ಚಿತ್ರ ಮಂಜರಿ

BIGG BOSS ಕನ್ನಡ: ಕ್ಯಾಪ್ಟನ್‌ ನೀತು ಮನೆಯಿಂದ ಔಟ್‌!

ಕನ್ನಡ ಕಿರುತೆರೆಯ ಬಿಗ್‌ ರಿಯಾಲಿಟಿ ಶೋ ಬಿಗ್‌ಬಾಸ್‌ ಸೀಸನ್‌ 10 ರಲ್ಲಿ ಇಂದೆಂದೂ ನಡೆಯದ ಹೊಸ ಇತಿಹಾಸ ದಾಖಲಗಿದೆ. ಮೊಟ್ಟ ಮೊದಲ ಬಾರಿ ಬಿಗ್‌ ಮನೆಯ ಕ್ಯಾಪ್ಟನ್‌ ಮನೆಯಿಂದ ಹೊರ ಹೋಗಿದ್ದಾರೆ. ಕ್ಯಾಪ್ಟನ್ ಆಗಿದ್ದೋರು ನಾಮಿನೇಷನ್‌ನಿಂದ ಬಚಾವ್ ಆಗಬೋದು. ಆದರೆ ಎಲಿಮಿನೇಷನ್‌ನಿಂದ ಅಲ್ಲ ಅನ್ನೋದು ಈ ವಾರದ ಎಲಿಮಿನೇಷನ್‌ನಿಂದ ಸಾಬೀತಾಗಿದೆ.

ಮನೆಯ ಕ್ಯಾಪ್ಟನ್ ನೀತು ವನಜಾಕ್ಷಿ ಅವರಿಗೆ ವೀಕ್ಷಕರಿಂದ ಕಡಿಮೆ ವೊಟ್‌ ಸಿಕ್ಕಿದ್ದರಿಂದ ಅವರೀಗ ‘ಬಿಗ್ ಬಾಸ್’ ಮನೆಯಿಂದ ಹೊರಬಿದ್ದಿದ್ದಾರೆ!. ಇದು ಒಬ್ಬ ಕ್ಯಾಪ್ಟನ್‌ ಮನೆಯಿಂದ ಹೊರ ಹೋಗಿದ್ದು ಇದೇ ಮೊದಲು.

ನಾಮಿನೇಟ್ ಆಗಿದ್ದವರು ಯಾರು? : ಕಳೆದ ವಾರ ಕ್ಯಾಪ್ಟನ್ ಆಗಿದ್ದ ಕಾರ್ತಿಕ್ ಮಹೇಶ್ ನಾಮಿನೇಟ್ ಆಗಿರಲಿಲ್ಲ. ಹಾಗೆಯೇ, ಅವರು ಮೈಕಲ್‌ ಅವರನ್ನು ನಾಮಿನೇಷನ್‌ನಿಂದ ಬಚಾವ್ ಮಾಡಿದ್ದರು. ಇನ್ನು, ತುಕಾಲಿ ಸಂತು ಕೂಡ ತಮಗಿದ್ದ ಒಂದು ವಿಶೇಷ ಅಧಿಕಾರದಿಂದ ವರ್ತೂರು ಸಂತೋಷ್ ಅವರನ್ನು ನಾಮಿನೇಷನ್‌ನಿಂದ ಸೇಫ್ ಮಾಡಿದ್ದರು. ಕೊನೆಗೆ ನೀತು ವನಜಾಕ್ಷಿ, ವಿನಯ್, ತುಕಾಲಿ ಸಂತು, ಸಂಗೀತಾ, ತನಿಷಾ, ನಮ್ರತಾ, ಸ್ನೇಹಿತ್, ಸಿರಿ, ಡ್ರೋನ್ ಪ್ರತಾಪ್ ನಾಮಿನೇಟ್ ಆಗಿದ್ದರು.

ಶನಿವಾರದ ಸಂಚಿಕೆಯಲ್ಲಿ ಡ್ರೋನ್ ಪ್ರತಾಪ್‌, ತನಿಷಾ ಕುಪ್ಪಂಡ, ಸಂಗೀತಾ ಶೃಂಗೇರಿ, ವಿನಯ್ ಗೌಡ ಅವರನ್ನು ನಾಮಿನೇಷನ್‌ನಿಂದ ಸುದೀಪ್ ಸೇಫ್‌ ಮಾಡಿದ್ದರು. ಭಾನುವಾರದ (ನ.26) ಸಂಚಿಕೆಯಲ್ಲಿ ನಮ್ರತಾ ಗೌಡ, ‘ತುಕಾಲಿ’ ಸಂತು, ಸ್ನೇಹಿತ್ ಅವರು ಸೇಫ್ ಆದರು. ಅಂತಿಮವಾಗಿ ಸಿರಿ ಮತ್ತು ನೀತು ಅವರು ಎಲಿಮಿನೇಷನಲ್ಲಿ ಉಳಿದುಕೊಂಡರು. ‘ಕಿಚ್ಚ’ ಸುದೀಪ್ ಅವರು ನೀತು ಹೆಸರು ಹೇಳುವ ಮೂಲಕ, ಅವರ ಆಟ 50 ದಿನಗಳಿಗೆ ಅಂತ್ಯವಾಗಿ ಎಂಬುದನ್ನು ಘೋಷಿಸಿದರು.

ಏನಂದ್ರು ನೀತು?
ಟ್ರಾನ್ಸ್‌ಜೆಂಡರ್‌ ಸಮುದಾಯದಿಂದ ಬಂದಿರುವ ನೀತು, “ಕನ್ವರ್ಟ್‌ ಆಗುವ ಮೊದಲು ನನ್ನ ಬದುಕು ನರಕವೇ ಆಗಿತ್ತು. ಹೆಣ್ಣಾಗಿ ಫೀಲ್ ಮಾಡ್ತಿದ್ದೆ. ಹೊರಗಡೆ ಹುಡುಗನಾಗಿ ಕಾಣಿಸ್ತಿದ್ದೆ. ಅದು ನನಗೆ ಆ ರೀತಿ ಅನ್ನಿಸುತ್ತಿರಲಿಲ್ಲ. ಯಾವಾಗ ನನ್ನ ತಾಯಿ ನನ್ನನ್ನು ಒಪ್ಪಿಕೊಂಡರೋ ಆಗ ನನ್ನ ಹೊಸ ಜೀವನ ಶುರುವಾಯ್ತು. ಈಗ ಪ್ರತಿ ಕ್ಷಣವನ್ನೂ ಎಂಜಾಯ್ ಮಾಡ್ತಿದ್ದೀನಿ. ಇಲ್ಲಿಯೂ ಪ್ರತಿಕ್ಷಣ ಎಂಜಾಯ್ ಮಾಡಿದ್ದೀನಿ. ಎಲ್ಲರಿಂದಲೂ ಪ್ರೀತಿ ಸಿಕ್ಕಿದೆ.. ಟ್ರಾನ್ಸ್‌ಜೆಂಡರ್‍ ಆಗಿರುವ ನನಗೆ ಈ ವೇದಿಕೆ ಕೊಟ್ಟಿದ್ದಕ್ಕೆ ಧನ್ಯವಾದ. ಎಲ್ಲರ ಪ್ರೀತಿ ನನಗೆ ನೂರಕ್ಕೆ ನೂರು ಸಿಕ್ಕಿದೆ. ಆ ಪ್ರೀತಿಯನ್ನು ತೆಗೆದುಕೊಂಡು ಹೋಗುತ್ತಿದ್ದೇನೆ ಎಂಬ ಖಷಿಯಿದೆ. ಎಲ್ಲರಿಂದಲೂ ಒಂದೊಂದು ವಿಷಯ ಕಲಿತಿದ್ದೀನಿ. ಇಲ್ಲಿನ ಒಂದೊಂದು ಕ್ಷಣವನ್ನೂ ನಾನು ಸೆಲೆಬ್ರೇಟ್ ಮಾಡಿದ್ದೀನಿ’ ಎಂದು ಹೇಳಿದ್ದಾರೆ.

ಸದ್ಯ ಮನೆಯಲ್ಲಿ ನೀತು ಕ್ಯಾಪ್ಟನ್ ಆಗಿದ್ದರು. ಅವರೀಗ ಎಲಿಮಿನೇಟ್ ಆಗಿರುವುದರಿಂದ ಮನೆಯಿಂದ ಹೊರಹೋಗುವ ಮುನ್ನ ಕ್ಯಾಪ್ಟನ್‌ನ ಜವಾಬ್ದಾರಿಯನ್ನು ಒಬ್ಬರಿಗೆ ನೇಮಿಸುವಂತೆ ನೀತುಗೆ ‘ಬಿಗ್‌ ಬಾಸ್’ ಆದೇಶಿಸಿದರು. ಅದಕ್ಕೆ ಮೈಕಲ್ ಅವರನ್ನು ಮನೆಯ ಕ್ಯಾಪ್ಟನ್ ಆಗಿ ನೇಮಿಸಿ ನೀತು ಹೊರಬಂದರು.

andolanait

Recent Posts

ದುಬಾರೆ ದುರಂತ ಬಳಿಕ ಎಚ್ಚೆತ್ತ ರಾಜ್ಯ ಸರ್ಕಾರ ; ಆನೆ ಶಿಬಿರಗಳಿಗೆ ಹೊಸ ನಿಯಮ

ಬೆಂಗಳೂರು : ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗೆ ಕರ್ನಾಟಕ ಅರಣ್ಯ ಇಲಾಖೆ…

53 mins ago

ಬಿಡದಿ ಟೌನ್‌ಶಿಪ್: ಪೋಸ್ಟರ್ ಸಮರ

ಬೆಂಗಳೂರು : ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…

2 hours ago

UGC NET | ಪ್ರವೇಶ ಪತ್ರ ಬಿಡುಗಡೆ

ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…

3 hours ago

ಧರ್ಮಸ್ಥಳ ಪ್ರಕರಣದಲ್ಲಿ ಪ್ರಕಾಶ್‌ ರಾಜ್‌ ಹೆಸರು: ನಟ ಏನಂದ್ರು ಗೊತ್ತಾ?

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…

8 hours ago

ನೀಟ್‌ ವಿದ್ಯಾರ್ಥಿಗಳಿಗೆ ಪ್ರಯಾಣದಲ್ಲಿ 50% ರಿಯಾಯಿತಿ: ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ಆದೇಶ

ಲಕ್ನೋ: ಜೂನ್.‌21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್‌ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…

10 hours ago

ಮುಂಬೈನಲ್ಲಿ ನೀರಿಗೆ ಭಾರೀ ಬಿಕ್ಕಟ್ಟು: ಕಟ್ಟಡ ಕಾಮಗಾರಿಗಳಿಗೆ ನೀರು ಬಂದ್‌

ಮುಂಬೈ: ದೇಶದಲ್ಲಿ ಮುಂಗಾರು ಪ್ರವೇಶಿದರೂ ಮುಂಬೈನಲ್ಲಿ ಮಳೆಯ ಕೊರತೆ ಎದುರಾಗಿದೆ. ಮಳೆ ಕೊರತೆ ಎದುರಾದ ಪರಿಣಾಮ ಜಲಾಶಯಗಳಲ್ಲಿ ನೀರಿನ ಮಟ್ಟ…

11 hours ago