ಚಿತ್ರ ಮಂಜರಿ

ʼಟಗರು ಪಲ್ಯʼ ನಾಯಕಿಗೆ ಹುಟ್ಟುಹಬ್ಬದ ಸಂಭ್ರಮ

ಹೊಸ ಪೋಸ್ಟರ್ ಬಿಡುಗಡೆ ಮಾಡಿ ಕಲಾವಿದೆಗೆ ಶುಭ ಕೋರಿದ ಚಿತ್ರತಂಡ 

ಬೆಂಗಳೂರು : ಡಾಲಿ ಪಿಕ್ಚರ್ಸ್ ಮೂಲಕ ಸ್ಯಾಂಡಲ್‌ವುಡ್ ಅಂಗಳಕ್ಕೆ ನಟ ನೆನಪಿರಲಿ ಪ್ರೇಮ್ ಪುತ್ರಿ ಅಮೃತಾ ಪ್ರೇಮ್ ಎಂಟ್ರಿ ಕೊಟ್ಟಿದ್ದಾರೆ. ಉಮೇಶ್ ಕೆ.ಕೃಪ ನಿರ್ದೇಶನದ ‘ಟಗರು ಪಲ್ಯ’ ಸಿನಿಮಾ ಮೂಲಕ ನಾಯಕ ನಟಿಯಾಗಿ ಅಮೃತಾ ಪ್ರೇಮ್ ಸಿನಿಮಾಪ್ರೇಮಿಗಳಿಗೆ ಹತ್ತಿರವಾಗುತ್ತಿದ್ದಾರೆ. ಈಗಾಗಲೇ ‘ಟಗರು ಪಲ್ಯ’ ಲುಕ್​​ನಲ್ಲಿ ಪ್ರೇಕ್ಷಕರಿಂದ ಅಪಾರ ಪ್ರೀತಿ ಪಡೆದುಕೊಂಡಿರುವ ಅಮೃತಾ ಇಂದು ಹುಟ್ಟುಹಬ್ಬದ ಜೋಶ್‌ನಲ್ಲಿದ್ದಾರೆ. ಇವರು ಕಲಾವಿದೆಯಾಗಿ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿರುವುದು ಈ ಬಾರಿಯ ವಿಶೇಷತೆ. ಚಿತ್ರತಂಡವೂ ಕೂಡ ಹೊಸ ಪೋಸ್ಟರ್ ಬಿಡುಗಡೆ ಮಾಡಿದ್ದು, ಟಗರು ಪುಟ್ಟಿಗೆ ಶುಭ ಕೋರಿದೆ.

 ಟಗರು ಪಲ್ಯದಲ್ಲೇನಿದೆ?: ಟಗರು ಪಲ್ಯದಲ್ಲಿ ಅಮೃತಾ ಹಳ್ಳಿ ಹುಡುಗಿ ಪಾತ್ರವನ್ನು ನಿಭಾಯಿಸಿದ್ದಾರೆ. ವರ್ಕ್‌ಶಾಪ್‌ ಮೂಲಕ ಸಾಕಷ್ಟು ತಯಾರಿ ನಡೆಸಿ ಪಾತ್ರಕ್ಕೆ ಜೀವ ತುಂಬಿದ್ದಾರೆ. ಮಂಡ್ಯ ಭಾಗದ ಕಥೆಯನ್ನೊಳ್ಳಗೊಂಡ ಈ ಚಿತ್ರದಲ್ಲಿ ಅಲ್ಲಿನ ಸೊಗಡಿನ ಭಾಷೆ ಕಲಿತು ಅಭಿನಯಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ನಿರ್ದೇಶಕ ಉಮೇಶ್ ಕೆ.ಕೃಪ, “ಹಳ್ಳಿ ಹುಡುಗಿ ಪಾತ್ರ ಅಂದ್ರೆ ಸುಲಭದ ವಿಷಯವಲ್ಲ. ಅದಕ್ಕೆ ಆದಷ್ಟು ಬೇಗ ಒಗ್ಗಿಕೊಂಡು ಆ ನಯ ನಾಜೂಕನ್ನು ಬಹಳ ಬೇಗ ಅರ್ಥಮಾಡಿಕೊಂಡು ಅಮೃತ ನಟಿಸಿದ್ದಾರೆ. ಭಾಷೆ ಮೇಲೆ ಅವರಿಗೆ ಹಿಡಿತವಿದೆ. ಮಂಡ್ಯ ಸ್ಲ್ಯಾಂಗ್ ತುಂಬಾ ಚೆನ್ನಾಗಿ ಮಾತನಾಡಿದ್ದಾರೆ. ಈಗಾಗಲೇ ಎರಡು ಶೆಡ್ಯೂಲ್ ಕಂಪ್ಲೀಟ್ ಆಗಿದ್ದು ಬಹಳ ಬೇಗ ಎಲ್ಲವನ್ನು ಕಲಿತುಕೊಂಡು ಅಭಿನಯ ಮಾಡಿದ್ದಾರೆ” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು

andolanait

Recent Posts

ಪುನರುಜ್ಜೀವನಕ್ಕಾಗಿ ಕಾಯುತ್ತಿದೆ ಪುರಭವನ?

ಮೈಸೂರು : ಸಾಂಸ್ಕೃತಿಕ ನಗರದ ಹೃದಯ ಭಾಗದಲ್ಲಿ ರುವ ಐತಿಹಾಸಿಕ ರಂಗಾಚಾರ್ಲು ಪುರಭವನ ಇದೀಗ ನಿರ್ಲಕ್ಷ್ಯದ ಪರಿಣಾಮ ಶಿಥಿಲಾವಸ್ಥೆಯತ್ತ ಸಾಗುತ್ತಿದೆ.…

59 mins ago

ಹಿಜಾಬ್‌ ವಿವಾದ : ಹೊಸ ಆದೇಶ ಸಕಾರಾತ್ಮಕ ಬೆಳವಣಿಗೆಗೆ ಸಹಾಯ

ಸಂವಿಧಾನಾತ್ಮಕ ಹಕ್ಕು ಅನುಷ್ಠಾನದಲ್ಲಿ ಎಚ್ಚರಿಕೆ ಅಗತ್ಯ ನಿರಂಜನಾರಾಧ್ಯ ವಿ.ಪಿ.ಅಭಿವೃದ್ಧಿ ಶಿಕ್ಷಣ ತಜ್ಞ ಹಿಂದೆ ೨೦೨೨ರಲ್ಲಿ ಹಿಜಾಬ್ ನಿಷೇಧಿಸಿ ಬಿಜೆಪಿ ನೇತೃತ್ವದ…

2 hours ago

ಗಾಂಧಿ ಅಭಿಯಾನ ಅರಿವಿನ ಯಾನ ; ಗಾಂಧಿ ಮುಟ್ಟಿದ ನನ್ನೂರಿನ ಮನಸುಗಳು…

• ಎಸ್.ಗಂಗಾಧರಯ್ಯ ಗಾಂಧಿ ಎಂಬುದೊಂದು ತಾಯ್ತನದ ಭಾವ, ಅದು ಅಂದು ಇಂದು ಮುಂದೆ ಯಾವತ್ತೂ ಎದೆಯ ಕತ್ತಲಿಗೆ ಹಚ್ಚಿದ ತುಂಬಿಹೋಗದ…

2 hours ago

ಗಾಂಧಿ ಅಭಿಯಾನ ಅರಿವಿನ ಯಾನ : ಇಲ್ಲಿದೆ ಗಾಂಧಿ ಆತ್ಮಕತೆಯ ಆಯ್ದ ತುಣುಕು

ನನ್ನ ನಡೆತೆಯನ್ನು ಬಹು ಎಚ್ಚರಿಕೆಯಿಂದ ಕಾಯ್ದುಕೊಂಡಿದ್ದೆ ನನ್ನ ಮದುವೆಯಾದ ಕಾಲಕ್ಕೆ ನಾನು ಪ್ರೌಢಶಾಲೆಯಲ್ಲಿ ಓದುತ್ತಿದ್ದೆ. ನಾನು ಉಪಾಧ್ಯಾಯರ ಪ್ರೀತಿಯನ್ನು ಯಾವಾಗಲೂ…

3 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ.16 ಶನಿವಾರ  

6 hours ago

ಮನೆಯ ಚಾವಣಿ ಕುಸಿದು ನಾಲ್ವರು ಸಾವು ; ತಲಾ 5 ಲಕ್ಷ ಪರಿಹಾರ ಘೋಷಣೆ

ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…

23 hours ago