ಚಿತ್ರ ಮಂಜರಿ

ವರದಕ್ಷಿಣೆ ಪ್ರಕರಣ: ಹಿರಿಯ ನಟಿ ಅಭಿನಯಾಗೆ ಎರಡು ವರ್ಷ ಜೈಲು ಸಜೆ

ಅಣ್ಣನ ಹೆಂಡತಿಗೆ ವರದಕ್ಷಿಣೆ ಕಿರುಕುಳ ನೀಡಿದ ಆರೋಪ, ಅಭಿನಯಾ ತಾಯಿ ಸೇರಿ ಮೂವರಿಗೆ ಶಿಕ್ಷೆ

ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟಿ ಅಭಿನಯ ಅವರಿಗೆ ತಮ್ಮ ಅತ್ತಿಗೆಗೆ (ಅಣ್ಣನ ಹೆಂಡತಿ) ವರದಕ್ಷಿಣೆ ಕಿರುಕುಳ ನೀಡಿದ ಹಿನ್ನೆಲೆಯಲ್ಲಿ ಹೈಕೋರ್ಟ್ 2 ವರ್ಷ ಜೈಲು ಶಿಕ್ಷೆ ವಿಧಿಸಿದೆ.
ಕಾಶಿನಾಥ ಅವರ ʼಅನುಭವʼ ಚಿತ್ರದಲ್ಲಿ ನಟಿಸಿದ್ದ ಸ್ಯಾಂಡಲ್‌ವುಡ್ನ ಹಿರಿಯ ನಟಿ ಅಭಿನಯ ಅವರ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ ಕೇಳಿ ಬಂದಿತ್ತು. ಅಭಿನಯ ಅವರು ತಮ್ಮ ಅಣ್ಣ ಶ್ರೀನಿವಾಸ್ ಅವರ ಹೆಂಡತಿ ಲಕ್ಷ್ಮಿದೇವಿಯವರಿಗೆ ವರದಕ್ಷಿಣೆ ತರುವಂತೆ ಕಿರುಕುಳ ನೀಡುತ್ತಿದ್ದರು ಎಂದು ದೂರಲಾಗಿದೆ. ಈ ಹಿನ್ನೆಲೆಯಲ್ಲಿ ಅಭಿನಯ ಸೇರಿ ಇಡೀ ಕುಟುಂಬದ ವಿರುದ್ಧ 2002 ರಲ್ಲಿ ಚಂದ್ರಾ ಲೇಔಟ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಇದೀಗ ವರದಕ್ಷಿಣೆ ಬೇಡಿಕೆ, ಕಿರುಕುಳ ಆರೋಪದಲ್ಲಿ ಹೈಕೋರ್ಟ್ ಶಿಕ್ಷೆ ಪ್ರಕಟಿಸಿದೆ. ನ್ಯಾ.ಹೆಚ್.ಬಿ. ಪ್ರಭಾಕರ್ ಶಾಸ್ತ್ರಿ ಅವರ ಏಕಸದಸ್ಯ ಪೀಠ ಅಭಿನಯಾ ಮತ್ತು ಅವರ ತಾಯಿಗೆ ಜೈಲು ಶಿಕ್ಷೆ ವಿಧಿಸಿ ಆದೇಶಿಸಿದೆ. ಸರ್ಕಾರದ ಪರ ವಕೀಲ ಹೆಚ್.ವಿ. ವಿನಾಯಕ್ ವಾದ ಮಂಡಿಸಿದ್ದರು.
ಲಕ್ಷ್ಮೀದೇವಿಯವರು 1998ರಲ್ಲಿ ಅಭಿನಯ ಅಣ್ಣ ಶ್ರೀನಿವಾಸ್ ಜೊತೆ ಮದುವೆಯಾಗಿದ್ದರು. ಮದುವೆ ವೇಳೆ ಅಭಿನಯ ಕುಟುಂಬ 80 ಸಾವಿರ ರೂಪಾಯಿ ಹಾಗೂ 250 ಗ್ರಾಂ ಚಿನ್ನಾಭರಣ ಪಡೆದಿದ್ದರು. ನಂತರವೂ 1 ಲಕ್ಷ ರೂ.ಗಳಿಗೆ ಬೇಡಿಕೆ ಇಟ್ಟು 20 ಸಾವಿರ ಪಡೆದಿದ್ದರು. ವರದಕ್ಷಿಣೆ ಪಡೆದಿದ್ದಲ್ಲದೆ ಲಕ್ಷ್ಮೀದೇವಿ ಅವರನ್ನು ಅವರ ಪೋಷಕರ ಮನೆಯಲ್ಲಿ ಬಿಟ್ಟಿದ್ದರು. ಹೆರಿಗೆಗೆ ತವರು ಮನೆಗೆ ಹೋದ ಲಕ್ಷ್ಮೀದೇವಿಯನ್ನು ಅಭಿನಯ ಕುಟುಂಬ ಮನೆಗೆ ಕರೆತಂದಿರಲಿಲ್ಲ.
ಇನ್ನು ಗಂಡನ ಮನೆಗೆ ಬಂದ ಲಕ್ಷ್ಮೀ ಹಾಗು ಪೋಷಕರಿಗೆ ಅವಮಾನ ಮಾಡಿದ್ದಾರೆಂದು ದೂರಲಾಗಿತ್ತು. 2002 ರಲ್ಲಿ ಲಕ್ಷ್ಮಿ ಹಾಗೂ ಪೋಷಕರು ಅಭಿನಯ ಸೇರಿ ಇಡೀ ಕುಟುಂಬದ ವಿರುದ್ಧ ಚಂದ್ರಾಲೇಔಟ್ ಠಾಣೆಗೆ ದೂರು ನೀಡಿದ್ದರು. ಚಂದ್ರಾ ಲೇಔಟ್ ಪೊಲೀಸರ ಚಾರ್ಜ್‌ ಶೀಟ್ ಆಧರಿಸಿ ಮ್ಯಾಜಿಸ್ಟ್ರೇಟ್ ಐವರು ಆರೋಪಿಗಳಿಗೆ 2012ರಲ್ಲಿ ತಲಾ 2 ವರ್ಷ ಶಿಕ್ಷೆ ಪ್ರಕಟಿಸಿದ್ದರು. ನಂತರ ಜಿಲ್ಲಾ ನ್ಯಾಯಾಲಯ ಐವರು ಆರೋಪಿಗಳನ್ನು ಖುಲಾಸೆಗೊಳಿಸಿ ಆದೇಶಿಸಿತ್ತು. ಜಿಲ್ಲಾ ನ್ಯಾಯಾಲಯದ ಆದೇಶ ಪ್ರಶ್ನಿಸಿ ಲಕ್ಷ್ಮೀದೇವಿ ಹಾಗು ಸರ್ಕಾರದಿಂದ ಮೇಲ್ಮನವಿ ಸಲ್ಲಿಸಲಾಗಿತ್ತು.
ಇದೀಗ ಮೇಲ್ಮನವಿ ವಿಚಾರಣೆ ನಡೆಸಿದ ಹೈಕೋರ್ಟ್ ಮೂವರು ಆರೋಪಿಗಳಿಗೆ ಶಿಕ್ಷೆ ಪ್ರಕಟಿಸಿ ಆದೇಶಿಸಿದೆ. ಎ1-ಶ್ರೀನಿವಾಸ್ ಹಾಗೂ ಎ-2 ರಾಮಕೃಷ್ಣ ಸಾವನ್ನಪ್ಪಿದ ಹಿನ್ನಲೆಯಲ್ಲಿ ಮೂವರಿಗೆ ಜೈಲು ಶಿಕ್ಷೆ ವಿಧಿಸಲಾಗಿದೆ. ನಟಿ ಅಭಿನಯ ಅವರ ತಾಯಿ ಜಯಮ್ಮ ಅವರಿಗೆ 5 ವರ್ಷ ಕಾರಾಗೃಹ ಶಿಕ್ಷೆ ಪ್ರಕಟವಾಗಿದೆ. ನಾಲ್ಕನೇ ಆರೋಪಿ ಚಲುವರಾಜ್, ಐದನೇ ಆರೋಪಿ ಅಭಿನಯಾಗೆ 2 ವರ್ಷ ಜೈಲು ಹಾಗೂ ದಂಡ ವಿಧಿಸಲಾಗಿದೆ.

andolanait

Recent Posts

ಓದುಗರ ಪತ್ರ: ಭ್ರಷ್ಟಾಚಾರ ಬಗ್ಗು ಬಡಿಯಲು ಸಿಎಂ ಮುಂದಾಗುವರೇ?

ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…

2 hours ago

ಓದುಗರ ಪತ್ರ: ಸದ್ದು ಮಾಡದ ತುಪ್ಪ, ಬೆಣ್ಣೆ ಬೆಲೆ ಏರಿಕೆ!

ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…

2 hours ago

ಓದುಗರ ಪತ್ರ: ಬರ…ಅಬ್ಬರ !

ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…

2 hours ago

ಓದುಗರ ಪತ್ರ: ಪರೀಕ್ಷಾ ವ್ಯವಸ್ಥೆ ಸಮಗ್ರ ಸುಧಾರಣೆ ಅತ್ಯಗತ್ಯ

ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…

2 hours ago

ಆರ್‌ಟಿಇ; ಮಕ್ಕಳು ಅವಕಾಶ ವಂಚಿತರಾಗಬಾರದು

ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…

2 hours ago

ಕೋವಿಡ್: ಕೊಡಗು ಜಿಲ್ಲೆಯಲ್ಲಿಯೂ ಅಗತ್ಯ ಕಟ್ಟೆಚ್ಚರ

ನವೀನ್ ಡಿಸೋಜ ಮಡಿಕೇರಿ: ಕೋವಿಡ್-೧೯ ಸೋಂಕಿನ ಪ್ರಕರಣಗಳು ಮತ್ತೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ…

2 hours ago