ಚಿತ್ರ ಮಂಜರಿ

ಬಿಗ್ ಬಾಸ್ ಸೀಸನ್ 9 ಗೆದ್ದು ಸಂಭ್ರಮಿಸಿದ ನಟ ರೂಪೇಶ್ ಶೆಟ್ಟಿ

ಬೆಂಗಳೂರು: ಕನ್ನಡದ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 9ರ ವಿಜೇತರ ಘೋಷಣೆಯಾಗಿದ್ದು, ಒಟಿಟಿ ಟಾಪರ್ ಆಗಿದ್ದ ನಟ ರೂಪೇಶ್ ಶೆಟ್ಟಿ ವಿಜೇತರಾಗಿದ್ದಾರೆ.

ಗಿರಿಗಿಟ್ ಚಿತ್ರದ ಮೂಲಕ ರೂಪೇಶ್ ಶೆಟ್ಟಿ ತುಳು ಚಿತ್ರಗಳಲ್ಲಿ ನಟಿಸಿ ಕರಾವಳಿ ಭಾಗದಲ್ಲಿ ಪ್ರಸಿದ್ಧಿ ಪಡೆದಿದ್ದರು. ರೇಡಿಯೊ–ವಿಡಿಯೊ ಜಾಕಿಯಾಗಿದ್ದ ಹಾಗೂ ಕನ್ನಡ, ತುಳು, ಕೊಂಕಣಿ ಸಿನಿಮಾಗಳಲ್ಲಿ ನಟಿಸಿ ಮೂಲಕ ಗಮನ ಸೆಳೆದಿದ್ದ ನಟ ರೂಪೇಶ್ ಶೆಟ್ಟಿ ಅವರು ಮೊದಲ ಬಾರಿಗೆ ನಡೆದ ಒಟಿಟಿ ವೇದಿಕೆಯಲ್ಲೂ ಪ್ರಶಸ್ತಿ ಗೆದ್ದಿದ್ದರು. ಈಗ ಟಿವಿ ಶೋನಲ್ಲಿಯೂ ಪ್ರಶಸ್ತಿ ಗೆಲ್ಲುವಲ್ಲಿ ಸಫಲರಾಗಿದ್ದಾರೆ.

ರೂಪೇಶ್ ಶೆಟ್ಟಿ ಅವರಿಗೆ ಪ್ರಬಲ ಪೈಪೋಟಿ ನೀಡಿದ್ದ ರಾಕೇಶ್ ಅಡಿಗ ರನ್ನರ್ ಅಪ್ ಆಗಿದ್ದಾರೆ. ರೂಪೇಶ್ ಶೆಟ್ಟಿ ಒಟಿಟಿ ಮೂಲಕ ಬಿಗ್ ಬಾಸ್ ಸ್ಪರ್ಧಿಯಾಗಿ ಆಯ್ಕೆಯಾಗಿ ಮುಖ್ಯ ರಿಯಾಲಿಟಿ ಶೋ ನಲ್ಲಿಯೂ ಅತ್ಯುತ್ತಮ ಪ್ರದರ್ಶನ ನೀಡಿ, ಉಳಿದ ಎಲ್ಲಾ ಸ್ಪರ್ಧಿಗಳಿಗೆ ಪೈಪೋಟಿ ನೀಡಿದ್ದರು. ಒಟಿಟಿಯಲ್ಲೂ ರೂಪೇಶ್ ಶೆಟ್ಟಿ ಟಾಪರ್ ಆಗಿದ್ದರು.

ಬಿಗ್ ಬಾಸ್ ಟೈಟಲ್ ಗೆದ್ದಿರುವ ರೂಪೇಶ್ ಶೆಟ್ಟಿಗೆ 60 ಲಕ್ಷ ರೂಪಾಯಿ ಬಹುಮಾನ ಸಿಕ್ಕಿದೆ.

100 ದಿನಗಳ ಕಾಲ ನಡೆದ ಈ ರಿಯಾಲಿಟಿ ಶೋನಲ್ಲಿ ಪ್ರಶಸ್ತಿ ಗೆಲ್ಲುವ ನೆಚ್ಚಿನ ಸ್ಪರ್ಧಿಗಳು ಎನಿಸಿದ್ದ ನಟಿ ಅಮೂಲ್ಯ ಗೌಡ, ನಟ ಅರುಣ್ ಸಾಗರ್ 13ನೇ ವಾರ ಹಾಗೂ ಜ್ಯೋತಿಷಿ ಆರ್ಯವರ್ಧನ್ ಗುರೂಜಿ 14ನೇ ವಾರದ ಮಧ್ಯದಲ್ಲಿ ಎಲಿಮಿನೇಟ್ ಆಗಿದ್ದರು. ಕನ್ನಡ ಪರ ಹೋರಾಟಗಳಿಂದ ಗಮನ ಸೆಳೆದಿದ್ದ ರೂಪೇಶ್ ರಾಜಣ್ಣ, ನಟಿಯರಾದ ದಿವ್ಯಾ ಉರುಡುಗ, ದೀಪಿಕಾ ದಾಸ್, ನಟರಾದ ರೂಪೇಶ್ ಶೆಟ್ಟಿ ಮತ್ತು ರಾಕೇಶ್ ಅಡಿಗ ಫೈನಲ್ಗೆ ಎಂಟ್ರಿ ಕೊಟ್ಟಿದ್ದರು.
ಬಿಗ್ ಬಾಸ್ ಕನ್ನಡ 8 ರಲ್ಲಿ 2ನೇ ರನ್ನರ್ ಅಪ್ ಆಗಿದ್ದ ದಿವ್ಯಾ ಉರುಡುಗ ಈ ಬಾರಿ 99ನೇ ದಿನ ಹೊರಬಿದ್ದಿದ್ದರು. ನಂತರ ದೀಪಿಕಾ ದಾಸ್ ಮೂರನೇ ರನ್ನರ್ ಅಪ್ ಆಗಿ ಹೊರನಡೆದಿದ್ದಾರೆ. ಸೀಸನ್ 7ರಲ್ಲಿಯೂ ಫೈನಲ್ ಪ್ರವೇಶಿಸಿದ್ದ ಇವರು ಈ ಬಾರಿಯೂ ಪ್ರಶಸ್ತಿ ಗೆಲ್ಲಲು ಸಾದ್ಯವಾಗಿಲ್ಲ. ಉಳಿದಂತೆ, ರೂಪೇಶ್ ರಾಜಣ್ಣ 2ನೇ ರನ್ನರ್ ಅಪ್ ಆದರೆ, ರೂಪೇಶ್ಗೆ ಕಠಿಣ ಸವಾಲೊಡ್ಡಿದ್ದ ರಾಕೇಶ್ ಅಡಿಗ ಮೊದಲ ರನ್ನರ್ ಅಪ್ ಆದರು.

ಕುಣಿದಾಡಿದ ಸಾನ್ಯಾ ಅಯ್ಯರ್, ಪ್ರಶಾಂತ್ ಸಂಬರಗಿ

ಅಂತಿಮ ಹಂತದಲ್ಲಿ ನಿರೂಪಕ–ನಟ ಸುದೀಪ್ ಅವರು ಇದ್ದ ಫೈನಲಿಸ್ಟ್ಗಳನ್ನು ಅಕ್ಕಪಕ್ಕ ನಿಲ್ಲಿಸಿಕೊಂಡು ರೂಪೇಶ್ ಕೈ ಎತ್ತುತ್ತಿದ್ದಂತೆಯೇ, ಅವರ (ರೂಪೇಶ್) ಕುಟುಂಬದವರು ಕಣ್ಣೀರಾದರು. ಈ ವೇಳೆ ವೀಕ್ಷಕರ ಗ್ಯಾಲರಿಯಲ್ಲಿ ಕುಳಿತಿದ್ದ ಸಾನ್ಯಾ ಅಯ್ಯರ್ ಮತ್ತು ಪ್ರಶಾಂತ್ ಸಂಬರಗಿ ಕುಣಿದು ಕುಪ್ಪಳಿಸಿದರು.
ರೂಪೇಶ್ ಮತ್ತು ಸಾನ್ಯಾ ಉತ್ತಮ ಒಡನಾಟ ಹೊಂದಿದ್ದರು. ಇವರಿಬ್ಬರ ಸಂಬಂಧದ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿಯೂ ಸಾಕಷ್ಟು ಚರ್ಚೆ ನಡೆದಿತ್ತು. ಆದರೆ, ಸಾನ್ಯಾ ಆರನೇ ವಾರವೇ ಎಲಿಮಿನೇಟ್ ಆದಾಗ ರೂಪೇಶ್ ಕಣ್ಣೀರು ಹಾಕಿದ್ದರು.

andolana

Recent Posts

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

34 mins ago

BJP ಟಿಕೆಟ್‌ ವಂಚನೆ: ಆರೋಪ ತಳ್ಳಿ ಹಾಕಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…

39 mins ago

ಮಂಡ್ಯ ಟೂ ಇಂಡಿಯಾ: ಬೃಹತ್‌ ಉದ್ಯೋಗ ಮೇಳಕ್ಕೆ ಮೊದಲ ದಿನ ಅಭೂತಪೂರ್ವ ಸ್ಪಂದನೆ

ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…

49 mins ago

ಮುಡಾ ಮೇಲೆ ಇಡಿ ದಾಳಿ: ಸಿಬಿಐ ತನಿಖೆ ನಡೆಸುವರೆಗೂ ಹೋರಾಟ ಮುಂದುವರಿಕೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…

1 hour ago

ಮುಡಾ ಮೇಲೆ ಇ.ಡಿ.ದಾಳಿ: ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ: ಡಿಸಿಎಂ ʼಡಿಕೆಶಿʼ

ಬೆಂಗಳೂರು: ಮುಡಾ ಕಚೇರಿ ಮೇಲೆ ಇ.ಡಿ. ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲಿಸಿದ್ದಾರೆ. ಕಚೇರಿಯಲ್ಲಿಯೇ ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ…

2 hours ago

ಮುಡಾ ಕಚೇರಿ ಮೇಲೆ ಇ.ಡಿ.ದಾಳಿ: ಸಿಎಂ ಸಿದ್ದರಾಮಯ್ಯ ಫಸ್ಟ್‌ ರಿಯಾಕ್ಷನ್‌

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…

2 hours ago