ಕನ್ನಡ ಟಿವಿ ಲೋಕದ ಅತ್ಯಂತ ಜನಪ್ರಿಯ ಶೋ ಬಿಗ್ಬಾಸ್ ಕನ್ನಡ. ಈ ವರೆಗೆ ಒಂಬತ್ತು ಸೀಸನ್ಗಳು ಪ್ರಸಾರವಾಗಿವೆ. ಬಿಗ್ಬಾಸ್ ಪ್ರಸಾರವಾದ ಪ್ರತಿಬಾರಿ ಪರ-ವಿರೋಧ ಚರ್ಚೆಗಳು ಇರುತ್ತವೆಯಾದರೂ ಜನರು ನೋಡುವುದಂತೂ ಬಿಟ್ಟಿಲ್ಲ. ಬಿಗ್ಬಾಸ್ ಸೀಸನ್ 9ರಲ್ಲಿ ನಟ, ರೇಡಿಯೋ ಜಾಕಿ ರೂಪೇಶ್ ಶೆಟ್ಟಿ ವಿಜೇತರಾಗಿದ್ದರು, ಚೆನ್ನಾಗಿ ಆಡಿದ್ದ ರಾಕೇಶ್ ಅಡಿಗ ರನ್ನರ್ ಅಪ್ ಆಗಿದ್ದರು. ಕಳೆದ ಬಾರಿ ಬಿಗ್ಬಾಸ್ ಒಟಿಟಿ ಮೊದಲ ಸೀಸನ್ ಸಹ ಪ್ರಾರಂಭವಾಗಿದ್ದು ಅದನ್ನೂ ಕೂಡ ಸುದೀಪ್ ಅವರೇ ನಿರೂಪಣೆ ಮಾಡಿದ್ದರು. ಇದೀಗ ಮತ್ತೊಮ್ಮೆ ಬಿಗ್ಬಾಸ್ ಬರಲು ಸಜ್ಜಾಗಿದೆ.
ವಿಕ್ರಾಂತ್ ರೋಣ ಸಿನಿಮಾ ಬಳಿಕ ದೊಡ್ಡ ಗ್ಯಾಪ್ ತೆಗೆದುಕೊಂಡ ನಟ ಸುದೀಪ್ ಇದೀಗ ಹೊಸ ಸಿನಿಮಾದ ಚಿತ್ರೀಕರಣ ಶುರು ಮಾಡಿದ್ದಾರೆ. ತಮ್ಮ 46ನೇ ಸಿನಿಮಾದ ಚಿತ್ರೀಕರಣವನ್ನು ಚೆನ್ನೈನ ಮಹಾಬಲಪುರಂನಲ್ಲಿ ಸುದೀಪ್ ಮಾಡುತ್ತಿದ್ದು, ಈ ಸಿನಿಮಾದ ಚಿತ್ರೀಕರಣ ಮುಗಿಸಿದ ಬಳಿಕ ಬಿಗ್ಬಾಸ್ಹೊಸ ಸೀಸನ್ ಪ್ರಾರಂಭ ಮಾಡಲಿದ್ದಾರೆ ಎನ್ನಲಾಗುತ್ತಿದೆ.
ಹಲವು ವರ್ಷಗಳ ಕಾಲ ಬಿಗ್ಬಾಸ್ ಆಯೋಜನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಪರಮೇಶ್ವರ್ ಗುಂಡಕಲ್ ಈ ಬಾರಿ ಬಿಗ್ಬಾಸ್ ರಿಯಾಲಿಟಿ ಶೋನ ಭಾಗವಾಗಿರುವುದಿಲ್ಲ. ಅದು ಮಾತ್ರವೇ ಅಲ್ಲದೆ ಈ ಬಾರಿ ಬಿಗ್ಬಾಸ್ ಒಟಿಟಿ ಎರಡನೇ ಸೀಸನ್ ಹಾಗೂ ಬಿಗ್ಬಾಸ್ ಸೀಸನ್ 10 ಎರಡೂ ಸಹ ಒಂದರ ಬಳಿಕ ಒಂದು ನಡೆಸಬೇಕಿರುವುದು ಸಹ ಸವಾಲಿನ ಕೆಲವೇ ಆಗಿದೆ.
ಕೆಲವು ಮೂಲಗಳ ಪ್ರಕಾರ ಈಗಾಗಲೇ ಬಿಗ್ಬಾಸ್ ಹೊಸ ಸೀಸನ್ಗೆ ತಯಾರಿ ಆರಂಭವಾಗಿದೆ. ಸ್ಪರ್ಧಿಗಳ ಹುಡುಕಾಟ, ಸಂದರ್ಶನ, ಚರ್ಚೆ, ಒಪ್ಪಂದ ಕಾರ್ಯಗಳು ಚಾಲ್ತಿಯಲ್ಲಿವೆ. ಆ ನಂತರ ಹೊಸ ಸೆಟ್ ನಿರ್ಮಾಣ ಹಾಗೂ ಚಿತ್ರೀಕರಣಗಳು ಪ್ರಾರಂಭಗೊಳ್ಳಲಿವೆ. ಹಿಂದಿ ಮಾದರಿಯಲ್ಲಿಯೇ ಬಿಗ್ಬಾಸ್ ಟಿವಿ ಸೀಸನ್ ನಡೆದ ಬಳಿಕ ಬಿಗ್ಬಾಸ್ ಒಟಿಟಿ ಸೀಸನ್ 2ರ ಆರಂಭ ಆಗುವ ಸಾಧ್ಯತೆ ಇದೆ.
ನಟ ಸುದೀಪ್ ಪ್ರಸ್ತುತ ‘ಕಿಚ್ಚ 46’ ಸಿನಿಮಾದ ಚಿತ್ರೀಕರಣದಲ್ಲಿದ್ದಾರೆ ಆದರೆ ಸಿನಿಮಾದ ಚಿತ್ರೀಕರಣ ಮುಗಿದ ಬಳಿಕ ಅನುಪ್ ಭಂಡಾರಿಯ ಹೊಸ ಸಿನಿಮಾದ ಚಿತ್ರೀಕರಣ ಆರಂಭಿಸಲಿದ್ದಾರೆ. ಅವರೇ ಹೇಳಿಕೊಂಡಿರುವ ಪ್ರಕಾರ ಅವರ 50ನೇ ಸಿನಿಮಾ ವರೆಗೂ ಅವರು ಸತತವಾಗಿ ಬ್ಯುಸಿಯಾಗಿರುವುದು ಮಾತ್ರವಲ್ಲ ಸಾಲಾಗಿ ಸಿನಿಮಾಗಳು ಸಹ ಒಪ್ಪಿಗೆ ಆಗಿಬಿಟ್ಟಿವೆ. ಇವುಗಳ ನಡುವೆಯೇ ಬಿಗ್ಬಾಸ್ ರಿಯಾಲಿಟಿ ಶೋ ಸಹ ನಡೆಯಲಿದೆ.
ಮಡಿಕೇರಿ: ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿದ್ದ ಕೇರಳ ಮೂಲದ ಐಟಿ ಉದ್ಯೋಗಿ ಶರಣ್ಯಾ ನಾಪತ್ತೆಯಾಗಿ ಮೂರು ದಿನಗಳು ಕಳೆದರೂ ಈವರೆಗೂ…
ಭಾರತೀಯ ರೈಲ್ವೆ ಇಲಾಖೆಯು ಕಾಯ್ದಿರಿಸುವ ಮುಂಗಡ ಟಿಕೆಟ್ ರದ್ದತಿಯ ಬಗ್ಗೆ ಹೊಸ ನಿಯಮವನ್ನು ಏಪ್ರಿಲ್ ೧ರಿಂದ ಜಾರಿಗೆ ತಂದಿದೆ. ಪ್ರಯಾಣಿಸುವ…
ಮೈಸೂರು ನಗರದ ಪ್ರಧಾನ ಅಂಚೆ ಕಚೇರಿಯಲ್ಲಿ ಉಳಿತಾಯ ಖಾತೆ ಕೌಂಟರ್ಗಳ ಸಂಖ್ಯೆ ಕಡಿಮೆ ಇರುವುದರಿಂದ ನಿಧಾನಗತಿಯಲ್ಲಿ ಕೆಲಸ ಸಾಗುತ್ತಿದೆ. ಹಿರಿಯ…
ಇರುವುದೆಲ್ಲವ ಬಿಟ್ಟು ಇರದುದರೆಡೆಗೆ ತುಡಿವುದೇ ಜೀವನ! ಜನಪ್ರಿಯ ಕವಿ ಗೋಪಾಲಕೃಷ್ಣ ಅಡಿಗರ ಕವನದ ಈ ಸಾಲು ಇಂದಿನ ಕಾಲಮಾನದ ಜನಮಾನಸಕ್ಕೆ…
ಎಚ್.ಹಾಲಪ್ಪ ಸಮಾನತೆ ಇಲ್ಲದೆ ಪ್ರಜಾಪ್ರಭುತ್ವ ಅಪೂರ್ಣ ಎಂದು ನಂಬಿದ್ದ ತಮ್ಮ ಕಾರ್ಯಪ್ರವೃತ್ತಿಯಿಂದ ಸಮಾಜದಲ್ಲಿ ಸಮಾನತೆಯನ್ನು ಜೀವಂತಗೊಳಿಸಿದ ದೇಶದಾದ್ಯಂತ ಬಾಬೂಜಿ ಎಂದೇ…
ಹಿಂದಿ ಭಾಷೆಯ ಪ್ರಶ್ನೆ ಮತ್ತೆ ವಿವಾದವನ್ನು ಉಂಟು ಮಾಡಿದೆ. ತನ್ನ ಮಾತೃ ಭಾಷೆಯಲ್ಲದ ಮತ್ತು ಉತ್ತರ ಭಾರತದ ರಾಜ್ಯಗಳ ಮಾತೃ…