ಚಿತ್ರ ಮಂಜರಿ

Bigg Boss kannada season 10: ಕಾರ್ತಿಕ್‌ ವಿನ್ನರ್‌; ಡ್ರೋನ್‌ ರನ್ನರ್‌!

112 ದಿನಗಳ ಸುದೀರ್ಘ ಪಯಣಯದ ಬಿಗ್​ಬಾಸ್ ಸೀಸನ್‌ 10ನ ವಿನ್ನರ್‌ ಆಗಿ ಕಾರ್ತಿಕ್‌ ಮಹೇಶ್‌ ಹೊರ ಹೊಮ್ಮಿದ್ದಾರೆ. ಈ ಟ್ರೋಪಿ ಗೆಲ್ಲಲು 16 ಮಂದಿಯಿಂದ ಪ್ರಾರಂಭವಾದ ಓಟದಲ್ಲಿ ಕೊನೆಯದಾಗಿ ಗೆಲುವು ಕಂಡಿರುವುದು ಕಾರ್ತಿಕ್ ಮಹೇಶ್. ಕಾರ್ತಿಕ್‌ಗೆ ಬರೋಬ್ಬರಿ 2,97,39,904 ಮತ ಗಳಿಸಿದ್ದಾರೆ. ಹಲವು ಏಳು-ಬೀಳು, ನೋವು, ಬೇಸರ, ಖುಷಿಗಳನ್ನು ಕಂಡಿದ್ದ ಡ್ರೋನ್ ಪ್ರತಾಪ್ ರನ್ನರ್ ಅಪ್ ಆಗಿದ್ದಾರೆ.

ಸ್ವತಃ ಕಾರ್ತಿಕ್ ಮಹೇಶ್ ಹೇಳಿಕೊಂಡಿರುವಂತೆ ಬಿಗ್​ಬಾಸ್​ಗೆ ಬರುವ ನಿರ್ಧಾರವನ್ನು ಒಂದೇ ದಿನದಲ್ಲಿ ತೆಗೆದುಕೊಂಡು ಅವರು ಬಿಗ್​ಬಾಸ್​ಗೆ ಬಂದರಂತೆ. ಆ ಆತುರದ ನಿರ್ಧಾರ ಅವರಿಗೆ ಗೆಲುವು ತಂದುಕೊಟ್ಟಿದೆ. ಆರನೇ ಕಂಟೆಸ್ಟೆಂಟ್ ಆಗಿ ಕಷ್ಟದಲ್ಲೇ ಕಾರ್ತಿಕ್ ಮಹೇಶ್ ಫಿನಾಲೆ ವಾರಕ್ಕೆ ಬಂದಿದ್ದರು. ಫಿನಾಲೆ ವಾರದಲ್ಲಿ ಯಾರು ಮನೆಯಿಂದ ಹೊರಗೆ ಹೋಗುತ್ತಾರೆ ಎಂದಾಗ ಬಹುತೇಕರು ಹೇಳಿದ್ದಿದ್ದು ಕಾರ್ತಿಕ್ ಹೆಸರನ್ನು ಆದರೆ ಅದೆಲ್ಲವೂ ಸುಳ್ಳಾಗಿದ್ದು, ಬಿಗ್‌ ಬಾಸ್‌ ಟ್ರೋಫಿ ಎತ್ತಿ ಹಿಡಿಯುವಲ್ಲಿ ಕಾರ್ತಿಕ್‌ ಯಶಸ್ವಿಯಾಗಿದ್ದಾರೆ.

ಕಾರ್ತಿಕ್​ರ ಬಿಗ್​ಬಾಸ್ ಜರ್ನಿ ಹಲವು ಏರು-ಪೇರುಗಳನ್ನು ಒಳಗೊಂಡಿತ್ತು. ಆರಂಭದಲ್ಲಿ ಅವರು ಅಸಮರ್ಥರಾಗಿ ಮನೆಗೆ ಎಂಟ್ರಿ ಕೊಟ್ಟರು. ಆರಂಭದಲ್ಲಿ ಸಂಗೀತಾ ಜೊತೆ ಗೆಳೆತನ ಮಾಡಿ ಬೆನ್ನೆಲುಬಾಗಿದ್ದರು. ಸಂಗೀತಾ ಹಾಗೂ ಕಾರ್ತಿಕ್ ಒಳ್ಳೆಯ ಬಾಂಧವ್ಯ ಹೊಂದಿದ್ದರು. ಜೊತೆಗೆ ತನಿಷಾ ಸಹ ಕಾರ್ತಿಕ್​ಗೆ ಒಳ್ಳೆಯ ಗೆಳೆಯರಾಗಿದ್ದರು. ಆರಂಭದ ಹಲವು ದಿನ ಮನೆಯ ಗಟ್ಟಿ ಸ್ಪರ್ಧಿಯಾಗಿದ್ದ ವಿನಯ್​ಗೆ ಪ್ರಬಲ ಎದುರಾಳಿಯಾಗಿ ಆಡಿದ್ದರು ಕಾರ್ತಿಕ್. ವಿನಯ್ ‘ಗ್ಯಾಂಗ್’ ಅನ್ನು ಸಂಗೀತಾ ಪ್ರಬಲವಾಗಿ ಎದುರಿಸಲು ಕಾರ್ತಿಕ್ ಸಹ ಕಾರಣವಾಗಿದ್ದರು.

ಫಿನಾಲೆಗೆ ಕೆಲವು ವಾರಗಳು ಇರವಾಗ ಕಾರ್ತಿಕ್‌ ಆಟದಲ್ಲಿ ಉತ್ಸಾಹ ಕಾಣಲಿಲ್ಲ. ಕೊನೆಯ ಎರಡು ವಾರಗಳಲ್ಲಿ ಮತ್ತೆ ಉತ್ಸುಹಕತೆಯಿಂದ ಮನೆಯ ಎಲ್ಲಾ ಕೆಲಸಗಳಲ್ಲಿ ಸಕ್ರಿಯರಾಗತೊಡಗಿದ ಕಾರ್ತಿಕ್‌, ಎಲ್ಲರಿಂದಲೂ ಸೈ ಎನಿಸಿಕೊಂಡು ಬಿಗ್‌ ಬಾಸ್‌ ಸಿಸನ್‌ 10ರ ವಿಜೇತರಾಗಿ ಹೊರಬಂದಿದ್ದಾರೆ. ಬಿಗ್‌ ಬಾಸ್‌ ಮನೆಯಲ್ಲಿ ಹಲವಾರು ನೋವು, ಜಗಳ, ಮನಸ್ಥಾಪ ಎಲ್ಲವನ್ನು ಒಮ್ಮತದಿಂದಲೇ ಸಹಿಸಿದ ಕಾರ್ತಿಕ್‌ ಆಟವನ್ನು ರಾಜ್ಯದ ಜನತೆ ಮೆಚ್ಚಿ ಮತ ನೀಡಿ ವಿನ್ನರ್‌ ಮಾಡಿದ್ದಾರೆ.

ಕಾರ್ತಿಕ್‌ ತನ್ನ ತಾಯಿಗಾಗಿ ಒಂದು ಮನೆ ಕಟ್ಟಿಕೊಡಬೇಕು ಎಂಬ ಆಸೆಯನ್ನು ಕಾರ್ತಿಕ್ ಹೇಳಿಕೊಂಡಿದ್ದರು. ಅಂತೆಯೇ ಈಗ 50 ಲಕ್ಷ ಗೆದ್ದಿದ್ದಾರೆ. ಜೊತೆಗೆ ಒಂದು ಬ್ರಿಜಾ ಕಾರು ಸಹ ಗೆದ್ದಿದ್ದಾರೆ. ಆರಂಭದಿಂದಲೂ ಚೆನ್ನಾಗಿಯೇ ಆಡಿಕೊಂಡು ಬಂದಿದ್ದ ಡ್ರೋನ್ ಪ್ರತಾಪ್ ಎರಡನೇ ಸ್ಥಾನ ಪಡೆದಿದ್ದಾರೆ.

andolanait

Recent Posts

ವಿಚಾರಣೆ ಇಲ್ಲದೆ ಶಿಕ್ಷೆ ಕೊಡಲು ಸಂವಿಧಾನ ಒಪ್ಪುವುದಿಲ್ಲ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…

11 mins ago

ಆ ಮೂರು ಜೀವಗಳಿಗೂ ಬೆಲೆಯೇ ಇರಲಿಲ್ಲವೇ?

ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…

15 mins ago

ಅಸಮಾಧಾನದ ಬೇಗೆ: ಸಿಎಂ ಡಿಕೆಶಿಗೆ ಹೈಕಮಾಂಡ್ ‘ಎಸಿ’

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ಕಾಂಗ್ರೆಸ್‌ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…

21 mins ago

ನಾಲ್ಕು ಶೂಟೌಟ್ ಪ್ರಕರಣ; ಏಳು ಸಾವು

ಮಹಾದೇಶ ಎಂ ಗೌಡ ೨೦೧೪ರಿಂದ ೨೦೨೬ರವರೆಗೆ ನಡೆದ ಪ್ರಕರಣಗಳು ಹನೂರು: ತಾಲ್ಲೂಕಿನ ಕಾವೇರಿ ವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ…

27 mins ago

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

9 hours ago