ಚಿತ್ರ ಮಂಜರಿ

ವರದಕ್ಷಿಣೆ ಪ್ರಕರಣ: ಹಿರಿಯ ನಟಿ ಅಭಿನಯಾಗೆ ಎರಡು ವರ್ಷ ಜೈಲು ಸಜೆ

ಅಣ್ಣನ ಹೆಂಡತಿಗೆ ವರದಕ್ಷಿಣೆ ಕಿರುಕುಳ ನೀಡಿದ ಆರೋಪ, ಅಭಿನಯಾ ತಾಯಿ ಸೇರಿ ಮೂವರಿಗೆ ಶಿಕ್ಷೆ

ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟಿ ಅಭಿನಯ ಅವರಿಗೆ ತಮ್ಮ ಅತ್ತಿಗೆಗೆ (ಅಣ್ಣನ ಹೆಂಡತಿ) ವರದಕ್ಷಿಣೆ ಕಿರುಕುಳ ನೀಡಿದ ಹಿನ್ನೆಲೆಯಲ್ಲಿ ಹೈಕೋರ್ಟ್ 2 ವರ್ಷ ಜೈಲು ಶಿಕ್ಷೆ ವಿಧಿಸಿದೆ.
ಕಾಶಿನಾಥ ಅವರ ʼಅನುಭವʼ ಚಿತ್ರದಲ್ಲಿ ನಟಿಸಿದ್ದ ಸ್ಯಾಂಡಲ್‌ವುಡ್ನ ಹಿರಿಯ ನಟಿ ಅಭಿನಯ ಅವರ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ ಕೇಳಿ ಬಂದಿತ್ತು. ಅಭಿನಯ ಅವರು ತಮ್ಮ ಅಣ್ಣ ಶ್ರೀನಿವಾಸ್ ಅವರ ಹೆಂಡತಿ ಲಕ್ಷ್ಮಿದೇವಿಯವರಿಗೆ ವರದಕ್ಷಿಣೆ ತರುವಂತೆ ಕಿರುಕುಳ ನೀಡುತ್ತಿದ್ದರು ಎಂದು ದೂರಲಾಗಿದೆ. ಈ ಹಿನ್ನೆಲೆಯಲ್ಲಿ ಅಭಿನಯ ಸೇರಿ ಇಡೀ ಕುಟುಂಬದ ವಿರುದ್ಧ 2002 ರಲ್ಲಿ ಚಂದ್ರಾ ಲೇಔಟ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಇದೀಗ ವರದಕ್ಷಿಣೆ ಬೇಡಿಕೆ, ಕಿರುಕುಳ ಆರೋಪದಲ್ಲಿ ಹೈಕೋರ್ಟ್ ಶಿಕ್ಷೆ ಪ್ರಕಟಿಸಿದೆ. ನ್ಯಾ.ಹೆಚ್.ಬಿ. ಪ್ರಭಾಕರ್ ಶಾಸ್ತ್ರಿ ಅವರ ಏಕಸದಸ್ಯ ಪೀಠ ಅಭಿನಯಾ ಮತ್ತು ಅವರ ತಾಯಿಗೆ ಜೈಲು ಶಿಕ್ಷೆ ವಿಧಿಸಿ ಆದೇಶಿಸಿದೆ. ಸರ್ಕಾರದ ಪರ ವಕೀಲ ಹೆಚ್.ವಿ. ವಿನಾಯಕ್ ವಾದ ಮಂಡಿಸಿದ್ದರು.
ಲಕ್ಷ್ಮೀದೇವಿಯವರು 1998ರಲ್ಲಿ ಅಭಿನಯ ಅಣ್ಣ ಶ್ರೀನಿವಾಸ್ ಜೊತೆ ಮದುವೆಯಾಗಿದ್ದರು. ಮದುವೆ ವೇಳೆ ಅಭಿನಯ ಕುಟುಂಬ 80 ಸಾವಿರ ರೂಪಾಯಿ ಹಾಗೂ 250 ಗ್ರಾಂ ಚಿನ್ನಾಭರಣ ಪಡೆದಿದ್ದರು. ನಂತರವೂ 1 ಲಕ್ಷ ರೂ.ಗಳಿಗೆ ಬೇಡಿಕೆ ಇಟ್ಟು 20 ಸಾವಿರ ಪಡೆದಿದ್ದರು. ವರದಕ್ಷಿಣೆ ಪಡೆದಿದ್ದಲ್ಲದೆ ಲಕ್ಷ್ಮೀದೇವಿ ಅವರನ್ನು ಅವರ ಪೋಷಕರ ಮನೆಯಲ್ಲಿ ಬಿಟ್ಟಿದ್ದರು. ಹೆರಿಗೆಗೆ ತವರು ಮನೆಗೆ ಹೋದ ಲಕ್ಷ್ಮೀದೇವಿಯನ್ನು ಅಭಿನಯ ಕುಟುಂಬ ಮನೆಗೆ ಕರೆತಂದಿರಲಿಲ್ಲ.
ಇನ್ನು ಗಂಡನ ಮನೆಗೆ ಬಂದ ಲಕ್ಷ್ಮೀ ಹಾಗು ಪೋಷಕರಿಗೆ ಅವಮಾನ ಮಾಡಿದ್ದಾರೆಂದು ದೂರಲಾಗಿತ್ತು. 2002 ರಲ್ಲಿ ಲಕ್ಷ್ಮಿ ಹಾಗೂ ಪೋಷಕರು ಅಭಿನಯ ಸೇರಿ ಇಡೀ ಕುಟುಂಬದ ವಿರುದ್ಧ ಚಂದ್ರಾಲೇಔಟ್ ಠಾಣೆಗೆ ದೂರು ನೀಡಿದ್ದರು. ಚಂದ್ರಾ ಲೇಔಟ್ ಪೊಲೀಸರ ಚಾರ್ಜ್‌ ಶೀಟ್ ಆಧರಿಸಿ ಮ್ಯಾಜಿಸ್ಟ್ರೇಟ್ ಐವರು ಆರೋಪಿಗಳಿಗೆ 2012ರಲ್ಲಿ ತಲಾ 2 ವರ್ಷ ಶಿಕ್ಷೆ ಪ್ರಕಟಿಸಿದ್ದರು. ನಂತರ ಜಿಲ್ಲಾ ನ್ಯಾಯಾಲಯ ಐವರು ಆರೋಪಿಗಳನ್ನು ಖುಲಾಸೆಗೊಳಿಸಿ ಆದೇಶಿಸಿತ್ತು. ಜಿಲ್ಲಾ ನ್ಯಾಯಾಲಯದ ಆದೇಶ ಪ್ರಶ್ನಿಸಿ ಲಕ್ಷ್ಮೀದೇವಿ ಹಾಗು ಸರ್ಕಾರದಿಂದ ಮೇಲ್ಮನವಿ ಸಲ್ಲಿಸಲಾಗಿತ್ತು.
ಇದೀಗ ಮೇಲ್ಮನವಿ ವಿಚಾರಣೆ ನಡೆಸಿದ ಹೈಕೋರ್ಟ್ ಮೂವರು ಆರೋಪಿಗಳಿಗೆ ಶಿಕ್ಷೆ ಪ್ರಕಟಿಸಿ ಆದೇಶಿಸಿದೆ. ಎ1-ಶ್ರೀನಿವಾಸ್ ಹಾಗೂ ಎ-2 ರಾಮಕೃಷ್ಣ ಸಾವನ್ನಪ್ಪಿದ ಹಿನ್ನಲೆಯಲ್ಲಿ ಮೂವರಿಗೆ ಜೈಲು ಶಿಕ್ಷೆ ವಿಧಿಸಲಾಗಿದೆ. ನಟಿ ಅಭಿನಯ ಅವರ ತಾಯಿ ಜಯಮ್ಮ ಅವರಿಗೆ 5 ವರ್ಷ ಕಾರಾಗೃಹ ಶಿಕ್ಷೆ ಪ್ರಕಟವಾಗಿದೆ. ನಾಲ್ಕನೇ ಆರೋಪಿ ಚಲುವರಾಜ್, ಐದನೇ ಆರೋಪಿ ಅಭಿನಯಾಗೆ 2 ವರ್ಷ ಜೈಲು ಹಾಗೂ ದಂಡ ವಿಧಿಸಲಾಗಿದೆ.

andolanait

Recent Posts

32 ಕ್ಷೇತ್ರಗಳ ಟಾರ್ಗೆಟ್‌: ನಿಖಿಲ್‌ ಕುಮಾರಸ್ವಾಮಿ ರಾಜ್ಯ ಪ್ರವಾಸ

ಬೆಂಗಳೂರು: ಪಕ್ಷ ಸಂಘಟನೆಗಾಗಿ ರಾಜ್ಯಾದ್ಯಂತ ಪ್ರವಾಸ ಮಾಡುತ್ತಿರುವ ಜೆಡಿಎಸ್‌ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಅವರು 2ನೇ ಹಂತದ…

2 hours ago

1.60 ಕೋಟಿ ಲಂಚ ಪಡೆದು ಮುಡಾ ಮಾಜಿ ಆಯುಕ್ತ ನಟೇಶ್‌ಗೆ ಬಡ್ತಿ: ದಾಖಲೆ ಬಿಡುಗಡೆ ಮಾಡಿದ ಸ್ನೇಹಮಯಿ ಕೃಷ್ಣ

ಬೆಂಗಳೂರು: ಮೈಸೂರು ಮುಡಾ ಹಗರಣದಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮತ್ತೊಂದು ಗಂಭೀರ ಆರೋಪ ಮಾಡಿದ್ದಲ್ಲದೇ ದಾಖಲೆಗಳನ್ನು ಬಿಡುಗಡೆ…

2 hours ago

ಫೆಬ್ರವರಿ.25ರಂದು ಅಜ್ಜಿಪುರ ಗ್ರಾಮದಿಂದ ವಿಧಾನಸೌಧದವರೆಗೆ ಪಾದಯಾತ್ರೆ: ಬಡಗಲಪುರ ನಾಗೇಂದ್ರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ಭಾಗದ ಉಡುತೊರೆ ಹಳ್ಳ ಜಲಾಶಯ ಸೇರಿದಂತೆ ಪ್ರಮುಖ ಕೆರೆಗಳಿಗೆ…

2 hours ago

ಕ್ರಿಕೆಟ್‌ ಪಂದ್ಯಾವಳಿ ವೇಳೆ ಜೇನುನೊಣಗಳ ದಾಳಿ: ಅಂಪೈರ್‌ ದಾರುಣ ಸಾವು

ಉನ್ನಾವೋ: ಕ್ರಿಕೆಟ್ ಪಂದ್ಯದ ವೇಳೆ ಜೇನುನೊಣಗಳ ಹಿಂಡು ದಾಳಿ ಮಾಡಿದ ಪರಿಣಾಮ 65 ವರ್ಷದ ಅಂಪೈರ್ ಸಾವನ್ನಪ್ಪಿದ್ದು, ಹಲವಾರು ಆಟಗಾರರು…

2 hours ago

ಬೆಂಗಳೂರು ಏರ್‌ಪೋರ್ಟ್‌ನಲ್ಲಿ 23.8 ಕೋಟಿ ಮೌಲ್ಯದ ಕೊಕೇನ್‌ ಜಪ್ತಿ

ಬೆಂಗಳೂರು: ಇಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 23.8 ಕೋಟಿ ರೂ ಮೌಲ್ಯದ ಕೊಕೇನ್‌ ಸೀಜ್‌ ಮಾಡಲಾಗಿದೆ. ಎನ್‌ಸಿಬಿ ಅಧಿಕಾರಿಗಳು…

3 hours ago

ನಾಳೆ ರಾಕಿಂಗ್‌ ಸ್ಟಾರ್‌ ಯಶ್‌ ಅಭಿನಯದ ಟಾಕ್ಸಿಕ್‌ ಚಿತ್ರದ 2ನೇ ಟೀಸರ್‌ ರಿಲೀಸ್‌

ಬೆಂಗಳೂರು: ಕೆಜಿಎಫ್‌-2 ಯಶಸ್ಸಿನ ನಂತರ ಇಡೀ ದೇಶದ ಕಾತುರದಿಂದ ಕಾಯುತ್ತಿರುವ ಸಿನಿಮಾ ಎಂದರೆ ಅದು ರಾಕಿಂಗ್‌ ಸ್ಟಾರ್‌ ಯಶ್‌ ಅಭಿನಯದ…

4 hours ago