ಕಿರುತೆರೆಯ ರಿಯಾಲಿಟಿ ಶೋ ಬಿಗ್ಬಾಸ್ ಸೀಸನ್-10 ದಿನೇ ದಿನೇ ರಂಗೇರುತ್ತಿದ್ದು, ಸ್ಪರ್ಧಿಗಳ ನಡುವಿನ ಮಾತಿನ ಚಕಮಕಿ, ಗಲಾಟೆ ಎಲ್ಲವನ್ನು ಪಂಚಾಯಿತಿ ಕಟ್ಟೆಯಲ್ಲಿ ಬಗೆ ಹರಸುವ ನಿಟ್ಟಿನಲ್ಲಿ ಕಿಚ್ಚ ಸುದೀಪ ಅವರು ವಾರಾಂತ್ಯದಲ್ಲಿ ಮನೆಯ ಸ್ಪರ್ಧಿಗಳೊಂದಿಗೆ ಚರ್ಚೆ ನಡೆಸುತ್ತಾರೆ.
ಅದರಂತೆಯೇ ಈ ವಾರ (ನವೆಂಬರ್ 25) ನಡೆದ ವಾರದ ಕಥೆ ಕಿಚ್ಚನ ಜೊತೆ ವೀಕೆಂಡ್ ಶೋನಲ್ಲಿ ಕಿಚ್ಚ ಸುದೀಪ್ ಮಾತನಾಡಿದ್ದು, ಒಬ್ಬರಿಗೆ ಕಿಚ್ಚನ ಚಪ್ಪಾಳೆ ನೀಡಿದ್ದಾರೆ. ನೈಜೀರಿಯಾ ಮೂಲದ ಮೈಕಲ್ ಅಜಯ್ ಅವರ ಕನ್ನಡ ಪ್ರೀತಿಯನ್ನು ಸುದೀಪ್ ಪ್ರಶಂಸಿಸಿದ ಕಿಚ್ಚ ತಮ್ಮ ವಾರದ ಕಿಚ್ಚನ ಚಪ್ಪಾಳೆಯನ್ನು ಮೈಕಲ್ಗೆ ನೀಡಿದ್ದಾರೆ.
ಮೈಕಲ್ ಕುರಿತು ಕಿಚ್ಚ, : “ಮನೆಯಲ್ಲಿ ಕೋಪ ಬಂದಾಗ, ಅಪ್ಪಟ ಕನ್ನಡ ಮಾತಾನಾಡುವವರ ಬಾಯಲ್ಲೇ ಇಂಗ್ಲಿಷ್ ಬಂದುಬಿಡತ್ತೆ. ಆದ್ರೆ, ಮೊನ್ನೆ ನಡೆದ ಗಲಾಟೆಯಯಲ್ಲಿ ನೀವು ಕೋಪದಲ್ಲಿದ್ರೂ ಕೂಡ ಹುಡುಕಿ ಹುಡುಕಿ ಕನ್ನಡ ಪದಗಳನ್ನೇ ಬಳಸಿ ಉತ್ತರ ಕೊಡ್ತಾ ಇದ್ರಿ, ತಮಗೆ ಕನ್ನಡ ಬರಲ್ಲ ಅನ್ನೋದನ್ನು ನೀವು ಗುರಾಣಿಯಾಗಿ ಬಳಸಿಕೊಳ್ಳಬಹುದಿತ್ತು. ಆದರೆ ನೀವು ಅದನ್ನು ಬಳಸದೇ, ಕನ್ನಡ ಮಾತನಾಡಲು ನೀವು ಹಾಕಿದ ಎಫರ್ಟ್ಗೆ ನಮ್ಮ ಮೆಚ್ಚುಗೆ ಇದೆ. ಅದಕ್ಕಾಗಿ ನಾನು ನಿಮ್ಮನ್ನು ಪ್ರಶಂಸಿಸುತ್ತೇನೆ. Opportunist ಅನ್ನೋ ಪದಕ್ಕೆ ಅರ್ಥ ಹುಡುಕಿ ಕೊನೆಗೆ ಅವಕಾಶವಾದಿ ಅಂತ ಹೇಳಿದ್ರಿ” ಎಂದು ಮೈಕಲ್ ಕನ್ನಡ ಪ್ರೇಮದ ಬಗ್ಗೆ ಕಿಚ್ಚ ಸುದೀಪ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಮೈಕಲ್ಗೆ ಕಿಚ್ಚನ ಚಪ್ಪಾಳೆ
‘ಕಳೆದ ವಾರ ಕಿಚ್ಚನ ಚಪ್ಪಾಳೆ ನಡೆದಿರಲಿಲ್ಲ. ಆದರೆ ಈ ವಾರ ನೀಡುತ್ತಿದ್ದೇನೆ. ಈ ವಾರ ಒಬ್ಬ ವ್ಯಕ್ತಿಗೆ ಆಟದ ಮೇಲೆ ಫೋಕಸ್ ಜಾಸ್ತಿ ಆಗುತ್ತದೆ, ಎಫರ್ಟ್ ಜಾಸ್ತಿ ಕಾಣಿಸುತ್ತದೆ. ಸ್ಟ್ರಾಟರ್ಜಿ ಚೆನ್ನಾಗಿತ್ತು. ಟೀಮ್ ಜೊತೆಗೆ ಚೆನ್ನಾಗಿ ಸ್ಪಂದಿಸುತ್ತಾರೆ, ಚೆನ್ನಾಗಿ ಆಡುತ್ತಾರೆ. ಅಭಿಪ್ರಾಯಗಳನ್ನು ಓಪನ್ ಆಗಿ ಮಾತನಾಡುತ್ತಾರೆ. ಅದ್ಭುತವಾಗಿ ನನ್ನ ಕಣ್ಣಿಗೆ ಕಾಣಿಸಿದ್ದು ಮೈಕಲ್ ಅವರು. ಈ ವಾರ ಕಿಚ್ಚನ ಚಪ್ಪಾಳೆ ಮೈಕಲ್ಗೆ ಹೋಗುತ್ತಿದೆ. ನೀವು ಕನ್ನಡ ಮಾತನಾಡಲು ಹಾಕಿದ ಎಫರ್ಟ್ ಒಂಚೂರು ಎದ್ದು ಕಾಣಿಸ್ತು. ಅದೇ ತುಂಬ ಪ್ಲಸ್ ಆಯ್ತು ಮೈಕಲ್’ ಎಂದು ಕಿಚ್ಚ ಸುದೀಪ್ ಹೇಳಿದರು.
ಕಿಚ್ಚ ಸುದೀಪ್ ಅವರು ಕಿಚ್ಚನ ಚಪ್ಪಾಳೆ ನೀಡಿದ್ದಕ್ಕೆ ಮೈಕಲ್ ಅವರು ಧನ್ಯವಾದಗಳನ್ನು ತಿಳಿಸಿದರು. ಸಾಮಾಜಿಕ ಜಾಲತಾಣದಲ್ಲೂ ಮೈಕಲ್ ಅವರ ಆಟದ ರೀತಿಗೆ ಮತ್ತು ಅವರಿಗೆ ಕನ್ನಡ ಭಾಷೆ ಮೇಲೆ ಇರುವ ಪ್ರೀತಿಗೆ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗುತ್ತಿದೆ.
ಟೆಹ್ರಾನ್ : ಇರಾನ್ನ ಪರಮಾಣು ಯೋಜನೆಯ ಸುತ್ತಲಿನ ಅಂತಾರಾಷ್ಟ್ರೀಯ ಬಿಕ್ಕಟ್ಟು ಮತ್ತೆ ತಾರಕಕ್ಕೇರಿದೆ. ಒಂದು ರಾಷ್ಟ್ರದ ಕಾನೂನುಬದ್ಧ ಹಕ್ಕುಗಳನ್ನು ಕಸಿದುಕೊಳ್ಳಲು…
ಕೆ.ಆರ್.ನಗರ : ತಾಲ್ಲೂಕಿನ ಹೊರವಲಯದ ಅರ್ಕೇಶ್ವರ ದೇಗುಲ ಬಳಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ಸಾವನ್ನಪ್ಪಿದ ಆರು ಮಂದಿಯೂ ಒಂದೇ…
ಚಾಮರಾಜನಗರ : ಕೋವಿಡ್ ವೇಳೆಯಲ್ಲಿ ನಗರದ ಜಿಲ್ಲಾಸ್ಪತ್ರೆಯಲ್ಲಿ (ಈಗ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ) ಸಂಭವಿಸಿದ್ದ ಆಕ್ಸಿಜನ್ ದುರಂತದಲ್ಲಿ 36…
ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.20 ಹಾಗೂ 21ರಂದು ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. 20ರಂದು…
ಮೈಸೂರು : ಜಿಲ್ಲೆಯ ಕೆ.ಆರ್.ನಗರದ ಅರ್ಕೇಶ್ವರ ದೇಗುಲದ ಬಳಿ ಕಾವೇರಿ ನದಿಯಲ್ಲಿ ಈಜಲು ತೆರಳಿ ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ…
ರಾಣೇಬೆನ್ನೂರ : ಮಾನವ ಸಮಾಜ ನಿರ್ಮಾಣದಲ್ಲಿ ಎಲ್ಲರೂ ಪಾಲುದಾರರಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಅವರು ಇಂದು ರಾಣಿಬೆನ್ನೂರಿನ ನಿಟ್ಟೂರು…