ಚಿತ್ರ ಮಂಜರಿ

ಬಿಗ್ ಬಾಸ್ ನನ್ನ ಎರಡನೇ ಮನೆ : ಕಿಚ್ಚ ಸುದೀಪ್

ಬಹುಭಾಷಾ ಚಿತ್ರ ಮ್ಯಾಕ್ಸ್ ಚಿತ್ರೀಕರಣದಲ್ಲಿ ನಿರತರಾಗಿರುವ ನಟ ಕಿಚ್ಚ ಸುದೀಪ್ ಅವರು ಬಿಗ್ ಬಾಸ್ ಕನ್ನಡದ 10ನೇ ಸೀಸನ್‌ನ ನಿರೂಪಕರಾಗಲು ಸಿದ್ಧರಾಗಿದ್ದಾರೆ ಮತ್ತು ಇದು ಅವರ ಕಿರುತೆರೆ ವೃತ್ತಿಜೀವನದ ಮಹತ್ವದ ಮೈಲಿಗಲ್ಲು.

ಅಕ್ಟೋಬರ್ 8 ರಿಂದ ಪ್ರಾರಂಭವಾಗುವ ಈ ಸೀಸನ್ ಹ್ಯಾಪಿ ಬಿಗ್ ಬಾಸ್ ಎಂಬ ಆಕರ್ಷಕ ಥೀಮ್ ಅನ್ನು ಹೊಂದಿದೆ.

ತಮ್ಮ ಬಿಗ್ ಬಾಸ್ ಪಯಣದ ಬಗ್ಗೆ ಮತನಾಡಿರುವ ನಟ ಸುದೀಪ್ ಅವರು, ನಾನು ಬಿಗ್ ಬಾಸ್ ಕನ್ನಡ ಸೀಸನ್ 1ರಿಂದ ನನ್ನ ಪ್ರಯಾಣ ಆರಂಭವಾಯಿತು ಮತ್ತು ಈಗ, ಇದು ಅದ್ಭುತ ದಶಕದ ಸಂಭ್ರಮದಲ್ಲಿದೆ. ಈ ಪ್ರದರ್ಶನವು ನನಗೆ ಕೇವಲ ಒಂದು ಸೈಡ್ ಪ್ರಾಜೆಕ್ಟ್‌ ಅಲ್ಲ. ಇದು ನನ್ನ ಎರಡನೇ ಮನೆ ಹೊಸ ವ್ಯಕ್ತಿಗಳನ್ನು ಭೇಟಿಯಾಗುವುದು ಮತ್ತು ಮನೆಯಲ್ಲಿ ಅವರ ವೈವಿಧ್ಯಮಯ ಪಾತ್ರಗಳನ್ನು ನೋಡುವುದು ನಿಜಕ್ಕೂ ಸಂತೋಷವಾಗುತ್ತದೆ. ಬಿಗ್ ಬಾಸ್ ಮನೆಯು ಎಂದೆಂದಿಗೂ ಅದ್ದೂರಿಯಾಗಿ, ವಿಶಿಷ್ಟವಾದ ಥೀಮ್ ಮತ್ತು ಅತ್ಯಾಕರ್ಷಕ ಸರ್ಪ್ರೈಸಸ್ ಗಳನ್ನು ಹೊಂದಿರುತ್ತದೆ. ಈ ಸೀಸನ್ ಇನ್ನೂ ಹೆಚ್ಚಿನ ಮನರಂಜನೆ ನೀಡಲಿದೆ ಎಂಬ ಭರವಸೆ ಇದೆ ಎಂದಿದ್ದಾರೆ.

ಬಿಗ್ ಬಾಸ್ ಕನ್ನಡದ ಹೊಸ ಸೀಸನ್ ವಿವಿಧ ಹಿನ್ನೆಲೆಯ 16 ವೈವಿಧ್ಯಮಯ ಸ್ಪರ್ಧಿಗಳನ್ನು ಸ್ವಾಗತಿಸುತ್ತಿದೆ. ಈ ಬಾರಿ ರಕ್ಷಿತ್ ಶೆಟ್ಟಿ ಅವರ 777 ಚಾರ್ಲಿ ಚಿತ್ರದ ಖ್ಯಾತಿಯ ಚಾರ್ಲಿ ನಾಯಿಯು ಬಿಗ್ ಬಾಸ್ ಮನೆ ಸೇರುತ್ತಿದ್ದು, ಹೆಚ್ಚು ಕುತೂಹಲ ಮೂಡಿಸಿದೆ.

ಸಾಕುಪ್ರಾಣಿಗಳ ಭಾಗವಹಿಸುವಿಕೆಗಾಗಿ ಪ್ರಾಣಿ ಮಂಡಳಿಯಿಂದ ಎಲ್ಲಾ ಅಗತ್ಯ ಅನುಮತಿಗಳೊಂದಿಗೆ ಚಾರ್ಲಿ ಬಿಗ್ ಬಾಸ್ ಮನೆಯಲ್ಲಿ ಸ್ಪರ್ಧಿಯಾಗಿ ಭಾಗವಹಿಸುತ್ತಿದೆ.

lokesh

Recent Posts

ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಟ್ಯಾಂಕರ್ ಮೇಲೆ ದಾಳಿ

ನವದೆಹಲಿ : ಇರಾನ್-ಅಮೆರಿಕ ಉದ್ವಿಗ್ನತೆಯ ನಡುವೆ ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಸೂಪರ್ ಟ್ಯಾಂಕರ್ ಮೇಲೆ ಇರಾನಿಯನ್ ಗನ್‌ಬೋಟ್‌ಗಳಿಂದ…

7 hours ago

ಮತ್ತೆ ಹೊರ್ಮುಜ್‌ ಬಂದ್‌ ಮಾಡಿದ ಇರಾನ್‌

ಟೆಹ್ರಾನ್ : ಅಮೆರಿಕ ಜೊತೆಗಿನ ಮಾತುಕತೆ ಭಾಗವಾಗಿ ಹೊರ್ಮುಜ್‌ ಜಲಸಂಧಿಯಲ್ಲಿ ಮುಕ್ತ ಸಂಚಾರಕ್ಕೆ ಅವಕಾಶ ಕಲ್ಪಿಸಿದ್ದ ಇರಾನ್‌, ತನ್ನ ನಿರ್ಧಾರವನ್ನು…

8 hours ago

ಚಿರತೆಯಿಂದ ಅತ್ತೆ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ : ಸಚಿವೆ ಹೆಬ್ಬಾಳ್ಕರ್‌ ಭರವಸೆ

ಬೆಂಗಳೂರು : ಮೈಸೂರಿನ ಸಿದ್ಧಾರ್ಥನಗರದ ಮನೆಯೊಂದರಲ್ಲಿ ಚಿರತೆ ಮಂಚದಡಿ ಅಡಗಿದ್ದ ವೇಳೆ ಪ್ರಾಣದ ಹಂಗು ತೊರೆದು ವೃದ್ಧ ಅತ್ತೆಯನ್ನು ಸುರಕ್ಷಿತವಾಗಿ…

9 hours ago

ದಕ್ಷಿಣ ಆಫ್ರಿಕಾದಿಂದ ಬನ್ನೇರುಘಟ್ಟ ಮೃಗಾಲಯಕ್ಕೆ ಬಂದ ನಾಲ್ಕು ಚೀತಾ

ಬೆಂಗಳೂರು : ಬನ್ನೇರುಘಟ್ಟ ಮೃಗಾಲಯಕ್ಕೆ ದಕ್ಷಿಣ ಆಫ್ರಿಕಾದಿಂದ ತರಿಸಿಕೊಂಡ 4 ಶಿವಂಗಿ (ಚೀತಾ)ಗಳನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ…

9 hours ago

ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧಿಸಲ್ಲ: ಗೃಹ ಸಚಿವ ಪರಮೇಶ್ವರ್

ಬೆಂಗಳೂರು- ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧ ಇಲ್ಲ. ಕೇಂದ್ರ ಸರ್ಕಾರ ಲೋಕಸಭೆಯ ಸ್ಥಾನಗಳ ಸಂಖ್ಯೆ ಹೆಚ್ಚಿಸುವುದನ್ನು ಮಹಿಳಾ ಮೀಸಲಾತಿಯೊಂದಿಗೆ…

11 hours ago

ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ರಾಬರ್ಟ್‌ ವಾದ್ರಾ

ಉಡುಪಿ: ಶ್ರೀಕೃಷ್ಣ ಮಂದಿರಕ್ಕೆ ಸಂಸದೆ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್‌ ವಾದ್ರಾ ಭೇಟಿ ನೀಡಿದರು. ಅವರ ಜನ್ಮದಿನದ ಪ್ರಯುಕ್ತ ಕೆಲವು…

13 hours ago