ಚಿತ್ರ ಮಂಜರಿ

ಅಭಿಷೇಕ್ ಅಂಬರೀಶ್ ನಟನೆಯ ‘ಬ್ಯಾಡ್ ಮ್ಯಾನರ್ಸ್’ ಮೊದಲ‌ 3 ದಿನಗಳಲ್ಲಿ ಗಳಿಸಿದ್ದೆಷ್ಟು?

ಕಳೆದ ಶುಕ್ರವಾರ ( ನವೆಂಬರ್ 24 ) ಅಭಿಷೇಕ್ ಅಂಬರೀಶ್ ಹಾಗೂ ನಿರ್ದೇಶಕ ಸೂರಿ ಕಾಂಬಿನೇಷನ್ ನ‌ ಬ್ಯಾಡ್ ಮ್ಯಾನರ್ಸ್ ಚಿತ್ರ ಬಿಡುಗಡೆಯಾಗಿದೆ.

ರುದ್ರ ಎಂಬ ರಗಡ್ ಪೊಲೀಸ್ ಪಾತ್ರವನ್ನು ಅಭಿಷೇಕ್ ಅಂಬರೀಶ್ ತಮ್ಮ ಚೊಚ್ಚಲ ಚಿತ್ರ ಅಮರ್ ಸೋಲಿನ ಬಳಿಕ ಇದೇ ಮೊದಲ ಬಾರಿಗೆ ಮಾಸ್ ಚಿತ್ರದಲ್ಲಿ ನಟಿಸುವ ಮೂಲಕ ಪ್ರಯೋಗಕ್ಕೆ ಕೈಹಾಕಿದ್ದಾರೆ.

ನಿರ್ದೇಶಕ ಸೂರಿ ತಮ್ಮ ಕಥೆ ಹೇಳುವ ವಿಭಿನ್ನ ಶೈಲಿಯನ್ನು ಇಲ್ಲಿಯೂ ಮುಂದುವರಿಸಿದ್ದಾರೆ. ಕಥಾನಾಯಕ‌ ಗನ್ ಮಾಫಿಯಾ ವಿರುದ್ಧ ಹೇಗೆ ಹೋರಾಡುತ್ತಾನೆ ಎಂಬುದನ್ನು ತಮ್ಮ ಏರಿಳಿತದ ಸ್ಕ್ರೀನ್ ಪ್ಲೇ ಮೂಲಕ ಚೆನ್ನಾಗಿಯೇ ಕಟ್ಟಿಕೊಟ್ಟಿದ್ದಾರೆ‌.

 

ಆದರೆ ಚಿತ್ರ ಸಂಪೂರ್ಣವಾಗಿ ಸಕ್ಸಸ್ ರಿಪೋರ್ಟ್ ಪಡೆದುಕೊಂಡಿಲ್ಲ. ಚಿತ್ರ ನೋಡಿದ ಸಿನಿ ರಸಿಕರು ಸಿನಿಮಾ ಬಗ್ಗೆ ಮಿಶ್ರ ಪ್ರತಿಕ್ರಿಯೆಯನ್ನು ವ್ಯಕ್ತಪಡಿಸಿದ್ದಾರೆ. ಇನ್ನು ಚಿತ್ರತಂಡ ಮಾತ್ರ ಚಿತ್ರ ಮೊದಲ ವಾರಾಂತ್ಯಕ್ಕೆ 6.4 ಕೋಟಿ ರೂಪಾಯಿ ಗ್ರಾಸ್ ಕಲೆಕ್ಷನ್ ಮಾಡಿದೆ ಎಂದು ಪೋಸ್ಟರ್ ಹಂಚಿಕೊಂಡಿದೆ‌. ಚಿತ್ರಕ್ಕೆ ಯಾವ ರೀತಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಯಿತೋ ಅದೇ ರೀತಿ ಈ ಕಲೆಕ್ಷನ್ ಬಗ್ಗೆ ಸಹ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗ್ತಿದೆ.

andolana

Recent Posts

ಪ್ರಾಕೃತಿಕ ವಿಕೋಪ ಎದುರಿಸಲು ಪೊಲೀಸ್ ಇಲಾಖೆ ಸಜ್ಜು

ನವೀನ್ ಡಿಸೋಜ ವಿಪತ್ತು ರಕ್ಷಣಾ ಕಾರ್ಯಾಚರಣೆಯ ಅಣಕು ಪ್ರದರ್ಶನ; ಸಂತ್ರಸ್ತರನ್ನು ರಕ್ಷಿಸುವ ವಿಧಾನ, ದೋಣಿ ಮೋಟಾರ್‌ಗಳನ್ನು ಚಾಲನೆ ಮಾಡುವ ಬಗ್ಗೆ…

29 mins ago

ಗಾಂಧಿ ಅಭಿಯಾನ ಅರಿವಿನ ಯಾನ

ಬಾಪೂಜಿ ಮತ್ತು ವಾಜಪೇಯಿ ದಾರಿ ಬೇರೆಯಾಗಿದ್ದರೂ ನೈತಿಕತೆಗೆ ಮಾದರಿಯಾಗಿದ್ದರು ರಾಜೀವ ಹೆಗಡೆ ಗಾಂಧೀಜಿ ಕ್ವಿಟ್ ಇಂಡಿಯಾ ಚಳವಳಿ ಆರಂಭಿ ಸಿದಾಗ…

32 mins ago

ಗಾಂಧಿ ಅಭಿಯಾನ ಅರಿವಿನ ಯಾನ

ಸುಧಾರಣೆ ನೆಪದಲ್ಲಿ ಎಚ್ಚರ ತಪ್ಪಿದೆ.  ಪ್ರೌಢಶಾಲೆಯಲ್ಲಿ ನನಗೆ ಆಪ್ತ ಸ್ನೇಹಿತರು ಬಹಳ ಕಡಿಮೆಯಿದ್ದರು. ಅಲ್ಲಿ ಬೇರೆ ಬೇರೆ ಕಾಲದಲ್ಲಿ ನನಗೆ…

40 mins ago

ಮಾನಸಿಕ ಅಸ್ವಸ್ಥರಿಗೆ ಬೇಕಿದೆ ಮಮತೆಯ ಮನೆ

ಪ್ರಶಾಂತ್ ಎಸ್. ಮೈಸೂರು: ಯಾವುದೋ ಕಾರಣಕ್ಕೆ ಮನಸ್ಸಿನ ಸ್ಥಿಮಿತ ಕಳೆದುಕೊಳ್ಳುವ ಬಹುತೇಕ ಮಂದಿ ಮನೆ ಹಾಗೂ ಕುಟುಂಬದವರಿಂದ ದೂರವಾಗುವುದು ಸಹಜ.…

45 mins ago

ವಿದ್ಯಾರ್ಥಿನಿಲಯಗಳ ಪ್ರವೇಶಾತಿಗೆ ಹೆಚ್ಚಿನ ಬೇಡಿಕೆ ನಿರೀಕ್ಷೆ

ಗಿರೀಶ್ ಹುಣಸೂರು ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷೆಯಲ್ಲಿ ದಾಖಲೆ ಫಲಿತಾಂಶ ಹಿನ್ನೆಲೆ ಮೈಸೂರು: ಶೈಕ್ಷಣಿಕ ವರ್ಷದ ಆರಂಭಕ್ಕೆ ದಿನಗಣನೆ ಆರಂಭ ವಾಗಿರುವ…

48 mins ago

‘ನಮ್ಮ ಕ್ಲಿನಿಕ್’; ಉಡಾಫೆ ಸಿಬ್ಬಂದಿಗೆ ಬ್ರೇಕ್!

ಕೆ.ಬಿ.ರಮೇಶನಾಯಕ ೨ನೇ, ೪ನೇ ಶನಿವಾರ, ಭಾನುವಾರ ಬಾಗಿಲು ಹಾಕಿದರೆ ಶಿಸ್ತುಕ್ರಮ ಮೈಸೂರು: ವಾರದ ಭಾನುವಾರವೂ ಸೇರಿದಂತೆ ಸರ್ಕಾರಿ ರಜಾ ದಿನಗಳಂದು…

53 mins ago