ಟೀಂ ಇಂಡಿಯಾ ಮಾಜಿ ಕ್ಯಾಪ್ಟನ್, ಚೆನ್ನೈ ಸೂಪರ್ ಕಿಂಗ್ಸ್ನ ಹಾಲಿ ಕ್ಯಾಪ್ಟನ್ ಎಂ.ಎಸ್. ಧೋನಿಸದ್ಯ ಸುದ್ದಿಯಲ್ಲಿದ್ದಾರೆ. ಚಿತ್ರರಂಗದ ಜತೆ ಅವರು ನಂಟು ಬೆಳೆಸಿಕೊಳ್ಳುತ್ತಿದ್ದಾರೆ. ‘ಧೋನಿ ಎಂಟರ್ಟೇನ್ಮೆಂಟ್’ ಹೆಸರಿನ ನಿರ್ಮಾಣಸಂಸ್ಥೆ ಆರಂಭಿಸಿ ಸಿನಿಮಾ ನಿರ್ಮಾಣಕ್ಕೆ ಅವರು ಮುಂದಾಗುತ್ತಿದ್ದಾರೆ. ಹೀಗಿರುವಾಗಲೇ ಹೊಸ ಅಪ್ಡೇಟ್ ಒಂದು ಸಿಕ್ಕಿದೆ. ಕೂಲ್ ಕ್ಯಾಪ್ಟನ್ ಈಗ ನಟನೆಯಲ್ಲೂ ತೊಡಗಿಕೊಳ್ಳಲಿದ್ದಾರೆ ಎಂದು ವರದಿ ಆಗಿದೆ. ಖ್ಯಾತ ನಿರ್ದೇಶಕನ ಜತೆ ಅವರು ಕೈ ಜೋಡಿಸುತ್ತಿದ್ದಾರೆ ಎನ್ನುತ್ತಿವೆ ಮೂಲಗಳು.
ಚಿತ್ರರಂಗಕ್ಕೂ ಕ್ರಿಕೆಟ್ ಲೋಕಕ್ಕೂ ಉತ್ತಮ ನಂಟಿದೆ. ಟೀಂ ಇಂಡಿಯಾ ಮಾಜಿ ಬೌಲರ್ ಶ್ರೀಶಾಂತ್, ಇರ್ಫಾನ್ ಪಠಾಣ್ ಸೇರಿ ಅನೇಕರು ದೊಡ್ಡ ಪರದೆಯಲ್ಲಿ ಕಾಣಿಸಿಕೊಂಡಿದ್ದಾರೆ. ಈಗ ಧೊನಿಯ ಸರದಿ. ‘ವಿಕ್ರಮ್’ ಅಂತಹ ಸೂಪರ್ ಹಿಟ್ ಚಿತ್ರ ನೀಡಿದ ಲೋಕೇಶ್ ಕನಗರಾಜ್ ಮುಂದಿನ ಪ್ರಾಜೆಕ್ಟ್ನಲ್ಲಿ ಧೋನಿ ನಟಿಸುತ್ತಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಇನ್ನಷ್ಟೇ ಅಧಿಕೃತ ಮಾಹಿತಿ ಸಿಗಬೇಕಿದೆ.
ಲೋಕೇಶ್ ಅವರು ತಮ್ಮ ಮುಂದಿನ ಪ್ರಾಜೆಕ್ಟ್ ಮೇಲೆ ಗಮನ ಹರಿಸುತ್ತಿದ್ದಾರೆ. ಈ ಚಿತ್ರದಲ್ಲಿ ಧೋನಿಗೆ ಒಂದು ಪ್ರಮುಖ ಪಾತ್ರ ನೀಡಬೇಕು ಎನ್ನುವ ಆಲೋಚನೆಯಲ್ಲಿ ಲೋಕೇಶ್ ಇದ್ದಾರೆ. ಈ ವಿಚಾರ ಕೇಳಿ ಫ್ಯಾನ್ಸ್ ಸಖತ್ ಥ್ರಿಲ್ ಆಗಿದ್ದಾರೆ.
ಲೋಕೇಶ್ ಕನಗರಾಜ್ ಹಾಗೂ ದಳಪತಿ ವಿಜಯ್ ಅವರು ಒಂದಾಗುತ್ತಿದ್ದಾರೆ. ಈ ಚಿತ್ರಕ್ಕೆ ತಾತ್ಕಾಲಿಕವಾಗಿ ‘ದಳಪತಿ 67’ ಎಂದು ನಾಮಕರಣ ಮಾಡಲಾಗಿದೆ. ಈ ಚಿತ್ರದಲ್ಲಿ ಧೋನಿ ನಟಿಸುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ. ಧೋನಿ ಅವರು ಐಪಿಎಲ್ನಲ್ಲಿ ‘ಚೆನ್ನೈ ಸೂಪರ್ ಕಿಂಗ್ಸ್’ ತಂಡವನ್ನು ಮುನ್ನಡೆಸುತ್ತಿದ್ದಾರೆ. ಈ ಕಾರಣಕ್ಕೆ ತಮಿಳುನಾಡಿನಲ್ಲಿ ಅವರಿಗೆ ಸಾಕಷ್ಟು ಅಭಿಮಾನಿಗಳು ಇದ್ದಾರೆ. ಹೀಗಾಗಿ, ಅವರು ತಮಿಳು ಚಿತ್ರರಂಗದತ್ತ ಹೆಚ್ಚು ವಾಲುತ್ತಿದ್ದಾರೆ.
ಧೋನಿ ನಿರ್ಮಾಣ ಮಾಡುವ ಮೊದಲ ಸಿನಿಮಾಗೆ ರಮೇಶ್ ತಮಿಳ್ಮಣಿ ಅವರು ನಿರ್ದೇಶನ ಮಾಡಲಿದ್ದಾರೆ. ಅವರು ಈ ಮೊದಲು ‘ಅಥರ್ವ-ದಿ ಒರ್ಜಿನ್’ ಹೆಸರಿನ ಗ್ರಾಫಿಕ್ ನಾವೆಲ್ ಅನ್ನು ಬರೆದಿದ್ದಾರೆ. ಈ ಚಿತ್ರದಲ್ಲಿ ಯಾರೆಲ್ಲ ನಟಿಸಲಿದ್ದಾರೆ ಎಂಬ ಬಗ್ಗೆ ಇನ್ನಷ್ಟೇ ಅಧಿಕೃತ ಘೋಷಣೆ ಆಗಬೇಕಿದೆ.
ಗುಂಡ್ಲುಪೇಟೆ : ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಫಾರಿ ಪುನರಾರಂಭಿಸುವ ಸರ್ಕಾರದ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿ, ಕರ್ನಾಟಕ ರಾಜ್ಯ…
ಹೊಸದಿಲ್ಲಿ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ವಿವಿಧ ದೇಶಗಳ ಮೇಲೆ ಹೇರಿರುವ ಹೆಚ್ಚುವರಿ ಸಾಮೂಹಿಕ ಸುಂಕಗಳನ್ನು ಅಮೆರಿಕ…
ಹನೂರು : ಮುಂದಿನ ದಿನಗಳಲ್ಲಿ ತಮಿಳುನಾಡು ವಿಧಾನಸಭೆ ಚುನಾವಣೆ ನಡೆಯಲಿದ್ದು ಯಶಸ್ವಿಯಾಗಿ ನಡೆಸಲು ಕರ್ನಾಟಕ ಪೊಲೀಸರು ಹಾಗೂ ಅಬಕಾರಿ ಇಲಾಖೆ…
ಕೆ.ಆರ್.ಪೇಟೆ : ಪಟ್ಟಣದ ಪಿ.ಎಲ್.ಡಿ ಬ್ಯಾಂಕ್ ಮುಂಭಾಗದಲ್ಲಿ ಶಫಿಉಲ್ಲಾ ಅವರು ನಡೆಸುತ್ತಿದ್ದ ಮೊಬೈಲ್ ಹಾಗೂ ಎಲೆಕ್ಟ್ರಾನಿಕ್ಸ್ ಅಂಗಡಿಯು ವಿದ್ಯುತ್ ಶಾರ್ಟ್…
ಬೆಂಗಳೂರು : ಬೆಂಗಳೂರು ನಗರ ಮಾತ್ರವಲ್ಲದೆ ಇಡೀ ಕರ್ನಾಟಕ ಎಲೆಕ್ಟ್ರಿಕ್ ವಾಹನ ಉದ್ಯಮದ ಹಬ್ ಆಗಿ ಅಭಿವೃದ್ಧಿ ಹೊಂದುತ್ತಿದ್ದು, ಅದಕ್ಕೆ…
ಸುಪ್ರೀಂ ತೀರ್ಪಿಗೆ ಆಕ್ರೋಶ ವ್ಯಕ್ತಪಡಿಸಿದ ಅಮೆರಿಕ ಅಧ್ಯಕ್ಷ ವಾಷಿಂಗ್ಟನ್ : ವಿವಿಧ ದೇಶಗಳ ಸರಕುಗಳ ಮೇಲೆ ವಿಧಿಸಿದ್ದ ಭಾರಿ ಸುಂಕಗಳನ್ನು…