ಹೊಸ ಪೋಸ್ಟರ್ ಬಿಡುಗಡೆ ಮಾಡಿ ಕಲಾವಿದೆಗೆ ಶುಭ ಕೋರಿದ ಚಿತ್ರತಂಡ
ಬೆಂಗಳೂರು : ಡಾಲಿ ಪಿಕ್ಚರ್ಸ್ ಮೂಲಕ ಸ್ಯಾಂಡಲ್ವುಡ್ ಅಂಗಳಕ್ಕೆ ನಟ ನೆನಪಿರಲಿ ಪ್ರೇಮ್ ಪುತ್ರಿ ಅಮೃತಾ ಪ್ರೇಮ್ ಎಂಟ್ರಿ ಕೊಟ್ಟಿದ್ದಾರೆ. ಉಮೇಶ್ ಕೆ.ಕೃಪ ನಿರ್ದೇಶನದ ‘ಟಗರು ಪಲ್ಯ’ ಸಿನಿಮಾ ಮೂಲಕ ನಾಯಕ ನಟಿಯಾಗಿ ಅಮೃತಾ ಪ್ರೇಮ್ ಸಿನಿಮಾಪ್ರೇಮಿಗಳಿಗೆ ಹತ್ತಿರವಾಗುತ್ತಿದ್ದಾರೆ. ಈಗಾಗಲೇ ‘ಟಗರು ಪಲ್ಯ’ ಲುಕ್ನಲ್ಲಿ ಪ್ರೇಕ್ಷಕರಿಂದ ಅಪಾರ ಪ್ರೀತಿ ಪಡೆದುಕೊಂಡಿರುವ ಅಮೃತಾ ಇಂದು ಹುಟ್ಟುಹಬ್ಬದ ಜೋಶ್ನಲ್ಲಿದ್ದಾರೆ. ಇವರು ಕಲಾವಿದೆಯಾಗಿ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿರುವುದು ಈ ಬಾರಿಯ ವಿಶೇಷತೆ. ಚಿತ್ರತಂಡವೂ ಕೂಡ ಹೊಸ ಪೋಸ್ಟರ್ ಬಿಡುಗಡೆ ಮಾಡಿದ್ದು, ಟಗರು ಪುಟ್ಟಿಗೆ ಶುಭ ಕೋರಿದೆ.
ಟಗರು ಪಲ್ಯದಲ್ಲೇನಿದೆ?: ಟಗರು ಪಲ್ಯದಲ್ಲಿ ಅಮೃತಾ ಹಳ್ಳಿ ಹುಡುಗಿ ಪಾತ್ರವನ್ನು ನಿಭಾಯಿಸಿದ್ದಾರೆ. ವರ್ಕ್ಶಾಪ್ ಮೂಲಕ ಸಾಕಷ್ಟು ತಯಾರಿ ನಡೆಸಿ ಪಾತ್ರಕ್ಕೆ ಜೀವ ತುಂಬಿದ್ದಾರೆ. ಮಂಡ್ಯ ಭಾಗದ ಕಥೆಯನ್ನೊಳ್ಳಗೊಂಡ ಈ ಚಿತ್ರದಲ್ಲಿ ಅಲ್ಲಿನ ಸೊಗಡಿನ ಭಾಷೆ ಕಲಿತು ಅಭಿನಯಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ನಿರ್ದೇಶಕ ಉಮೇಶ್ ಕೆ.ಕೃಪ, “ಹಳ್ಳಿ ಹುಡುಗಿ ಪಾತ್ರ ಅಂದ್ರೆ ಸುಲಭದ ವಿಷಯವಲ್ಲ. ಅದಕ್ಕೆ ಆದಷ್ಟು ಬೇಗ ಒಗ್ಗಿಕೊಂಡು ಆ ನಯ ನಾಜೂಕನ್ನು ಬಹಳ ಬೇಗ ಅರ್ಥಮಾಡಿಕೊಂಡು ಅಮೃತ ನಟಿಸಿದ್ದಾರೆ. ಭಾಷೆ ಮೇಲೆ ಅವರಿಗೆ ಹಿಡಿತವಿದೆ. ಮಂಡ್ಯ ಸ್ಲ್ಯಾಂಗ್ ತುಂಬಾ ಚೆನ್ನಾಗಿ ಮಾತನಾಡಿದ್ದಾರೆ. ಈಗಾಗಲೇ ಎರಡು ಶೆಡ್ಯೂಲ್ ಕಂಪ್ಲೀಟ್ ಆಗಿದ್ದು ಬಹಳ ಬೇಗ ಎಲ್ಲವನ್ನು ಕಲಿತುಕೊಂಡು ಅಭಿನಯ ಮಾಡಿದ್ದಾರೆ” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು…
ವಿಜಯನಗರಕ್ಕೆ ಹೋಗುವ ರಸ್ತೆಯಲ್ಲಿ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯದ ಮಹಾದ್ವಾರದ ಎದುರಗಡೆ ರಸ್ತೆಯ ಅಂಚಿಗೆ ಸೇರಿದಂತಿರುವ ಮ್ಯಾನ್ ಹೋಲ್ನಿಂದ ಹೊಲಸು ನೀರು…
ಕರ್ನಾಟಕದ ೩೨ ಜಿಗಳಲ್ಲಿ ಆಗಸ್ಟ್೨೨ರವರೆಗೆ ಒಟ್ಟು ೫,೦೦೦ ಎಚ್೧ಎನ್೧ ಪ್ರಕರಣಗಳು ದಾಖಲಾಗಿರುವುದು ಕಳವಳಕಾರಿ ಸಂಗತಿಯಾಗಿದೆ. ಬೆಂಗಳೂರು ಹಾಗೂ ಮೈಸೂರಿನಲ್ಲೂ ಪ್ರಕರಣಗಳು…
ಕೆಲವು ದಿನಗಳ ಹಿಂದೆ ನಂಜನಗೂಡು ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯ ಡಾ. ಅಂಬೇಡ್ಕರ್ ಉದ್ಯಾನವನದಲ್ಲಿ ಅಭಿವೃದ್ಧಿ ಕಾರ್ಯಗಳ ನಿಮಿತ್ತ ಸ್ಥಳೀಯ…
ಎಚ್.ಎಸ್.ದಿನೇಶ್ಕುಮಾರ್ ಅಪರಾಧ ಪ್ರಕರಣಗಳ ಪತ್ತೆಗೆ ನಗರ ಪೊಲೀಸರ ಕಾರ್ಯ ತಂತ್ರ; ಆಪ್ ವ್ಯಾಪ್ತಿಯಲ್ಲಿ ೩೦,೦೦೦ ಸಿಸಿಟಿವಿಗಳು; ಸಿಸಿಟಿವಿ ಸ್ಥಿತಿ ಬಗ್ಗೆಯೂ…
ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…