ಚಿತ್ರ ಮಂಜರಿ

ಬಿಗ್ ಬಾಸ್ ನನ್ನ ಎರಡನೇ ಮನೆ : ಕಿಚ್ಚ ಸುದೀಪ್

ಬಹುಭಾಷಾ ಚಿತ್ರ ಮ್ಯಾಕ್ಸ್ ಚಿತ್ರೀಕರಣದಲ್ಲಿ ನಿರತರಾಗಿರುವ ನಟ ಕಿಚ್ಚ ಸುದೀಪ್ ಅವರು ಬಿಗ್ ಬಾಸ್ ಕನ್ನಡದ 10ನೇ ಸೀಸನ್‌ನ ನಿರೂಪಕರಾಗಲು ಸಿದ್ಧರಾಗಿದ್ದಾರೆ ಮತ್ತು ಇದು ಅವರ ಕಿರುತೆರೆ ವೃತ್ತಿಜೀವನದ ಮಹತ್ವದ ಮೈಲಿಗಲ್ಲು.

ಅಕ್ಟೋಬರ್ 8 ರಿಂದ ಪ್ರಾರಂಭವಾಗುವ ಈ ಸೀಸನ್ ಹ್ಯಾಪಿ ಬಿಗ್ ಬಾಸ್ ಎಂಬ ಆಕರ್ಷಕ ಥೀಮ್ ಅನ್ನು ಹೊಂದಿದೆ.

ತಮ್ಮ ಬಿಗ್ ಬಾಸ್ ಪಯಣದ ಬಗ್ಗೆ ಮತನಾಡಿರುವ ನಟ ಸುದೀಪ್ ಅವರು, ನಾನು ಬಿಗ್ ಬಾಸ್ ಕನ್ನಡ ಸೀಸನ್ 1ರಿಂದ ನನ್ನ ಪ್ರಯಾಣ ಆರಂಭವಾಯಿತು ಮತ್ತು ಈಗ, ಇದು ಅದ್ಭುತ ದಶಕದ ಸಂಭ್ರಮದಲ್ಲಿದೆ. ಈ ಪ್ರದರ್ಶನವು ನನಗೆ ಕೇವಲ ಒಂದು ಸೈಡ್ ಪ್ರಾಜೆಕ್ಟ್‌ ಅಲ್ಲ. ಇದು ನನ್ನ ಎರಡನೇ ಮನೆ ಹೊಸ ವ್ಯಕ್ತಿಗಳನ್ನು ಭೇಟಿಯಾಗುವುದು ಮತ್ತು ಮನೆಯಲ್ಲಿ ಅವರ ವೈವಿಧ್ಯಮಯ ಪಾತ್ರಗಳನ್ನು ನೋಡುವುದು ನಿಜಕ್ಕೂ ಸಂತೋಷವಾಗುತ್ತದೆ. ಬಿಗ್ ಬಾಸ್ ಮನೆಯು ಎಂದೆಂದಿಗೂ ಅದ್ದೂರಿಯಾಗಿ, ವಿಶಿಷ್ಟವಾದ ಥೀಮ್ ಮತ್ತು ಅತ್ಯಾಕರ್ಷಕ ಸರ್ಪ್ರೈಸಸ್ ಗಳನ್ನು ಹೊಂದಿರುತ್ತದೆ. ಈ ಸೀಸನ್ ಇನ್ನೂ ಹೆಚ್ಚಿನ ಮನರಂಜನೆ ನೀಡಲಿದೆ ಎಂಬ ಭರವಸೆ ಇದೆ ಎಂದಿದ್ದಾರೆ.

ಬಿಗ್ ಬಾಸ್ ಕನ್ನಡದ ಹೊಸ ಸೀಸನ್ ವಿವಿಧ ಹಿನ್ನೆಲೆಯ 16 ವೈವಿಧ್ಯಮಯ ಸ್ಪರ್ಧಿಗಳನ್ನು ಸ್ವಾಗತಿಸುತ್ತಿದೆ. ಈ ಬಾರಿ ರಕ್ಷಿತ್ ಶೆಟ್ಟಿ ಅವರ 777 ಚಾರ್ಲಿ ಚಿತ್ರದ ಖ್ಯಾತಿಯ ಚಾರ್ಲಿ ನಾಯಿಯು ಬಿಗ್ ಬಾಸ್ ಮನೆ ಸೇರುತ್ತಿದ್ದು, ಹೆಚ್ಚು ಕುತೂಹಲ ಮೂಡಿಸಿದೆ.

ಸಾಕುಪ್ರಾಣಿಗಳ ಭಾಗವಹಿಸುವಿಕೆಗಾಗಿ ಪ್ರಾಣಿ ಮಂಡಳಿಯಿಂದ ಎಲ್ಲಾ ಅಗತ್ಯ ಅನುಮತಿಗಳೊಂದಿಗೆ ಚಾರ್ಲಿ ಬಿಗ್ ಬಾಸ್ ಮನೆಯಲ್ಲಿ ಸ್ಪರ್ಧಿಯಾಗಿ ಭಾಗವಹಿಸುತ್ತಿದೆ.

lokesh

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

4 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

6 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

7 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

9 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

10 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

10 hours ago