ಚಿತ್ರ ಮಂಜರಿ

ಬಿಗ್‌ಬಾಸ್‌ ಕನ್ನಡ: ಕಿಚ್ಚನ ಚಪ್ಪಾಳೆ ಮೈಕಲ್‌ಗೆ ಸಿಕ್ಕಿದ್ದು ಯಾಕೆ ಗೊತ್ತಾ?

ಕಿರುತೆರೆಯ ರಿಯಾಲಿಟಿ ಶೋ ಬಿಗ್‌ಬಾಸ್‌ ಸೀಸನ್‌-10 ದಿನೇ ದಿನೇ ರಂಗೇರುತ್ತಿದ್ದು, ಸ್ಪರ್ಧಿಗಳ ನಡುವಿನ ಮಾತಿನ ಚಕಮಕಿ, ಗಲಾಟೆ ಎಲ್ಲವನ್ನು ಪಂಚಾಯಿತಿ ಕಟ್ಟೆಯಲ್ಲಿ ಬಗೆ ಹರಸುವ ನಿಟ್ಟಿನಲ್ಲಿ ಕಿಚ್ಚ ಸುದೀಪ ಅವರು ವಾರಾಂತ್ಯದಲ್ಲಿ ಮನೆಯ ಸ್ಪರ್ಧಿಗಳೊಂದಿಗೆ ಚರ್ಚೆ ನಡೆಸುತ್ತಾರೆ.

ಅದರಂತೆಯೇ ಈ ವಾರ (ನವೆಂಬರ್‌ 25) ನಡೆದ ವಾರದ ಕಥೆ ಕಿಚ್ಚನ ಜೊತೆ ವೀಕೆಂಡ್‌ ಶೋನಲ್ಲಿ ಕಿಚ್ಚ ಸುದೀಪ್‌ ಮಾತನಾಡಿದ್ದು, ಒಬ್ಬರಿಗೆ ಕಿಚ್ಚನ ಚಪ್ಪಾಳೆ ನೀಡಿದ್ದಾರೆ.  ನೈಜೀರಿಯಾ ಮೂಲದ ಮೈಕಲ್‌ ಅಜಯ್‌ ಅವರ ಕನ್ನಡ ಪ್ರೀತಿಯನ್ನು ಸುದೀಪ್ ಪ್ರಶಂಸಿಸಿದ ಕಿಚ್ಚ ತಮ್ಮ ವಾರದ ಕಿಚ್ಚನ ಚಪ್ಪಾಳೆಯನ್ನು ಮೈಕಲ್‌ಗೆ ನೀಡಿದ್ದಾರೆ.

ಮೈಕಲ್‌ ಕುರಿತು ಕಿಚ್ಚ, : “ಮನೆಯಲ್ಲಿ ಕೋಪ ಬಂದಾಗ, ಅಪ್ಪಟ ಕನ್ನಡ ಮಾತಾನಾಡುವವರ ಬಾಯಲ್ಲೇ ಇಂಗ್ಲಿಷ್ ಬಂದುಬಿಡತ್ತೆ. ಆದ್ರೆ, ಮೊನ್ನೆ ನಡೆದ ಗಲಾಟೆಯಯಲ್ಲಿ ನೀವು ಕೋಪದಲ್ಲಿದ್ರೂ ಕೂಡ ಹುಡುಕಿ ಹುಡುಕಿ ಕನ್ನಡ ಪದಗಳನ್ನೇ ಬಳಸಿ ಉತ್ತರ ಕೊಡ್ತಾ ಇದ್ರಿ, ತಮಗೆ ಕನ್ನಡ ಬರಲ್ಲ ಅನ್ನೋದನ್ನು ನೀವು ಗುರಾಣಿಯಾಗಿ ಬಳಸಿಕೊಳ್ಳಬಹುದಿತ್ತು. ಆದರೆ ನೀವು ಅದನ್ನು ಬಳಸದೇ, ಕನ್ನಡ ಮಾತನಾಡಲು ನೀವು ಹಾಕಿದ ಎಫರ್ಟ್‌ಗೆ ನಮ್ಮ ಮೆಚ್ಚುಗೆ ಇದೆ. ಅದಕ್ಕಾಗಿ ನಾನು ನಿಮ್ಮನ್ನು ಪ್ರಶಂಸಿಸುತ್ತೇನೆ. Opportunist ಅನ್ನೋ ಪದಕ್ಕೆ ಅರ್ಥ ಹುಡುಕಿ ಕೊನೆಗೆ ಅವಕಾಶವಾದಿ ಅಂತ ಹೇಳಿದ್ರಿ” ಎಂದು ಮೈಕಲ್‌ ಕನ್ನಡ ಪ್ರೇಮದ ಬಗ್ಗೆ ಕಿಚ್ಚ ಸುದೀಪ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮೈಕಲ್‌ಗೆ ಕಿಚ್ಚನ ಚಪ್ಪಾಳೆ
‘ಕಳೆದ ವಾರ ಕಿಚ್ಚನ ಚಪ್ಪಾಳೆ ನಡೆದಿರಲಿಲ್ಲ. ಆದರೆ ಈ ವಾರ ನೀಡುತ್ತಿದ್ದೇನೆ. ಈ ವಾರ ಒಬ್ಬ ವ್ಯಕ್ತಿಗೆ ಆಟದ ಮೇಲೆ ಫೋಕಸ್ ಜಾಸ್ತಿ ಆಗುತ್ತದೆ, ಎಫರ್ಟ್‌ ಜಾಸ್ತಿ ಕಾಣಿಸುತ್ತದೆ. ಸ್ಟ್ರಾಟರ್ಜಿ ಚೆನ್ನಾಗಿತ್ತು. ಟೀಮ್‌ ಜೊತೆಗೆ ಚೆನ್ನಾಗಿ ಸ್ಪಂದಿಸುತ್ತಾರೆ, ಚೆನ್ನಾಗಿ ಆಡುತ್ತಾರೆ. ಅಭಿಪ್ರಾಯಗಳನ್ನು ಓಪನ್ ಆಗಿ ಮಾತನಾಡುತ್ತಾರೆ. ಅದ್ಭುತವಾಗಿ ನನ್ನ ಕಣ್ಣಿಗೆ ಕಾಣಿಸಿದ್ದು ಮೈಕಲ್ ಅವರು. ಈ ವಾರ ಕಿಚ್ಚನ ಚಪ್ಪಾಳೆ ಮೈಕಲ್‌ಗೆ ಹೋಗುತ್ತಿದೆ. ನೀವು ಕನ್ನಡ ಮಾತನಾಡಲು ಹಾಕಿದ ಎಫರ್ಟ್ ಒಂಚೂರು ಎದ್ದು ಕಾಣಿಸ್ತು. ಅದೇ ತುಂಬ ಪ್ಲಸ್ ಆಯ್ತು ಮೈಕಲ್’ ಎಂದು ಕಿಚ್ಚ ಸುದೀಪ್ ಹೇಳಿದರು.

ಕಿಚ್ಚ ಸುದೀಪ್ ಅವರು ಕಿಚ್ಚನ ಚಪ್ಪಾಳೆ ನೀಡಿದ್ದಕ್ಕೆ ಮೈಕಲ್ ಅವರು ಧನ್ಯವಾದಗಳನ್ನು ತಿಳಿಸಿದರು. ಸಾಮಾಜಿಕ ಜಾಲತಾಣದಲ್ಲೂ ಮೈಕಲ್‌ ಅವರ ಆಟದ ರೀತಿಗೆ ಮತ್ತು ಅವರಿಗೆ ಕನ್ನಡ ಭಾಷೆ ಮೇಲೆ ಇರುವ ಪ್ರೀತಿಗೆ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗುತ್ತಿದೆ.

andolanait

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

10 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

10 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

11 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

13 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

16 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

16 hours ago