ಚಿತ್ರ ಮಂಜರಿ

ಮತ್ತೆ ಬರಲು ಸಾಜ್ಜಾಯ್ತು ಬಿಗ್ ಬಾಸ್ ಕನ್ನಡ

ಕನ್ನಡ ಟಿವಿ ಲೋಕದ ಅತ್ಯಂತ ಜನಪ್ರಿಯ ಶೋ ಬಿಗ್​ಬಾಸ್ ಕನ್ನಡ. ಈ ವರೆಗೆ ಒಂಬತ್ತು ಸೀಸನ್​ಗಳು ಪ್ರಸಾರವಾಗಿವೆ. ಬಿಗ್​ಬಾಸ್ ಪ್ರಸಾರವಾದ ಪ್ರತಿಬಾರಿ ಪರ-ವಿರೋಧ ಚರ್ಚೆಗಳು ಇರುತ್ತವೆಯಾದರೂ ಜನರು ನೋಡುವುದಂತೂ ಬಿಟ್ಟಿಲ್ಲ. ಬಿಗ್​ಬಾಸ್ ಸೀಸನ್ 9ರಲ್ಲಿ ನಟ, ರೇಡಿಯೋ ಜಾಕಿ ರೂಪೇಶ್ ಶೆಟ್ಟಿ ವಿಜೇತರಾಗಿದ್ದರು, ಚೆನ್ನಾಗಿ ಆಡಿದ್ದ ರಾಕೇಶ್ ಅಡಿಗ ರನ್ನರ್ ಅಪ್ ಆಗಿದ್ದರು. ಕಳೆದ ಬಾರಿ ಬಿಗ್​ಬಾಸ್ ಒಟಿಟಿ ಮೊದಲ ಸೀಸನ್ ಸಹ ಪ್ರಾರಂಭವಾಗಿದ್ದು ಅದನ್ನೂ ಕೂಡ ಸುದೀಪ್ ಅವರೇ ನಿರೂಪಣೆ ಮಾಡಿದ್ದರು. ಇದೀಗ ಮತ್ತೊಮ್ಮೆ ಬಿಗ್​ಬಾಸ್​ ಬರಲು ಸಜ್ಜಾಗಿದೆ.

ವಿಕ್ರಾಂತ್ ರೋಣ ಸಿನಿಮಾ ಬಳಿಕ ದೊಡ್ಡ ಗ್ಯಾಪ್ ತೆಗೆದುಕೊಂಡ ನಟ ಸುದೀಪ್ ಇದೀಗ ಹೊಸ ಸಿನಿಮಾದ ಚಿತ್ರೀಕರಣ ಶುರು ಮಾಡಿದ್ದಾರೆ. ತಮ್ಮ 46ನೇ ಸಿನಿಮಾದ ಚಿತ್ರೀಕರಣವನ್ನು ಚೆನ್ನೈನ ಮಹಾಬಲಪುರಂನಲ್ಲಿ ಸುದೀಪ್ ಮಾಡುತ್ತಿದ್ದು, ಈ ಸಿನಿಮಾದ ಚಿತ್ರೀಕರಣ ಮುಗಿಸಿದ ಬಳಿಕ ಬಿಗ್​ಬಾಸ್​ಹೊಸ ಸೀಸನ್ ಪ್ರಾರಂಭ ಮಾಡಲಿದ್ದಾರೆ ಎನ್ನಲಾಗುತ್ತಿದೆ.

ಹಲವು ವರ್ಷಗಳ ಕಾಲ ಬಿಗ್​ಬಾಸ್ ಆಯೋಜನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಪರಮೇಶ್ವರ್ ಗುಂಡಕಲ್ ಈ ಬಾರಿ ಬಿಗ್​ಬಾಸ್ ರಿಯಾಲಿಟಿ ಶೋನ ಭಾಗವಾಗಿರುವುದಿಲ್ಲ. ಅದು ಮಾತ್ರವೇ ಅಲ್ಲದೆ ಈ ಬಾರಿ ಬಿಗ್​ಬಾಸ್ ಒಟಿಟಿ ಎರಡನೇ ಸೀಸನ್ ಹಾಗೂ ಬಿಗ್​ಬಾಸ್ ಸೀಸನ್ 10 ಎರಡೂ ಸಹ ಒಂದರ ಬಳಿಕ ಒಂದು ನಡೆಸಬೇಕಿರುವುದು ಸಹ ಸವಾಲಿನ ಕೆಲವೇ ಆಗಿದೆ.

ಕೆಲವು ಮೂಲಗಳ ಪ್ರಕಾರ ಈಗಾಗಲೇ ಬಿಗ್​ಬಾಸ್ ಹೊಸ ಸೀಸನ್​ಗೆ ತಯಾರಿ ಆರಂಭವಾಗಿದೆ. ಸ್ಪರ್ಧಿಗಳ ಹುಡುಕಾಟ, ಸಂದರ್ಶನ, ಚರ್ಚೆ, ಒಪ್ಪಂದ ಕಾರ್ಯಗಳು ಚಾಲ್ತಿಯಲ್ಲಿವೆ. ಆ ನಂತರ ಹೊಸ ಸೆಟ್ ನಿರ್ಮಾಣ ಹಾಗೂ ಚಿತ್ರೀಕರಣಗಳು ಪ್ರಾರಂಭಗೊಳ್ಳಲಿವೆ. ಹಿಂದಿ ಮಾದರಿಯಲ್ಲಿಯೇ ಬಿಗ್​ಬಾಸ್ ಟಿವಿ ಸೀಸನ್ ನಡೆದ ಬಳಿಕ ಬಿಗ್​ಬಾಸ್ ಒಟಿಟಿ ಸೀಸನ್ 2ರ ಆರಂಭ ಆಗುವ ಸಾಧ್ಯತೆ ಇದೆ.

ನಟ ಸುದೀಪ್ ಪ್ರಸ್ತುತ ‘ಕಿಚ್ಚ 46’ ಸಿನಿಮಾದ ಚಿತ್ರೀಕರಣದಲ್ಲಿದ್ದಾರೆ ಆದರೆ ಸಿನಿಮಾದ ಚಿತ್ರೀಕರಣ ಮುಗಿದ ಬಳಿಕ ಅನುಪ್ ಭಂಡಾರಿಯ ಹೊಸ ಸಿನಿಮಾದ ಚಿತ್ರೀಕರಣ ಆರಂಭಿಸಲಿದ್ದಾರೆ. ಅವರೇ ಹೇಳಿಕೊಂಡಿರುವ ಪ್ರಕಾರ ಅವರ 50ನೇ ಸಿನಿಮಾ ವರೆಗೂ ಅವರು ಸತತವಾಗಿ ಬ್ಯುಸಿಯಾಗಿರುವುದು ಮಾತ್ರವಲ್ಲ ಸಾಲಾಗಿ ಸಿನಿಮಾಗಳು ಸಹ ಒಪ್ಪಿಗೆ ಆಗಿಬಿಟ್ಟಿವೆ. ಇವುಗಳ ನಡುವೆಯೇ ಬಿಗ್​ಬಾಸ್ ರಿಯಾಲಿಟಿ ಶೋ ಸಹ ನಡೆಯಲಿದೆ.

lokesh

Recent Posts

ಕುರಟ್ಟಿ ಹೊಸೂರಲ್ಲಿ ಪ್ರಕೃತಿ ವಿಸ್ಮಯ: ಕಹಿ ಬೇವಿನ ಮರದಲ್ಲಿ ಸಿಹಿ ದ್ರಾವಣ ಕಂಡು ಜನರು ಅಚ್ಚರಿ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು  ಹನೂರು: ಕಡು ಕಹಿ ಎಲೆ, ಕಾಂಡ, ಕಾಯಿ ನೀಡುವ ಬೇವಿನ ಮರದಲ್ಲಿ…

2 hours ago

ಕನ್ನಡದಲ್ಲಿ ರೈಲ್ವೆ ಪರೀಕ್ಷೆ ನಡೆಸದಿದ್ದರೆ ಉಗ್ರ ಹೋರಾಟ: ನಾರಾಯಣಗೌಡ ಎಚ್ಚರಿಕೆ

ಬೆಂಗಳೂರು: ರೈಲ್ವೆಯ ಯಾವುದೇ ಪರೀಕ್ಷೆಯಿರಲಿ, ಅದನ್ನು ಕನ್ನಡದಲ್ಲೇ ಕಡ್ಡಾಯವಾಗಿ ನಡೆಸಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ಕರ್ನಾಟಕ ರಕ್ಷಣಾ…

2 hours ago

ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ: ಪರೀಕ್ಷಾ ಕೇಂದ್ರಗಳಿಗೆ ಸಿಇಓ ಭೇಟಿ

ಮಂಡ್ಯ: ಜನವರಿ.27ರಿಂದ ಪ್ರಾರಂಭವಾಗಿರುವ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಯ ಹಿನ್ನೆಲೆಯಲ್ಲಿ ಇಂದು ತಾಲ್ಲೂಕಿನ ಸೂನಗನಹಳ್ಳಿ ಮತ್ತು ತಗ್ಗಹಳ್ಳಿ ಗ್ರಾಮದ ಸರ್ಕಾರಿ…

3 hours ago

ಲೋಕಸಭೆಯಲ್ಲಿ ಸ್ಪೀಕರ್‌ ಮೇಲೆ ಪೇಪರ್‌ ತೂರಿದ್ದ 8 ಮಂದಿ ಸಂಸದರು ಅಮಾನತು

ನವದೆಹಲಿ: ಸಂಸತ್ತಿನ ಬಜೆಟ್‌ ಅಧಿವೇಶನದ ವೇಳೆ ಲೋಕಸಭೆಯಲ್ಲಿ ಉಂಟಾದ ಭಾರೀ ಗದ್ದಲ ಮತ್ತು ಸ್ಪೀಕರ್‌ ಪೀಠದ ಕಡೆಗೆ ಪೇಪರ್‌ ಹರಿದು…

3 hours ago

ನರೇಗಾ ಮರುಸ್ಥಾಪನೆಗೆ ಸಿಎಂ ಸಿದ್ದರಾಮಯ್ಯ ಪಟ್ಟು: ವಿಧಾನಸಭೆಯಲ್ಲಿ ಕೇಂದ್ರದ ವಿರುದ್ಧ ನಿರ್ಣಯ ಮಂಡನೆ

ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಉದ್ಯೋಗ ಯೋಜನೆಯನ್ನು ವಿರೋಧಿಸಿ ಹಾಗೂ ಹಳೆಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ…

3 hours ago

ಹನೂರು| ಆಂದೋಲನ ವರದಿಯಿಂದ ಎಚ್ಚೆತ್ತ ಅಧಿಕಾರಿಗಳು: ಗ್ರಾಮಗಳಿಗೆ ಭೇಟಿ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾರ್ಟಳ್ಳಿ ಹಾಗೂ ಸುಳ್ವಾಡಿ…

3 hours ago