೨೦೧೮ರಲ್ಲಿ ‘ಅಯೋಗ್ಯ’ ಚಿತ್ರ ಬಿಡುಗಡೆಯಾಗಿತ್ತು. ಸತೀಶ್ ನೀನಾಸಂ, ರಚಿತಾ ರಾಮ್, ರವಿಶಂಕರ್ ಮುಂತಾದವರು ನಟಿಸಿದ್ದ ಚಿತ್ರ ಯಶಸ್ವಿಯಾಗಿದ್ದಷ್ಟೇ ಅಲ್ಲ, ೪೦ ಕೇಂದ್ರಗಳಲ್ಲಿ ೧೦೦ ದಿನಗಳ ಪ್ರದರ್ಶನ ಕಂಡಿತ್ತು. ಈಗ ‘ಅಯೋಗ್ಯ’ ಚಿತ್ರದ ಮುಂದುವರಿದ ಭಾಗಕ್ಕೆ ಸದ್ಯದಲ್ಲೇ ಚಾಲನೆ ಸಿಗಲಿದೆ. ‘ಅಯೋಗ್ಯ’ ಚಿತ್ರವನ್ನು ನಿರ್ದೇಶಿಸಿದ್ದ ಮಹೇಶ್, ಈ ಚಿತ್ರಕ್ಕೂ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಲಿದ್ದಾರೆ.
‘ಆ ಕಥೆ ಎಲ್ಲಿಗೆ ಮುಗಿದಿತ್ತೋ, ಇದು ಅಲ್ಲಿಂದ ಶುರುವಾಗುತ್ತದೆ. ಗ್ರಾಮ ಪಂಚಾಯಿತಿ ಸದಸ್ಯನಾದ ಮೇಲೆ ಆತ ಏನೆಲ್ಲಾ ಸವಾಲುಗಳನ್ನು ಎದುರಿಸುತ್ತಾನೆ. ತಾನು ಕಂಡ ಕನಸು ನನಸಾಗುತ್ತದಾ ಎಂಬುದನ್ನು ಈ ಚಿತ್ರದ ಮೂಲಕ ಹೇಳಲಾಗುತ್ತದೆ. ಆ ಚಿತ್ರಕ್ಕೆ ಕೆಲಸ ಮಾಡಿದ ತಂಡವೇ ಈ ಚಿತ್ರಕ್ಕೂ ಬಹುತೇಕ ಮುಂದುವರಿಯಲಿದೆ’ ಎನ್ನುತ್ತಾರೆ ಚಿತ್ರದ ನಿರ್ದೇಶಕ ಮಹೇಶ್.
‘ಅಯೋಗ್ಯ ೨’ ಚಿತ್ರಕ್ಕೆ ಮುಂದಿನ ಬುಧವಾರ, ಡಿಸೆಂಬರ್ ೧೧ರಂದು ಚಿತ್ರದ ಮುಹೂರ್ತ ನಡೆಯಲಿದ್ದು, ಅಂದಿನಿಂದಲೇ ಚಿತ್ರೀಕರಣ ಪ್ರಾರಂಭವಾಗಲಿದೆ.
ಮಂಡ್ಯ, ಮದ್ದೂರು ಮುಂತಾದ ಕಡೆ ಎರಡು ಹಂತಗಳಲ್ಲಿ ಚಿತ್ರೀಕರಣ ನಡೆಯಲಿದ್ದು, ೨೦೨೫ರ ಆಗಸ್ಟ್ ೧೫ರಂದು ಚಿತ್ರ ಬಿಡುಗಡೆಯಾಗಲಿದೆಯಂತೆ. ‘ಭುವನಂ ಗಗನಂ’ ಚಿತ್ರದ ನಿರ್ಮಾಪಕ ಎಂ. ಮುನೇಗೌಡ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.
ಅರ್ಜುನ್ ಜನ್ಯ ಸಂಗೀತ ಸಂಯೋಜನೆ, ವಿಶ್ವಜಿತ್ ರಾವ್ ಛಾಯಾಗ್ರಹಣ ಈ ಚಿತ್ರಕ್ಕಿರಲಿದೆ. ‘ಅಯೋಗ್ಯ’ ಚಿತ್ರವು ಕನ್ನಡದಲ್ಲಿ ಮೊದಲು ಬಿಡುಗಡೆಯಾಗಿ ಬೇರೆ ಭಾಷೆಗಳಿಗೆ ಡಬ್ ಆಗಿತ್ತು. ಆದರೆ, ‘ಅಯೋಗ್ಯ ೨’ ಚಿತ್ರವು ಕನ್ನಡದಲ್ಲಿ ನಿರ್ಮಾಣವಾಗಿ ತೆಲುಗು, ತಮಿಳಿಗೆ ಡಬ್ ಆಗಿ ಮೂರು ಭಾಷೆಗಳಲ್ಲೂ ಒಟ್ಟಿಗೆ ಬಿಡುಗಡೆಯಾಗಲಿದೆಯಂತೆ.
ಬೆಳಗಾವಿ: ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಮಂಡಲ ಚಳಿಗಾಲದ ಅಧಿವೇಶನ ಎರಡನೇ ದಿನಕ್ಕೆ ಕಾಲಿಟ್ಟಿದೆ. ರಾಜ್ಯ ಸರ್ಕಾರದ ವಿರುದ್ಧ ಇಂದು 9ಕ್ಕೂ ಹೆಚ್ಚು…
ಕೆ.ಆರ್.ಪೇಟೆ: ಗಾಂಜಾ ಮತ್ತು ಮಧ್ಯ ಸೇವಿಸಿದ ಅಮಲಿನಲ್ಲಿ ಶಾಲಾ ಬಸ್ ತಡೆದು, ಅಪ್ರಾಪ್ತ ಬಾಲಕಿಯನ್ನು ತಮ್ಮ ವಶಕ್ಕೆ ನೀಡುವಂತೆ ಕಿರಿಕ್…
ಇತ್ತೀಚೆಗೆ ಶಿಕ್ಷಣ ಇಲಾಖೆ ನಡೆಸಿದ ಸಮೀಕ್ಷೆಯಲ್ಲಿ ರಾಜ್ಯದ ಅನೇಕ ಸರ್ಕಾರಿ ಶಾಲೆಗಳು ಹಳೆಯ ಮತ್ತು ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವುದು ಕಂಡು…
ಭಾರತಕ್ಕೆ ಭೇಟಿ ನೀಡಿದ್ದ ರಷ್ಯಾ ದೇಶದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೆ ಅತ್ಯಂತ ಭವ್ಯ ರೀತಿಯಲ್ಲಿ ಸ್ವಾಗತ ನೀಡಿ, ಆ…
ಪಿಎಂ ಕುಸುಮ್ ಬಿ ಯೋಜನೆಯಡಿ ಸೋಲಾರ್ ಪಂಪ್ ಸೆಟ್ಗೆ ಶೇ.80 ಸಬ್ಸಿಡಿ ನೀಡಲಾಗುತ್ತಿದೆ. ಈ ಯೋಜನೆಯಲ್ಲಿ ನೀರಾವರಿಗೆ ಸಾಂಪ್ರದಾಯಿಕ ವಿದ್ಯುತ್…
ಶನಿವಾರ, ಭಾನುವಾರ, ಸೋಮವಾರವೂ ಬಲಿ; ಹುಲಿ ದಾಳಿ ಎಂದು ಬಿಸಲವಾಡಿ, ಸಾಗಡೆ ಗ್ರಾಮಗಳ ರೈತರ ಆರೋ ಚಾಮರಾಜನಗರ: ತಾಲ್ಲೂಕಿನ ಬಿಸಲವಾಡಿ…