ಕನ್ನಡ ಟಿವಿ ಲೋಕದ ಅತ್ಯಂತ ಜನಪ್ರಿಯ ಶೋ ಬಿಗ್ಬಾಸ್ ಕನ್ನಡ. ಈ ವರೆಗೆ ಒಂಬತ್ತು ಸೀಸನ್ಗಳು ಪ್ರಸಾರವಾಗಿವೆ. ಬಿಗ್ಬಾಸ್ ಪ್ರಸಾರವಾದ ಪ್ರತಿಬಾರಿ ಪರ-ವಿರೋಧ ಚರ್ಚೆಗಳು ಇರುತ್ತವೆಯಾದರೂ ಜನರು ನೋಡುವುದಂತೂ ಬಿಟ್ಟಿಲ್ಲ. ಬಿಗ್ಬಾಸ್ ಸೀಸನ್ 9ರಲ್ಲಿ ನಟ, ರೇಡಿಯೋ ಜಾಕಿ ರೂಪೇಶ್ ಶೆಟ್ಟಿ ವಿಜೇತರಾಗಿದ್ದರು, ಚೆನ್ನಾಗಿ ಆಡಿದ್ದ ರಾಕೇಶ್ ಅಡಿಗ ರನ್ನರ್ ಅಪ್ ಆಗಿದ್ದರು. ಕಳೆದ ಬಾರಿ ಬಿಗ್ಬಾಸ್ ಒಟಿಟಿ ಮೊದಲ ಸೀಸನ್ ಸಹ ಪ್ರಾರಂಭವಾಗಿದ್ದು ಅದನ್ನೂ ಕೂಡ ಸುದೀಪ್ ಅವರೇ ನಿರೂಪಣೆ ಮಾಡಿದ್ದರು. ಇದೀಗ ಮತ್ತೊಮ್ಮೆ ಬಿಗ್ಬಾಸ್ ಬರಲು ಸಜ್ಜಾಗಿದೆ.
ವಿಕ್ರಾಂತ್ ರೋಣ ಸಿನಿಮಾ ಬಳಿಕ ದೊಡ್ಡ ಗ್ಯಾಪ್ ತೆಗೆದುಕೊಂಡ ನಟ ಸುದೀಪ್ ಇದೀಗ ಹೊಸ ಸಿನಿಮಾದ ಚಿತ್ರೀಕರಣ ಶುರು ಮಾಡಿದ್ದಾರೆ. ತಮ್ಮ 46ನೇ ಸಿನಿಮಾದ ಚಿತ್ರೀಕರಣವನ್ನು ಚೆನ್ನೈನ ಮಹಾಬಲಪುರಂನಲ್ಲಿ ಸುದೀಪ್ ಮಾಡುತ್ತಿದ್ದು, ಈ ಸಿನಿಮಾದ ಚಿತ್ರೀಕರಣ ಮುಗಿಸಿದ ಬಳಿಕ ಬಿಗ್ಬಾಸ್ಹೊಸ ಸೀಸನ್ ಪ್ರಾರಂಭ ಮಾಡಲಿದ್ದಾರೆ ಎನ್ನಲಾಗುತ್ತಿದೆ.
ಹಲವು ವರ್ಷಗಳ ಕಾಲ ಬಿಗ್ಬಾಸ್ ಆಯೋಜನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಪರಮೇಶ್ವರ್ ಗುಂಡಕಲ್ ಈ ಬಾರಿ ಬಿಗ್ಬಾಸ್ ರಿಯಾಲಿಟಿ ಶೋನ ಭಾಗವಾಗಿರುವುದಿಲ್ಲ. ಅದು ಮಾತ್ರವೇ ಅಲ್ಲದೆ ಈ ಬಾರಿ ಬಿಗ್ಬಾಸ್ ಒಟಿಟಿ ಎರಡನೇ ಸೀಸನ್ ಹಾಗೂ ಬಿಗ್ಬಾಸ್ ಸೀಸನ್ 10 ಎರಡೂ ಸಹ ಒಂದರ ಬಳಿಕ ಒಂದು ನಡೆಸಬೇಕಿರುವುದು ಸಹ ಸವಾಲಿನ ಕೆಲವೇ ಆಗಿದೆ.
ಕೆಲವು ಮೂಲಗಳ ಪ್ರಕಾರ ಈಗಾಗಲೇ ಬಿಗ್ಬಾಸ್ ಹೊಸ ಸೀಸನ್ಗೆ ತಯಾರಿ ಆರಂಭವಾಗಿದೆ. ಸ್ಪರ್ಧಿಗಳ ಹುಡುಕಾಟ, ಸಂದರ್ಶನ, ಚರ್ಚೆ, ಒಪ್ಪಂದ ಕಾರ್ಯಗಳು ಚಾಲ್ತಿಯಲ್ಲಿವೆ. ಆ ನಂತರ ಹೊಸ ಸೆಟ್ ನಿರ್ಮಾಣ ಹಾಗೂ ಚಿತ್ರೀಕರಣಗಳು ಪ್ರಾರಂಭಗೊಳ್ಳಲಿವೆ. ಹಿಂದಿ ಮಾದರಿಯಲ್ಲಿಯೇ ಬಿಗ್ಬಾಸ್ ಟಿವಿ ಸೀಸನ್ ನಡೆದ ಬಳಿಕ ಬಿಗ್ಬಾಸ್ ಒಟಿಟಿ ಸೀಸನ್ 2ರ ಆರಂಭ ಆಗುವ ಸಾಧ್ಯತೆ ಇದೆ.
ನಟ ಸುದೀಪ್ ಪ್ರಸ್ತುತ ‘ಕಿಚ್ಚ 46’ ಸಿನಿಮಾದ ಚಿತ್ರೀಕರಣದಲ್ಲಿದ್ದಾರೆ ಆದರೆ ಸಿನಿಮಾದ ಚಿತ್ರೀಕರಣ ಮುಗಿದ ಬಳಿಕ ಅನುಪ್ ಭಂಡಾರಿಯ ಹೊಸ ಸಿನಿಮಾದ ಚಿತ್ರೀಕರಣ ಆರಂಭಿಸಲಿದ್ದಾರೆ. ಅವರೇ ಹೇಳಿಕೊಂಡಿರುವ ಪ್ರಕಾರ ಅವರ 50ನೇ ಸಿನಿಮಾ ವರೆಗೂ ಅವರು ಸತತವಾಗಿ ಬ್ಯುಸಿಯಾಗಿರುವುದು ಮಾತ್ರವಲ್ಲ ಸಾಲಾಗಿ ಸಿನಿಮಾಗಳು ಸಹ ಒಪ್ಪಿಗೆ ಆಗಿಬಿಟ್ಟಿವೆ. ಇವುಗಳ ನಡುವೆಯೇ ಬಿಗ್ಬಾಸ್ ರಿಯಾಲಿಟಿ ಶೋ ಸಹ ನಡೆಯಲಿದೆ.
ಗುರುವಿಗೆ ಕೃತಜ್ಞತೆ ಸಲ್ಲಿಸುವ ಶಿಷ್ಯರ ಈ ಕಾರ್ಯ ಯುವ ಪೀಳಿಗೆಗೆ ಮಾದರಿಯಾಗಿದೆ. ಚಂದ್ರಶೇಖರ್ ಮೂರ್ತಿ ಕೆ.ಎಸ್. ಹಾರ್ಮೋನಿಯಂ ವಾದಕ, ಗೀತ…
ಮೈಸೂರು: ದಕ್ಷಿಣ ಭಾರತದ ಗಾನ ಕೋಗಿಲೆ ಎಂದೇ ಹೆಸರಾದ ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು.…
ಗುಂಡ್ಲುಪೇಟೆ: ತಾಲ್ಲೂಕಿನ ಕಗ್ಗಳದಹುಂಡಿ ಗ್ರಾಮದ ಮನೆಯೊಳಗೆ ನುಗ್ಗಿದ್ದ ನಾಗರಹಾವನ್ನು ಉರಗಪ್ರೇಮಿ ಸ್ವಾಮಿ ಅವರು ಸುರಕ್ಷಿತವಾಗಿ ರಕ್ಷಿಸಿ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ.…
ಮಡಿಕೇರಿ: ತಾಲ್ಲೂಕಿನ ಕೆದಕಲ್ ಸಮೀಪದ ಕೋಟೆಕಾಡು ಪ್ರದೇಶದಲ್ಲಿ ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ ನಡೆಸಿದ ಘಟನೆ ನಡೆದಿದೆ. ಕಕ್ಕಬ್ಬೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಮಹದೇಶ್ವರಬೆಟ್ಟ ಮುಖ್ಯರಸ್ತೆಯ ಸಮೀಪ ಶನಿವಾರ ಬೆಳಿಗ್ಗೆ ಹುಚ್ಚು ನಾಯಿಯೊಂದು…
ಹಾಸನ: ಜಿಲ್ಲೆಯ ಸಕಲೇಶಪುರ ಗವಿಬೆಟ್ಟದಲ್ಲಿ ಪ್ರವಾಸಿಗರು ರೀಲ್ಸ್ಗಾಗಿ ಥಾರ್ ಕಾರನ್ನು ಡ್ರಿಫ್ಟಿಂಗ್ ಮಾಡಿದ್ದಾರೆ. ಇದರಿಂದ ಜಾನುವಾರುಗಳ ಮೇವು ಹಾಗೂ ರಸ್ತೆಗೆ…