ಚಿತ್ರ ಮಂಜರಿ

ಡಿಸೆಂಬರ್‌ ಒಳಗೆ ಮೈಸೂರಿನಲ್ಲಿ ವಿಷ್ಣುವರ್ಧನ್‌ ಸ್ಮಾರಕ ಉದ್ಘಾಟನೆ: ಸಿಎಂ ಬೊಮ್ಮಾಯಿ

ಬೆಂಗಳೂರು: ಮೈಸೂರಿನಲ್ಲಿ ನಿರ್ಮಾಣವಾಗುತ್ತಿರುವ ವಿಷ್ಣುವರ್ಧನ್ ಸ್ಮಾರಕವನ್ನು ಡಿಸೆಂಬರ್ ಒಳಗೆ ಉದ್ಘಾಟಿಸಲಾಗುವುದು ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ವಿಷ್ಣುವರ್ಧನ್ ಅವರಿದ್ದ ಜಯನಗರದ ಮನೆಯ ಸ್ಥಳದಲ್ಲಿಯೇ ನೂತನವಾಗಿ ನಿರ್ಮಾಣವಾಗಿರುವ ಮನೆಯ ಗೃಹ ಪ್ರವೇಶ ಕಾರ್ಯಕ್ರಮದ ವೇಳೆ ಮಾತನಾಡಿದರು.

ಭಾರತಿಯವರು ಖುದ್ದಾಗಿ ಬಂದು ಗೃಹಪ್ರವೇಶಕ್ಕೆ ಆಹ್ವಾನ ನೀಡಿದ್ದರು. ವಿಷ್ಣುವರ್ಧನ್ ಅವರಿದ್ದ ಮನೆಯನ್ನು ಇನ್ನಷ್ಟು ಚಂದ ಮಾಡಿದ್ದಾರೆ. ನವೀಕರಣಗೊಂಡಿರುವ ವಿಷ್ಣುವರ್ಧನ್ ಅವರ ಮನೆಯ ಹಿಂದೆ ಭಾರತಿ ವಿಷ್ಣುವರ್ಧನ್ ಅವರ ಪ್ರಯತ್ನ ಹಾಗೂ ಶ್ರಮ ಎದ್ದುಕಾಣುತ್ತಿದೆ. ವಿಷ್ಣು ವರ್ಧನ್ ಅವರ ತ್ಯಾಗವನ್ನು ಅಳವಡಿಸಿದ್ದಾರೆ ಎನ್ನುವುದು ನನ್ನ ಭಾವನೆ. ಅವರುಗೆ ಶುಭ ಕೋರಲು ಬಂದಿದ್ದೇನೆ ಎಂದರು .

ಮೈಸೂರಿನಲ್ಲಿ ನಿರ್ಮಾಣ ವಾಗುತ್ತಿರುವ ವಿಷ್ಣುವರ್ಧನ್ ಅವರ ಸ್ಮಾರಕ ನಿರ್ಮಾಣ ಪೂರ್ಣ ಗೊಳ್ಳುತ್ತಾ ಬಂದಿದೆ. ಡಿಸೆಂಬರ್ ಒಳಗೆ ಸ್ಮಾರಕದ ಉದ್ಘಾಟನೆಯನ್ನು ಅದ್ದೂರಿಯಾಗಿ ಮಾಡಲು ತೀರ್ಮಾನಿಸಲಾಗಿದೆ. ಹೆಚ್ಚಿನ ವಿವರಗಳನ್ನು ಅವರ ಕುಟುಂಬದವರೊಂದಿಗೆ ಚರ್ಚಿಸಿ ನಿರ್ಧಾರಕ್ಕೆ ಬರಲಾಗುವುದು. ವಿಷ್ಣುವರ್ಧನ್ ಅವರ ಮೇರು ವ್ಯಕ್ತಿತ್ವ ಹಾಗೂ ಘನತೆಗೆ ತಕ್ಕ ಹಾಗೆ ಕಾರ್ಯಕ್ರಮವನ್ನು ವೈಭವಯುತವಾಗಿ ಆಯೋಜಿಸಲಾಗುವುದು ಎಂದರು.

ಚುಕ್ಕೆ ರೋಗ ತಡೆಗೆ ಕ್ರಮ
ಚಿಕ್ಕಮಗಳೂರಿನಲ್ಲಿ ಅಡಿಕೆಗೆ ಎಲೆ ಚುಕ್ಕಿ ರೋಗ ಬಂದಿದ್ದು, ವಿಜ್ಞಾನಿಗಳ ಸಂಶೋಧನೆ ಒಂದು ಹಂತಕ್ಕೆ ಬಂದಿದೆ. ಅದಕ್ಕೆ ಪರಿಹಾರ ನೀಡುವ ಹಾಗೂ ರೋಗ ಹರಡದಂತೆ ಅನುದಾನ ಬಿಡುಗಡೆಯಾಗಿದೆ. ಮಲೆನಾಡ ಭಾಗದಲ್ಲಿ ಆನೆ ಹಾವಳಿ ಹೆಚ್ವಿದ್ದು, ನಾಲ್ಕು ಜಿಲ್ಲೆಗಳಲ್ಲಿ ಅರಣ್ಯ ಪಡೆಗಳನ್ನು ರಚಿಸಿ, ವಾಹನ ಸಲಕರಣೆಗೆ ಅನುದಾನ ಬಿಡುಗಡೆ ಯಾಗುತ್ತಿದೆ ಎಂದರು.

ಶೃಂಗೇರಿಯಲ್ಲಿ ಆಸ್ಪತ್ರೆ
ಶೃಂಗೇರಿಯಲ್ಲಿ ಆಸ್ಪತ್ರೆ ನಿರ್ಮಿಸಲು ತೀರ್ಮಾನಿಸಿದೆ. ಸ್ಥಳದ ಸಂಸ್ಯೆಯಿದ್ದು, ಅದನ್ನು ಬಗೆಹರಿಸಿ ಆಸ್ಪತ್ರೆ ನಿರ್ಮಿಸಲಾಗುವುದು ಎಂದರು.

andolanait

Recent Posts

ಓದುಗರ ಪತ್ರ: ನದಿ ಮಾಲಿನ್ಯ ತಡೆಗಟ್ಟಿ

ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಮೂಲಕ ಹರಿಯುವ ಲಕ್ಷ್ಮಣತೀರ್ಥ ನದಿ ಕಾವೇರಿ ನದಿಯ ಉಪನದಿಯಾಗಿದ್ದು, ಹುಣಸೂರು ಭಾಗದ ಬಹಳ ಮುಖ್ಯವಾದ…

2 hours ago

ಓದುಗರ ಪತ್ರ: ಸಚಿವ ಸೋಮಣ್ಣ ಹೇಳಿಕೆ ಸ್ವಾಗತಾರ್ಹ

ರೈಲ್ವೆ ನೇಮಕಾತಿ ಪರೀಕ್ಷೆಗಳನ್ನು ಕರ್ನಾಟಕದವರು ಇನ್ನು ಮುಂದೆ ಕನ್ನಡದಲ್ಲಿ ಬರೆಯಲು ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಹಾಗೂ ರೈಲ್ವೆ ಇಲಾಖೆ…

2 hours ago

ಓದುಗರ ಪತ್ರ: ಅಪಾಯಕಾರಿ ಮರದ ಕೊಂಬೆ ತೆರವುಗೊಳಿಸಿ

ಮೈಸೂರಿನ ಮಾನಸಗಂಗೋತ್ರಿಯಿಂದ ಶ್ರೀ ಜಯಚಾಮರಾಜೇಂದ್ರ ಇಂಜಿನಿಯರಿಂಗ್ ಕಾಲೇಜಿಗೆ (ಎಸ್‌ಜೆಸಿಇ) ಸಂಪರ್ಕ ಕಲ್ಪಿಸುವ ರಸ್ತೆಯ ಎಡ ಬದಿಯಲ್ಲಿ ಇರುವ ಮರವೊಂದರ ಕೊಂಬೆ…

2 hours ago

ಓದುಗರ ಪತ್ರ: ನವ ಭಾರತದ ನಿರ್ಮಾತೃ ಡಾ.ಅಂಬೇಡ್ಕರ್

ಶ್ರೇಷ್ಠ ಸಂವಿಧಾನದ ಮೂಲಕ ಶೋಷಿತ ಸಮುದಾಯಗಳಿಗೆ ಶಿಕ್ಷಣ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಮೀಸಲು ಸೌಲಭ್ಯ ಕಲ್ಪಿಸುವ ಮೂಲಕ ಅವರ ಬಾಳಿಗೆ…

2 hours ago

ಆಂತರಿಕ ಕ್ಲೋಭೆಯಿಂದ ಭಾರತ ರಕ್ಷಿಸಿದ ಅಂಬೇಡ್ಕರ್

ಸಿ.ಹರಕುಮಾರ್, ಬರಹಗಾರ ಬಾಬಾ ಸಾಹೇಬ್‌ರ ಧಾರ್ಮಿಕ ನಿಲುವು ಅರಿಯಲು ಬಹುತೇಕರು ವಿಫಲ ಭಾರತದ ಭಾಗ್ಯವಿಧಾತ ಮತ್ತು ಸಂವಿಧಾನ ಕರ್ತೃ ಡಾ.ಬಿ.ಆರ್.ಅಂಬೇಡ್ಕರ್…

2 hours ago

ಕೊಡಗು ಜಿಲ್ಲೆಯಲ್ಲೂ ಹೆಚ್ಚುತ್ತಿರುವ ತಾಪಮಾನ

ನವೀನ್ ಡಿಸೋಜ ಬಳಲಿಕೆಯೊಂದಿಗೆ ಆರೋಗ್ಯ ಹದಗೆಡುವ ಸಾಧ್ಯತೆ; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಸಲಹೆ  ಮಡಿಕೇರಿ: ಅಚ್ಚ ಹಸಿರಿನ ಪರಿಸರದೊಂದಿಗೆ…

2 hours ago