ಚಿತ್ರ ಮಂಜರಿ

ಮತ್ತೆ ಬರಲು ಸಾಜ್ಜಾಯ್ತು ಬಿಗ್ ಬಾಸ್ ಕನ್ನಡ

ಕನ್ನಡ ಟಿವಿ ಲೋಕದ ಅತ್ಯಂತ ಜನಪ್ರಿಯ ಶೋ ಬಿಗ್​ಬಾಸ್ ಕನ್ನಡ. ಈ ವರೆಗೆ ಒಂಬತ್ತು ಸೀಸನ್​ಗಳು ಪ್ರಸಾರವಾಗಿವೆ. ಬಿಗ್​ಬಾಸ್ ಪ್ರಸಾರವಾದ ಪ್ರತಿಬಾರಿ ಪರ-ವಿರೋಧ ಚರ್ಚೆಗಳು ಇರುತ್ತವೆಯಾದರೂ ಜನರು ನೋಡುವುದಂತೂ ಬಿಟ್ಟಿಲ್ಲ. ಬಿಗ್​ಬಾಸ್ ಸೀಸನ್ 9ರಲ್ಲಿ ನಟ, ರೇಡಿಯೋ ಜಾಕಿ ರೂಪೇಶ್ ಶೆಟ್ಟಿ ವಿಜೇತರಾಗಿದ್ದರು, ಚೆನ್ನಾಗಿ ಆಡಿದ್ದ ರಾಕೇಶ್ ಅಡಿಗ ರನ್ನರ್ ಅಪ್ ಆಗಿದ್ದರು. ಕಳೆದ ಬಾರಿ ಬಿಗ್​ಬಾಸ್ ಒಟಿಟಿ ಮೊದಲ ಸೀಸನ್ ಸಹ ಪ್ರಾರಂಭವಾಗಿದ್ದು ಅದನ್ನೂ ಕೂಡ ಸುದೀಪ್ ಅವರೇ ನಿರೂಪಣೆ ಮಾಡಿದ್ದರು. ಇದೀಗ ಮತ್ತೊಮ್ಮೆ ಬಿಗ್​ಬಾಸ್​ ಬರಲು ಸಜ್ಜಾಗಿದೆ.

ವಿಕ್ರಾಂತ್ ರೋಣ ಸಿನಿಮಾ ಬಳಿಕ ದೊಡ್ಡ ಗ್ಯಾಪ್ ತೆಗೆದುಕೊಂಡ ನಟ ಸುದೀಪ್ ಇದೀಗ ಹೊಸ ಸಿನಿಮಾದ ಚಿತ್ರೀಕರಣ ಶುರು ಮಾಡಿದ್ದಾರೆ. ತಮ್ಮ 46ನೇ ಸಿನಿಮಾದ ಚಿತ್ರೀಕರಣವನ್ನು ಚೆನ್ನೈನ ಮಹಾಬಲಪುರಂನಲ್ಲಿ ಸುದೀಪ್ ಮಾಡುತ್ತಿದ್ದು, ಈ ಸಿನಿಮಾದ ಚಿತ್ರೀಕರಣ ಮುಗಿಸಿದ ಬಳಿಕ ಬಿಗ್​ಬಾಸ್​ಹೊಸ ಸೀಸನ್ ಪ್ರಾರಂಭ ಮಾಡಲಿದ್ದಾರೆ ಎನ್ನಲಾಗುತ್ತಿದೆ.

ಹಲವು ವರ್ಷಗಳ ಕಾಲ ಬಿಗ್​ಬಾಸ್ ಆಯೋಜನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಪರಮೇಶ್ವರ್ ಗುಂಡಕಲ್ ಈ ಬಾರಿ ಬಿಗ್​ಬಾಸ್ ರಿಯಾಲಿಟಿ ಶೋನ ಭಾಗವಾಗಿರುವುದಿಲ್ಲ. ಅದು ಮಾತ್ರವೇ ಅಲ್ಲದೆ ಈ ಬಾರಿ ಬಿಗ್​ಬಾಸ್ ಒಟಿಟಿ ಎರಡನೇ ಸೀಸನ್ ಹಾಗೂ ಬಿಗ್​ಬಾಸ್ ಸೀಸನ್ 10 ಎರಡೂ ಸಹ ಒಂದರ ಬಳಿಕ ಒಂದು ನಡೆಸಬೇಕಿರುವುದು ಸಹ ಸವಾಲಿನ ಕೆಲವೇ ಆಗಿದೆ.

ಕೆಲವು ಮೂಲಗಳ ಪ್ರಕಾರ ಈಗಾಗಲೇ ಬಿಗ್​ಬಾಸ್ ಹೊಸ ಸೀಸನ್​ಗೆ ತಯಾರಿ ಆರಂಭವಾಗಿದೆ. ಸ್ಪರ್ಧಿಗಳ ಹುಡುಕಾಟ, ಸಂದರ್ಶನ, ಚರ್ಚೆ, ಒಪ್ಪಂದ ಕಾರ್ಯಗಳು ಚಾಲ್ತಿಯಲ್ಲಿವೆ. ಆ ನಂತರ ಹೊಸ ಸೆಟ್ ನಿರ್ಮಾಣ ಹಾಗೂ ಚಿತ್ರೀಕರಣಗಳು ಪ್ರಾರಂಭಗೊಳ್ಳಲಿವೆ. ಹಿಂದಿ ಮಾದರಿಯಲ್ಲಿಯೇ ಬಿಗ್​ಬಾಸ್ ಟಿವಿ ಸೀಸನ್ ನಡೆದ ಬಳಿಕ ಬಿಗ್​ಬಾಸ್ ಒಟಿಟಿ ಸೀಸನ್ 2ರ ಆರಂಭ ಆಗುವ ಸಾಧ್ಯತೆ ಇದೆ.

ನಟ ಸುದೀಪ್ ಪ್ರಸ್ತುತ ‘ಕಿಚ್ಚ 46’ ಸಿನಿಮಾದ ಚಿತ್ರೀಕರಣದಲ್ಲಿದ್ದಾರೆ ಆದರೆ ಸಿನಿಮಾದ ಚಿತ್ರೀಕರಣ ಮುಗಿದ ಬಳಿಕ ಅನುಪ್ ಭಂಡಾರಿಯ ಹೊಸ ಸಿನಿಮಾದ ಚಿತ್ರೀಕರಣ ಆರಂಭಿಸಲಿದ್ದಾರೆ. ಅವರೇ ಹೇಳಿಕೊಂಡಿರುವ ಪ್ರಕಾರ ಅವರ 50ನೇ ಸಿನಿಮಾ ವರೆಗೂ ಅವರು ಸತತವಾಗಿ ಬ್ಯುಸಿಯಾಗಿರುವುದು ಮಾತ್ರವಲ್ಲ ಸಾಲಾಗಿ ಸಿನಿಮಾಗಳು ಸಹ ಒಪ್ಪಿಗೆ ಆಗಿಬಿಟ್ಟಿವೆ. ಇವುಗಳ ನಡುವೆಯೇ ಬಿಗ್​ಬಾಸ್ ರಿಯಾಲಿಟಿ ಶೋ ಸಹ ನಡೆಯಲಿದೆ.

lokesh

Recent Posts

ಮಾಡೆಲ್‌ ಟ್ವಿಶಾ ಶರ್ಮಾ ಸಾವಿನ ಕೇಸ್‌ ತನಿಖೆ ಸಿಬಿಐ ಹೆಗಲಿಗೆ

ನವದೆಹಲಿ : ಮಾಡೆಲ್ ತ್ವಿಶಾ ಶರ್ಮಾ ಸಾವು ಪ್ರಕರಣ ಇದೀಗ ಸುಪ್ರೀಂಕೋರ್ಟ್​ ತಲುಪಿದ್ದು, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಕೇಂದ್ರ ತನಿಖಾ…

9 hours ago

ಮೈಸೂರು | ಪೊಲೀಸರ ಬಲೆಗೆ ಬಿದ್ದ ಸುಪಾರಿ ಗ್ಯಾಂಗ್‌

ಮೈಸೂರು : ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಹಬೀದ್ ಪಾಷಾ ಇದೀಗ ಸುಫಾರಿ ಹಂತಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ…

11 hours ago

ಗ್ರಾಹಕರಿಕೆ ಶಾಕ್‌ : ಪೆಟ್ರೋಲ್‌, ಡಿಸೇಲ್‌ ಬೆಲೆ ಮತ್ತೆ ಏರಿಕೆ

ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್‍ಗೆ…

13 hours ago

ಬಿಜೆಪಿ ಸರ್ಕಾರ ಮಾಡಿದ ಡೀಮ್ಡ್ ಅರಣ್ಯ ತಪ್ಪು ಸರಿಪಡಿಸಲು ಯತ್ನ:ಈಶ್ವರ ಖಂಡ್ರೆ

ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…

13 hours ago

ಪಶ್ಚಿಮ ಬಂಗಾಳ : ಒಬಿಸಿ ಪಟ್ಟಿ ಮರುಸಂರಚನೆ

ಆರ್‌ಎಸ್‌ಎಸ್‌ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್‌ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…

14 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ | ಆಳುವ ಸರ್ಕಾರ ಎಚ್ಚರ ತಪ್ಪಿದರೆ ಪ್ರತಿರೋಧ ಖಚಿತ

ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…

15 hours ago