ಚಿತ್ರ ಮಂಜರಿ

ಡಿಸೆಂಬರ್‌ ಒಳಗೆ ಮೈಸೂರಿನಲ್ಲಿ ವಿಷ್ಣುವರ್ಧನ್‌ ಸ್ಮಾರಕ ಉದ್ಘಾಟನೆ: ಸಿಎಂ ಬೊಮ್ಮಾಯಿ

ಬೆಂಗಳೂರು: ಮೈಸೂರಿನಲ್ಲಿ ನಿರ್ಮಾಣವಾಗುತ್ತಿರುವ ವಿಷ್ಣುವರ್ಧನ್ ಸ್ಮಾರಕವನ್ನು ಡಿಸೆಂಬರ್ ಒಳಗೆ ಉದ್ಘಾಟಿಸಲಾಗುವುದು ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ವಿಷ್ಣುವರ್ಧನ್ ಅವರಿದ್ದ ಜಯನಗರದ ಮನೆಯ ಸ್ಥಳದಲ್ಲಿಯೇ ನೂತನವಾಗಿ ನಿರ್ಮಾಣವಾಗಿರುವ ಮನೆಯ ಗೃಹ ಪ್ರವೇಶ ಕಾರ್ಯಕ್ರಮದ ವೇಳೆ ಮಾತನಾಡಿದರು.

ಭಾರತಿಯವರು ಖುದ್ದಾಗಿ ಬಂದು ಗೃಹಪ್ರವೇಶಕ್ಕೆ ಆಹ್ವಾನ ನೀಡಿದ್ದರು. ವಿಷ್ಣುವರ್ಧನ್ ಅವರಿದ್ದ ಮನೆಯನ್ನು ಇನ್ನಷ್ಟು ಚಂದ ಮಾಡಿದ್ದಾರೆ. ನವೀಕರಣಗೊಂಡಿರುವ ವಿಷ್ಣುವರ್ಧನ್ ಅವರ ಮನೆಯ ಹಿಂದೆ ಭಾರತಿ ವಿಷ್ಣುವರ್ಧನ್ ಅವರ ಪ್ರಯತ್ನ ಹಾಗೂ ಶ್ರಮ ಎದ್ದುಕಾಣುತ್ತಿದೆ. ವಿಷ್ಣು ವರ್ಧನ್ ಅವರ ತ್ಯಾಗವನ್ನು ಅಳವಡಿಸಿದ್ದಾರೆ ಎನ್ನುವುದು ನನ್ನ ಭಾವನೆ. ಅವರುಗೆ ಶುಭ ಕೋರಲು ಬಂದಿದ್ದೇನೆ ಎಂದರು .

ಮೈಸೂರಿನಲ್ಲಿ ನಿರ್ಮಾಣ ವಾಗುತ್ತಿರುವ ವಿಷ್ಣುವರ್ಧನ್ ಅವರ ಸ್ಮಾರಕ ನಿರ್ಮಾಣ ಪೂರ್ಣ ಗೊಳ್ಳುತ್ತಾ ಬಂದಿದೆ. ಡಿಸೆಂಬರ್ ಒಳಗೆ ಸ್ಮಾರಕದ ಉದ್ಘಾಟನೆಯನ್ನು ಅದ್ದೂರಿಯಾಗಿ ಮಾಡಲು ತೀರ್ಮಾನಿಸಲಾಗಿದೆ. ಹೆಚ್ಚಿನ ವಿವರಗಳನ್ನು ಅವರ ಕುಟುಂಬದವರೊಂದಿಗೆ ಚರ್ಚಿಸಿ ನಿರ್ಧಾರಕ್ಕೆ ಬರಲಾಗುವುದು. ವಿಷ್ಣುವರ್ಧನ್ ಅವರ ಮೇರು ವ್ಯಕ್ತಿತ್ವ ಹಾಗೂ ಘನತೆಗೆ ತಕ್ಕ ಹಾಗೆ ಕಾರ್ಯಕ್ರಮವನ್ನು ವೈಭವಯುತವಾಗಿ ಆಯೋಜಿಸಲಾಗುವುದು ಎಂದರು.

ಚುಕ್ಕೆ ರೋಗ ತಡೆಗೆ ಕ್ರಮ
ಚಿಕ್ಕಮಗಳೂರಿನಲ್ಲಿ ಅಡಿಕೆಗೆ ಎಲೆ ಚುಕ್ಕಿ ರೋಗ ಬಂದಿದ್ದು, ವಿಜ್ಞಾನಿಗಳ ಸಂಶೋಧನೆ ಒಂದು ಹಂತಕ್ಕೆ ಬಂದಿದೆ. ಅದಕ್ಕೆ ಪರಿಹಾರ ನೀಡುವ ಹಾಗೂ ರೋಗ ಹರಡದಂತೆ ಅನುದಾನ ಬಿಡುಗಡೆಯಾಗಿದೆ. ಮಲೆನಾಡ ಭಾಗದಲ್ಲಿ ಆನೆ ಹಾವಳಿ ಹೆಚ್ವಿದ್ದು, ನಾಲ್ಕು ಜಿಲ್ಲೆಗಳಲ್ಲಿ ಅರಣ್ಯ ಪಡೆಗಳನ್ನು ರಚಿಸಿ, ವಾಹನ ಸಲಕರಣೆಗೆ ಅನುದಾನ ಬಿಡುಗಡೆ ಯಾಗುತ್ತಿದೆ ಎಂದರು.

ಶೃಂಗೇರಿಯಲ್ಲಿ ಆಸ್ಪತ್ರೆ
ಶೃಂಗೇರಿಯಲ್ಲಿ ಆಸ್ಪತ್ರೆ ನಿರ್ಮಿಸಲು ತೀರ್ಮಾನಿಸಿದೆ. ಸ್ಥಳದ ಸಂಸ್ಯೆಯಿದ್ದು, ಅದನ್ನು ಬಗೆಹರಿಸಿ ಆಸ್ಪತ್ರೆ ನಿರ್ಮಿಸಲಾಗುವುದು ಎಂದರು.

andolanait

Recent Posts

ಓದುಗರ ಪತ್ರ: ಶಾಲಾ ದಾಖಲಾತಿ ವಯೋಮಿತಿ ಸಮಸ್ಯೆ ನಿವಾರಿಸಿ

ಮಕ್ಕಳನ್ನು ಒಂದನೇ ತರಗತಿಗೆ ಪ್ರಸಕ್ತ ಸಾಲಿಗೆ ದಾಖಲಿಸುವ ವಯೋಮಿತಿಯನ್ನು ಆರು ವರ್ಷಗಳಿಗೆ ನಿಗದಿಗೊಳಿಸಿ ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.…

50 mins ago

ಓದುಗರ ಪತ್ರ: ಡ್ರಗ್ಸ್ ಜಾಲ ಪತ್ತೆಗೆ ಡ್ರೋನ್ ಕಾರ್ಯಾಚರಣೆ ಶ್ಲಾಘನೀಯ

ಮೈಸೂರಿನಲ್ಲಿ ಸಮಾಜಘಾತುಕ ಶಕ್ತಿಗಳ ದುಷ್ಕೃತ್ಯ ಮತ್ತು ಡ್ರಗ್ಸ್ ಜಾಲ ಪ್ರಕರಣಗಳ ಪತ್ತೆಗೆ ಡ್ರೋನ್ ಕಾರ್ಯಾಚರಣೆ ನಡೆಸಲು ಮೈಸೂರು ನಗರ ಪೊಲೀಸರು…

52 mins ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಸರ್ಕಾರ ಗುಣಮಟ್ಟದ ಚಲನಚಿತ್ರಗಳಿಗೆ ನೀಡುವ ಸಹಾಯಧನದ ಆಚೆ ಈಚೆ

ಗುಣಮಟ್ಟದ ಕನ್ನಡ ಮತ್ತು ಪ್ರಾದೇಶಿಕ ಭಾಷಾ ಚಿತ್ರಗಳಿಗೆ ಸರ್ಕಾರ ನೀಡುತ್ತಿರುವ ಸಹಾಯಧನವನ್ನು ೨೦೨೬ನೇ ಸಾಲಿನಿಂದ ರದ್ದುಪಡಿಸಲು ಸರ್ಕಾರ ನಿರ್ಧರಿಸಿದೆ ಎನ್ನುವುದು…

54 mins ago

ಅಮೃತ್ ೨.೦ ಯೋಜನೆ ಕಾಮಗಾರಿ ಚುರುಕು

ಎಸ್.ಎ. ಹುಸೇನ್ ಶೀಘ್ರದಲ್ಲೇ ಹೊಸ ಪೈಪ್‌ಲೈನ್ ಮೂಲಕ ನೀರು ಸರಬರಾಜು ೪೭.೪೧ ಕೋಟಿ ರೂ. ವೆಚ್ಚದ ೨ ಹಂತಗಳ ಕಾಮಗಾರಿ…

1 hour ago

ಸಫಾರಿಗೆ ರಹದಾರಿ; ವಾದ-ಪ್ರತಿರೋಧ

ಸಫಾರಿ ಪುನಾರಂಭಕ್ಕೆ ಸರ್ಕಾರದ ಆದೇಶ ಹೊರ ಬಿದ್ದ ಬಳಿಕ ರೈತ ಸಂಘಟನೆಗಳ ಆಕ್ರೋಶ ಭುಗಿಲೆದಿದ್ದೆ. ಅಧಿಕಾರಿಗಳು, ಸರ್ಕಾರದ ವಿರುದ್ಧ ರೈತ…

1 hour ago

ದಮ್ಮನಕಟ್ಟೆ ಸಫಾರಿ ಸವಿಯಲು ಪ್ರವಾಸಿಗರು ಕಾತರ…

ಮಂಜು ಕೋಟೆ ಆದೇಶ ಬಂದ ತಕ್ಷಣ ಸಫಾರಿ ಪುನರ್ ಆರಂಭಿಸಲಾಗುವುದು: ಅರಣ್ಯಾಧಿಕಾರಿ ಎಚ್.ಡಿ.ಕೋಟೆ: ರಾಜ್ಯ ಸರ್ಕಾರವು ಸಫಾರಿ ಆರಂಭಕ್ಕೆ ಆದೇಶ…

1 hour ago