ಕೊಚ್ಚಿನ್: ದೇಶದ ವಿವಿಧ ನಿರೂಪಣೆಗಳು ಜನರ ಚಿಂತನೆಯ ಮೇಲೆ ಪ್ರಭಾವ ಬೀರುತ್ತವೆ. ಅವುಗಳ ಬಗ್ಗೆ ನಾವು ಜಾಗರೂಕರಾಗಿರಬೇಕು ಎಂದು ನಟ-ನಿರ್ಮಾಪಕ ಪ್ರಕಾಶ್ ರೈ ಹೇಳಿದ್ದಾರೆ.
ಕೇರಳದ 28ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಮಾತನಾಡಿರುವ ಬಹುಭಾಷಾ ನಟ ಪ್ರಕಾಶ್ ರೈ, ದೇಶದಲ್ಲಿ ನಿರ್ಮಾಣವಾಗುತ್ತಿರುವ ನಿರೂಪಣೆಗಳ ಬಗ್ಗೆ ಜನರು ಜಾಗರೂಕರಾಗಿರಬೇಕು ಎಂದು ಒತ್ತಿ ಹೇಳಿದರು. ಶುಕ್ರವಾರ ನಡೆದ ಐಎಫ್ಎಫ್ಕೆ ಸಮಾರೋಪ ಸಮಾರಂಭದಲ್ಲಿ ಅವರು ಸಂಸತ್ತಿನ ಭದ್ರತಾ ಉಲ್ಲಂಘನೆಯ ಘಟನೆಯನ್ನು ವಿಶೇಷವಾಗಿ ಪ್ರಕಾಶ್ ರೈ ಉಲ್ಲೇಖಿಸಿದ್ದಾರೆ.
ನಿಮ್ಮ ಪ್ರೀತಿ, ನಿಮ್ಮಲ್ಲಿರುವ ನಂಬಿಕೆಗಳು ಮತ್ತು ವಿಶೇಷವಾಗಿ ದೇವರ ನಾಡಿನಲ್ಲಿ ರಾಜಕೀಯದಿಂದ ದೇವರನ್ನು ದೂರವಿಟ್ಟಿರುವುದು ಸದಾ ಖುಷಿಯ ಸಂಗತಿ. ಈ ನಿರೂಪಣೆಗಳ ಬಗ್ಗೆ ನಾವು ಜಾಗರೂಕರಾಗಿರಬೇಕು. ಉದಾಹರಣೆಗೆ, ಹಿಂದಿನ ದಿನ ಸಂಸತ್ತಿನ ಮೇಲೆ ನಡೆದ ದಾಳಿ. ಪ್ರತಿಭಟಿಸಲು ಬಯಸಿದ 6 ಜನರ ಸುತ್ತ ನಿರೂಪಣೆಗಳನ್ನು ನಾವು ನೋಡುತ್ತಿದ್ದೇವೆ. ಜೋಕರ್ಗಳಂತೆ ಜಗಳವಾಡುವ ಪತ್ರಕರ್ತರ ಗುಂಪೇ ನಮ್ಮಲ್ಲಿದೆ.
ಆಡಳಿತ ಪಕ್ಷವನ್ನು ದೂಷಿಸುವ ವಿರೋಧ ಪಕ್ಷ ನಮ್ಮಲ್ಲಿದೆ. ವಿರೋಧ ಪಕ್ಷದ ಜೊತೆ ಆರೋಪಿಗಳ ಭಾವಚಿತ್ರವಿದೆ ಎಂದು ಆಡಳಿತ ಪಕ್ಷದವರು ಹೇಳುತ್ತಿದ್ದಾರೆ. ಸಂಸತ್ತಿನ ಭದ್ರತೆ ಏನು ಎಂಬುದರ ಕುರಿತು ಇನ್ನೊಂದು ನಿರೂಪಣೆ. ಈ ಯುವಕರು ಇದನ್ನು ಮಾಡಲು ಕಾರಣವೇನು ಎಂಬುದರ ಕುರಿತು ಚರ್ಚಿಸುವ ಮತ್ತು ಸಂವಾದ ನಡೆಸುವ ನಿರೂಪಣೆಯೂ ಇರುತ್ತದೆ ಎಂದು ನಟ ಪ್ರಕಾಶ್ ರೈ ಹೇಳಿದ್ದಾರೆ.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…