ಬೆಂಗಳೂರು: ಮೈಸೂರಿನಲ್ಲಿ ನಿರ್ಮಾಣವಾಗುತ್ತಿರುವ ವಿಷ್ಣುವರ್ಧನ್ ಸ್ಮಾರಕವನ್ನು ಡಿಸೆಂಬರ್ ಒಳಗೆ ಉದ್ಘಾಟಿಸಲಾಗುವುದು ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ವಿಷ್ಣುವರ್ಧನ್ ಅವರಿದ್ದ ಜಯನಗರದ ಮನೆಯ ಸ್ಥಳದಲ್ಲಿಯೇ ನೂತನವಾಗಿ ನಿರ್ಮಾಣವಾಗಿರುವ ಮನೆಯ ಗೃಹ ಪ್ರವೇಶ ಕಾರ್ಯಕ್ರಮದ ವೇಳೆ ಮಾತನಾಡಿದರು.
ಭಾರತಿಯವರು ಖುದ್ದಾಗಿ ಬಂದು ಗೃಹಪ್ರವೇಶಕ್ಕೆ ಆಹ್ವಾನ ನೀಡಿದ್ದರು. ವಿಷ್ಣುವರ್ಧನ್ ಅವರಿದ್ದ ಮನೆಯನ್ನು ಇನ್ನಷ್ಟು ಚಂದ ಮಾಡಿದ್ದಾರೆ. ನವೀಕರಣಗೊಂಡಿರುವ ವಿಷ್ಣುವರ್ಧನ್ ಅವರ ಮನೆಯ ಹಿಂದೆ ಭಾರತಿ ವಿಷ್ಣುವರ್ಧನ್ ಅವರ ಪ್ರಯತ್ನ ಹಾಗೂ ಶ್ರಮ ಎದ್ದುಕಾಣುತ್ತಿದೆ. ವಿಷ್ಣು ವರ್ಧನ್ ಅವರ ತ್ಯಾಗವನ್ನು ಅಳವಡಿಸಿದ್ದಾರೆ ಎನ್ನುವುದು ನನ್ನ ಭಾವನೆ. ಅವರುಗೆ ಶುಭ ಕೋರಲು ಬಂದಿದ್ದೇನೆ ಎಂದರು .
ಮೈಸೂರಿನಲ್ಲಿ ನಿರ್ಮಾಣ ವಾಗುತ್ತಿರುವ ವಿಷ್ಣುವರ್ಧನ್ ಅವರ ಸ್ಮಾರಕ ನಿರ್ಮಾಣ ಪೂರ್ಣ ಗೊಳ್ಳುತ್ತಾ ಬಂದಿದೆ. ಡಿಸೆಂಬರ್ ಒಳಗೆ ಸ್ಮಾರಕದ ಉದ್ಘಾಟನೆಯನ್ನು ಅದ್ದೂರಿಯಾಗಿ ಮಾಡಲು ತೀರ್ಮಾನಿಸಲಾಗಿದೆ. ಹೆಚ್ಚಿನ ವಿವರಗಳನ್ನು ಅವರ ಕುಟುಂಬದವರೊಂದಿಗೆ ಚರ್ಚಿಸಿ ನಿರ್ಧಾರಕ್ಕೆ ಬರಲಾಗುವುದು. ವಿಷ್ಣುವರ್ಧನ್ ಅವರ ಮೇರು ವ್ಯಕ್ತಿತ್ವ ಹಾಗೂ ಘನತೆಗೆ ತಕ್ಕ ಹಾಗೆ ಕಾರ್ಯಕ್ರಮವನ್ನು ವೈಭವಯುತವಾಗಿ ಆಯೋಜಿಸಲಾಗುವುದು ಎಂದರು.
ಚುಕ್ಕೆ ರೋಗ ತಡೆಗೆ ಕ್ರಮ
ಚಿಕ್ಕಮಗಳೂರಿನಲ್ಲಿ ಅಡಿಕೆಗೆ ಎಲೆ ಚುಕ್ಕಿ ರೋಗ ಬಂದಿದ್ದು, ವಿಜ್ಞಾನಿಗಳ ಸಂಶೋಧನೆ ಒಂದು ಹಂತಕ್ಕೆ ಬಂದಿದೆ. ಅದಕ್ಕೆ ಪರಿಹಾರ ನೀಡುವ ಹಾಗೂ ರೋಗ ಹರಡದಂತೆ ಅನುದಾನ ಬಿಡುಗಡೆಯಾಗಿದೆ. ಮಲೆನಾಡ ಭಾಗದಲ್ಲಿ ಆನೆ ಹಾವಳಿ ಹೆಚ್ವಿದ್ದು, ನಾಲ್ಕು ಜಿಲ್ಲೆಗಳಲ್ಲಿ ಅರಣ್ಯ ಪಡೆಗಳನ್ನು ರಚಿಸಿ, ವಾಹನ ಸಲಕರಣೆಗೆ ಅನುದಾನ ಬಿಡುಗಡೆ ಯಾಗುತ್ತಿದೆ ಎಂದರು.
ಶೃಂಗೇರಿಯಲ್ಲಿ ಆಸ್ಪತ್ರೆ
ಶೃಂಗೇರಿಯಲ್ಲಿ ಆಸ್ಪತ್ರೆ ನಿರ್ಮಿಸಲು ತೀರ್ಮಾನಿಸಿದೆ. ಸ್ಥಳದ ಸಂಸ್ಯೆಯಿದ್ದು, ಅದನ್ನು ಬಗೆಹರಿಸಿ ಆಸ್ಪತ್ರೆ ನಿರ್ಮಿಸಲಾಗುವುದು ಎಂದರು.
ಬೆಂಗಳೂರು: ಆಡಳಿತ ಮತ್ತು ಪ್ರತಿಪಕ್ಷಗಳ ಸದಸ್ಯರ ನಡುವೆ ತೀವ್ರ ಜಟಾಪಟಿಗೆ ಕಾರಣವಾಗಿರುವ ಕೋಗಿಲು ಲೇಟ್ನ ಮನೆ ತೆರವು ಪ್ರಕರಣಕ್ಕೆ ಸಂಬಂಧಿಸಿದಂತೆ…
ಬೆಂಗಳೂರು: ನನ್ನ ವಿರುದ್ಧ 17 ಕೇಸ್ ಇದೆ. ಇನ್ನೂ ಹಾಕೋಕೆ ಹೇಳಿ ಆದರೆ ದಾರಿ ತಪ್ಪಿಸಬೇಡಿ ಎಂದು ಮಾಜಿ ಸಂಸದ…
ಬೆಂಗಳೂರು: ಹೊಸ ವರ್ಷಾಚರಣೆ ವೇಳೆ ಡ್ರಿಂಕ್ಸ್ ಮಾಡಿದ ಎಲ್ಲರನ್ನೂ ಮನೆಗೆ ಕರೆದುಕೊಂಡು ಹೋಗಿ ಬಿಡಲ್ಲ ಎಂದು ಗೃಹ ಸಚಿವ ಪರಮೇಶ್ವರ್…
ಕೇರಳ: ಬೆಂಗಳೂರಿನ ಕೋಗಿಲು ಕ್ರಾಸ್ ಬಳಿಯ ಅಕ್ರಮ ಒತ್ತುವರಿ ತೆರವು ಸಂಬಂಧಪಟ್ಟಂತೆ ಅನಪೇಕ್ಷಣೀಯವಾದಂತಹ ಹೇಳಿಕೆ ನೀಡಿದ್ದ ಕೇರಳದ ಮುಖ್ಯಮಂತ್ರಿ ಪಿಣರಾಯಿ…
ಮೈಸೂರು: ಹೊಸ ವರ್ಷಾಚರಣೆ ಸಂಭ್ರಮಕ್ಕೆ ಕೌಂಟ್ಡೌನ್ ಶುರುವಾಗಿದ್ದು, ನ್ಯೂ ಇಯರ್ ಆಚರಿಸಲು ಪ್ರವಾಸಿಗರು ಮೈಸೂರಿಗೆ ಲಗ್ಗೆಯಿಟ್ಟಿದ್ದಾರೆ. ಜಗತ್ಪ್ರಸಿದ್ಧ ಮೈಸೂರು ಅರಮನೆಗೆ…
ಬಳ್ಳಾರಿ: ವಾಲ್ಮೀಕಿ ನಿಗಮ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ.ನಾಗೇಂದ್ರ ಆಪ್ತನಿಗೆ ಸಿಬಿಐ ಶಾಕ್ ನೀಡಿದ್ದು, ಬಳ್ಳಾರಿಯಲ್ಲಿ ವಿಶ್ವನಾಥ್…