ಚಿತ್ರ ಮಂಜರಿ

ಬಿಗ್‌ಬಾಸ್‌ ಕನ್ನಡ: ಕಿಚ್ಚನ ಚಪ್ಪಾಳೆ ಮೈಕಲ್‌ಗೆ ಸಿಕ್ಕಿದ್ದು ಯಾಕೆ ಗೊತ್ತಾ?

ಕಿರುತೆರೆಯ ರಿಯಾಲಿಟಿ ಶೋ ಬಿಗ್‌ಬಾಸ್‌ ಸೀಸನ್‌-10 ದಿನೇ ದಿನೇ ರಂಗೇರುತ್ತಿದ್ದು, ಸ್ಪರ್ಧಿಗಳ ನಡುವಿನ ಮಾತಿನ ಚಕಮಕಿ, ಗಲಾಟೆ ಎಲ್ಲವನ್ನು ಪಂಚಾಯಿತಿ ಕಟ್ಟೆಯಲ್ಲಿ ಬಗೆ ಹರಸುವ ನಿಟ್ಟಿನಲ್ಲಿ ಕಿಚ್ಚ ಸುದೀಪ ಅವರು ವಾರಾಂತ್ಯದಲ್ಲಿ ಮನೆಯ ಸ್ಪರ್ಧಿಗಳೊಂದಿಗೆ ಚರ್ಚೆ ನಡೆಸುತ್ತಾರೆ.

ಅದರಂತೆಯೇ ಈ ವಾರ (ನವೆಂಬರ್‌ 25) ನಡೆದ ವಾರದ ಕಥೆ ಕಿಚ್ಚನ ಜೊತೆ ವೀಕೆಂಡ್‌ ಶೋನಲ್ಲಿ ಕಿಚ್ಚ ಸುದೀಪ್‌ ಮಾತನಾಡಿದ್ದು, ಒಬ್ಬರಿಗೆ ಕಿಚ್ಚನ ಚಪ್ಪಾಳೆ ನೀಡಿದ್ದಾರೆ.  ನೈಜೀರಿಯಾ ಮೂಲದ ಮೈಕಲ್‌ ಅಜಯ್‌ ಅವರ ಕನ್ನಡ ಪ್ರೀತಿಯನ್ನು ಸುದೀಪ್ ಪ್ರಶಂಸಿಸಿದ ಕಿಚ್ಚ ತಮ್ಮ ವಾರದ ಕಿಚ್ಚನ ಚಪ್ಪಾಳೆಯನ್ನು ಮೈಕಲ್‌ಗೆ ನೀಡಿದ್ದಾರೆ.

ಮೈಕಲ್‌ ಕುರಿತು ಕಿಚ್ಚ, : “ಮನೆಯಲ್ಲಿ ಕೋಪ ಬಂದಾಗ, ಅಪ್ಪಟ ಕನ್ನಡ ಮಾತಾನಾಡುವವರ ಬಾಯಲ್ಲೇ ಇಂಗ್ಲಿಷ್ ಬಂದುಬಿಡತ್ತೆ. ಆದ್ರೆ, ಮೊನ್ನೆ ನಡೆದ ಗಲಾಟೆಯಯಲ್ಲಿ ನೀವು ಕೋಪದಲ್ಲಿದ್ರೂ ಕೂಡ ಹುಡುಕಿ ಹುಡುಕಿ ಕನ್ನಡ ಪದಗಳನ್ನೇ ಬಳಸಿ ಉತ್ತರ ಕೊಡ್ತಾ ಇದ್ರಿ, ತಮಗೆ ಕನ್ನಡ ಬರಲ್ಲ ಅನ್ನೋದನ್ನು ನೀವು ಗುರಾಣಿಯಾಗಿ ಬಳಸಿಕೊಳ್ಳಬಹುದಿತ್ತು. ಆದರೆ ನೀವು ಅದನ್ನು ಬಳಸದೇ, ಕನ್ನಡ ಮಾತನಾಡಲು ನೀವು ಹಾಕಿದ ಎಫರ್ಟ್‌ಗೆ ನಮ್ಮ ಮೆಚ್ಚುಗೆ ಇದೆ. ಅದಕ್ಕಾಗಿ ನಾನು ನಿಮ್ಮನ್ನು ಪ್ರಶಂಸಿಸುತ್ತೇನೆ. Opportunist ಅನ್ನೋ ಪದಕ್ಕೆ ಅರ್ಥ ಹುಡುಕಿ ಕೊನೆಗೆ ಅವಕಾಶವಾದಿ ಅಂತ ಹೇಳಿದ್ರಿ” ಎಂದು ಮೈಕಲ್‌ ಕನ್ನಡ ಪ್ರೇಮದ ಬಗ್ಗೆ ಕಿಚ್ಚ ಸುದೀಪ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮೈಕಲ್‌ಗೆ ಕಿಚ್ಚನ ಚಪ್ಪಾಳೆ
‘ಕಳೆದ ವಾರ ಕಿಚ್ಚನ ಚಪ್ಪಾಳೆ ನಡೆದಿರಲಿಲ್ಲ. ಆದರೆ ಈ ವಾರ ನೀಡುತ್ತಿದ್ದೇನೆ. ಈ ವಾರ ಒಬ್ಬ ವ್ಯಕ್ತಿಗೆ ಆಟದ ಮೇಲೆ ಫೋಕಸ್ ಜಾಸ್ತಿ ಆಗುತ್ತದೆ, ಎಫರ್ಟ್‌ ಜಾಸ್ತಿ ಕಾಣಿಸುತ್ತದೆ. ಸ್ಟ್ರಾಟರ್ಜಿ ಚೆನ್ನಾಗಿತ್ತು. ಟೀಮ್‌ ಜೊತೆಗೆ ಚೆನ್ನಾಗಿ ಸ್ಪಂದಿಸುತ್ತಾರೆ, ಚೆನ್ನಾಗಿ ಆಡುತ್ತಾರೆ. ಅಭಿಪ್ರಾಯಗಳನ್ನು ಓಪನ್ ಆಗಿ ಮಾತನಾಡುತ್ತಾರೆ. ಅದ್ಭುತವಾಗಿ ನನ್ನ ಕಣ್ಣಿಗೆ ಕಾಣಿಸಿದ್ದು ಮೈಕಲ್ ಅವರು. ಈ ವಾರ ಕಿಚ್ಚನ ಚಪ್ಪಾಳೆ ಮೈಕಲ್‌ಗೆ ಹೋಗುತ್ತಿದೆ. ನೀವು ಕನ್ನಡ ಮಾತನಾಡಲು ಹಾಕಿದ ಎಫರ್ಟ್ ಒಂಚೂರು ಎದ್ದು ಕಾಣಿಸ್ತು. ಅದೇ ತುಂಬ ಪ್ಲಸ್ ಆಯ್ತು ಮೈಕಲ್’ ಎಂದು ಕಿಚ್ಚ ಸುದೀಪ್ ಹೇಳಿದರು.

ಕಿಚ್ಚ ಸುದೀಪ್ ಅವರು ಕಿಚ್ಚನ ಚಪ್ಪಾಳೆ ನೀಡಿದ್ದಕ್ಕೆ ಮೈಕಲ್ ಅವರು ಧನ್ಯವಾದಗಳನ್ನು ತಿಳಿಸಿದರು. ಸಾಮಾಜಿಕ ಜಾಲತಾಣದಲ್ಲೂ ಮೈಕಲ್‌ ಅವರ ಆಟದ ರೀತಿಗೆ ಮತ್ತು ಅವರಿಗೆ ಕನ್ನಡ ಭಾಷೆ ಮೇಲೆ ಇರುವ ಪ್ರೀತಿಗೆ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗುತ್ತಿದೆ.

andolanait

Recent Posts

ರಾಜ್ಯಕ್ಕೆ ಇನ್ನೊಂದು ಹೈ ಸ್ಪೀಡ್ ರೈಲ್ವೆ ಕಾರಿಡಾರ್ : ರೈಲ್ವೆ ಸಚಿವ ಅಶ್ವಿನಿ ವೈಷ್ಣವ ಜತೆ ಎಚ್‌ಡಿಕೆ ಚರ್ಚೆ

ಹೊಸದಿಲ್ಲಿ : ಬಜೆಟ್ ನಂತರ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ರೈಲ್ವೆ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ,…

5 mins ago

ಮ.ಬೆಟ್ಟದಲ್ಲಿ ಸ್ವಚ್ಛತಾ ನಡಿಗೆ : ಕಸ ಸಂಗ್ರಹಿಸಿದ ಕಾಲೇಜು ವಿದ್ಯಾರ್ಥಿಗಳು

ಹನೂರು : ತಾಲೂಕಿನ ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ಕೊಳ್ಳೇಗಾಲ ವಾಸವಿ ಪ್ರಥಮ ದರ್ಜೆ ವಿದ್ಯಾ ಕೇಂದ್ರದ ವಿದ್ಯಾರ್ಥಿಗಳು…

29 mins ago

ಮೆಟ್ರೋ ಪ್ರಯಾಣಿಕರಿಗೆ ಮತ್ತೆ ದರ ಏರಿಕೆ ಶಾಕ್?

ಬೆಂಗಳೂರು: ಮೆಟ್ರೋ ಪ್ರಯಾಣಿಕರಿಗೆ ಮತ್ತೆ ದರ ಏರಿಕೆ ಶಾಕ್ ನೀಡುವ ಸಾಧ್ಯತೆ ಇದೆ. ಪ್ರತಿ ವರ್ಷದಂತೆ ಈ ವರ್ಷವೂ ಮೆಟ್ರೊ…

2 hours ago

ಕಾಂಗ್ರೆಸ್‌ ಹೈಕಮಾಂಡ್‌ಗೆ ಕರ್ನಾಟಕ ರಾಜ್ಯವೇ ಎಟಿಎಂ: ವಿಜಯೇಂದ್ರ ಆಕ್ರೋಶ

ಬೆಂಗಳೂರು: ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿರುವ ಕಾಂಗ್ರೆಸ್‌ ಸರ್ಕಾರದ ಮುಖ್ಯಮಂತ್ರಿಗಳು ಅಬಕಾರಿ ವಿಚಾರದಲ್ಲಿ ಗಟ್ಟಿ ನಿರ್ಧಾರವನ್ನು ತೆಗೆದುಕೊಳ್ಳಬೇಕೆಂಬುದು ಬಿಜೆಪಿ ಹಾಗೂ ಜೆಡಿಎಸ್‌…

2 hours ago

ಫೆ.14ರಿಂದ 18ರವರೆಗೆ ಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಜಾತ್ರೆ: ಸಿದ್ಧತೆ ಪರಿಶೀಲಿಸಿದ ಎಈ ರಘು

ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಫೆಬ್ರವರಿ.14 ರಿಂದ 18ರವರೆಗೆ…

2 hours ago

ಅಂತರರಾಷ್ಟ್ರೀಯ ವಾಣಿಜ್ಯ ಮೇಳ 2026: ಉತ್ಪಾದನೋತ್ತರ ಕೃಷಿ ಕಾರ್ಯಕ್ರಮವನ್ನು ಯಶ್ವಸಿಗೊಳಿಸಿ: ಎನ್.ಚಲುವರಾಯಸ್ವಾಮಿ

ಬೆಂಗಳೂರು: ನಮ್ಮ ಸರ್ಕಾರವು 2017ರಲ್ಲಿ ಪ್ರಾರಂಭಿಸಿದ ಸಾವಯವ ಮತ್ತು ಸಿರಿಧಾನ್ಯ ಮೇಳವು ಇಂದು ಅಂತರರಾಷ್ಟ್ರೀಯ ಮಟ್ಟದಲ್ಲಿ ಬೆಳೆದಿರುವುದು ನಮ್ಮೆಲ್ಲರ ಹೆಮ್ಮೆ…

3 hours ago