೨೦೧೮ರಲ್ಲಿ ‘ಅಯೋಗ್ಯ’ ಚಿತ್ರ ಬಿಡುಗಡೆಯಾಗಿತ್ತು. ಸತೀಶ್ ನೀನಾಸಂ, ರಚಿತಾ ರಾಮ್, ರವಿಶಂಕರ್ ಮುಂತಾದವರು ನಟಿಸಿದ್ದ ಚಿತ್ರ ಯಶಸ್ವಿಯಾಗಿದ್ದಷ್ಟೇ ಅಲ್ಲ, ೪೦ ಕೇಂದ್ರಗಳಲ್ಲಿ ೧೦೦ ದಿನಗಳ ಪ್ರದರ್ಶನ ಕಂಡಿತ್ತು. ಈಗ ‘ಅಯೋಗ್ಯ’ ಚಿತ್ರದ ಮುಂದುವರಿದ ಭಾಗಕ್ಕೆ ಸದ್ಯದಲ್ಲೇ ಚಾಲನೆ ಸಿಗಲಿದೆ. ‘ಅಯೋಗ್ಯ’ ಚಿತ್ರವನ್ನು ನಿರ್ದೇಶಿಸಿದ್ದ ಮಹೇಶ್, ಈ ಚಿತ್ರಕ್ಕೂ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಲಿದ್ದಾರೆ.
‘ಆ ಕಥೆ ಎಲ್ಲಿಗೆ ಮುಗಿದಿತ್ತೋ, ಇದು ಅಲ್ಲಿಂದ ಶುರುವಾಗುತ್ತದೆ. ಗ್ರಾಮ ಪಂಚಾಯಿತಿ ಸದಸ್ಯನಾದ ಮೇಲೆ ಆತ ಏನೆಲ್ಲಾ ಸವಾಲುಗಳನ್ನು ಎದುರಿಸುತ್ತಾನೆ. ತಾನು ಕಂಡ ಕನಸು ನನಸಾಗುತ್ತದಾ ಎಂಬುದನ್ನು ಈ ಚಿತ್ರದ ಮೂಲಕ ಹೇಳಲಾಗುತ್ತದೆ. ಆ ಚಿತ್ರಕ್ಕೆ ಕೆಲಸ ಮಾಡಿದ ತಂಡವೇ ಈ ಚಿತ್ರಕ್ಕೂ ಬಹುತೇಕ ಮುಂದುವರಿಯಲಿದೆ’ ಎನ್ನುತ್ತಾರೆ ಚಿತ್ರದ ನಿರ್ದೇಶಕ ಮಹೇಶ್.
‘ಅಯೋಗ್ಯ ೨’ ಚಿತ್ರಕ್ಕೆ ಮುಂದಿನ ಬುಧವಾರ, ಡಿಸೆಂಬರ್ ೧೧ರಂದು ಚಿತ್ರದ ಮುಹೂರ್ತ ನಡೆಯಲಿದ್ದು, ಅಂದಿನಿಂದಲೇ ಚಿತ್ರೀಕರಣ ಪ್ರಾರಂಭವಾಗಲಿದೆ.
ಮಂಡ್ಯ, ಮದ್ದೂರು ಮುಂತಾದ ಕಡೆ ಎರಡು ಹಂತಗಳಲ್ಲಿ ಚಿತ್ರೀಕರಣ ನಡೆಯಲಿದ್ದು, ೨೦೨೫ರ ಆಗಸ್ಟ್ ೧೫ರಂದು ಚಿತ್ರ ಬಿಡುಗಡೆಯಾಗಲಿದೆಯಂತೆ. ‘ಭುವನಂ ಗಗನಂ’ ಚಿತ್ರದ ನಿರ್ಮಾಪಕ ಎಂ. ಮುನೇಗೌಡ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.
ಅರ್ಜುನ್ ಜನ್ಯ ಸಂಗೀತ ಸಂಯೋಜನೆ, ವಿಶ್ವಜಿತ್ ರಾವ್ ಛಾಯಾಗ್ರಹಣ ಈ ಚಿತ್ರಕ್ಕಿರಲಿದೆ. ‘ಅಯೋಗ್ಯ’ ಚಿತ್ರವು ಕನ್ನಡದಲ್ಲಿ ಮೊದಲು ಬಿಡುಗಡೆಯಾಗಿ ಬೇರೆ ಭಾಷೆಗಳಿಗೆ ಡಬ್ ಆಗಿತ್ತು. ಆದರೆ, ‘ಅಯೋಗ್ಯ ೨’ ಚಿತ್ರವು ಕನ್ನಡದಲ್ಲಿ ನಿರ್ಮಾಣವಾಗಿ ತೆಲುಗು, ತಮಿಳಿಗೆ ಡಬ್ ಆಗಿ ಮೂರು ಭಾಷೆಗಳಲ್ಲೂ ಒಟ್ಟಿಗೆ ಬಿಡುಗಡೆಯಾಗಲಿದೆಯಂತೆ.
ಅದು ೨೦೦೬ರ ಸಮಯ. ಮೈಸೂರು ಈಗಿನಂತಿರಲಿಲ್ಲ. ಆದರೂ ಮೈಸೂರು ಇಂದಿಗಿಂತ ಹಿಂದೆಯೇನೂ ಇರಲಿಲ್ಲ. ಈಗಿನಷ್ಟೇ ಪ್ರವಾಸಿಗರು, ಹೂಡಿಕೆದಾರರನ್ನು ಆಕರ್ಷಿಸುತ್ತಿತ್ತು. ಮೈಸೂರಿನಲ್ಲಿ…
ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…
ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…
ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…
ಪಂಜು ಗಂಗೊಳ್ಳಿ ಅವರ ವಾರದ ಅಂಕಣ ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…
ಕೇಶವ್ ಜೆಎಸ್ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯಿಂದ ಅಚ್ಚರಿಯ ಸಂಶೋಧನೆ! ಮೈಸೂರು: ಬಸವನಹುಳುಗಳನ್ನು ಜಮೀನುಗಳಲ್ಲಿ ರೈತರು ನೋಡಿದರೆ, ನಮ್ಮ…