ಚಿತ್ರ ಮಂಜರಿ

BIGG BOSS ಕನ್ನಡ: ಕ್ಯಾಪ್ಟನ್‌ ನೀತು ಮನೆಯಿಂದ ಔಟ್‌!

ಕನ್ನಡ ಕಿರುತೆರೆಯ ಬಿಗ್‌ ರಿಯಾಲಿಟಿ ಶೋ ಬಿಗ್‌ಬಾಸ್‌ ಸೀಸನ್‌ 10 ರಲ್ಲಿ ಇಂದೆಂದೂ ನಡೆಯದ ಹೊಸ ಇತಿಹಾಸ ದಾಖಲಗಿದೆ. ಮೊಟ್ಟ ಮೊದಲ ಬಾರಿ ಬಿಗ್‌ ಮನೆಯ ಕ್ಯಾಪ್ಟನ್‌ ಮನೆಯಿಂದ ಹೊರ ಹೋಗಿದ್ದಾರೆ. ಕ್ಯಾಪ್ಟನ್ ಆಗಿದ್ದೋರು ನಾಮಿನೇಷನ್‌ನಿಂದ ಬಚಾವ್ ಆಗಬೋದು. ಆದರೆ ಎಲಿಮಿನೇಷನ್‌ನಿಂದ ಅಲ್ಲ ಅನ್ನೋದು ಈ ವಾರದ ಎಲಿಮಿನೇಷನ್‌ನಿಂದ ಸಾಬೀತಾಗಿದೆ.

ಮನೆಯ ಕ್ಯಾಪ್ಟನ್ ನೀತು ವನಜಾಕ್ಷಿ ಅವರಿಗೆ ವೀಕ್ಷಕರಿಂದ ಕಡಿಮೆ ವೊಟ್‌ ಸಿಕ್ಕಿದ್ದರಿಂದ ಅವರೀಗ ‘ಬಿಗ್ ಬಾಸ್’ ಮನೆಯಿಂದ ಹೊರಬಿದ್ದಿದ್ದಾರೆ!. ಇದು ಒಬ್ಬ ಕ್ಯಾಪ್ಟನ್‌ ಮನೆಯಿಂದ ಹೊರ ಹೋಗಿದ್ದು ಇದೇ ಮೊದಲು.

ನಾಮಿನೇಟ್ ಆಗಿದ್ದವರು ಯಾರು? : ಕಳೆದ ವಾರ ಕ್ಯಾಪ್ಟನ್ ಆಗಿದ್ದ ಕಾರ್ತಿಕ್ ಮಹೇಶ್ ನಾಮಿನೇಟ್ ಆಗಿರಲಿಲ್ಲ. ಹಾಗೆಯೇ, ಅವರು ಮೈಕಲ್‌ ಅವರನ್ನು ನಾಮಿನೇಷನ್‌ನಿಂದ ಬಚಾವ್ ಮಾಡಿದ್ದರು. ಇನ್ನು, ತುಕಾಲಿ ಸಂತು ಕೂಡ ತಮಗಿದ್ದ ಒಂದು ವಿಶೇಷ ಅಧಿಕಾರದಿಂದ ವರ್ತೂರು ಸಂತೋಷ್ ಅವರನ್ನು ನಾಮಿನೇಷನ್‌ನಿಂದ ಸೇಫ್ ಮಾಡಿದ್ದರು. ಕೊನೆಗೆ ನೀತು ವನಜಾಕ್ಷಿ, ವಿನಯ್, ತುಕಾಲಿ ಸಂತು, ಸಂಗೀತಾ, ತನಿಷಾ, ನಮ್ರತಾ, ಸ್ನೇಹಿತ್, ಸಿರಿ, ಡ್ರೋನ್ ಪ್ರತಾಪ್ ನಾಮಿನೇಟ್ ಆಗಿದ್ದರು.

ಶನಿವಾರದ ಸಂಚಿಕೆಯಲ್ಲಿ ಡ್ರೋನ್ ಪ್ರತಾಪ್‌, ತನಿಷಾ ಕುಪ್ಪಂಡ, ಸಂಗೀತಾ ಶೃಂಗೇರಿ, ವಿನಯ್ ಗೌಡ ಅವರನ್ನು ನಾಮಿನೇಷನ್‌ನಿಂದ ಸುದೀಪ್ ಸೇಫ್‌ ಮಾಡಿದ್ದರು. ಭಾನುವಾರದ (ನ.26) ಸಂಚಿಕೆಯಲ್ಲಿ ನಮ್ರತಾ ಗೌಡ, ‘ತುಕಾಲಿ’ ಸಂತು, ಸ್ನೇಹಿತ್ ಅವರು ಸೇಫ್ ಆದರು. ಅಂತಿಮವಾಗಿ ಸಿರಿ ಮತ್ತು ನೀತು ಅವರು ಎಲಿಮಿನೇಷನಲ್ಲಿ ಉಳಿದುಕೊಂಡರು. ‘ಕಿಚ್ಚ’ ಸುದೀಪ್ ಅವರು ನೀತು ಹೆಸರು ಹೇಳುವ ಮೂಲಕ, ಅವರ ಆಟ 50 ದಿನಗಳಿಗೆ ಅಂತ್ಯವಾಗಿ ಎಂಬುದನ್ನು ಘೋಷಿಸಿದರು.

ಏನಂದ್ರು ನೀತು?
ಟ್ರಾನ್ಸ್‌ಜೆಂಡರ್‌ ಸಮುದಾಯದಿಂದ ಬಂದಿರುವ ನೀತು, “ಕನ್ವರ್ಟ್‌ ಆಗುವ ಮೊದಲು ನನ್ನ ಬದುಕು ನರಕವೇ ಆಗಿತ್ತು. ಹೆಣ್ಣಾಗಿ ಫೀಲ್ ಮಾಡ್ತಿದ್ದೆ. ಹೊರಗಡೆ ಹುಡುಗನಾಗಿ ಕಾಣಿಸ್ತಿದ್ದೆ. ಅದು ನನಗೆ ಆ ರೀತಿ ಅನ್ನಿಸುತ್ತಿರಲಿಲ್ಲ. ಯಾವಾಗ ನನ್ನ ತಾಯಿ ನನ್ನನ್ನು ಒಪ್ಪಿಕೊಂಡರೋ ಆಗ ನನ್ನ ಹೊಸ ಜೀವನ ಶುರುವಾಯ್ತು. ಈಗ ಪ್ರತಿ ಕ್ಷಣವನ್ನೂ ಎಂಜಾಯ್ ಮಾಡ್ತಿದ್ದೀನಿ. ಇಲ್ಲಿಯೂ ಪ್ರತಿಕ್ಷಣ ಎಂಜಾಯ್ ಮಾಡಿದ್ದೀನಿ. ಎಲ್ಲರಿಂದಲೂ ಪ್ರೀತಿ ಸಿಕ್ಕಿದೆ.. ಟ್ರಾನ್ಸ್‌ಜೆಂಡರ್‍ ಆಗಿರುವ ನನಗೆ ಈ ವೇದಿಕೆ ಕೊಟ್ಟಿದ್ದಕ್ಕೆ ಧನ್ಯವಾದ. ಎಲ್ಲರ ಪ್ರೀತಿ ನನಗೆ ನೂರಕ್ಕೆ ನೂರು ಸಿಕ್ಕಿದೆ. ಆ ಪ್ರೀತಿಯನ್ನು ತೆಗೆದುಕೊಂಡು ಹೋಗುತ್ತಿದ್ದೇನೆ ಎಂಬ ಖಷಿಯಿದೆ. ಎಲ್ಲರಿಂದಲೂ ಒಂದೊಂದು ವಿಷಯ ಕಲಿತಿದ್ದೀನಿ. ಇಲ್ಲಿನ ಒಂದೊಂದು ಕ್ಷಣವನ್ನೂ ನಾನು ಸೆಲೆಬ್ರೇಟ್ ಮಾಡಿದ್ದೀನಿ’ ಎಂದು ಹೇಳಿದ್ದಾರೆ.

ಸದ್ಯ ಮನೆಯಲ್ಲಿ ನೀತು ಕ್ಯಾಪ್ಟನ್ ಆಗಿದ್ದರು. ಅವರೀಗ ಎಲಿಮಿನೇಟ್ ಆಗಿರುವುದರಿಂದ ಮನೆಯಿಂದ ಹೊರಹೋಗುವ ಮುನ್ನ ಕ್ಯಾಪ್ಟನ್‌ನ ಜವಾಬ್ದಾರಿಯನ್ನು ಒಬ್ಬರಿಗೆ ನೇಮಿಸುವಂತೆ ನೀತುಗೆ ‘ಬಿಗ್‌ ಬಾಸ್’ ಆದೇಶಿಸಿದರು. ಅದಕ್ಕೆ ಮೈಕಲ್ ಅವರನ್ನು ಮನೆಯ ಕ್ಯಾಪ್ಟನ್ ಆಗಿ ನೇಮಿಸಿ ನೀತು ಹೊರಬಂದರು.

andolanait

Recent Posts

ಮಂಡ್ಯ | ಕೊಬ್ಬರಿ ಶೆಡ್‌ಗೆ ಬೆಂಕಿ : ಲಕ್ಷಾಂತರ ರೂ.ಮೌಲ್ಯದ ಕೊಬ್ಬರಿ ನಾಶ

ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…

1 hour ago

ಹನೂರು | ಅಲಗುಮೂಲೆ ಅರಣ್ಯದಲ್ಲಿ ಬೆಂಕಿ ; ಧಗಧಗಿಸಿದ ಕಾಡು

ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…

2 hours ago

ತಂಬಾಕು ಮುಕ್ತ ಗ್ರಾಮಕ್ಕಾಗಿ ಗುಲಾಬಿ ಚಳುವಳಿ

ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…

3 hours ago

ಆಂಬುಲೆನ್ಸ್‌ ತುರ್ತು ಮೀಸಲು ಮಾರ್ಗಕ್ಕೆ ಜಯಾ ಬಚ್ಚನ್‌ ಒತ್ತಾಯ

ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…

3 hours ago

ಗುಂಡ್ಲುಪೇಟೆ | ದನಗಾಹಿ ಮೇಲೆ ಹುಲಿ ದಾಳಿ ; ಪ್ರಾಣಾಪಾಯದಿಂದ ಪಾರು

ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…

3 hours ago

ಏಕತಾ ಮಾಲ್‌ ನಿರ್ಮಾಣಕ್ಕೆ ಹೈಕೋರ್ಟ್ ತಡೆ‌

ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…

3 hours ago