ಅಭಿಷೇಕ್ ಅಂಬರೀಶ್ ಮತ್ತು ಇತರ ತಾರಾ ಬಳಗ ಈ ಪಾರ್ಟಿಯಲ್ಲಿತ್ತು.

https://x.com/sharadasrinidhi/status/1742781985872134177?s=20

andolanait

Recent Posts

ಡಿಕೆಶಿ ಸಂಪುಟದಲ್ಲಿ ಡಾ.ಎಚ್‌ಸಿಎಂ ಕೈ ಬಿಟ್ಟಿದ್ದಕ್ಕೆ ದಸಂಸ ತೀವ್ರ ಅಸಮಾಧಾನ

ಮೈಸೂರು:  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ   ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…

4 hours ago

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

5 hours ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

16 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

16 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

16 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

16 hours ago