ಚಿತ್ರ ಮಂಜರಿ

ವರದಕ್ಷಿಣೆ ಪ್ರಕರಣ: ಹಿರಿಯ ನಟಿ ಅಭಿನಯಾಗೆ ಎರಡು ವರ್ಷ ಜೈಲು ಸಜೆ

ಅಣ್ಣನ ಹೆಂಡತಿಗೆ ವರದಕ್ಷಿಣೆ ಕಿರುಕುಳ ನೀಡಿದ ಆರೋಪ, ಅಭಿನಯಾ ತಾಯಿ ಸೇರಿ ಮೂವರಿಗೆ ಶಿಕ್ಷೆ

ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟಿ ಅಭಿನಯ ಅವರಿಗೆ ತಮ್ಮ ಅತ್ತಿಗೆಗೆ (ಅಣ್ಣನ ಹೆಂಡತಿ) ವರದಕ್ಷಿಣೆ ಕಿರುಕುಳ ನೀಡಿದ ಹಿನ್ನೆಲೆಯಲ್ಲಿ ಹೈಕೋರ್ಟ್ 2 ವರ್ಷ ಜೈಲು ಶಿಕ್ಷೆ ವಿಧಿಸಿದೆ.
ಕಾಶಿನಾಥ ಅವರ ʼಅನುಭವʼ ಚಿತ್ರದಲ್ಲಿ ನಟಿಸಿದ್ದ ಸ್ಯಾಂಡಲ್‌ವುಡ್ನ ಹಿರಿಯ ನಟಿ ಅಭಿನಯ ಅವರ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ ಕೇಳಿ ಬಂದಿತ್ತು. ಅಭಿನಯ ಅವರು ತಮ್ಮ ಅಣ್ಣ ಶ್ರೀನಿವಾಸ್ ಅವರ ಹೆಂಡತಿ ಲಕ್ಷ್ಮಿದೇವಿಯವರಿಗೆ ವರದಕ್ಷಿಣೆ ತರುವಂತೆ ಕಿರುಕುಳ ನೀಡುತ್ತಿದ್ದರು ಎಂದು ದೂರಲಾಗಿದೆ. ಈ ಹಿನ್ನೆಲೆಯಲ್ಲಿ ಅಭಿನಯ ಸೇರಿ ಇಡೀ ಕುಟುಂಬದ ವಿರುದ್ಧ 2002 ರಲ್ಲಿ ಚಂದ್ರಾ ಲೇಔಟ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಇದೀಗ ವರದಕ್ಷಿಣೆ ಬೇಡಿಕೆ, ಕಿರುಕುಳ ಆರೋಪದಲ್ಲಿ ಹೈಕೋರ್ಟ್ ಶಿಕ್ಷೆ ಪ್ರಕಟಿಸಿದೆ. ನ್ಯಾ.ಹೆಚ್.ಬಿ. ಪ್ರಭಾಕರ್ ಶಾಸ್ತ್ರಿ ಅವರ ಏಕಸದಸ್ಯ ಪೀಠ ಅಭಿನಯಾ ಮತ್ತು ಅವರ ತಾಯಿಗೆ ಜೈಲು ಶಿಕ್ಷೆ ವಿಧಿಸಿ ಆದೇಶಿಸಿದೆ. ಸರ್ಕಾರದ ಪರ ವಕೀಲ ಹೆಚ್.ವಿ. ವಿನಾಯಕ್ ವಾದ ಮಂಡಿಸಿದ್ದರು.
ಲಕ್ಷ್ಮೀದೇವಿಯವರು 1998ರಲ್ಲಿ ಅಭಿನಯ ಅಣ್ಣ ಶ್ರೀನಿವಾಸ್ ಜೊತೆ ಮದುವೆಯಾಗಿದ್ದರು. ಮದುವೆ ವೇಳೆ ಅಭಿನಯ ಕುಟುಂಬ 80 ಸಾವಿರ ರೂಪಾಯಿ ಹಾಗೂ 250 ಗ್ರಾಂ ಚಿನ್ನಾಭರಣ ಪಡೆದಿದ್ದರು. ನಂತರವೂ 1 ಲಕ್ಷ ರೂ.ಗಳಿಗೆ ಬೇಡಿಕೆ ಇಟ್ಟು 20 ಸಾವಿರ ಪಡೆದಿದ್ದರು. ವರದಕ್ಷಿಣೆ ಪಡೆದಿದ್ದಲ್ಲದೆ ಲಕ್ಷ್ಮೀದೇವಿ ಅವರನ್ನು ಅವರ ಪೋಷಕರ ಮನೆಯಲ್ಲಿ ಬಿಟ್ಟಿದ್ದರು. ಹೆರಿಗೆಗೆ ತವರು ಮನೆಗೆ ಹೋದ ಲಕ್ಷ್ಮೀದೇವಿಯನ್ನು ಅಭಿನಯ ಕುಟುಂಬ ಮನೆಗೆ ಕರೆತಂದಿರಲಿಲ್ಲ.
ಇನ್ನು ಗಂಡನ ಮನೆಗೆ ಬಂದ ಲಕ್ಷ್ಮೀ ಹಾಗು ಪೋಷಕರಿಗೆ ಅವಮಾನ ಮಾಡಿದ್ದಾರೆಂದು ದೂರಲಾಗಿತ್ತು. 2002 ರಲ್ಲಿ ಲಕ್ಷ್ಮಿ ಹಾಗೂ ಪೋಷಕರು ಅಭಿನಯ ಸೇರಿ ಇಡೀ ಕುಟುಂಬದ ವಿರುದ್ಧ ಚಂದ್ರಾಲೇಔಟ್ ಠಾಣೆಗೆ ದೂರು ನೀಡಿದ್ದರು. ಚಂದ್ರಾ ಲೇಔಟ್ ಪೊಲೀಸರ ಚಾರ್ಜ್‌ ಶೀಟ್ ಆಧರಿಸಿ ಮ್ಯಾಜಿಸ್ಟ್ರೇಟ್ ಐವರು ಆರೋಪಿಗಳಿಗೆ 2012ರಲ್ಲಿ ತಲಾ 2 ವರ್ಷ ಶಿಕ್ಷೆ ಪ್ರಕಟಿಸಿದ್ದರು. ನಂತರ ಜಿಲ್ಲಾ ನ್ಯಾಯಾಲಯ ಐವರು ಆರೋಪಿಗಳನ್ನು ಖುಲಾಸೆಗೊಳಿಸಿ ಆದೇಶಿಸಿತ್ತು. ಜಿಲ್ಲಾ ನ್ಯಾಯಾಲಯದ ಆದೇಶ ಪ್ರಶ್ನಿಸಿ ಲಕ್ಷ್ಮೀದೇವಿ ಹಾಗು ಸರ್ಕಾರದಿಂದ ಮೇಲ್ಮನವಿ ಸಲ್ಲಿಸಲಾಗಿತ್ತು.
ಇದೀಗ ಮೇಲ್ಮನವಿ ವಿಚಾರಣೆ ನಡೆಸಿದ ಹೈಕೋರ್ಟ್ ಮೂವರು ಆರೋಪಿಗಳಿಗೆ ಶಿಕ್ಷೆ ಪ್ರಕಟಿಸಿ ಆದೇಶಿಸಿದೆ. ಎ1-ಶ್ರೀನಿವಾಸ್ ಹಾಗೂ ಎ-2 ರಾಮಕೃಷ್ಣ ಸಾವನ್ನಪ್ಪಿದ ಹಿನ್ನಲೆಯಲ್ಲಿ ಮೂವರಿಗೆ ಜೈಲು ಶಿಕ್ಷೆ ವಿಧಿಸಲಾಗಿದೆ. ನಟಿ ಅಭಿನಯ ಅವರ ತಾಯಿ ಜಯಮ್ಮ ಅವರಿಗೆ 5 ವರ್ಷ ಕಾರಾಗೃಹ ಶಿಕ್ಷೆ ಪ್ರಕಟವಾಗಿದೆ. ನಾಲ್ಕನೇ ಆರೋಪಿ ಚಲುವರಾಜ್, ಐದನೇ ಆರೋಪಿ ಅಭಿನಯಾಗೆ 2 ವರ್ಷ ಜೈಲು ಹಾಗೂ ದಂಡ ವಿಧಿಸಲಾಗಿದೆ.

andolanait

Recent Posts

ಸಂಸದ ಯದುವೀರ್‌ ಪ್ರಯತ್ನದ ಫಲಶ್ರುತಿ : ತಂಬಾಕು ಮಾರಾಟಕ್ಕೆ ಅನುಮತಿ

ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರ ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ತಂಬಾಕು ಬೆಳೆಗಾರರ ಸಮಸ್ಯೆಗಳು ಹಾಗೂ ಮಾರಾಟ…

3 hours ago

ಅರಮನೆ ಫಲಪುಷ್ಪ ಪ್ರದರ್ಶನ | ಸಂಗೀತ ಸಂಜೆಯಲ್ಲಿ ಪ್ರೇಕ್ಷಕರು ತಲ್ಲೀನ

ಮೈಸೂರು : ಮೈಸೂರು ಅರಮನೆ ಮಂಡಳಿ ವತಿಯಿಂದ ಕ್ರಿಸ್‌ಮಸ್ ಹಾಗೂ ಹೊಸವರ್ಷದ ಪ್ರಯುಕ್ತ 10 ದಿನಗಳ ‘ಅರಮನೆ ಫಲಪುಷ್ಪ ಪ್ರದರ್ಶನ’…

5 hours ago

ಎತ್ತಿನ ಗಾಡಿಗೆ ಸಾರಿಗೆ ಬಸ್‌ ಡಿಕ್ಕಿ : ಎತ್ತು ಸಾವು

ಹಲಗೂರು : ಎತ್ತಿನ ಗಾಡಿ ತೆರಳುತ್ತಿದ್ದ ವೇಳೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಎತ್ತು ಸ್ಥಳದಲ್ಲೇ ಮೃತಪಟ್ಟ ಘಟನೆ…

5 hours ago

ಮುತ್ತತ್ತಿ : ಕಾವೇರಿ ನದಿ ಸೆಳೆತಕ್ಕೆ ಸಿಲುಕಿ ಯುವಕ ಸಾವು

ಹಲಗೂರು : ಇಲ್ಲಿಗೆ ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟಿರುವ ಘಟನೆ…

5 hours ago

ಪೊಲೀಸ್‌ ಭದ್ರತೆಯಲ್ಲಿ ದೇಗುಲ ಪ್ರವೇಶಿಸಿದ ದಲಿತ ಮಹಿಳೆಯರು : ಶಾಂತಿ ಸಭೆಯಲ್ಲಿ ಪಂಚ ಬೇಡಿಕೆ

ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಶೆಟ್ಟಹಳ್ಳಿ ಗ್ರಾಮದಲ್ಲಿ ಪೊಲೀಸರ ಭದ್ರತೆಯೊಂದಿಗೆ ಗ್ರಾಮದ ಪರಿಶಿಷ್ಟ ಜಾನಾಂಗದ ಮಹಿಳೆಯರು, ಪುರುಷರು ದೇವಾಲಯಗಳಿಗೆ ಪ್ರವೇಶಿಸಿದರು.…

5 hours ago

ಅಕ್ರಮ ವಿದ್ಯುತ್‌ ಸಂಪರ್ಕ: 31 ಪ್ರಕರಣ ದಾಖಲು, 2.17 ಲಕ್ಷ ರೂ. ದಂಡ

ಮೈಸೂರು : ಅಕ್ರಮವಾಗಿ ವಿದ್ಯುತ್‌ ಸಂಪರ್ಕ ಪಡೆದಿರುವ ಸಂಬಂಧ ಯಶಸ್ವಿ ಕಾರ್ಯಾಚರಣೆ ನಡೆಸಿದ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ(ಚಾವಿಸನಿನಿ)…

5 hours ago