ಚಿತ್ರ ಮಂಜರಿ

ಬಿಗ್ ಬಾಸ್ ನನ್ನ ಎರಡನೇ ಮನೆ : ಕಿಚ್ಚ ಸುದೀಪ್

ಬಹುಭಾಷಾ ಚಿತ್ರ ಮ್ಯಾಕ್ಸ್ ಚಿತ್ರೀಕರಣದಲ್ಲಿ ನಿರತರಾಗಿರುವ ನಟ ಕಿಚ್ಚ ಸುದೀಪ್ ಅವರು ಬಿಗ್ ಬಾಸ್ ಕನ್ನಡದ 10ನೇ ಸೀಸನ್‌ನ ನಿರೂಪಕರಾಗಲು ಸಿದ್ಧರಾಗಿದ್ದಾರೆ ಮತ್ತು ಇದು ಅವರ ಕಿರುತೆರೆ ವೃತ್ತಿಜೀವನದ ಮಹತ್ವದ ಮೈಲಿಗಲ್ಲು.

ಅಕ್ಟೋಬರ್ 8 ರಿಂದ ಪ್ರಾರಂಭವಾಗುವ ಈ ಸೀಸನ್ ಹ್ಯಾಪಿ ಬಿಗ್ ಬಾಸ್ ಎಂಬ ಆಕರ್ಷಕ ಥೀಮ್ ಅನ್ನು ಹೊಂದಿದೆ.

ತಮ್ಮ ಬಿಗ್ ಬಾಸ್ ಪಯಣದ ಬಗ್ಗೆ ಮತನಾಡಿರುವ ನಟ ಸುದೀಪ್ ಅವರು, ನಾನು ಬಿಗ್ ಬಾಸ್ ಕನ್ನಡ ಸೀಸನ್ 1ರಿಂದ ನನ್ನ ಪ್ರಯಾಣ ಆರಂಭವಾಯಿತು ಮತ್ತು ಈಗ, ಇದು ಅದ್ಭುತ ದಶಕದ ಸಂಭ್ರಮದಲ್ಲಿದೆ. ಈ ಪ್ರದರ್ಶನವು ನನಗೆ ಕೇವಲ ಒಂದು ಸೈಡ್ ಪ್ರಾಜೆಕ್ಟ್‌ ಅಲ್ಲ. ಇದು ನನ್ನ ಎರಡನೇ ಮನೆ ಹೊಸ ವ್ಯಕ್ತಿಗಳನ್ನು ಭೇಟಿಯಾಗುವುದು ಮತ್ತು ಮನೆಯಲ್ಲಿ ಅವರ ವೈವಿಧ್ಯಮಯ ಪಾತ್ರಗಳನ್ನು ನೋಡುವುದು ನಿಜಕ್ಕೂ ಸಂತೋಷವಾಗುತ್ತದೆ. ಬಿಗ್ ಬಾಸ್ ಮನೆಯು ಎಂದೆಂದಿಗೂ ಅದ್ದೂರಿಯಾಗಿ, ವಿಶಿಷ್ಟವಾದ ಥೀಮ್ ಮತ್ತು ಅತ್ಯಾಕರ್ಷಕ ಸರ್ಪ್ರೈಸಸ್ ಗಳನ್ನು ಹೊಂದಿರುತ್ತದೆ. ಈ ಸೀಸನ್ ಇನ್ನೂ ಹೆಚ್ಚಿನ ಮನರಂಜನೆ ನೀಡಲಿದೆ ಎಂಬ ಭರವಸೆ ಇದೆ ಎಂದಿದ್ದಾರೆ.

ಬಿಗ್ ಬಾಸ್ ಕನ್ನಡದ ಹೊಸ ಸೀಸನ್ ವಿವಿಧ ಹಿನ್ನೆಲೆಯ 16 ವೈವಿಧ್ಯಮಯ ಸ್ಪರ್ಧಿಗಳನ್ನು ಸ್ವಾಗತಿಸುತ್ತಿದೆ. ಈ ಬಾರಿ ರಕ್ಷಿತ್ ಶೆಟ್ಟಿ ಅವರ 777 ಚಾರ್ಲಿ ಚಿತ್ರದ ಖ್ಯಾತಿಯ ಚಾರ್ಲಿ ನಾಯಿಯು ಬಿಗ್ ಬಾಸ್ ಮನೆ ಸೇರುತ್ತಿದ್ದು, ಹೆಚ್ಚು ಕುತೂಹಲ ಮೂಡಿಸಿದೆ.

ಸಾಕುಪ್ರಾಣಿಗಳ ಭಾಗವಹಿಸುವಿಕೆಗಾಗಿ ಪ್ರಾಣಿ ಮಂಡಳಿಯಿಂದ ಎಲ್ಲಾ ಅಗತ್ಯ ಅನುಮತಿಗಳೊಂದಿಗೆ ಚಾರ್ಲಿ ಬಿಗ್ ಬಾಸ್ ಮನೆಯಲ್ಲಿ ಸ್ಪರ್ಧಿಯಾಗಿ ಭಾಗವಹಿಸುತ್ತಿದೆ.

lokesh

Recent Posts

ರಾಜೀನಾಮೆ ಹಿಂಪಡೆದ ರಾಮಲಿಂಗಾರೆಡ್ಡಿ: ಸರ್ಕಾರಕ್ಕೆ ಎದುರಾಗಿದ್ದ ಕಂಟಕ ತಾತ್ಕಾಲಿಕ ನಿವಾರಣೆ

ಬೆಂಗಳೂರು: ಸೂಕ್ತ ಖಾತೆ ಸಿಗದ ಹಿನ್ನೆಲೆಯಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಸರ್ಕಾರಕ್ಕೆ ಮುಜುಗರ ಸೃಷ್ಟಿಸಿದ್ದ ಸಚಿವ ರಾಮಲಿಂಗ ರೆಡ್ಡಿ…

2 hours ago

ಛತ್ತೀಸ್‌ಗಢದಲ್ಲಿ ಎಬೋಲಾ ಭೀತಿ: ಮೂವರು ಆಫ್ರಿಕಾ ಪ್ರಜೆಗಳಿಗೆ 21 ದಿನ ಕ್ವಾರಂಟೈನ್‌

ರಾಯ್ಪುರ: ಇತ್ತೀಚೆಗೆ ಆಫ್ರಿಕಾದ ಹಲವೆಡೆ ಎಬೋಲಾ ವೈರಸ್‌ ಭೀತಿ ಸೃಷ್ಟಿಯಾಗಿರುವ ಬೆನ್ನಲ್ಲೇ ಇದೀಗ ಛತ್ತೀಸ್‌ಗಢದಲ್ಲಿ ಮೂವರು ಆಫ್ರಿಕಾ ಪ್ರಜೆಗಳನ್ನು 21…

2 hours ago

ಬೊಮ್ಮನದೊಡ್ಡಿ ಬಳಿ ಚಿರತೆ ಸಂಚಾರ: ಗ್ರಾಮಸ್ಥರಲ್ಲಿ ಆತಂಕ

ಭಾರತೀನಗರ: ಇಲ್ಲಿಗೆ ಸಮೀಪದ ಬೊಮ್ಮನದೊಡ್ಡಿ ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಜನರಲ್ಲಿ ಆತಂಕ ಮೂಡಿದೆ. ಗುರುದೇವರಹಳ್ಳಿ ಗ್ರಾಮದ ಚೇತನ್‌ಮಾದೇಗೌಡ ಎಂಬವರು ಬೊಮ್ಮನದೊಡ್ಡಿ…

3 hours ago

ಕೇರಳದಲ್ಲಿ ಭಾರೀ ಮಳೆ: ಐದು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಣೆ

ತಿರುವನಂತಪುರಂ: ನೆರೆಯ ಕೇರಳ ರಾಜ್ಯದಲ್ಲಿ ಮುಂಗಾರು ಆರಂಭವಾಗಿದ್ದು, ಹಲವೆಡೆ ಭಾರೀ ಮಳೆಯಾಗುತ್ತಿದೆ. ಮಲ್ಲಪುರಂ, ಕೋಯಿಕ್ಕೋಡ್‌, ವಯನಾಡು, ಕಣ್ಣೂರು ಮತ್ತು ಕಾಸರಗೋಡಿನಲ್ಲಿ…

4 hours ago

ಅಣ್ಣಾಮಲೈ ಬೆನ್ನಲ್ಲೇ ಮತ್ತೆರಡು ವಿಕೆಟ್‌ ಪತನ

ಚೆನ್ನೈ: ತಮಿಳುನಾಡು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರು ಬಿಜೆಪಿಗೆ ಗುಡ್‌ಬೈ ಹೇಳಿದ ಬೆನ್ನಲ್ಲೇ ಮತ್ತೆರಡು ವಿಕೆಟ್‌ ಪತನಗೊಂಡಿದೆ. ರಾಜ್ಯ…

4 hours ago

ರಾಮಲಿಂಗಾರೆಡ್ಡಿ ರಾಜೀನಾಮೆ ವಾಪಸ್‌ ಪಡೆಯಲು ಒಪ್ಪಿದ್ದಾರೆ: ರಣದೀಪ್‌ ಸಿಂಗ್‌ ಸುರ್ಜೇವಾಲ

ಬೆಂಗಳೂರು: ರಾಮಲಿಂಗಾರೆಡ್ಡಿ ಅವರು ಸಚಿವ ಸ್ಥಾನಕ್ಕೆ ನೀಡಿರುವ ರಾಜೀನಾಮೆಯನ್ನು ವಾಪಸ್‌ ಪಡೆದು ಸಚಿವ ಸಂಪುಟದಲ್ಲಿ ಮುಂದುವರೆಯಲಿದ್ದಾರೆ ಎಂದು ರಾಜ್ಯ ಕಾಂಗ್ರೆಸ್‌…

5 hours ago