ಚಿತ್ರ ಮಂಜರಿ

ಮತ್ತೆ ಬರಲು ಸಾಜ್ಜಾಯ್ತು ಬಿಗ್ ಬಾಸ್ ಕನ್ನಡ

ಕನ್ನಡ ಟಿವಿ ಲೋಕದ ಅತ್ಯಂತ ಜನಪ್ರಿಯ ಶೋ ಬಿಗ್​ಬಾಸ್ ಕನ್ನಡ. ಈ ವರೆಗೆ ಒಂಬತ್ತು ಸೀಸನ್​ಗಳು ಪ್ರಸಾರವಾಗಿವೆ. ಬಿಗ್​ಬಾಸ್ ಪ್ರಸಾರವಾದ ಪ್ರತಿಬಾರಿ ಪರ-ವಿರೋಧ ಚರ್ಚೆಗಳು ಇರುತ್ತವೆಯಾದರೂ ಜನರು ನೋಡುವುದಂತೂ ಬಿಟ್ಟಿಲ್ಲ. ಬಿಗ್​ಬಾಸ್ ಸೀಸನ್ 9ರಲ್ಲಿ ನಟ, ರೇಡಿಯೋ ಜಾಕಿ ರೂಪೇಶ್ ಶೆಟ್ಟಿ ವಿಜೇತರಾಗಿದ್ದರು, ಚೆನ್ನಾಗಿ ಆಡಿದ್ದ ರಾಕೇಶ್ ಅಡಿಗ ರನ್ನರ್ ಅಪ್ ಆಗಿದ್ದರು. ಕಳೆದ ಬಾರಿ ಬಿಗ್​ಬಾಸ್ ಒಟಿಟಿ ಮೊದಲ ಸೀಸನ್ ಸಹ ಪ್ರಾರಂಭವಾಗಿದ್ದು ಅದನ್ನೂ ಕೂಡ ಸುದೀಪ್ ಅವರೇ ನಿರೂಪಣೆ ಮಾಡಿದ್ದರು. ಇದೀಗ ಮತ್ತೊಮ್ಮೆ ಬಿಗ್​ಬಾಸ್​ ಬರಲು ಸಜ್ಜಾಗಿದೆ.

ವಿಕ್ರಾಂತ್ ರೋಣ ಸಿನಿಮಾ ಬಳಿಕ ದೊಡ್ಡ ಗ್ಯಾಪ್ ತೆಗೆದುಕೊಂಡ ನಟ ಸುದೀಪ್ ಇದೀಗ ಹೊಸ ಸಿನಿಮಾದ ಚಿತ್ರೀಕರಣ ಶುರು ಮಾಡಿದ್ದಾರೆ. ತಮ್ಮ 46ನೇ ಸಿನಿಮಾದ ಚಿತ್ರೀಕರಣವನ್ನು ಚೆನ್ನೈನ ಮಹಾಬಲಪುರಂನಲ್ಲಿ ಸುದೀಪ್ ಮಾಡುತ್ತಿದ್ದು, ಈ ಸಿನಿಮಾದ ಚಿತ್ರೀಕರಣ ಮುಗಿಸಿದ ಬಳಿಕ ಬಿಗ್​ಬಾಸ್​ಹೊಸ ಸೀಸನ್ ಪ್ರಾರಂಭ ಮಾಡಲಿದ್ದಾರೆ ಎನ್ನಲಾಗುತ್ತಿದೆ.

ಹಲವು ವರ್ಷಗಳ ಕಾಲ ಬಿಗ್​ಬಾಸ್ ಆಯೋಜನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಪರಮೇಶ್ವರ್ ಗುಂಡಕಲ್ ಈ ಬಾರಿ ಬಿಗ್​ಬಾಸ್ ರಿಯಾಲಿಟಿ ಶೋನ ಭಾಗವಾಗಿರುವುದಿಲ್ಲ. ಅದು ಮಾತ್ರವೇ ಅಲ್ಲದೆ ಈ ಬಾರಿ ಬಿಗ್​ಬಾಸ್ ಒಟಿಟಿ ಎರಡನೇ ಸೀಸನ್ ಹಾಗೂ ಬಿಗ್​ಬಾಸ್ ಸೀಸನ್ 10 ಎರಡೂ ಸಹ ಒಂದರ ಬಳಿಕ ಒಂದು ನಡೆಸಬೇಕಿರುವುದು ಸಹ ಸವಾಲಿನ ಕೆಲವೇ ಆಗಿದೆ.

ಕೆಲವು ಮೂಲಗಳ ಪ್ರಕಾರ ಈಗಾಗಲೇ ಬಿಗ್​ಬಾಸ್ ಹೊಸ ಸೀಸನ್​ಗೆ ತಯಾರಿ ಆರಂಭವಾಗಿದೆ. ಸ್ಪರ್ಧಿಗಳ ಹುಡುಕಾಟ, ಸಂದರ್ಶನ, ಚರ್ಚೆ, ಒಪ್ಪಂದ ಕಾರ್ಯಗಳು ಚಾಲ್ತಿಯಲ್ಲಿವೆ. ಆ ನಂತರ ಹೊಸ ಸೆಟ್ ನಿರ್ಮಾಣ ಹಾಗೂ ಚಿತ್ರೀಕರಣಗಳು ಪ್ರಾರಂಭಗೊಳ್ಳಲಿವೆ. ಹಿಂದಿ ಮಾದರಿಯಲ್ಲಿಯೇ ಬಿಗ್​ಬಾಸ್ ಟಿವಿ ಸೀಸನ್ ನಡೆದ ಬಳಿಕ ಬಿಗ್​ಬಾಸ್ ಒಟಿಟಿ ಸೀಸನ್ 2ರ ಆರಂಭ ಆಗುವ ಸಾಧ್ಯತೆ ಇದೆ.

ನಟ ಸುದೀಪ್ ಪ್ರಸ್ತುತ ‘ಕಿಚ್ಚ 46’ ಸಿನಿಮಾದ ಚಿತ್ರೀಕರಣದಲ್ಲಿದ್ದಾರೆ ಆದರೆ ಸಿನಿಮಾದ ಚಿತ್ರೀಕರಣ ಮುಗಿದ ಬಳಿಕ ಅನುಪ್ ಭಂಡಾರಿಯ ಹೊಸ ಸಿನಿಮಾದ ಚಿತ್ರೀಕರಣ ಆರಂಭಿಸಲಿದ್ದಾರೆ. ಅವರೇ ಹೇಳಿಕೊಂಡಿರುವ ಪ್ರಕಾರ ಅವರ 50ನೇ ಸಿನಿಮಾ ವರೆಗೂ ಅವರು ಸತತವಾಗಿ ಬ್ಯುಸಿಯಾಗಿರುವುದು ಮಾತ್ರವಲ್ಲ ಸಾಲಾಗಿ ಸಿನಿಮಾಗಳು ಸಹ ಒಪ್ಪಿಗೆ ಆಗಿಬಿಟ್ಟಿವೆ. ಇವುಗಳ ನಡುವೆಯೇ ಬಿಗ್​ಬಾಸ್ ರಿಯಾಲಿಟಿ ಶೋ ಸಹ ನಡೆಯಲಿದೆ.

lokesh

Recent Posts

ಮಡಿಕೇರಿ: ಶರಣ್ಯಾಳಿಗಾಗಿ ಇಂದು ಕೂಡ ತೀವ್ರಗೊಂಡ ಶೋಧ ಕಾರ್ಯಾಚರಣೆ

ಮಡಿಕೇರಿ: ತಡಿಯಂಡಮೋಳ್‌ ಬೆಟ್ಟಕ್ಕೆ ಚಾರಣಕ್ಕೆ ತೆರಳಿದ್ದ ಕೇರಳ ಮೂಲದ ಐಟಿ ಉದ್ಯೋಗಿ ಶರಣ್ಯಾ ನಾಪತ್ತೆಯಾಗಿ ಮೂರು ದಿನಗಳು ಕಳೆದರೂ ಈವರೆಗೂ…

7 mins ago

ಓದುಗರ ಪತ್ರ: ರೈಲು ಟಿಕೆಟ್ ರದ್ದತಿ ಹೊಸ ನಿಯಮದ ಬಗ್ಗೆ ಅರಿವಿರಲಿ

ಭಾರತೀಯ ರೈಲ್ವೆ ಇಲಾಖೆಯು ಕಾಯ್ದಿರಿಸುವ ಮುಂಗಡ ಟಿಕೆಟ್ ರದ್ದತಿಯ ಬಗ್ಗೆ ಹೊಸ ನಿಯಮವನ್ನು ಏಪ್ರಿಲ್ ೧ರಿಂದ ಜಾರಿಗೆ ತಂದಿದೆ. ಪ್ರಯಾಣಿಸುವ…

49 mins ago

ಓದುಗರ ಪತ್ರ: ಅಂಚೆ ಕಚೇರಿಯಲ್ಲಿ ಹೆಚ್ಚುವರಿ ಕೌಂಟರ್ ತೆರೆಯಿರಿ

ಮೈಸೂರು ನಗರದ ಪ್ರಧಾನ ಅಂಚೆ ಕಚೇರಿಯಲ್ಲಿ ಉಳಿತಾಯ ಖಾತೆ ಕೌಂಟರ್‌ಗಳ ಸಂಖ್ಯೆ ಕಡಿಮೆ ಇರುವುದರಿಂದ ನಿಧಾನಗತಿಯಲ್ಲಿ ಕೆಲಸ ಸಾಗುತ್ತಿದೆ. ಹಿರಿಯ…

51 mins ago

ಓದುಗರ ಪತ್ರ: ಇರುವುದರಲ್ಲೇ ತೃಪ್ತಿ ಕಾಣಬೇಕು

ಇರುವುದೆಲ್ಲವ ಬಿಟ್ಟು ಇರದುದರೆಡೆಗೆ ತುಡಿವುದೇ ಜೀವನ! ಜನಪ್ರಿಯ ಕವಿ ಗೋಪಾಲಕೃಷ್ಣ ಅಡಿಗರ ಕವನದ ಈ ಸಾಲು ಇಂದಿನ ಕಾಲಮಾನದ ಜನಮಾನಸಕ್ಕೆ…

57 mins ago

ಹಸಿರುಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನರಾಮ್

ಎಚ್.ಹಾಲಪ್ಪ ಸಮಾನತೆ ಇಲ್ಲದೆ ಪ್ರಜಾಪ್ರಭುತ್ವ ಅಪೂರ್ಣ ಎಂದು ನಂಬಿದ್ದ ತಮ್ಮ ಕಾರ್ಯಪ್ರವೃತ್ತಿಯಿಂದ ಸಮಾಜದಲ್ಲಿ ಸಮಾನತೆಯನ್ನು ಜೀವಂತಗೊಳಿಸಿದ ದೇಶದಾದ್ಯಂತ ಬಾಬೂಜಿ ಎಂದೇ…

3 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಕರ್ನಾಟಕ, ಮಹಾರಾಷ್ಟ್ರದಲ್ಲಿ ಮತ್ತೆ ಹಿಂದಿ ವಿವಾದ

ಹಿಂದಿ ಭಾಷೆಯ ಪ್ರಶ್ನೆ ಮತ್ತೆ ವಿವಾದವನ್ನು ಉಂಟು ಮಾಡಿದೆ. ತನ್ನ ಮಾತೃ ಭಾಷೆಯಲ್ಲದ ಮತ್ತು ಉತ್ತರ ಭಾರತದ ರಾಜ್ಯಗಳ ಮಾತೃ…

4 hours ago