ಚಿತ್ರ ಮಂಜರಿ

ನಿರ್ಮಾಪಕನ ಜೊತೆಗೆ, ನಟನೆಗೂ ಸೈ ಎನ್ನಲು ಮುಂದಾದ್ರ ದೋನಿ

ಟೀಂ ಇಂಡಿಯಾ ಮಾಜಿ ಕ್ಯಾಪ್ಟನ್, ಚೆನ್ನೈ ಸೂಪರ್ ಕಿಂಗ್ಸ್​​ನ ಹಾಲಿ ಕ್ಯಾಪ್ಟನ್ ಎಂ.ಎಸ್​. ಧೋನಿಸದ್ಯ ಸುದ್ದಿಯಲ್ಲಿದ್ದಾರೆ. ಚಿತ್ರರಂಗದ ಜತೆ ಅವರು ನಂಟು ಬೆಳೆಸಿಕೊಳ್ಳುತ್ತಿದ್ದಾರೆ. ‘ಧೋನಿ ಎಂಟರ್​ಟೇನ್​ಮೆಂಟ್​’ ಹೆಸರಿನ ನಿರ್ಮಾಣಸಂಸ್ಥೆ ಆರಂಭಿಸಿ ಸಿನಿಮಾ ನಿರ್ಮಾಣಕ್ಕೆ ಅವರು ಮುಂದಾಗುತ್ತಿದ್ದಾರೆ. ಹೀಗಿರುವಾಗಲೇ ಹೊಸ ಅಪ್​ಡೇಟ್​ ಒಂದು ಸಿಕ್ಕಿದೆ. ಕೂಲ್ ಕ್ಯಾಪ್ಟನ್ ಈಗ ನಟನೆಯಲ್ಲೂ ತೊಡಗಿಕೊಳ್ಳಲಿದ್ದಾರೆ ಎಂದು ವರದಿ ಆಗಿದೆ. ಖ್ಯಾತ ನಿರ್ದೇಶಕನ ಜತೆ ಅವರು ಕೈ ಜೋಡಿಸುತ್ತಿದ್ದಾರೆ ಎನ್ನುತ್ತಿವೆ ಮೂಲಗಳು.

ಚಿತ್ರರಂಗಕ್ಕೂ ಕ್ರಿಕೆಟ್ ಲೋಕಕ್ಕೂ ಉತ್ತಮ ನಂಟಿದೆ. ಟೀಂ ಇಂಡಿಯಾ ಮಾಜಿ ಬೌಲರ್ ಶ್ರೀಶಾಂತ್, ಇರ್ಫಾನ್ ಪಠಾಣ್ ಸೇರಿ ಅನೇಕರು ದೊಡ್ಡ ಪರದೆಯಲ್ಲಿ ಕಾಣಿಸಿಕೊಂಡಿದ್ದಾರೆ. ಈಗ ಧೊನಿಯ ಸರದಿ. ‘ವಿಕ್ರಮ್​’ ಅಂತಹ ಸೂಪರ್ ಹಿಟ್ ಚಿತ್ರ ನೀಡಿದ ಲೋಕೇಶ್ ಕನಗರಾಜ್ ಮುಂದಿನ ಪ್ರಾಜೆಕ್ಟ್​ನಲ್ಲಿ ಧೋನಿ ನಟಿಸುತ್ತಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಇನ್ನಷ್ಟೇ ಅಧಿಕೃತ ಮಾಹಿತಿ ಸಿಗಬೇಕಿದೆ.

ಲೋಕೇಶ್ ಅವರು ತಮ್ಮ ಮುಂದಿನ ಪ್ರಾಜೆಕ್ಟ್​ ಮೇಲೆ ಗಮನ ಹರಿಸುತ್ತಿದ್ದಾರೆ. ಈ ಚಿತ್ರದಲ್ಲಿ ಧೋನಿಗೆ ಒಂದು ಪ್ರಮುಖ ಪಾತ್ರ ನೀಡಬೇಕು ಎನ್ನುವ ಆಲೋಚನೆಯಲ್ಲಿ ಲೋಕೇಶ್ ಇದ್ದಾರೆ. ಈ ವಿಚಾರ ಕೇಳಿ ಫ್ಯಾನ್ಸ್ ಸಖತ್ ಥ್ರಿಲ್ ಆಗಿದ್ದಾರೆ.

ಲೋಕೇಶ್ ಕನಗರಾಜ್ ಹಾಗೂ ದಳಪತಿ ವಿಜಯ್ ಅವರು ಒಂದಾಗುತ್ತಿದ್ದಾರೆ. ಈ ಚಿತ್ರಕ್ಕೆ ತಾತ್ಕಾಲಿಕವಾಗಿ ‘ದಳಪತಿ 67’ ಎಂದು ನಾಮಕರಣ ಮಾಡಲಾಗಿದೆ. ಈ ಚಿತ್ರದಲ್ಲಿ ಧೋನಿ ನಟಿಸುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ. ಧೋನಿ ಅವರು ಐಪಿಎಲ್​ನಲ್ಲಿ ‘ಚೆನ್ನೈ ಸೂಪರ್ ಕಿಂಗ್ಸ್’ ತಂಡವನ್ನು ಮುನ್ನಡೆಸುತ್ತಿದ್ದಾರೆ. ಈ ಕಾರಣಕ್ಕೆ ತಮಿಳುನಾಡಿನಲ್ಲಿ ಅವರಿಗೆ ಸಾಕಷ್ಟು ಅಭಿಮಾನಿಗಳು ಇದ್ದಾರೆ. ಹೀಗಾಗಿ, ಅವರು ತಮಿಳು ಚಿತ್ರರಂಗದತ್ತ ಹೆಚ್ಚು ವಾಲುತ್ತಿದ್ದಾರೆ.

ಧೋನಿ ನಿರ್ಮಾಣ ಮಾಡುವ ಮೊದಲ ಸಿನಿಮಾಗೆ ರಮೇಶ್ ತಮಿಳ್​ಮಣಿ ಅವರು ನಿರ್ದೇಶನ ಮಾಡಲಿದ್ದಾರೆ. ಅವರು ಈ ಮೊದಲು ‘ಅಥರ್ವ-ದಿ ಒರ್ಜಿನ್’ ಹೆಸರಿನ ಗ್ರಾಫಿಕ್ ನಾವೆಲ್ ಅನ್ನು ಬರೆದಿದ್ದಾರೆ. ಈ ಚಿತ್ರದಲ್ಲಿ ಯಾರೆಲ್ಲ ನಟಿಸಲಿದ್ದಾರೆ ಎಂಬ ಬಗ್ಗೆ ಇನ್ನಷ್ಟೇ ಅಧಿಕೃತ ಘೋಷಣೆ ಆಗಬೇಕಿದೆ.

andolana

Recent Posts

ಹುಣಸೂರು| ರಸ್ತೆ ಮಣ್ಣಿನ ವಿಚಾರಕ್ಕೆ ಗಲಾಟೆ: ಮೂವರಿಗೆ ಗಾಯ

ಹುಣಸೂರು: ರಸ್ತೆ ಮಣ್ಣಿನ ವಿಚಾರಕ್ಕೆ ಗಲಾಟೆ ನಡೆದ ಪರಿಣಾಮ ಮೂವರಿಗೆ ಗಾಯಗಳಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರಿನ…

3 hours ago

ಹುಣಸೂರು: ಪಾಳು ಬಾವಿಗೆ ಬಿದ್ದಿದ್ದ ಕಾಡು ಹಂದಿ ರಕ್ಷಣೆ

ಹುಣಸೂರು: ಪಾಳು ಬಾವಿಗೆ ಬಿದ್ದಿದ್ದ ಕಾಡುಹಂದಿಯನ್ನು ರಕ್ಷಣೆ ಮಾಡುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಹುಣಸೂರು ತಾಲ್ಲೂಕಿನ ಹನಗೋಡು ಗ್ರಾಮದಲ್ಲಿ…

3 hours ago

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆ ಏರಿಕೆ

ನವದೆಹಲಿ: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಭಾರೀ ಏರಿಕೆಯಾಗಿದ್ದು, ಮೇ.1ರಿಂದ ಜಾರಿಗೆ ಬರುವಂತೆ 993ರೂ ಹೆಚ್ಚಳ ಮಾಡಲಾಗಿದೆ. ಬೆಂಗಳೂರಿನಲ್ಲಿ 991…

3 hours ago

ಪತ್ನಿ ಕೊಲೆಗೈದಿದ್ದ ಪತಿಗೆ ಜೀವಾವಧಿ ಶಿಕ್ಷೆ

ಮಂಡ್ಯ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ತೀರ್ಪು ಮಂಡ್ಯ:ಪತ್ನಿಯನ್ನು ಕೊಲೆಗೈದಿದ್ದ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಪತಿಗೆ ೨ನೇ ಅಪರ ಜಿಲ್ಲಾ…

5 hours ago

ಓದುಗರ ಪತ್ರ: ಜಾಗೃತಿ

ಜಾಗೃತಿ ಉಳುಮೆಗೆ ಮಳೆಯಿಲ್ಲದೆ ಕುಲುಮೆಯಾಗಿದೆ ಇಳೆ ಹೆಚ್ಚಿದ ತಾಪಮಾನ ಬದಲಾವಣೆಯ ಹವಾಮಾನಕೆ ದೇಹದ ಆಂತರಿಕ ತಂಪು ವಿಫಲ ಅದಕೆ ಹೆಚ್ಚುತ್ತಿದೆ…

6 hours ago

ಓದುಗರ ಪತ್ರ: ಅಶ್ಲೀಲ ಹಾಡು ನಿಷೇಧ ಸ್ವಾಗತಾರ್ಹ

ಶಾಲಾ ಕಾರ್ಯಕ್ರಮಗಳಲ್ಲಿ ಅಶ್ಲೀಲ ಹಾಡುಗಳಿಗೆ ಶಿಕ್ಷಣ ಇಲಾಖೆ ನಿಷೇಧ ಹೇರಿರುವುದು ಸ್ವಾಗತಾರ್ಹ. ಇಂದಿನ ಶೇ.೮೦ರಷ್ಟು ಸಿನಿಮಾ ಹಾಡುಗಳು ದ್ವಂದ್ವಾರ್ಥ ಹಾಗೂ…

6 hours ago