ಚಿತ್ರ ಮಂಜರಿ

ʼಟಗರು ಪಲ್ಯʼ ನಾಯಕಿಗೆ ಹುಟ್ಟುಹಬ್ಬದ ಸಂಭ್ರಮ

ಹೊಸ ಪೋಸ್ಟರ್ ಬಿಡುಗಡೆ ಮಾಡಿ ಕಲಾವಿದೆಗೆ ಶುಭ ಕೋರಿದ ಚಿತ್ರತಂಡ 

ಬೆಂಗಳೂರು : ಡಾಲಿ ಪಿಕ್ಚರ್ಸ್ ಮೂಲಕ ಸ್ಯಾಂಡಲ್‌ವುಡ್ ಅಂಗಳಕ್ಕೆ ನಟ ನೆನಪಿರಲಿ ಪ್ರೇಮ್ ಪುತ್ರಿ ಅಮೃತಾ ಪ್ರೇಮ್ ಎಂಟ್ರಿ ಕೊಟ್ಟಿದ್ದಾರೆ. ಉಮೇಶ್ ಕೆ.ಕೃಪ ನಿರ್ದೇಶನದ ‘ಟಗರು ಪಲ್ಯ’ ಸಿನಿಮಾ ಮೂಲಕ ನಾಯಕ ನಟಿಯಾಗಿ ಅಮೃತಾ ಪ್ರೇಮ್ ಸಿನಿಮಾಪ್ರೇಮಿಗಳಿಗೆ ಹತ್ತಿರವಾಗುತ್ತಿದ್ದಾರೆ. ಈಗಾಗಲೇ ‘ಟಗರು ಪಲ್ಯ’ ಲುಕ್​​ನಲ್ಲಿ ಪ್ರೇಕ್ಷಕರಿಂದ ಅಪಾರ ಪ್ರೀತಿ ಪಡೆದುಕೊಂಡಿರುವ ಅಮೃತಾ ಇಂದು ಹುಟ್ಟುಹಬ್ಬದ ಜೋಶ್‌ನಲ್ಲಿದ್ದಾರೆ. ಇವರು ಕಲಾವಿದೆಯಾಗಿ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿರುವುದು ಈ ಬಾರಿಯ ವಿಶೇಷತೆ. ಚಿತ್ರತಂಡವೂ ಕೂಡ ಹೊಸ ಪೋಸ್ಟರ್ ಬಿಡುಗಡೆ ಮಾಡಿದ್ದು, ಟಗರು ಪುಟ್ಟಿಗೆ ಶುಭ ಕೋರಿದೆ.

 ಟಗರು ಪಲ್ಯದಲ್ಲೇನಿದೆ?: ಟಗರು ಪಲ್ಯದಲ್ಲಿ ಅಮೃತಾ ಹಳ್ಳಿ ಹುಡುಗಿ ಪಾತ್ರವನ್ನು ನಿಭಾಯಿಸಿದ್ದಾರೆ. ವರ್ಕ್‌ಶಾಪ್‌ ಮೂಲಕ ಸಾಕಷ್ಟು ತಯಾರಿ ನಡೆಸಿ ಪಾತ್ರಕ್ಕೆ ಜೀವ ತುಂಬಿದ್ದಾರೆ. ಮಂಡ್ಯ ಭಾಗದ ಕಥೆಯನ್ನೊಳ್ಳಗೊಂಡ ಈ ಚಿತ್ರದಲ್ಲಿ ಅಲ್ಲಿನ ಸೊಗಡಿನ ಭಾಷೆ ಕಲಿತು ಅಭಿನಯಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ನಿರ್ದೇಶಕ ಉಮೇಶ್ ಕೆ.ಕೃಪ, “ಹಳ್ಳಿ ಹುಡುಗಿ ಪಾತ್ರ ಅಂದ್ರೆ ಸುಲಭದ ವಿಷಯವಲ್ಲ. ಅದಕ್ಕೆ ಆದಷ್ಟು ಬೇಗ ಒಗ್ಗಿಕೊಂಡು ಆ ನಯ ನಾಜೂಕನ್ನು ಬಹಳ ಬೇಗ ಅರ್ಥಮಾಡಿಕೊಂಡು ಅಮೃತ ನಟಿಸಿದ್ದಾರೆ. ಭಾಷೆ ಮೇಲೆ ಅವರಿಗೆ ಹಿಡಿತವಿದೆ. ಮಂಡ್ಯ ಸ್ಲ್ಯಾಂಗ್ ತುಂಬಾ ಚೆನ್ನಾಗಿ ಮಾತನಾಡಿದ್ದಾರೆ. ಈಗಾಗಲೇ ಎರಡು ಶೆಡ್ಯೂಲ್ ಕಂಪ್ಲೀಟ್ ಆಗಿದ್ದು ಬಹಳ ಬೇಗ ಎಲ್ಲವನ್ನು ಕಲಿತುಕೊಂಡು ಅಭಿನಯ ಮಾಡಿದ್ದಾರೆ” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು

andolanait

Recent Posts

ಸಂಪ್ರದಾಯವಾಗಿ ನಡೆಯದ ವಿವಾಹ ಅಮಾನ್ಯ ; ಗುಜರಾತ್ ಹೈಕೋರ್ಟ್ ತೀರ್ಪು

ಸಪ್ತಪದಿ ಹಿಂದೂ ವಿವಾಹದ ಅಡಿಪಾಯ ; ಗುಜರಾತ್‌ ಹೈಕೋರ್ಟ್‌ ತೀರ್ಪು ಅಹಮದಾಬಾದ್ : ಸಪ್ತಪದಿಯಂತಹ ಸಾಂಪ್ರದಾಯಿಕ ವಿಧಿವಿಧಾನಗಳು ಮತ್ತು ಸಮಾರಂಭಗಳನ್ನು…

10 hours ago

ಬೋರ್‌ವೆಲ್, ಪಂಪ್‌ಸೆಟ್ ಕೇಬಲ್‌ ಕಳ್ಳತನ ಯುವಕರಿಗೆ ಧರ್ಮದೇಟು

ಮಂಡ್ಯ : ಬೋರ್‌ವೆಲ್, ಪಂಪ್‌ಸೆಟ್ ಕೇಬಲ್ ಕಳವು ಮಾಡುತ್ತಿದ್ದ ಅಪ್ರಾಪ್ತ ಬಾಲಕ ಸೇರಿದಂತೆ ಮೂವರನ್ನು ಸಾರ್ವಜನಿಕರೇ ಹಿಡಿದು ಕಂಬಕ್ಕೆ ಕಟ್ಟಿ…

11 hours ago

ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್‌ ; ಸುಟ್ಟು ಹೋದ 6 ಎಕರೆ ಕಬ್ಬು

ಹನೂರು : ಅತಿಯಾದ ಗಾಳಿಯ ರಭಸಕ್ಕೆ ವಿದ್ಯುತ್ ತಂತಿ ಒಂದಕ್ಕೊಂದು ಸ್ಪರ್ಶಿಸಿ ಬೆಂಕಿ ಹೊತ್ತಿಕೊಂಡು ಜಮೀನಿನಲ್ಲಿದ್ದ 6 ಎಕರೆ ಕಬ್ಬು…

13 hours ago

ಆಷಾಢ ಶುಕ್ರವಾರ, ಶನಿವಾರ, ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ

ಮೈಸೂರು: ಆಷಾಢ ಶುಕ್ರವಾರ, ಶನಿವಾರ ಹಾಗೂ ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಸಚಿವ ಯತೀಂದ್ರ…

16 hours ago

ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’

ಮೈಸೂರು: ಜೀವವೈವಿಧ್ಯ ತಾಣವಾಗಿರುವn ಹಾಗೂ ಪ್ರಕೃತಿಯ ಸೊಬಗಿನ ವಾತಾವರಣದಿಂದ ಕೂಡಿರುವ ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’ ನಿರ್ಮಾಣ…

17 hours ago

ಅಲೆಮಾರಿ ಜನಾಂಗ ನಾಡಿನ ಸಂಸ್ಕೃತಿಯ ಜೀವಂತಿಕೆ

ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…

23 hours ago