ಚಿತ್ರ ಮಂಜರಿ

BIGG BOSS ಕನ್ನಡ: ಕ್ಯಾಪ್ಟನ್‌ ನೀತು ಮನೆಯಿಂದ ಔಟ್‌!

ಕನ್ನಡ ಕಿರುತೆರೆಯ ಬಿಗ್‌ ರಿಯಾಲಿಟಿ ಶೋ ಬಿಗ್‌ಬಾಸ್‌ ಸೀಸನ್‌ 10 ರಲ್ಲಿ ಇಂದೆಂದೂ ನಡೆಯದ ಹೊಸ ಇತಿಹಾಸ ದಾಖಲಗಿದೆ. ಮೊಟ್ಟ ಮೊದಲ ಬಾರಿ ಬಿಗ್‌ ಮನೆಯ ಕ್ಯಾಪ್ಟನ್‌ ಮನೆಯಿಂದ ಹೊರ ಹೋಗಿದ್ದಾರೆ. ಕ್ಯಾಪ್ಟನ್ ಆಗಿದ್ದೋರು ನಾಮಿನೇಷನ್‌ನಿಂದ ಬಚಾವ್ ಆಗಬೋದು. ಆದರೆ ಎಲಿಮಿನೇಷನ್‌ನಿಂದ ಅಲ್ಲ ಅನ್ನೋದು ಈ ವಾರದ ಎಲಿಮಿನೇಷನ್‌ನಿಂದ ಸಾಬೀತಾಗಿದೆ.

ಮನೆಯ ಕ್ಯಾಪ್ಟನ್ ನೀತು ವನಜಾಕ್ಷಿ ಅವರಿಗೆ ವೀಕ್ಷಕರಿಂದ ಕಡಿಮೆ ವೊಟ್‌ ಸಿಕ್ಕಿದ್ದರಿಂದ ಅವರೀಗ ‘ಬಿಗ್ ಬಾಸ್’ ಮನೆಯಿಂದ ಹೊರಬಿದ್ದಿದ್ದಾರೆ!. ಇದು ಒಬ್ಬ ಕ್ಯಾಪ್ಟನ್‌ ಮನೆಯಿಂದ ಹೊರ ಹೋಗಿದ್ದು ಇದೇ ಮೊದಲು.

ನಾಮಿನೇಟ್ ಆಗಿದ್ದವರು ಯಾರು? : ಕಳೆದ ವಾರ ಕ್ಯಾಪ್ಟನ್ ಆಗಿದ್ದ ಕಾರ್ತಿಕ್ ಮಹೇಶ್ ನಾಮಿನೇಟ್ ಆಗಿರಲಿಲ್ಲ. ಹಾಗೆಯೇ, ಅವರು ಮೈಕಲ್‌ ಅವರನ್ನು ನಾಮಿನೇಷನ್‌ನಿಂದ ಬಚಾವ್ ಮಾಡಿದ್ದರು. ಇನ್ನು, ತುಕಾಲಿ ಸಂತು ಕೂಡ ತಮಗಿದ್ದ ಒಂದು ವಿಶೇಷ ಅಧಿಕಾರದಿಂದ ವರ್ತೂರು ಸಂತೋಷ್ ಅವರನ್ನು ನಾಮಿನೇಷನ್‌ನಿಂದ ಸೇಫ್ ಮಾಡಿದ್ದರು. ಕೊನೆಗೆ ನೀತು ವನಜಾಕ್ಷಿ, ವಿನಯ್, ತುಕಾಲಿ ಸಂತು, ಸಂಗೀತಾ, ತನಿಷಾ, ನಮ್ರತಾ, ಸ್ನೇಹಿತ್, ಸಿರಿ, ಡ್ರೋನ್ ಪ್ರತಾಪ್ ನಾಮಿನೇಟ್ ಆಗಿದ್ದರು.

ಶನಿವಾರದ ಸಂಚಿಕೆಯಲ್ಲಿ ಡ್ರೋನ್ ಪ್ರತಾಪ್‌, ತನಿಷಾ ಕುಪ್ಪಂಡ, ಸಂಗೀತಾ ಶೃಂಗೇರಿ, ವಿನಯ್ ಗೌಡ ಅವರನ್ನು ನಾಮಿನೇಷನ್‌ನಿಂದ ಸುದೀಪ್ ಸೇಫ್‌ ಮಾಡಿದ್ದರು. ಭಾನುವಾರದ (ನ.26) ಸಂಚಿಕೆಯಲ್ಲಿ ನಮ್ರತಾ ಗೌಡ, ‘ತುಕಾಲಿ’ ಸಂತು, ಸ್ನೇಹಿತ್ ಅವರು ಸೇಫ್ ಆದರು. ಅಂತಿಮವಾಗಿ ಸಿರಿ ಮತ್ತು ನೀತು ಅವರು ಎಲಿಮಿನೇಷನಲ್ಲಿ ಉಳಿದುಕೊಂಡರು. ‘ಕಿಚ್ಚ’ ಸುದೀಪ್ ಅವರು ನೀತು ಹೆಸರು ಹೇಳುವ ಮೂಲಕ, ಅವರ ಆಟ 50 ದಿನಗಳಿಗೆ ಅಂತ್ಯವಾಗಿ ಎಂಬುದನ್ನು ಘೋಷಿಸಿದರು.

ಏನಂದ್ರು ನೀತು?
ಟ್ರಾನ್ಸ್‌ಜೆಂಡರ್‌ ಸಮುದಾಯದಿಂದ ಬಂದಿರುವ ನೀತು, “ಕನ್ವರ್ಟ್‌ ಆಗುವ ಮೊದಲು ನನ್ನ ಬದುಕು ನರಕವೇ ಆಗಿತ್ತು. ಹೆಣ್ಣಾಗಿ ಫೀಲ್ ಮಾಡ್ತಿದ್ದೆ. ಹೊರಗಡೆ ಹುಡುಗನಾಗಿ ಕಾಣಿಸ್ತಿದ್ದೆ. ಅದು ನನಗೆ ಆ ರೀತಿ ಅನ್ನಿಸುತ್ತಿರಲಿಲ್ಲ. ಯಾವಾಗ ನನ್ನ ತಾಯಿ ನನ್ನನ್ನು ಒಪ್ಪಿಕೊಂಡರೋ ಆಗ ನನ್ನ ಹೊಸ ಜೀವನ ಶುರುವಾಯ್ತು. ಈಗ ಪ್ರತಿ ಕ್ಷಣವನ್ನೂ ಎಂಜಾಯ್ ಮಾಡ್ತಿದ್ದೀನಿ. ಇಲ್ಲಿಯೂ ಪ್ರತಿಕ್ಷಣ ಎಂಜಾಯ್ ಮಾಡಿದ್ದೀನಿ. ಎಲ್ಲರಿಂದಲೂ ಪ್ರೀತಿ ಸಿಕ್ಕಿದೆ.. ಟ್ರಾನ್ಸ್‌ಜೆಂಡರ್‍ ಆಗಿರುವ ನನಗೆ ಈ ವೇದಿಕೆ ಕೊಟ್ಟಿದ್ದಕ್ಕೆ ಧನ್ಯವಾದ. ಎಲ್ಲರ ಪ್ರೀತಿ ನನಗೆ ನೂರಕ್ಕೆ ನೂರು ಸಿಕ್ಕಿದೆ. ಆ ಪ್ರೀತಿಯನ್ನು ತೆಗೆದುಕೊಂಡು ಹೋಗುತ್ತಿದ್ದೇನೆ ಎಂಬ ಖಷಿಯಿದೆ. ಎಲ್ಲರಿಂದಲೂ ಒಂದೊಂದು ವಿಷಯ ಕಲಿತಿದ್ದೀನಿ. ಇಲ್ಲಿನ ಒಂದೊಂದು ಕ್ಷಣವನ್ನೂ ನಾನು ಸೆಲೆಬ್ರೇಟ್ ಮಾಡಿದ್ದೀನಿ’ ಎಂದು ಹೇಳಿದ್ದಾರೆ.

ಸದ್ಯ ಮನೆಯಲ್ಲಿ ನೀತು ಕ್ಯಾಪ್ಟನ್ ಆಗಿದ್ದರು. ಅವರೀಗ ಎಲಿಮಿನೇಟ್ ಆಗಿರುವುದರಿಂದ ಮನೆಯಿಂದ ಹೊರಹೋಗುವ ಮುನ್ನ ಕ್ಯಾಪ್ಟನ್‌ನ ಜವಾಬ್ದಾರಿಯನ್ನು ಒಬ್ಬರಿಗೆ ನೇಮಿಸುವಂತೆ ನೀತುಗೆ ‘ಬಿಗ್‌ ಬಾಸ್’ ಆದೇಶಿಸಿದರು. ಅದಕ್ಕೆ ಮೈಕಲ್ ಅವರನ್ನು ಮನೆಯ ಕ್ಯಾಪ್ಟನ್ ಆಗಿ ನೇಮಿಸಿ ನೀತು ಹೊರಬಂದರು.

andolanait

Recent Posts

ಮುಡಾ ಕಚೇರಿಯ ಮೇಲೆ ಇಡಿ ದಾಳಿ ದುರುದ್ದೇಶಪೂರ್ವಕ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್‌.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…

1 min ago

ಮುಡಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಕೇಸ್‌ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…

12 mins ago

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್:‌ ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ…

30 mins ago

ಮುಡಾ ಪ್ರಕರಣ: ಮುಡಾ ಕಚೇರಿಯ ಮೇಲೆ ಇ.ಡಿ ದಾಳಿ

ಮೈಸೂರು: ಮುಡಾದಲ್ಲಿ ಹಗರಣ ನಡೆದಿದೆ ಎಂದು ಆರ್‌ಐಟಿ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಇ.ಡಿ.ಗೆ ದೂರು ನೀಡಿದ್ದರು. ಈ ದೂರಿನ ಆಧಾರದ…

53 mins ago

ನಟ ದರ್ಶನ್‌ಗೆ ಮತ್ತೊಂದು ಸಂಕಷ್ಟ: ಹಳೆ ಪ್ರಕರಣಕ್ಕೆ ಹೊಸ ಎನ್‌ಸಿಆರ್‌

ಬೆಂಗಳೂರು: ನಟ ದರ್ಶನ್‌ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ಮಧ್ಯೆ ಹಳೆ…

2 hours ago

ಓದುಗರ ಪತ್ರ: ಮಹಿಳಾ ಅಧಿಕಾರಿಗಳಿಗೆ ಅಭಿನಂದನೆಗಳು

ಚಾಮರಾಜನಗರದಲ್ಲಿ ಅಕ್ಟೋಬರ್ ೭ರಿಂದ ಅ. ೯ರವರೆಗೆ ಆಯೋಜಿಸಿದ್ದ ‘ಚೆಲುವ ಚಾಮರಾಜನಗರ ದಸರಾ’ ಮಹೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮಗಳನ್ನು ವ್ಯವಸ್ಥಿತವಾಗಿ ಆಯೋಜಿಸಿದ್ದರಿಂದ…

3 hours ago