ಚಿತ್ರ ಮಂಜರಿ

ವರದಕ್ಷಿಣೆ ಪ್ರಕರಣ: ಹಿರಿಯ ನಟಿ ಅಭಿನಯಾಗೆ ಎರಡು ವರ್ಷ ಜೈಲು ಸಜೆ

ಅಣ್ಣನ ಹೆಂಡತಿಗೆ ವರದಕ್ಷಿಣೆ ಕಿರುಕುಳ ನೀಡಿದ ಆರೋಪ, ಅಭಿನಯಾ ತಾಯಿ ಸೇರಿ ಮೂವರಿಗೆ ಶಿಕ್ಷೆ

ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟಿ ಅಭಿನಯ ಅವರಿಗೆ ತಮ್ಮ ಅತ್ತಿಗೆಗೆ (ಅಣ್ಣನ ಹೆಂಡತಿ) ವರದಕ್ಷಿಣೆ ಕಿರುಕುಳ ನೀಡಿದ ಹಿನ್ನೆಲೆಯಲ್ಲಿ ಹೈಕೋರ್ಟ್ 2 ವರ್ಷ ಜೈಲು ಶಿಕ್ಷೆ ವಿಧಿಸಿದೆ.
ಕಾಶಿನಾಥ ಅವರ ʼಅನುಭವʼ ಚಿತ್ರದಲ್ಲಿ ನಟಿಸಿದ್ದ ಸ್ಯಾಂಡಲ್‌ವುಡ್ನ ಹಿರಿಯ ನಟಿ ಅಭಿನಯ ಅವರ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ ಕೇಳಿ ಬಂದಿತ್ತು. ಅಭಿನಯ ಅವರು ತಮ್ಮ ಅಣ್ಣ ಶ್ರೀನಿವಾಸ್ ಅವರ ಹೆಂಡತಿ ಲಕ್ಷ್ಮಿದೇವಿಯವರಿಗೆ ವರದಕ್ಷಿಣೆ ತರುವಂತೆ ಕಿರುಕುಳ ನೀಡುತ್ತಿದ್ದರು ಎಂದು ದೂರಲಾಗಿದೆ. ಈ ಹಿನ್ನೆಲೆಯಲ್ಲಿ ಅಭಿನಯ ಸೇರಿ ಇಡೀ ಕುಟುಂಬದ ವಿರುದ್ಧ 2002 ರಲ್ಲಿ ಚಂದ್ರಾ ಲೇಔಟ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಇದೀಗ ವರದಕ್ಷಿಣೆ ಬೇಡಿಕೆ, ಕಿರುಕುಳ ಆರೋಪದಲ್ಲಿ ಹೈಕೋರ್ಟ್ ಶಿಕ್ಷೆ ಪ್ರಕಟಿಸಿದೆ. ನ್ಯಾ.ಹೆಚ್.ಬಿ. ಪ್ರಭಾಕರ್ ಶಾಸ್ತ್ರಿ ಅವರ ಏಕಸದಸ್ಯ ಪೀಠ ಅಭಿನಯಾ ಮತ್ತು ಅವರ ತಾಯಿಗೆ ಜೈಲು ಶಿಕ್ಷೆ ವಿಧಿಸಿ ಆದೇಶಿಸಿದೆ. ಸರ್ಕಾರದ ಪರ ವಕೀಲ ಹೆಚ್.ವಿ. ವಿನಾಯಕ್ ವಾದ ಮಂಡಿಸಿದ್ದರು.
ಲಕ್ಷ್ಮೀದೇವಿಯವರು 1998ರಲ್ಲಿ ಅಭಿನಯ ಅಣ್ಣ ಶ್ರೀನಿವಾಸ್ ಜೊತೆ ಮದುವೆಯಾಗಿದ್ದರು. ಮದುವೆ ವೇಳೆ ಅಭಿನಯ ಕುಟುಂಬ 80 ಸಾವಿರ ರೂಪಾಯಿ ಹಾಗೂ 250 ಗ್ರಾಂ ಚಿನ್ನಾಭರಣ ಪಡೆದಿದ್ದರು. ನಂತರವೂ 1 ಲಕ್ಷ ರೂ.ಗಳಿಗೆ ಬೇಡಿಕೆ ಇಟ್ಟು 20 ಸಾವಿರ ಪಡೆದಿದ್ದರು. ವರದಕ್ಷಿಣೆ ಪಡೆದಿದ್ದಲ್ಲದೆ ಲಕ್ಷ್ಮೀದೇವಿ ಅವರನ್ನು ಅವರ ಪೋಷಕರ ಮನೆಯಲ್ಲಿ ಬಿಟ್ಟಿದ್ದರು. ಹೆರಿಗೆಗೆ ತವರು ಮನೆಗೆ ಹೋದ ಲಕ್ಷ್ಮೀದೇವಿಯನ್ನು ಅಭಿನಯ ಕುಟುಂಬ ಮನೆಗೆ ಕರೆತಂದಿರಲಿಲ್ಲ.
ಇನ್ನು ಗಂಡನ ಮನೆಗೆ ಬಂದ ಲಕ್ಷ್ಮೀ ಹಾಗು ಪೋಷಕರಿಗೆ ಅವಮಾನ ಮಾಡಿದ್ದಾರೆಂದು ದೂರಲಾಗಿತ್ತು. 2002 ರಲ್ಲಿ ಲಕ್ಷ್ಮಿ ಹಾಗೂ ಪೋಷಕರು ಅಭಿನಯ ಸೇರಿ ಇಡೀ ಕುಟುಂಬದ ವಿರುದ್ಧ ಚಂದ್ರಾಲೇಔಟ್ ಠಾಣೆಗೆ ದೂರು ನೀಡಿದ್ದರು. ಚಂದ್ರಾ ಲೇಔಟ್ ಪೊಲೀಸರ ಚಾರ್ಜ್‌ ಶೀಟ್ ಆಧರಿಸಿ ಮ್ಯಾಜಿಸ್ಟ್ರೇಟ್ ಐವರು ಆರೋಪಿಗಳಿಗೆ 2012ರಲ್ಲಿ ತಲಾ 2 ವರ್ಷ ಶಿಕ್ಷೆ ಪ್ರಕಟಿಸಿದ್ದರು. ನಂತರ ಜಿಲ್ಲಾ ನ್ಯಾಯಾಲಯ ಐವರು ಆರೋಪಿಗಳನ್ನು ಖುಲಾಸೆಗೊಳಿಸಿ ಆದೇಶಿಸಿತ್ತು. ಜಿಲ್ಲಾ ನ್ಯಾಯಾಲಯದ ಆದೇಶ ಪ್ರಶ್ನಿಸಿ ಲಕ್ಷ್ಮೀದೇವಿ ಹಾಗು ಸರ್ಕಾರದಿಂದ ಮೇಲ್ಮನವಿ ಸಲ್ಲಿಸಲಾಗಿತ್ತು.
ಇದೀಗ ಮೇಲ್ಮನವಿ ವಿಚಾರಣೆ ನಡೆಸಿದ ಹೈಕೋರ್ಟ್ ಮೂವರು ಆರೋಪಿಗಳಿಗೆ ಶಿಕ್ಷೆ ಪ್ರಕಟಿಸಿ ಆದೇಶಿಸಿದೆ. ಎ1-ಶ್ರೀನಿವಾಸ್ ಹಾಗೂ ಎ-2 ರಾಮಕೃಷ್ಣ ಸಾವನ್ನಪ್ಪಿದ ಹಿನ್ನಲೆಯಲ್ಲಿ ಮೂವರಿಗೆ ಜೈಲು ಶಿಕ್ಷೆ ವಿಧಿಸಲಾಗಿದೆ. ನಟಿ ಅಭಿನಯ ಅವರ ತಾಯಿ ಜಯಮ್ಮ ಅವರಿಗೆ 5 ವರ್ಷ ಕಾರಾಗೃಹ ಶಿಕ್ಷೆ ಪ್ರಕಟವಾಗಿದೆ. ನಾಲ್ಕನೇ ಆರೋಪಿ ಚಲುವರಾಜ್, ಐದನೇ ಆರೋಪಿ ಅಭಿನಯಾಗೆ 2 ವರ್ಷ ಜೈಲು ಹಾಗೂ ದಂಡ ವಿಧಿಸಲಾಗಿದೆ.

andolanait

Recent Posts

ಕಾವೇರಿ ನದಿಯಲ್ಲಿ ಆರು ಜನ ಸಾವು ; ಸಾವಿಗೀಡಾದವರೆಲ್ಲರೂ ಒಂದೇ ಕುಟುಂಬದವರು

ಕೆ.ಆರ್.ನಗರ : ತಾಲ್ಲೂಕಿನ ಹೊರವಲಯದ ಅರ್ಕೇಶ್ವರ ದೇಗುಲ ಬಳಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ಸಾವನ್ನಪ್ಪಿದ ಆರು ಮಂದಿಯೂ ಒಂದೇ…

9 hours ago

ಚಾ.ನಗರ ಆಕ್ಸಿಜನ್‌ ದುರಂತ : ಸಂತ್ರಸ್ಥರಿಗೆ ಕೊನೆಗೂ ಒಲಿದ ಸರ್ಕಾರಿ ನೌಕರಿ

ಚಾಮರಾಜನಗರ : ಕೋವಿಡ್ ವೇಳೆಯಲ್ಲಿ ನಗರದ ಜಿಲ್ಲಾಸ್ಪತ್ರೆಯಲ್ಲಿ (ಈಗ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ) ಸಂಭವಿಸಿದ್ದ ಆಕ್ಸಿಜನ್ ದುರಂತದಲ್ಲಿ 36…

9 hours ago

ಏ.20, 21 ರಂದು ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.20 ಹಾಗೂ 21ರಂದು ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. 20ರಂದು…

10 hours ago

6 ಮಂದಿ ಸಾವು ಪ್ರಕರಣ ; ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಮೈಸೂರು : ಜಿಲ್ಲೆಯ ಕೆ.ಆರ್.ನಗರದ ಅರ್ಕೇಶ್ವರ ದೇಗುಲದ ಬಳಿ ಕಾವೇರಿ ನದಿಯಲ್ಲಿ ಈಜಲು ತೆರಳಿ ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ…

10 hours ago

ದೇವರನ್ನು ನಂಬಿ, ಮೂಢನಂಬಿಕೆಗಳನ್ನು ತ್ಯಜಿಸಿ : ಸಿಎಂ ಸಿದ್ದರಾಮಯ್ಯ ಕರೆ

ರಾಣೇಬೆನ್ನೂರ : ಮಾನವ ಸಮಾಜ ನಿರ್ಮಾಣದಲ್ಲಿ ಎಲ್ಲರೂ ಪಾಲುದಾರರಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಅವರು ಇಂದು ರಾಣಿಬೆನ್ನೂರಿನ ನಿಟ್ಟೂರು…

10 hours ago

IPL 2026 | ಸೋಲಿನ ಸರಪಳಿ ಕಳಚಿದ ಕೆಕೆಆರ್‌ ; ರಾಜಸ್ಥಾನ ವಿರುದ್ಧ ಜಯ

ಕೊಲ್ಕತ್ತಾ : ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ 28ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡವು ರಾಜಸ್ಥಾನ…

10 hours ago