ಚಿತ್ರ ಮಂಜರಿ

ಅಭಿಷೇಕ್ ಅಂಬರೀಶ್ ನಟನೆಯ ‘ಬ್ಯಾಡ್ ಮ್ಯಾನರ್ಸ್’ ಮೊದಲ‌ 3 ದಿನಗಳಲ್ಲಿ ಗಳಿಸಿದ್ದೆಷ್ಟು?

ಕಳೆದ ಶುಕ್ರವಾರ ( ನವೆಂಬರ್ 24 ) ಅಭಿಷೇಕ್ ಅಂಬರೀಶ್ ಹಾಗೂ ನಿರ್ದೇಶಕ ಸೂರಿ ಕಾಂಬಿನೇಷನ್ ನ‌ ಬ್ಯಾಡ್ ಮ್ಯಾನರ್ಸ್ ಚಿತ್ರ ಬಿಡುಗಡೆಯಾಗಿದೆ.

ರುದ್ರ ಎಂಬ ರಗಡ್ ಪೊಲೀಸ್ ಪಾತ್ರವನ್ನು ಅಭಿಷೇಕ್ ಅಂಬರೀಶ್ ತಮ್ಮ ಚೊಚ್ಚಲ ಚಿತ್ರ ಅಮರ್ ಸೋಲಿನ ಬಳಿಕ ಇದೇ ಮೊದಲ ಬಾರಿಗೆ ಮಾಸ್ ಚಿತ್ರದಲ್ಲಿ ನಟಿಸುವ ಮೂಲಕ ಪ್ರಯೋಗಕ್ಕೆ ಕೈಹಾಕಿದ್ದಾರೆ.

ನಿರ್ದೇಶಕ ಸೂರಿ ತಮ್ಮ ಕಥೆ ಹೇಳುವ ವಿಭಿನ್ನ ಶೈಲಿಯನ್ನು ಇಲ್ಲಿಯೂ ಮುಂದುವರಿಸಿದ್ದಾರೆ. ಕಥಾನಾಯಕ‌ ಗನ್ ಮಾಫಿಯಾ ವಿರುದ್ಧ ಹೇಗೆ ಹೋರಾಡುತ್ತಾನೆ ಎಂಬುದನ್ನು ತಮ್ಮ ಏರಿಳಿತದ ಸ್ಕ್ರೀನ್ ಪ್ಲೇ ಮೂಲಕ ಚೆನ್ನಾಗಿಯೇ ಕಟ್ಟಿಕೊಟ್ಟಿದ್ದಾರೆ‌.

 

ಆದರೆ ಚಿತ್ರ ಸಂಪೂರ್ಣವಾಗಿ ಸಕ್ಸಸ್ ರಿಪೋರ್ಟ್ ಪಡೆದುಕೊಂಡಿಲ್ಲ. ಚಿತ್ರ ನೋಡಿದ ಸಿನಿ ರಸಿಕರು ಸಿನಿಮಾ ಬಗ್ಗೆ ಮಿಶ್ರ ಪ್ರತಿಕ್ರಿಯೆಯನ್ನು ವ್ಯಕ್ತಪಡಿಸಿದ್ದಾರೆ. ಇನ್ನು ಚಿತ್ರತಂಡ ಮಾತ್ರ ಚಿತ್ರ ಮೊದಲ ವಾರಾಂತ್ಯಕ್ಕೆ 6.4 ಕೋಟಿ ರೂಪಾಯಿ ಗ್ರಾಸ್ ಕಲೆಕ್ಷನ್ ಮಾಡಿದೆ ಎಂದು ಪೋಸ್ಟರ್ ಹಂಚಿಕೊಂಡಿದೆ‌. ಚಿತ್ರಕ್ಕೆ ಯಾವ ರೀತಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಯಿತೋ ಅದೇ ರೀತಿ ಈ ಕಲೆಕ್ಷನ್ ಬಗ್ಗೆ ಸಹ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗ್ತಿದೆ.

andolana

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

6 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

8 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

8 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

9 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

10 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

10 hours ago