ಚಿತ್ರ ಮಂಜರಿ

Bigg Boss kannada season 10: ಕಾರ್ತಿಕ್‌ ವಿನ್ನರ್‌; ಡ್ರೋನ್‌ ರನ್ನರ್‌!

112 ದಿನಗಳ ಸುದೀರ್ಘ ಪಯಣಯದ ಬಿಗ್​ಬಾಸ್ ಸೀಸನ್‌ 10ನ ವಿನ್ನರ್‌ ಆಗಿ ಕಾರ್ತಿಕ್‌ ಮಹೇಶ್‌ ಹೊರ ಹೊಮ್ಮಿದ್ದಾರೆ. ಈ ಟ್ರೋಪಿ ಗೆಲ್ಲಲು 16 ಮಂದಿಯಿಂದ ಪ್ರಾರಂಭವಾದ ಓಟದಲ್ಲಿ ಕೊನೆಯದಾಗಿ ಗೆಲುವು ಕಂಡಿರುವುದು ಕಾರ್ತಿಕ್ ಮಹೇಶ್. ಕಾರ್ತಿಕ್‌ಗೆ ಬರೋಬ್ಬರಿ 2,97,39,904 ಮತ ಗಳಿಸಿದ್ದಾರೆ. ಹಲವು ಏಳು-ಬೀಳು, ನೋವು, ಬೇಸರ, ಖುಷಿಗಳನ್ನು ಕಂಡಿದ್ದ ಡ್ರೋನ್ ಪ್ರತಾಪ್ ರನ್ನರ್ ಅಪ್ ಆಗಿದ್ದಾರೆ.

ಸ್ವತಃ ಕಾರ್ತಿಕ್ ಮಹೇಶ್ ಹೇಳಿಕೊಂಡಿರುವಂತೆ ಬಿಗ್​ಬಾಸ್​ಗೆ ಬರುವ ನಿರ್ಧಾರವನ್ನು ಒಂದೇ ದಿನದಲ್ಲಿ ತೆಗೆದುಕೊಂಡು ಅವರು ಬಿಗ್​ಬಾಸ್​ಗೆ ಬಂದರಂತೆ. ಆ ಆತುರದ ನಿರ್ಧಾರ ಅವರಿಗೆ ಗೆಲುವು ತಂದುಕೊಟ್ಟಿದೆ. ಆರನೇ ಕಂಟೆಸ್ಟೆಂಟ್ ಆಗಿ ಕಷ್ಟದಲ್ಲೇ ಕಾರ್ತಿಕ್ ಮಹೇಶ್ ಫಿನಾಲೆ ವಾರಕ್ಕೆ ಬಂದಿದ್ದರು. ಫಿನಾಲೆ ವಾರದಲ್ಲಿ ಯಾರು ಮನೆಯಿಂದ ಹೊರಗೆ ಹೋಗುತ್ತಾರೆ ಎಂದಾಗ ಬಹುತೇಕರು ಹೇಳಿದ್ದಿದ್ದು ಕಾರ್ತಿಕ್ ಹೆಸರನ್ನು ಆದರೆ ಅದೆಲ್ಲವೂ ಸುಳ್ಳಾಗಿದ್ದು, ಬಿಗ್‌ ಬಾಸ್‌ ಟ್ರೋಫಿ ಎತ್ತಿ ಹಿಡಿಯುವಲ್ಲಿ ಕಾರ್ತಿಕ್‌ ಯಶಸ್ವಿಯಾಗಿದ್ದಾರೆ.

ಕಾರ್ತಿಕ್​ರ ಬಿಗ್​ಬಾಸ್ ಜರ್ನಿ ಹಲವು ಏರು-ಪೇರುಗಳನ್ನು ಒಳಗೊಂಡಿತ್ತು. ಆರಂಭದಲ್ಲಿ ಅವರು ಅಸಮರ್ಥರಾಗಿ ಮನೆಗೆ ಎಂಟ್ರಿ ಕೊಟ್ಟರು. ಆರಂಭದಲ್ಲಿ ಸಂಗೀತಾ ಜೊತೆ ಗೆಳೆತನ ಮಾಡಿ ಬೆನ್ನೆಲುಬಾಗಿದ್ದರು. ಸಂಗೀತಾ ಹಾಗೂ ಕಾರ್ತಿಕ್ ಒಳ್ಳೆಯ ಬಾಂಧವ್ಯ ಹೊಂದಿದ್ದರು. ಜೊತೆಗೆ ತನಿಷಾ ಸಹ ಕಾರ್ತಿಕ್​ಗೆ ಒಳ್ಳೆಯ ಗೆಳೆಯರಾಗಿದ್ದರು. ಆರಂಭದ ಹಲವು ದಿನ ಮನೆಯ ಗಟ್ಟಿ ಸ್ಪರ್ಧಿಯಾಗಿದ್ದ ವಿನಯ್​ಗೆ ಪ್ರಬಲ ಎದುರಾಳಿಯಾಗಿ ಆಡಿದ್ದರು ಕಾರ್ತಿಕ್. ವಿನಯ್ ‘ಗ್ಯಾಂಗ್’ ಅನ್ನು ಸಂಗೀತಾ ಪ್ರಬಲವಾಗಿ ಎದುರಿಸಲು ಕಾರ್ತಿಕ್ ಸಹ ಕಾರಣವಾಗಿದ್ದರು.

ಫಿನಾಲೆಗೆ ಕೆಲವು ವಾರಗಳು ಇರವಾಗ ಕಾರ್ತಿಕ್‌ ಆಟದಲ್ಲಿ ಉತ್ಸಾಹ ಕಾಣಲಿಲ್ಲ. ಕೊನೆಯ ಎರಡು ವಾರಗಳಲ್ಲಿ ಮತ್ತೆ ಉತ್ಸುಹಕತೆಯಿಂದ ಮನೆಯ ಎಲ್ಲಾ ಕೆಲಸಗಳಲ್ಲಿ ಸಕ್ರಿಯರಾಗತೊಡಗಿದ ಕಾರ್ತಿಕ್‌, ಎಲ್ಲರಿಂದಲೂ ಸೈ ಎನಿಸಿಕೊಂಡು ಬಿಗ್‌ ಬಾಸ್‌ ಸಿಸನ್‌ 10ರ ವಿಜೇತರಾಗಿ ಹೊರಬಂದಿದ್ದಾರೆ. ಬಿಗ್‌ ಬಾಸ್‌ ಮನೆಯಲ್ಲಿ ಹಲವಾರು ನೋವು, ಜಗಳ, ಮನಸ್ಥಾಪ ಎಲ್ಲವನ್ನು ಒಮ್ಮತದಿಂದಲೇ ಸಹಿಸಿದ ಕಾರ್ತಿಕ್‌ ಆಟವನ್ನು ರಾಜ್ಯದ ಜನತೆ ಮೆಚ್ಚಿ ಮತ ನೀಡಿ ವಿನ್ನರ್‌ ಮಾಡಿದ್ದಾರೆ.

ಕಾರ್ತಿಕ್‌ ತನ್ನ ತಾಯಿಗಾಗಿ ಒಂದು ಮನೆ ಕಟ್ಟಿಕೊಡಬೇಕು ಎಂಬ ಆಸೆಯನ್ನು ಕಾರ್ತಿಕ್ ಹೇಳಿಕೊಂಡಿದ್ದರು. ಅಂತೆಯೇ ಈಗ 50 ಲಕ್ಷ ಗೆದ್ದಿದ್ದಾರೆ. ಜೊತೆಗೆ ಒಂದು ಬ್ರಿಜಾ ಕಾರು ಸಹ ಗೆದ್ದಿದ್ದಾರೆ. ಆರಂಭದಿಂದಲೂ ಚೆನ್ನಾಗಿಯೇ ಆಡಿಕೊಂಡು ಬಂದಿದ್ದ ಡ್ರೋನ್ ಪ್ರತಾಪ್ ಎರಡನೇ ಸ್ಥಾನ ಪಡೆದಿದ್ದಾರೆ.

andolanait

Recent Posts

ತಮಿಳುನಾಡಿನಲ್ಲಿ ಮದ್ಯ ಖರೀದಿ ಮತ್ತು ಸೇವನೆಗೆ 21 ವರ್ಷ ವಯಸ್ಸು ಕಡ್ಡಾಯ

ಚೆನ್ನೈ: ರಾಜ್ಯದಲ್ಲಿ ಅಪ್ರಾಪ್ತ ವಯಸ್ಕರಲ್ಲಿ ಹೆಚ್ಚುತ್ತಿರುವ ಮದ್ಯ ಸೇವನೆಯನ್ನು ತಡೆಯಲು, ತಮಿಳುನಾಡು ಸರ್ಕಾರವು ಎಲ್ಲಾ ರೀತಿಯ ಮದ್ಯ ಖರೀದಿ ಮತ್ತು…

8 hours ago

ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಪೂರ್ವ ಮುಂಗಾರು ಆರ್ಭಟ ಮುಂದುವರಿದಿದೆ. ನಾಳೆ ಮತ್ತಷ್ಟು ತೀವ್ರತೆ…

8 hours ago

ಉತ್ತರ ಪ್ರದೇಶದಲ್ಲಿ ಮಳೆ ಅವಾಂತರ: ಸಾವಿನ ಸಂಖ್ಯೆ 104ಕ್ಕೆ ಏರಿಕೆ

ಲಕ್ನೋ: ಉತ್ತರ ಪ್ರದೇಶದಾದ್ಯಂತ ಭಾರೀ ಮಳೆ ಮತ್ತು ಬಿರುಗಾಳಿಗೆ ಈವರೆಗೆ 104 ಜನರು ಸಾವನ್ನಪ್ಪಿದ್ದಾರೆ. ಮಳೆ ಹೊಡೆತಕ್ಕೆ 53 ಜನರಿಗೆ…

9 hours ago

PGCET| MBA, MCA ಪ್ರವೇಶ ಪರೀಕ್ಷೆ ಜೂನ್.‌4ಕ್ಕೆ ಮುಂದೂಡಿದ ಕೆಇಎ

ಬೆಂಗಳೂರು: ಇದೇ ತಿಂಗಳ 24 ರಂದು ನಡೆಯಬೇಕಿದ್ದ ಎಂಬಿಎ, ಎಂಸಿಎ ಕೋರ್ಸ್‌ಗಳ ಪ್ರವೇಶ್‌ ಪರೀಕ್ಷೆಯನ್ನು ಜೂನ್.‌14ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು…

9 hours ago

ಹನೂರು| ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿಗೆ ಭತ್ತ ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ…

10 hours ago

ಮಾರ್ಟಳ್ಳಿಯಲ್ಲಿ ಮರೀಚಿಕೆಯಾದ ಸ್ವಚ್ಛತೆ: ಗ್ರಾಮಸ್ಥರ ಆಕ್ರೋಶ

ಹನೂರು: ತಾಲ್ಲೂಕಿನ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂಬ ಹೆಗ್ಗಳಿಕೆ ಹೊಂದಿರುವ ಮಾರ್ಟಳ್ಳಿಯಲ್ಲಿ ಸದ್ಯ ಸ್ವಚ್ಛತೆ ಎಂಬುದು ಮರೀಚಿಕೆಯಾಗಿದೆ. ಗ್ರಾಮದ…

10 hours ago