ಚಿತ್ರ ಮಂಜರಿ

BIGG BOSS ಕನ್ನಡ: ಕ್ಯಾಪ್ಟನ್‌ ನೀತು ಮನೆಯಿಂದ ಔಟ್‌!

ಕನ್ನಡ ಕಿರುತೆರೆಯ ಬಿಗ್‌ ರಿಯಾಲಿಟಿ ಶೋ ಬಿಗ್‌ಬಾಸ್‌ ಸೀಸನ್‌ 10 ರಲ್ಲಿ ಇಂದೆಂದೂ ನಡೆಯದ ಹೊಸ ಇತಿಹಾಸ ದಾಖಲಗಿದೆ. ಮೊಟ್ಟ ಮೊದಲ ಬಾರಿ ಬಿಗ್‌ ಮನೆಯ ಕ್ಯಾಪ್ಟನ್‌ ಮನೆಯಿಂದ ಹೊರ ಹೋಗಿದ್ದಾರೆ. ಕ್ಯಾಪ್ಟನ್ ಆಗಿದ್ದೋರು ನಾಮಿನೇಷನ್‌ನಿಂದ ಬಚಾವ್ ಆಗಬೋದು. ಆದರೆ ಎಲಿಮಿನೇಷನ್‌ನಿಂದ ಅಲ್ಲ ಅನ್ನೋದು ಈ ವಾರದ ಎಲಿಮಿನೇಷನ್‌ನಿಂದ ಸಾಬೀತಾಗಿದೆ.

ಮನೆಯ ಕ್ಯಾಪ್ಟನ್ ನೀತು ವನಜಾಕ್ಷಿ ಅವರಿಗೆ ವೀಕ್ಷಕರಿಂದ ಕಡಿಮೆ ವೊಟ್‌ ಸಿಕ್ಕಿದ್ದರಿಂದ ಅವರೀಗ ‘ಬಿಗ್ ಬಾಸ್’ ಮನೆಯಿಂದ ಹೊರಬಿದ್ದಿದ್ದಾರೆ!. ಇದು ಒಬ್ಬ ಕ್ಯಾಪ್ಟನ್‌ ಮನೆಯಿಂದ ಹೊರ ಹೋಗಿದ್ದು ಇದೇ ಮೊದಲು.

ನಾಮಿನೇಟ್ ಆಗಿದ್ದವರು ಯಾರು? : ಕಳೆದ ವಾರ ಕ್ಯಾಪ್ಟನ್ ಆಗಿದ್ದ ಕಾರ್ತಿಕ್ ಮಹೇಶ್ ನಾಮಿನೇಟ್ ಆಗಿರಲಿಲ್ಲ. ಹಾಗೆಯೇ, ಅವರು ಮೈಕಲ್‌ ಅವರನ್ನು ನಾಮಿನೇಷನ್‌ನಿಂದ ಬಚಾವ್ ಮಾಡಿದ್ದರು. ಇನ್ನು, ತುಕಾಲಿ ಸಂತು ಕೂಡ ತಮಗಿದ್ದ ಒಂದು ವಿಶೇಷ ಅಧಿಕಾರದಿಂದ ವರ್ತೂರು ಸಂತೋಷ್ ಅವರನ್ನು ನಾಮಿನೇಷನ್‌ನಿಂದ ಸೇಫ್ ಮಾಡಿದ್ದರು. ಕೊನೆಗೆ ನೀತು ವನಜಾಕ್ಷಿ, ವಿನಯ್, ತುಕಾಲಿ ಸಂತು, ಸಂಗೀತಾ, ತನಿಷಾ, ನಮ್ರತಾ, ಸ್ನೇಹಿತ್, ಸಿರಿ, ಡ್ರೋನ್ ಪ್ರತಾಪ್ ನಾಮಿನೇಟ್ ಆಗಿದ್ದರು.

ಶನಿವಾರದ ಸಂಚಿಕೆಯಲ್ಲಿ ಡ್ರೋನ್ ಪ್ರತಾಪ್‌, ತನಿಷಾ ಕುಪ್ಪಂಡ, ಸಂಗೀತಾ ಶೃಂಗೇರಿ, ವಿನಯ್ ಗೌಡ ಅವರನ್ನು ನಾಮಿನೇಷನ್‌ನಿಂದ ಸುದೀಪ್ ಸೇಫ್‌ ಮಾಡಿದ್ದರು. ಭಾನುವಾರದ (ನ.26) ಸಂಚಿಕೆಯಲ್ಲಿ ನಮ್ರತಾ ಗೌಡ, ‘ತುಕಾಲಿ’ ಸಂತು, ಸ್ನೇಹಿತ್ ಅವರು ಸೇಫ್ ಆದರು. ಅಂತಿಮವಾಗಿ ಸಿರಿ ಮತ್ತು ನೀತು ಅವರು ಎಲಿಮಿನೇಷನಲ್ಲಿ ಉಳಿದುಕೊಂಡರು. ‘ಕಿಚ್ಚ’ ಸುದೀಪ್ ಅವರು ನೀತು ಹೆಸರು ಹೇಳುವ ಮೂಲಕ, ಅವರ ಆಟ 50 ದಿನಗಳಿಗೆ ಅಂತ್ಯವಾಗಿ ಎಂಬುದನ್ನು ಘೋಷಿಸಿದರು.

ಏನಂದ್ರು ನೀತು?
ಟ್ರಾನ್ಸ್‌ಜೆಂಡರ್‌ ಸಮುದಾಯದಿಂದ ಬಂದಿರುವ ನೀತು, “ಕನ್ವರ್ಟ್‌ ಆಗುವ ಮೊದಲು ನನ್ನ ಬದುಕು ನರಕವೇ ಆಗಿತ್ತು. ಹೆಣ್ಣಾಗಿ ಫೀಲ್ ಮಾಡ್ತಿದ್ದೆ. ಹೊರಗಡೆ ಹುಡುಗನಾಗಿ ಕಾಣಿಸ್ತಿದ್ದೆ. ಅದು ನನಗೆ ಆ ರೀತಿ ಅನ್ನಿಸುತ್ತಿರಲಿಲ್ಲ. ಯಾವಾಗ ನನ್ನ ತಾಯಿ ನನ್ನನ್ನು ಒಪ್ಪಿಕೊಂಡರೋ ಆಗ ನನ್ನ ಹೊಸ ಜೀವನ ಶುರುವಾಯ್ತು. ಈಗ ಪ್ರತಿ ಕ್ಷಣವನ್ನೂ ಎಂಜಾಯ್ ಮಾಡ್ತಿದ್ದೀನಿ. ಇಲ್ಲಿಯೂ ಪ್ರತಿಕ್ಷಣ ಎಂಜಾಯ್ ಮಾಡಿದ್ದೀನಿ. ಎಲ್ಲರಿಂದಲೂ ಪ್ರೀತಿ ಸಿಕ್ಕಿದೆ.. ಟ್ರಾನ್ಸ್‌ಜೆಂಡರ್‍ ಆಗಿರುವ ನನಗೆ ಈ ವೇದಿಕೆ ಕೊಟ್ಟಿದ್ದಕ್ಕೆ ಧನ್ಯವಾದ. ಎಲ್ಲರ ಪ್ರೀತಿ ನನಗೆ ನೂರಕ್ಕೆ ನೂರು ಸಿಕ್ಕಿದೆ. ಆ ಪ್ರೀತಿಯನ್ನು ತೆಗೆದುಕೊಂಡು ಹೋಗುತ್ತಿದ್ದೇನೆ ಎಂಬ ಖಷಿಯಿದೆ. ಎಲ್ಲರಿಂದಲೂ ಒಂದೊಂದು ವಿಷಯ ಕಲಿತಿದ್ದೀನಿ. ಇಲ್ಲಿನ ಒಂದೊಂದು ಕ್ಷಣವನ್ನೂ ನಾನು ಸೆಲೆಬ್ರೇಟ್ ಮಾಡಿದ್ದೀನಿ’ ಎಂದು ಹೇಳಿದ್ದಾರೆ.

ಸದ್ಯ ಮನೆಯಲ್ಲಿ ನೀತು ಕ್ಯಾಪ್ಟನ್ ಆಗಿದ್ದರು. ಅವರೀಗ ಎಲಿಮಿನೇಟ್ ಆಗಿರುವುದರಿಂದ ಮನೆಯಿಂದ ಹೊರಹೋಗುವ ಮುನ್ನ ಕ್ಯಾಪ್ಟನ್‌ನ ಜವಾಬ್ದಾರಿಯನ್ನು ಒಬ್ಬರಿಗೆ ನೇಮಿಸುವಂತೆ ನೀತುಗೆ ‘ಬಿಗ್‌ ಬಾಸ್’ ಆದೇಶಿಸಿದರು. ಅದಕ್ಕೆ ಮೈಕಲ್ ಅವರನ್ನು ಮನೆಯ ಕ್ಯಾಪ್ಟನ್ ಆಗಿ ನೇಮಿಸಿ ನೀತು ಹೊರಬಂದರು.

andolanait

Recent Posts

ರಷ್ಯಾ ಮೇಲೆ ಉಕ್ರೇನ್‌ ಭೀಕರ ಡ್ರೋನ್‌ ದಾಳಿ: 4 ಮಂದಿ ಸಾವು

ಮಾಸ್ಕೋ: ಉಕ್ರೇನ್‌ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್‌ ದಾಳಿ ನಡೆಸಿದೆ. ಈ ವೈಮಾನಿಕ…

6 hours ago

ಮೈಸೂರಿನಲ್ಲಿ ಜನರೊಂದಿಗೆ ಜನತಾದಳ ಕಾರ್ಯಕ್ರಮ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…

6 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

7 hours ago

ಕಳೆದ ಮೂರು ದಿನಗಳಿಂದ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತದ ಮಂದಿ ಭಕ್ತರು ಭೇಟಿ

ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…

7 hours ago

ಕಾಡಿನಲ್ಲಿ ಅಕ್ರಮವಾಗಿ ಚರ್ಚ್‌ ನಿರ್ಮಾಣ: 40ಕ್ಕೂ ಹೆಚ್ಚು ಜನರ ಬಂಧನ

ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್‌ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…

8 hours ago

ಹಾರ್ಮುಜ್‌ ದಾಟಿ ಸುರಕ್ಷಿತವಾಗಿ ಭಾರತಕ್ಕೆ ಬಂತು 20,000 ಟನ್‌ ಎಲ್‌ಪಿಜಿ ಟ್ಯಾಂಕರ್‌

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್‍ಪಿಜಿಯನ್ನು ಹೊತ್ತ…

8 hours ago