ಚಿತ್ರ ಮಂಜರಿ

ʼಟಗರು ಪಲ್ಯʼ ನಾಯಕಿಗೆ ಹುಟ್ಟುಹಬ್ಬದ ಸಂಭ್ರಮ

ಹೊಸ ಪೋಸ್ಟರ್ ಬಿಡುಗಡೆ ಮಾಡಿ ಕಲಾವಿದೆಗೆ ಶುಭ ಕೋರಿದ ಚಿತ್ರತಂಡ 

ಬೆಂಗಳೂರು : ಡಾಲಿ ಪಿಕ್ಚರ್ಸ್ ಮೂಲಕ ಸ್ಯಾಂಡಲ್‌ವುಡ್ ಅಂಗಳಕ್ಕೆ ನಟ ನೆನಪಿರಲಿ ಪ್ರೇಮ್ ಪುತ್ರಿ ಅಮೃತಾ ಪ್ರೇಮ್ ಎಂಟ್ರಿ ಕೊಟ್ಟಿದ್ದಾರೆ. ಉಮೇಶ್ ಕೆ.ಕೃಪ ನಿರ್ದೇಶನದ ‘ಟಗರು ಪಲ್ಯ’ ಸಿನಿಮಾ ಮೂಲಕ ನಾಯಕ ನಟಿಯಾಗಿ ಅಮೃತಾ ಪ್ರೇಮ್ ಸಿನಿಮಾಪ್ರೇಮಿಗಳಿಗೆ ಹತ್ತಿರವಾಗುತ್ತಿದ್ದಾರೆ. ಈಗಾಗಲೇ ‘ಟಗರು ಪಲ್ಯ’ ಲುಕ್​​ನಲ್ಲಿ ಪ್ರೇಕ್ಷಕರಿಂದ ಅಪಾರ ಪ್ರೀತಿ ಪಡೆದುಕೊಂಡಿರುವ ಅಮೃತಾ ಇಂದು ಹುಟ್ಟುಹಬ್ಬದ ಜೋಶ್‌ನಲ್ಲಿದ್ದಾರೆ. ಇವರು ಕಲಾವಿದೆಯಾಗಿ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿರುವುದು ಈ ಬಾರಿಯ ವಿಶೇಷತೆ. ಚಿತ್ರತಂಡವೂ ಕೂಡ ಹೊಸ ಪೋಸ್ಟರ್ ಬಿಡುಗಡೆ ಮಾಡಿದ್ದು, ಟಗರು ಪುಟ್ಟಿಗೆ ಶುಭ ಕೋರಿದೆ.

 ಟಗರು ಪಲ್ಯದಲ್ಲೇನಿದೆ?: ಟಗರು ಪಲ್ಯದಲ್ಲಿ ಅಮೃತಾ ಹಳ್ಳಿ ಹುಡುಗಿ ಪಾತ್ರವನ್ನು ನಿಭಾಯಿಸಿದ್ದಾರೆ. ವರ್ಕ್‌ಶಾಪ್‌ ಮೂಲಕ ಸಾಕಷ್ಟು ತಯಾರಿ ನಡೆಸಿ ಪಾತ್ರಕ್ಕೆ ಜೀವ ತುಂಬಿದ್ದಾರೆ. ಮಂಡ್ಯ ಭಾಗದ ಕಥೆಯನ್ನೊಳ್ಳಗೊಂಡ ಈ ಚಿತ್ರದಲ್ಲಿ ಅಲ್ಲಿನ ಸೊಗಡಿನ ಭಾಷೆ ಕಲಿತು ಅಭಿನಯಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ನಿರ್ದೇಶಕ ಉಮೇಶ್ ಕೆ.ಕೃಪ, “ಹಳ್ಳಿ ಹುಡುಗಿ ಪಾತ್ರ ಅಂದ್ರೆ ಸುಲಭದ ವಿಷಯವಲ್ಲ. ಅದಕ್ಕೆ ಆದಷ್ಟು ಬೇಗ ಒಗ್ಗಿಕೊಂಡು ಆ ನಯ ನಾಜೂಕನ್ನು ಬಹಳ ಬೇಗ ಅರ್ಥಮಾಡಿಕೊಂಡು ಅಮೃತ ನಟಿಸಿದ್ದಾರೆ. ಭಾಷೆ ಮೇಲೆ ಅವರಿಗೆ ಹಿಡಿತವಿದೆ. ಮಂಡ್ಯ ಸ್ಲ್ಯಾಂಗ್ ತುಂಬಾ ಚೆನ್ನಾಗಿ ಮಾತನಾಡಿದ್ದಾರೆ. ಈಗಾಗಲೇ ಎರಡು ಶೆಡ್ಯೂಲ್ ಕಂಪ್ಲೀಟ್ ಆಗಿದ್ದು ಬಹಳ ಬೇಗ ಎಲ್ಲವನ್ನು ಕಲಿತುಕೊಂಡು ಅಭಿನಯ ಮಾಡಿದ್ದಾರೆ” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು

andolanait

Recent Posts

ವಿಧಾನಸೌಧದಲ್ಲಿ ಮಾಧ್ಯಮಕ್ಕೆ ಇನ್ನಷ್ಟು ನಿರ್ಬಂಧ

ಬೆಂಗಳೂರು : ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳ ಕಾರ್ಯವ್ಯಾಪ್ತಿಯನ್ನು ನಿರ್ಬಂಧಿಸುವ ಕುರಿತು ವಾರ್ತಾ ಇಲಾಖೆಗೆ ಸರ್ಕಾರ ಪತ್ರ ಬರೆದಿದೆ. ಪತ್ರದಲ್ಲಿ, ಮಾಧ್ಯಮಗಳು…

24 mins ago

ನಾಳೆಯಿಂದಲೇ ನಾಗರಹೊಳೆ, ಬಂಡೀಪುರ ಸಫಾರಿ ಪುನರಾರಂಭ

ಮೈಸೂರು : ನಾಗರಹೊಳೆ ಮತ್ತು ಬಂಡೀಪುರ ರಾಷ್ಟ್ರೀಯ ಉದ್ಯಾನವನಗಳಲ್ಲಿ ಫೆಬ್ರವರಿ 19ರಿಂದ ಸಫಾರಿ ಪುನರಾರಂಭವಾಗಲಿದೆ ಎಂದು ಅರಣ್ಯ ಸಚಿವ ಈಶ್ವರ…

1 hour ago

ಮೈಸೂರು | ಸ್ವಚ್ಛ ಸರ್ವೇಕ್ಷಣೆ ; ಜಾಥಾ ನಡೆಸಿ ಜನರಿಗೆ ಜಾಗೃತಿ

ಮೈಸೂರು : ಸ್ವಚ್ಛ ಸರ್ವೇಕ್ಷಣೆ-2026ರ ಅಂಗವಾಗಿ ನಗರಪಾಲಿಕೆ ವತಿಯಿಂದ ಶೌಚಾಲಯ ಬಳಕೆ ಹಾಗೂ ಸ್ವಚ್ಛತೆ ಕುರಿತು ವಿದ್ಯಾರ್ಥಿಗಳಿಂದ ಜಾಥಾ ಹಾಗೂ…

1 hour ago

ಜ್ಞಾನದ ಜೊತೆ ಕೌಶಲವೂ ಮುಖ್ಯ : ಪರೀಕ್ಷಾಂಗ ಕುಲಸಚಿವ ನಾಗರಾಜು ಅಭಿಮತ

ಮೈಸೂರು : ಇಂದಿನ ಕಾಲದಲ್ಲಿ ಜ್ಞಾನದ ಜೊತೆಗೆ ಕೌಶಲ ತುಂಬಾ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ರಾಷ್ಟ್ರೀಯ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು,…

2 hours ago

ಡಿ.ಕೆ.ಶಿವಕುಮಾರ್‌ ನಿಯತ್ತಿನ ಸೈನಿಕ: ಶಾಸಕ ರವಿಕುಮಾರ್‌ ಗಣಿಗ ಬ್ಯಾಟಿಂಗ್‌

ಮಂಡ್ಯ: ಸಚಿವ ಎಚ್‌.ಸಿ.ಮಹದೇವಪ್ಪ ಅವರ ಬೀದಿನಾಯಿ ಹೇಳಿಕೆ ಕುರಿತು ಸಾಕಷ್ಟು ಚರ್ಚೆಯಾಗುತ್ತಿದ್ದು, ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್‌ ಶಾಸಕ…

4 hours ago

ಸಾಗರದಲ್ಲಿ ಭಾರತದ ಸಾರ್ವಭೌಮತ್ವ: ವಿಶಾಖಪಟ್ಟಣಂನಲ್ಲಿ ರಾಷ್ಟ್ರಪತಿ ಮುರ್ಮುರಿಂದ ನೌಕಾಶಕ್ತಿ ಪ್ರದರ್ಶನ ವೀಕ್ಷಣೆ

ವಿಶಾಖಪಟ್ಟಣಂ: ಭಾರತೀಯ ನೌಕಾಪಡೆಯ ವಿಶ್ವದ ವಿವಿಧ ದೇಶಗಳ ನೌಕಾಪಡೆಗಳೊಂದಿಗೆ ಸೇರಿ ತನ್ನ ಅಪ್ರತಿಮ ಶೌರ್ಯ ಹಾಗೂ ಸನ್ನದ್ಧತೆಯನ್ನು ಬುಧವಾರ ವಿಶಾಖಪಟ್ಟಣಂ…

4 hours ago